ಧರ್ಮೋಪದೇಶಕಾಂಡ 31:21 - ಪರಿಶುದ್ದ ಬೈಬಲ್21 ಆಗ ಭಯಂಕರವಾದ ಸಂಗತಿಗಳು ಅವರಿಗೆ ಉಂಟಾಗುವವು. ಅವರಿಗೆ ಅನೇಕ ಸಂಕಟಗಳು ಉಂಟಾಗುವವು. ಆಗ ಆ ಜನರಿಗೆ ಈ ಹಾಡು ತಿಳಿದಿರುವುದರಿಂದ ತಾವು ಎಷ್ಟು ತಪ್ಪಿತಸ್ಥರು ಎಂದು ತಿಳಿಯುವುದು. ನಾನು ಕೊಡುವುದಾಗಿ ವಾಗ್ದಾನ ಮಾಡಿರುವ ದೇಶಕ್ಕೆ ಅವರನ್ನು ಇನ್ನೂ ಕರೆದುಕೊಂಡು ಹೋಗಿಲ್ಲ. ಆದರೆ ಅವರು ಅಲ್ಲಿ ಏನು ಮಾಡುತ್ತಾರೆಂಬುದು ನನಗೆ ಆಗಲೇ ಗೊತ್ತಿದೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅನಂತರ ಅನೇಕ ಕಷ್ಟಗಳೂ ಮತ್ತು ವಿಪತ್ತುಗಳೂ ಸಂಭವಿಸಿದಾಗ ಈ ಪದ್ಯವು ಇವರ ಸಂತತಿಯವರ ಬಾಯಲ್ಲಿ ಇದ್ದುಕೊಂಡು ಅವರ ಮುಂದೆ ಸಾಕ್ಷಿಕೊಡುವುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಬಹಳ ಕೇಡುಗಳೂ ವಿಪತ್ತುಗಳೂ ಅವರಿಗೆ ಸಂಭವಿಸುವಾಗ, ಈ ಹಾಡು ಅವರಿಗೆ ವಿರೋಧ ಸಾಕ್ಷಿಯಾಗಿ ಉತ್ತರಕೊಡುವುದು. ಏಕೆಂದರೆ ಅದು ಅವರ ಸಂತತಿಯ ಬಾಯಿಯಲ್ಲಿಂದ ಮರೆತು ಹೋಗುವುದಿಲ್ಲ. ನಾನು ಪ್ರಮಾಣ ಮಾಡಿದ ದೇಶದಲ್ಲಿ ಅವರನ್ನು ತರುವುದಕ್ಕಿಂತ ಮುಂಚೆ ಅವರು ಈ ಹೊತ್ತು ಮಾಡುವ ದುರಾಲೋಚನೆಗಳನ್ನು ನಾನು ಬಲ್ಲೆನು.” ಅಧ್ಯಾಯವನ್ನು ನೋಡಿ |