Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 31:11 - ಪರಿಶುದ್ದ ಬೈಬಲ್‌

11 ಆ ಹಬ್ಬದ ಸಮಯದಲ್ಲಿ ಇಸ್ರೇಲರೆಲ್ಲರು ತಮ್ಮ ದೇವರಾದ ಯೆಹೋವನು ಆರಿಸುವ ವಿಶೇಷ ಸ್ಥಳದಲ್ಲಿ ಕೂಡಿಬರುವಾಗ ಈ ಬೋಧನೆಯ ಪುಸ್ತಕವನ್ನು ಎಲ್ಲರಿಗೂ ಕೇಳಿಸುವಂತೆ ಓದಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಿಮ್ಮ ದೇವರಾದ ಯೆಹೋವನು ಆದುಕೊಂಡ ಸ್ಥಳದಲ್ಲಿ ಇಸ್ರಾಯೇಲರೆಲ್ಲರು ಆತನ ಸನ್ನಿಧಿಗೆ ಕೂಡಿಬಂದಾಗ ನೀವು ಅವರೆಲ್ಲರಿಗೆ ಕೇಳಿಸುವಂತೆ ಈ ಧರ್ಮಶಾಸ್ತ್ರವನ್ನು ಅವರ ಮುಂದೆ ಓದಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನಿಮ್ಮ ದೇವರಾದ ಸರ್ವೇಶ್ವರ ಆರಿಸಿಕೊಂಡ ಸ್ಥಳದಲ್ಲಿ, ಇಸ್ರಯೇಲರೆಲ್ಲರು ಅವರ ಸನ್ನಿಧಿಗೆ ಕೂಡಿಬಂದಾಗ ಅವರೆಲ್ಲರಿಗೂ ಕೇಳಿಸುವಂತೆ ನೀವು ಈ ಧರ್ಮಶಾಸ್ತ್ರವನ್ನು ಅವರ ಮುಂದೆ ಓದಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಿಮ್ಮ ದೇವರಾದ ಯೆಹೋವನು ಆದುಕೊಂಡ ಸ್ಥಳದಲ್ಲಿ ಇಸ್ರಾಯೇಲ್ಯರೆಲ್ಲರು ಆತನ ಸನ್ನಿಧಿಗೆ ಕೂಡಿ ಬಂದಾಗ ನೀವು ಅವರೆಲ್ಲರಿಗೂ ಕೇಳಿಸುವಂತೆ ಈ ಧರ್ಮಶಾಸ್ತ್ರವನ್ನು ಅವರ ಮುಂದೆ ಓದಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಇಸ್ರಾಯೇಲಿನವರೆಲ್ಲರು ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ, ಅವರು ಆಯ್ದುಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳುವುದಕ್ಕೆ ಬಂದಾಗ, ನೀವು ಈ ನಿಯಮವನ್ನು ಇಸ್ರಾಯೇಲಿನವರೆಲ್ಲರ ಮುಂದೆ ಜನರು ಕೇಳುವ ಹಾಗೆ ಓದಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 31:11
17 ತಿಳಿವುಗಳ ಹೋಲಿಕೆ  

ನಂತರ ರಾಜನು ದೇವಾಲಯಕ್ಕೆ ಹೋದನು. ಯೆಹೂದದ ಜನರೆಲ್ಲರು ಮತ್ತು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದ ಜನರೆಲ್ಲರು ಅವನ ಜೊತೆಯಲ್ಲಿ ಹೋದರು. ಯಾಜಕರು, ಪ್ರವಾದಿಗಳು, ಚಿಕ್ಕವರು ಮತ್ತು ದೊಡ್ಡವರು ಅವನೊಡನೆ ಹೋದರು. ಆಗ ಅವನು ನಿಬಂಧನ ಗ್ರಂಥವನ್ನು ಓದಿದನು. ಇದು ದೇವಾಲಯದಲ್ಲಿ ಸಿಕ್ಕಿದ ಗ್ರಂಥವಾಗಿತ್ತು. ಜನರೆಲ್ಲರಿಗೂ ಕೇಳಿಸುವಂತೆ ಯೋಷೀಯನು ಗ್ರಂಥವನ್ನು ಓದಿದನು.


ನಿಮ್ಮ ದೇವರಾದ ಯೆಹೋವನು ನಿಮ್ಮ ಕುಲದವರ ಪ್ರಾಂತ್ಯಗಳಿಂದ ಒಂದು ವಿಶೇಷ ಸ್ಥಳವನ್ನು ಆರಿಸಿಕೊಂಡು ಅದಕ್ಕೆ ತನ್ನ ಹೆಸರಿಡುವನು. ಅಲ್ಲಿ ಆತನ ಆಲಯ ಕಟ್ಟಲ್ಪಡುವುದು. ಆತನನ್ನು ಆರಾಧಿಸಲು ನೀವು ಅಲ್ಲಿಗೆ ಹೋಗಬೇಕು.


“ನೀವು ದೇಶದೊಳಕ್ಕೆ ಹೋದಾಗ, ನಾನು ನಿಮ್ಮ ವೈರಿಗಳನ್ನು ಆ ದೇಶದಿಂದ ಹೊರಗಟ್ಟುವೆನು. ನಾನು ನಿಮ್ಮ ಮೇರೆಗಳನ್ನು ವಿಸ್ತರಿಸುವೆನು. ನಿಮಗೆ ಹೆಚ್ಚೆಚ್ಚಾಗಿ ಭೂಮಿ ದೊರೆಯುವುದು. ಪ್ರತಿ ವರ್ಷ ಮೂರುಸಲ ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಗೆ ಹೋಗುವಿರಿ. ಆ ಸಮಯದಲ್ಲಿ ಯಾರೂ ನಿಮ್ಮಿಂದ ಭೂಮಿಯನ್ನು ಅಪಹರಿಸಲು ಪ್ರಯತ್ನಿಸುವುದಿಲ್ಲ.


ಅವರು ಇವುಗಳನ್ನು ಮಾಡಕೂಡದು. ಏಕೆಂದರೆ ಮೋಶೆಯ ಧರ್ಮಶಾಸ್ತ್ರವನ್ನು ಬೋಧಿಸುವಂಥ ಜನರು ಪ್ರತಿಯೊಂದು ಪಟ್ಟಣದಲ್ಲಿ ಇನ್ನೂ ಇದ್ದಾರೆ. ಅನೇಕ ವರ್ಷಗಳಿಂದ ಪ್ರತಿ ಸಬ್ಬತ್ ದಿನದಲ್ಲಿ ಮೋಶೆಯ ಮಾತುಗಳನ್ನು ಓದಲಾಗುತ್ತಿದೆ” ಎಂದು ಹೇಳಿದನು.


ಮೋಶೆಯ ಧರ್ಮಶಾಸ್ತ್ರವನ್ನು ಮತ್ತು ಪ್ರವಾದಿಗಳ ಗ್ರಂಥಗಳನ್ನು ಓದಲಾಯಿತು. ಬಳಿಕ ಸಭಾಮಂದಿರದ ನಾಯಕರು ಪೌಲ ಬಾರ್ನಬರಿಗೆ, “ಸಹೋದರರೇ, ಇಲ್ಲಿರುವ ಜನರಿಗೆ ಸಹಾಯವಾಗುವಂತೆ ಏನನ್ನಾದರೂ ನೀವು ಹೇಳಬೇಕೆಂದಿದ್ದರೆ, ದಯವಿಟ್ಟು ಹೇಳಿ!” ಎಂಬ ಸಂದೇಶವನ್ನು ಕಳುಹಿಸಿದರು.


ಜನರು ದೇವರನ್ನು ಸಂದರ್ಶಿಸಲು ಊರಿಂದ ಊರಿಗೆ ಪ್ರಯಾಣ ಮಾಡುತ್ತಾ ಚೀಯೋನಿಗೆ ಬರುವರು.


ಮೂರು ತಾಸಿನ ತನಕ ಅವರು ನಿಂತುಕೊಂಡೇ ತಮ್ಮ ದೇವರಾದ ಯೆಹೋವನ ಧರ್ಮಶಾಸ್ತ್ರವನ್ನು ಕೇಳಿದರು; ಇನ್ನು ಮೂರು ತಾಸಿನ ತನಕ ತಮ್ಮತಮ್ಮ ಪಾಪಗಳನ್ನು ಅರಿಕೆ ಮಾಡಿಕೊಂಡು ತಮ್ಮ ದೇವರಾದ ಯೆಹೋವನಿಗೆ ತಲೆಬಾಗಿ ಆರಾಧಿಸಿದರು.


ಆ ತಿಂಗಳ ಎರಡನೆಯ ದಿನದಲ್ಲಿ ಗೋತ್ರಪ್ರಧಾನರೂ ಯಾಜಕರೂ ಲೇವಿಯರೂ ಧರ್ಮಶಾಸ್ತ್ರವನ್ನು ಅಭ್ಯಾಸಿಸಲು ಉಪದೇಶಕನಾದ ಎಜ್ರನ ಸುತ್ತಲೂ ಸೇರಿಬಂದರು.


ಆ ಹಬ್ಬದ ದಿನಗಳ ಪ್ರತಿಯೊಂದು ದಿನದಲ್ಲಿ ಎಜ್ರನು ಧರ್ಮಶಾಸ್ತ್ರ ಪಾರಾಯಣ ಮಾಡಿದನು. ಮೊದಲನೆ ದಿನದಿಂದ ಪ್ರಾರಂಭಿಸಿ ಕಡೆಯ ದಿನದ ತನಕ ಇಸ್ರೇಲರೆಲ್ಲರೂ ಈ ಹಬ್ಬವನ್ನು ಏಳು ದಿನಗಳವರೆಗೆ ಆಚರಿಸಿದರು. ಎಂಟನೆಯ ದಿನದಲ್ಲಿ ಧರ್ಮಶಾಸ್ತ್ರದ ಪ್ರಕಾರ ವಿಶೇಷಕೂಟಗಳಿಗಾಗಿ ಜನರು ಒಟ್ಟಾಗಿ ಸೇರಿಬಂದರು.


ಆಗ ನಿಮ್ಮ ಯೆಹೋವನು ತನ್ನ ಹೆಸರಿಗಾಗಿ ಒಂದು ಸ್ಥಳವನ್ನು ಆರಿಸಿಕೊಳ್ಳುವನು. ಆ ಸ್ಥಳಕ್ಕೆ ನೀವು ನಿಮ್ಮ ಸರ್ವಾಂಗಹೋಮಗಳನ್ನು ಮತ್ತು ಯಜ್ಞಾದಿಗಳನ್ನು ಸಮರ್ಪಿಸಬೇಕು; ನಿಮ್ಮ ಹರಕೆಯ ಕಾಣಿಕೆಗಳನ್ನು, ಚೊಚ್ಚಲ ಪಶುಗಳನ್ನು, ದಶಾಂಶವನ್ನು ಸಲ್ಲಿಸಬೇಕು.


ಯೆಹೋವನು ತನ್ನ ವಿಶೇಷವಾದ ಸ್ಥಳವನ್ನು ನಿಮ್ಮ ಕುಲಗಳವರ ಮಧ್ಯದಿಂದ ಆರಿಸಿಕೊಳ್ಳುವನು. ನಿಮ್ಮ ಸರ್ವಾಂಗಹೋಮಗಳನ್ನು ಮತ್ತು ನಾನು ನಿಮಗೆ ಹೇಳಿದವುಗಳೆಲ್ಲವನ್ನು ಅದೇ ಸ್ಥಳದಲ್ಲಿ ಮಾಡಿರಿ.


ಆತನು ನಿಮಗೆ ಬರೆಯಿಸಿಕೊಟ್ಟ ನಿಯಮಗಳಿಗೆ, ಶಾಸ್ತ್ರಗಳಿಗೆ, ಉಪದೇಶಗಳಿಗೆ ಮತ್ತು ಆಜ್ಞೆಗಳಿಗೆ ನೀವು ವಿಧೇಯರಾಗಿರಬೇಕು. ನೀವು ಎಲ್ಲಾ ಕಾಲದಲ್ಲೂ ಇವುಗಳಿಗೆ ವಿಧೇಯತೆಯಿಂದಿರಬೇಕು. ನೀವು ಅನ್ಯದೇವತೆಗಳನ್ನು ಪೂಜಿಸಲೇಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು