Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 30:7 - ಪರಿಶುದ್ದ ಬೈಬಲ್‌

7 “ನಿಮ್ಮ ದೇವರಾದ ಯೆಹೋವನು ಕೆಟ್ಟಸಂಗತಿಗಳೆಲ್ಲಾ ನಿಮ್ಮ ವೈರಿಗಳಿಗೆ ಆಗುವಂತೆ ಮಾಡುವನು. ಯಾಕೆಂದರೆ ಅವರು ನಿಮ್ಮನ್ನು ದ್ವೇಷಿಸಿ ತೊಂದರೆ ಕೊಡುತ್ತಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಿಮ್ಮ ದೇವರಾದ ಯೆಹೋವನು ಆ ಶಾಪಗಳನ್ನೆಲ್ಲಾ, ನಿಮ್ಮನ್ನು ದ್ವೇಷಿಸಿ ಹಿಂಸಿಸಿದ ನಿಮ್ಮ ಶತ್ರುಗಳ ಮೇಲೆಯೇ ಬರಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಿಮ್ಮ ದೇವರಾದಸರ್ವೇಶ್ವರ ಆ ಶಾಪಗಳನ್ನೆಲ್ಲಾ ನಿಮ್ಮನ್ನು ದ್ವೇಷಿಸಿ, ಹಿಂಸಿಸಿದ ನಿಮ್ಮ ಶತ್ರುಗಳ ಮೇಲೆಯೇ ಬರಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಿಮ್ಮ ದೇವರಾದ ಯೆಹೋವನು ಆ ಶಾಪಗಳನ್ನೆಲ್ಲಾ ನಿಮ್ಮನ್ನು ದ್ವೇಷಿಸಿ ಹಿಂಸಿಸಿದ ನಿಮ್ಮ ಶತ್ರುಗಳ ಮೇಲೆಯೇ ಬರಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಇದಲ್ಲದೆ ನಿಮ್ಮ ದೇವರಾದ ಯೆಹೋವ ದೇವರು ಆ ಶಾಪಗಳನ್ನೆಲ್ಲಾ ನಿಮ್ಮ ಶತ್ರುಗಳ ಮೇಲೆಯೂ, ನಿಮ್ಮನ್ನು ಹಿಂಸಿಸಿದ ನಿಮ್ಮ ಹಗೆಯವರ ಮೇಲೆಯೂ ಬರಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 30:7
28 ತಿಳಿವುಗಳ ಹೋಲಿಕೆ  

ನಿಮ್ಮಿಂದ ಎಲ್ಲಾ ತರದ ಕಾಯಿಲೆಗಳನ್ನು ಯೆಹೋವನು ತೆಗೆದುಹಾಕುವನು. ಈಜಿಪ್ಟಿನಲ್ಲಿ ನಿಮ್ಮನ್ನು ಬಾಧಿಸುತ್ತಿದ್ದ ಭಯಂಕರ ಕಾಯಿಲೆಗಳು ನಿಮ್ಮನ್ನು ಬಾಧಿಸುವುದಿಲ್ಲ. ಆ ಕಾಯಿಲೆಗಳು ನಿಮ್ಮ ವೈರಿಗಳಿಗೆ ಉಂಟಾಗುವವು.


ಜೆರುಸಲೇಮಿಗೂ ಚೀಯೋನ್ ಪರ್ವತಕ್ಕೂ ಮಾಡಬೇಕೆಂದಿರುವ ಕಾರ್ಯಗಳನ್ನು ನನ್ನ ಒಡೆಯನು ಮಾಡಿ ತೀರಿಸುವನು. ಆ ಬಳಿಕ ಯೆಹೋವನು ಅಶ್ಶೂರವನ್ನು ಶಿಕ್ಷಿಸುವನು. ಅಶ್ಶೂರದ ಅರಸನು ಬಹಳವಾಗಿ ಉಬ್ಬಿಕೊಂಡಿರುತ್ತಾನೆ. ಅವನ ಗರ್ವವು ಅನೇಕ ದುಷ್ಕೃತ್ಯಗಳನ್ನು ನಡೆಸಿದೆ. ಅದಕ್ಕಾಗಿ ದೇವರು ಅವನನ್ನು ಶಿಕ್ಷಿಸುವನು.


ಆಗಲಿ, ನಾನು ನನ್ನ ಸ್ವಜನರ ಬಳಿಗೆ ಹೋಗುತ್ತೇನೆ. ಆದರೆ ಮುಂದೆ ಆ ಜನರು ನಿನ್ನ ಜನರಿಗೆ ಏನು ಮಾಡುವರೋ ಅದನ್ನು ನಿನಗೆ ತಿಳಿಸುತ್ತೇನೆ, ಕೇಳು” ಎಂದು ಹೇಳಿದನು.


ಆದರೆ ನಾನು ಜೆರುಸಲೇಮನ್ನು ಒಂದು ಭಾರವಾದ ಬಂಡೆ ಕಲ್ಲಿನಂತೆ ಮಾಡುವೆನು. ಅದನ್ನು ತೆಗೆಯಲು ಯತ್ನಿಸುವವನು ಗಾಯಗೊಳ್ಳುವನು. ಆದರೂ ಲೋಕದ ಎಲ್ಲಾ ದೇಶಗಳವರು ಜೆರುಸಲೇಮಿಗೆ ವಿರುದ್ಧವಾಗಿ ಯುದ್ಧಕ್ಕೆ ಬರುವರು.


ನೀನು ನಾಚಿಕೆಯಿಂದ ಮುಚ್ಚಲ್ಪಡುವೆ, ನಿರಂತರಕ್ಕೂ ನಾಶವಾಗುವೆ. ಯಾಕೆಂದರೆ ನೀನು ನಿನ್ನ ಸಹೋದರನಾದ ಯಾಕೋಬನೊಂದಿಗೆ ಕ್ರೂರವಾಗಿ ನಡೆದುಕೊಂಡೆ.


ಯೆಹೋವನು ಹೇಳುವುದೇನೆಂದರೆ, “ಅನೇಕಾನೇಕ ಅಪರಾಧಗಳನ್ನು ಮಾಡಿದ ಅಮ್ಮೋನಿಯರನ್ನು ನಾನು ಖಂಡಿತವಾಗಿಯೂ ಶಿಕ್ಷಿಸುತ್ತೇನೆ. ಯಾಕೆಂದರೆ ಅವರು ಗಿಲ್ಯಾದಿನ ಗರ್ಭಿಣಿ ಸ್ತ್ರೀಯರನ್ನು ಕೊಂದರು. ಆ ಪ್ರಾಂತ್ಯವನ್ನು ಕೈವಶಮಾಡಿಕೊಂಡು ತಮ್ಮ ದೇಶವನ್ನು ವಿಸ್ತಾರ ಮಾಡುವುದಕ್ಕಾಗಿ ಅವರು ಹೀಗೆ ಮಾಡಿದರು.


ಯೆಹೋವನು ಹೇಳುವುದೇನೆಂದರೆ, “ಅನೇಕ ಅಪರಾಧಗಳನ್ನು ಮಾಡಿದ ಎದೋಮ್ಯರನ್ನು ನಾನು ಖಂಡಿತವಾಗಿ ಶಿಕ್ಷಿಸುವೆನು. ಯಾಕೆಂದರೆ ಎದೋಮ್ ತನ್ನ ಸಹೋದರನಾದ ಇಸ್ರೇಲನ್ನು ಕತ್ತಿಯಿಂದ ಹತಿಸಿತು. ಎದೋಮ್ ಯಾವ ಕರುಣೆಯನ್ನೂ ತೋರಲಿಲ್ಲ. ಅದರ ಕೋಪವು ನಿರಂತರವಾಗಿ ಮುಂದುವರಿಯಿತು; ಕ್ರೂರಪ್ರಾಣಿಯಂತೆ ಇಸ್ರೇಲನ್ನು ಹರಿದುಹರಿದು ಹಾಕಿತು.


ಯೆಹೋವನು ಹೇಳುವುದೇನೆಂದರೆ, “ಅನೇಕ ಅಪರಾಧಗಳನ್ನು ಮಾಡಿದ ತೂರಿನ ಜನರನ್ನು ನಾನು ಖಂಡಿತವಾಗಿ ಶಿಕ್ಷಿಸುವೆನು. ಯಾಕೆಂದರೆ ಅವರು ಒಂದು ಜನಾಂಗದ ಜನರನ್ನೆಲ್ಲಾ ಗುಲಾಮರನ್ನಾಗಿ ಎದೋಮಿಗೆ ಕಳುಹಿಸಿದರು. ಅವರು ತಮ್ಮ ಸಹೋದರರೊಂದಿಗೆ (ಇಸ್ರೇಲಿನೊಂದಿಗೆ) ಮಾಡಿದ ಒಡಂಬಡಿಕೆಯನ್ನು ಮರೆತುಬಿಟ್ಟರು.


ಯೆಹೋವನು ಹೇಳುವುದೇನೆಂದರೆ, “ಗಾಜದ ಜನರನ್ನು ಅವರು ಮಾಡಿದ ಅಪರಾಧಗಳ ನಿಮಿತ್ತ ಖಂಡಿತವಾಗಿಯೂ ಶಿಕ್ಷಿಸುವೆನು. ಯಾಕೆಂದರೆ ಅವರು ಒಂದು ಇಡೀ ಜನಾಂಗವನ್ನೇ ಎದೋಮಿಗೆ ಗುಲಾಮರನ್ನಾಗಿ ಕಳುಹಿಸಿದರು.


ಯೆಹೋವನು ಹೇಳುವುದೇನೆಂದರೆ, “ದಮಸ್ಕದವರು ನಡಿಸಿದ ಅನೇಕ ಅಪರಾಧಗಳ ನಿಮಿತ್ತವಾಗಿ ನಾನು ಖಂಡಿತವಾಗಿಯೂ ಅವರನ್ನು ಶಿಕ್ಷಿಸುವೆನು. ಯಾಕೆಂದರೆ ಅವರು ಗಿಲ್ಯಾದಿನ ಜನರನ್ನು ಒಕ್ಕಣೆಗೆ ಉಪಯೋಗಿಸುವ ಕಬ್ಬಿಣದ ಸಲಕರಣೆಗಳಿಂದ ಜಜ್ಜಿಬಿಟ್ಟರು.


ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ, “ಫಿಲಿಷ್ಟಿಯರು ಸೇಡನ್ನು ತೀರಿಸಿಕೊಂಡಿದ್ದಾರೆ. ಅವರು ಆವೇಶದಿಂದ ತಿರಸ್ಕರಿಸಿ ಸೇಡನ್ನು ತೀರಿಸಿಕೊಂಡಿದ್ದಾರೆ. ಅವರು ತಮ್ಮ ದೀರ್ಘಕಾಲದ ದ್ವೇಷದಿಂದ ನಾಶನವು ಬರುವಂತೆ ಮಾಡಿದ್ದಾರೆ.”


ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ: “ಎದೋಮ್ಯರು ಯೆಹೂದದ ಜನರು ಮೇಲೆ ಕ್ರೂರವಾದ ಸೇಡನ್ನು ತೀರಿಸಿಕೊಂಡಿದ್ದಾರೆ. ಅವರ ಮೇಲೆ ಸತತವಾಗಿ ಸೇಡು ತೀರಿಸಿಕೊಳ್ಳುವುದರ ಮೂಲಕ ಎದೋಮ್ಯರು ಮಹಾಪರಾಧ ಮಾಡಿದ ದೋಷಿಗಳಾಗಿದ್ದಾರೆ.”


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಮೋವಾಬ್ ಮತ್ತು ಸೇಯೀರ್, ‘ಯೆಹೂದ ಜನಾಂಗದವರು ಇತರ ಎಲ್ಲಾ ಜನಾಂಗಗಳವರಂತಿದ್ದಾರೆ.’ ಎಂದು ಹೇಳುತ್ತಾರೆ.


ಯೆಹೋವನು ಹೇಳುವುದೇನೆಂದರೆ: ಜೆರುಸಲೇಮ್ ನಾಶವಾಯಿತೆಂದು ನೀವು ಸಂತೋಷಪಟ್ಟಿರಿ. ನೀವು ಚಪ್ಪಾಳೆತಟ್ಟಿ ಕಾಲಿನಿಂದ ನೆಲವನ್ನು ಬಡಿದಿರಿ. ಇಸ್ರೇಲ್ ದೇಶವನ್ನು ಕಡೆಗಣಿಸಿ ನಗಾಡಿದಿರಿ.


ಅಮ್ಮೋನಿಯರಿಗೆ ಹೀಗೆ ಹೇಳು: ‘ನನ್ನ ಒಡೆಯನಾದ ಯೆಹೋವನ ಮಾತುಗಳನ್ನು ಕೇಳಿರಿ. ಆತನು ಹೇಳುವುದೇನೆಂದರೆ, ನನ್ನ ಪವಿತ್ರಾಲಯವು ಅಪವಿತ್ರಗೊಂಡಾಗಲೂ ಇಸ್ರೇಲ್ ದೇಶವು ನಾಶವಾದಾಗಲೂ ಯೆಹೂದದ ಜನರು ಸೆರೆ ಒಯ್ಯಲ್ಪಟ್ಟಾಗಲೂ ನೀವು ಸಂತೋಷಪಟ್ಟಿರಿ.


ಈಗಾಗಲೆ ನನ್ನ ಹೆಸರುಗೊಂಡಿರುವ ಜೆರುಸಲೇಮ್ ನಗರಕ್ಕೆ ಕೇಡಾಗುವಂತೆ ಮಾಡುತ್ತಿದ್ದೇನೆ. ನಿಮ್ಮನ್ನು ದಂಡನೆಗೆ ಗುರಿ ಮಾಡಲಾಗುವುದಿಲ್ಲವೆಂದು ನೀವು ಯೋಚಿಸುತ್ತಿರಬಹುದು. ಆದರೆ ನಿಮ್ಮ ಯೋಚನೆ ತಪ್ಪು. ನಿಮ್ಮನ್ನು ದಂಡಿಸಲಾಗುವುದು. ಈ ಭೂಮಿಯ ಮೇಲಿನ ಜನರೆಲ್ಲರ ಮೇಲೆ ಆಕ್ರಮಣಮಾಡಲು ನಾನು ಒಂದು ಖಡ್ಗವನ್ನು ಕರೆಯುತ್ತಿದ್ದೇನೆ.’” ಇದು ಯೆಹೋವನ ಸಂದೇಶ.


ಆತನು ಹೇಳುವ ಪ್ರತಿಯೊಂದಕ್ಕೆ ನೀವು ವಿಧೇಯರಾಗಬೇಕು. ನನ್ನ ಆಜ್ಞೆಗಳನ್ನೆಲ್ಲಾ ನೀವು ಅನುಸರಿಸಬೇಕು. ಆಗ ನಾನು ನಿಮ್ಮ ಸಂಗಡ ಇರುವೆನು. ನಾನು ನಿಮ್ಮ ಶತ್ರುಗಳಿಗೆ ಶತ್ರುವಾಗಿರುವೆನು; ನಿಮಗೆ ಕೇಡುಮಾಡುವವರಿಗೆಲ್ಲಾ ಕೇಡುಮಾಡುವೆನು.


ನೀವು ಮತ್ತೆ ಯೆಹೋವನಿಗೆ ವಿಧೇಯರಾಗುವಿರಿ. ಇಂದು ನಾನು ನಿಮಗೆ ಕೊಡುವ ಎಲ್ಲಾ ಆಜ್ಞೆಗಳಿಗೆ ನೀವು ವಿಧೇಯರಾಗುವಿರಿ.


ಅವರು ಅಡಗಿಕೊಂಡಿರುವರು; ಇಸ್ರೇಲರು ಸಿಂಹದಂತೆಯೂ ಹೆಣ್ಣು ಸಿಂಹದಂತೆಯೂ ವಿಶ್ರಮಿಸುವರು. ಅದನ್ನು ಎಬ್ಬಿಸಲು ಯಾರಿಗೆ ಧೈರ್ಯವಿದೆ? ನಿಮ್ಮನ್ನು ಆಶೀರ್ವದಿಸುವವನು ಆಶೀರ್ವದಿಸಲ್ಪಡುವನು. ನಿಮ್ಮನ್ನು ಶಪಿಸುವವನು ಶಪಿಸಲ್ಪಡುವನು.”


ಆ ಜನಾಂಗಗಳು ನಿಮ್ಮನ್ನು ನಾಶಗೊಳಿಸಿದವು. ಆದರೆ ಈಗ ಆ ಜನಾಂಗಗಳನ್ನು ನಾಶಪಡಿಸಲಾಗಿದೆ. ಇಸ್ರೇಲೇ, ಯೆಹೂದವೇ, ನಿಮ್ಮ ಶತ್ರುಗಳು ಬಂಧಿಗಳಾಗುತ್ತಾರೆ. ಅವರು ನಿಮ್ಮ ವಸ್ತುಗಳನ್ನು ಕದ್ದುಕೊಂಡಿದ್ದಾರೆ. ಆದರೆ ಬೇರೆಯವರು ಅವರ ವಸ್ತುಗಳನ್ನು ಕದಿಯುವರು. ಅವರು ಯುದ್ಧದಲ್ಲಿ ನಿಮ್ಮ ವಸ್ತುಗಳನ್ನು ತೆಗೆದುಕೊಂಡರು. ಆದರೆ ಬೇರೆಯವರು ಯುದ್ಧದಲ್ಲಿ ಅವರ ವಸ್ತುಗಳನ್ನು ತೆಗೆದುಕೊಳ್ಳುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು