Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 31:3 - ಪರಿಶುದ್ದ ಬೈಬಲ್‌

3 ಆದರೆ ನಿಮ್ಮನ್ನು ಯೆಹೋವನೇ, ಆಚೆ ಕಡೆಗೆ ನಡೆಸುವನು. ಆ ದೇಶದ ಜನರನ್ನು ಯೆಹೋವನು ನಾಶಮಾಡುವನು. ಅವರ ಕೈಯಿಂದ ನೀವು ಆ ದೇಶವನ್ನು ವಶಪಡಿಸಿಕೊಳ್ಳುವಿರಿ. ಯೆಹೋಶುವನು ನಿಮ್ಮನ್ನು ಇನ್ನು ಮುಂದೆ ನಡಿಸುವನು ಎಂದು ಯೆಹೋವನು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಮುಂದೆ ಹೋಗುವನು; ಆತನು ಆ ಜನಾಂಗಗಳನ್ನು ನಿಮ್ಮ ಎದುರಿನಲ್ಲಿ ನಿಲ್ಲದಂತೆ ನಾಶಮಾಡುವುದರಿಂದ ನೀವು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ. ಯೆಹೋವನು ಆಜ್ಞಾಪಿಸಿದಂತೆ ಯೆಹೋಶುವನು ನಿಮ್ಮ ನಾಯಕನಾಗಿ ನದಿಯನ್ನು ದಾಟಿಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನಿಮ್ಮ ದೇವರಾದ ಸರ್ವೇಶ್ವರ ತಾವೇ ನಿಮ್ಮ ಸೇನಾ ನಾಯಕರಾಗಿ ನದಿಯನ್ನು ದಾಟಿಹೋಗುವರು; ಅವರು ಆ ಜನಾಂಗಗಳನ್ನು ನಿಮ್ಮ ಎದುರಿನಲ್ಲಿ ನಿಲ್ಲದಂತೆ ನಾಶಮಾಡುವರು. ಆಗ ನೀವು ಅವರ ನಾಡನ್ನು ಸ್ವಾಧೀನಮಾಡಿಕೊಳ್ಳುವಿರಿ. ಸರ್ವೇಶ್ವರ ಆಜ್ಞಾಪಿಸಿದಂತೆ ಯೆಹೋಶುವನು ಕೂಡ ನಿಮ್ಮ ನಾಯಕನಾಗಿ ನದಿಯನ್ನು ದಾಟಿಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಸೇನಾನಾಯಕನಾಗಿ ಹೊಳೆಯನ್ನು ದಾಟಿಹೋಗುವನು; ಆತನು ಆ ಜನಾಂಗಗಳನ್ನು ನಿಮ್ಮ ಎದುರಿನಲ್ಲಿ ನಿಲ್ಲದಂತೆ ನಾಶಮಾಡುವದರಿಂದ ನೀವು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ. ಯೆಹೋವನು ಆಜ್ಞಾಪಿಸಿದಂತೆ ಯೆಹೋಶುವನು ನಿಮ್ಮ ನಾಯಕನಾಗಿ ಹೊಳೆಯನ್ನು ದಾಟಿಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಿಮ್ಮ ದೇವರಾದ ಯೆಹೋವ ದೇವರು ತಾವೇ ನಿಮ್ಮ ಮುಂದೆ ಹೋಗುವರು. ಅವರು ಆ ಜನಾಂಗಗಳನ್ನು ನಿಮ್ಮ ಮುಂದೆ ಸೋಲಿಸುವರು. ನೀವು ಅವುಗಳನ್ನು ಸ್ವಾಧೀನಪಡಿಸಿಕೊಳ್ಳುವಿರಿ. ಯೆಹೋವ ದೇವರು ಹೇಳಿದ ಪ್ರಕಾರ ಯೆಹೋಶುವನು ನಿಮ್ಮ ಮುಂದೆ ಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 31:3
19 ತಿಳಿವುಗಳ ಹೋಲಿಕೆ  

ಆದರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಮುಂದೆ ನದಿಯನ್ನು ದಾಟುತ್ತಾನೆಂಬುದು ನಿಮಗೆ ನಿಶ್ಚಯವಾಗಿ ತಿಳಿದಿರಲಿ. ಆತನು ದಹಿಸುವ ಬೆಂಕಿಯಂತಿದ್ದಾನೆ. ಆತನು ಆ ಜನಾಂಗಗಳನ್ನು ಬೇಗನೆ ನಾಶಪಡಿಸುವನು; ನಿಮ್ಮ ಎದುರಿನಲ್ಲಿ ಅವರು ಬಿದ್ದುಹೋಗುವಂತೆ ಮಾಡುವನು. ಇದು ನೆರವೇರುವುದಾಗಿ ಯೆಹೋವನೇ ನಿಮಗೆ ವಾಗ್ದಾನ ಮಾಡಿದ್ದಾನೆ.


ಯೆಹೋವನು ಆ ದಿನ ಇಸ್ರೇಲಿನ ಎಲ್ಲಾ ಜನರ ದೃಷ್ಟಿಯಲ್ಲಿ ಯೆಹೋಶುವನನ್ನು ಘನವಂತನನ್ನಾಗಿ ಮಾಡಿದನು. ಆ ಹೊತ್ತಿನಿಂದ ಜನರು ಯೆಹೋಶುವನನ್ನು ಗೌರವಿಸತೊಡಗಿದರು. ಅವರು ಮೋಶೆಯನ್ನು ಗೌರವಿಸಿದಂತೆ ಯೆಹೋಶುವನನ್ನು ಅವನ ಜೀವಮಾನವೆಲ್ಲಾ ಗೌರವಿಸಿದರು.


“ನನ್ನ ಸೇವಕನಾದ ಮೋಶೆಯು ಸತ್ತನು. ಈಗ ನೀನು ಮತ್ತು ಈ ಜನರು ಜೋರ್ಡನ್ ನದಿಯನ್ನು ದಾಟಿಹೋಗಬೇಕು. ಇಸ್ರೇಲಿನ ಜನರಾದ ನಿಮಗೆ ನಾನು ಕೊಡಲಿರುವ ದೇಶಕ್ಕೆ ನೀವು ಹೋಗಬೇಕು.


ನೂನನ ಮಗನಾದ ಯೆಹೋಶುವನೊಂದಿಗೆ ಯೆಹೋವನು ಮಾತನಾಡಿ ಹೇಳಿದ್ದೇನೆಂದರೆ: “ಧೈರ್ಯವಂತನಾಗಿದ್ದು ಬಲಗೊಳ್ಳು, ನೀನು ಜನರನ್ನು ವಾಗ್ದಾನದ ದೇಶಕ್ಕೆ ನಡೆಸಬೇಕು. ನಾನು ನಿನ್ನೊಂದಿಗಿರುವೆನು.”


ನೀನು ಯೆಹೋಶುವನನ್ನು ಪ್ರೋತ್ಸಾಹಿಸು. ಅವನಿಗೆ ವಿಷಯಗಳನ್ನೆಲ್ಲಾ ತಿಳಿಯಪಡಿಸು. ಅವನು ಜನರನ್ನು ಜೋರ್ಡನ್ ನದಿಯಾಚೆ ನಡೆಸಬೇಕು. ಆ ದೇಶವನ್ನು ಸ್ವಾಧೀನ ಮಾಡಿಕೊಳ್ಳಲು ಅವನು ಅವರಿಗೆ ಸಹಾಯ ಮಾಡುವನು. ಆದ್ದರಿಂದ ಅವನನ್ನು ಬಲಪಡಿಸು’ ಎಂದು ಹೇಳಿದನು.


ದೇವರು ವಾಗ್ದಾನ ಮಾಡಿದ್ದ ವಿಶ್ರಾಂತಿಗೆ ಯೆಹೋಶುವನು ಜನರನ್ನು ಕರೆದೊಯ್ದಿದ್ದರೆ ವಿಶ್ರಾಂತಿಯ ಮತ್ತೊಂದು ದಿನದ ಕುರಿತು ಹೇಳುತ್ತಿರಲಿಲ್ಲ.


ತರುವಾಯ ಇತರ ಜನಾಂಗಗಳ ನಾಡುಗಳನ್ನು ವಶಪಡಿಸಿಕೊಳ್ಳುವುದಕ್ಕಾಗಿ ಯೆಹೋಶುವನು ನಮ್ಮ ಪಿತೃಗಳನ್ನು ಮುನ್ನಡೆಸಿದನು. ನಮ್ಮ ಜನರು ಆ ದೇಶದೊಳಗೆ ಹೋದಾಗ, ದೇವರು ಇತರ ಜನರನ್ನು ಅಲ್ಲಿಂದ ಹೊರಡಿಸಿಬಿಟ್ಟನು. ನಮ್ಮ ಜನರು ಆ ಹೊಸ ದೇಶದೊಳಗೆ ಹೋದಾಗ ಈ ಗುಡಾರವನ್ನು ತಮ್ಮೊಂದಿಗೆ ತೆಗೆದುಕೊಂಡು ಹೋದರು. ನಮ್ಮ ಜನರು ಈ ಗುಡಾರವನ್ನು ತಮ್ಮ ಪಿತೃಗಳಿಂದ ಸ್ವೀಕರಿಸಿಕೊಂಡು ದಾವೀದನ ಕಾಲದವರೆಗೂ ಅದನ್ನು ಇಟ್ಟುಕೊಂಡಿದ್ದರು.


ಆಗ ಯೆಹೋವನು ಯೆಹೋಶುವನಿಗೆ, “ನಾನು ನಿನ್ನನ್ನು ಇಂದಿನಿಂದ ಎಲ್ಲಾ ಇಸ್ರೇಲರ ಮುಂದೆ ಘನವಂತನನ್ನಾಗಿ ಮಾಡುವೆನು. ನಾನು ಮುಂಚೆ ಮೋಶೆಯ ಸಂಗಡ ಇದ್ದಂತೆಯೇ ನಿನ್ನ ಸಂಗಡವೂ ಇದ್ದೇನೆಂಬುದು ಆಗ ಜನರಿಗೆ ತಿಳಿಯುತ್ತದೆ.


ಮೋಶೆಯು ಯೆಹೋಶುವನ ಮೇಲೆ ತನ್ನ ಕೈಗಳನ್ನಿಟ್ಟು ಅವನನ್ನು ನಾಯಕನನ್ನಾಗಿ ನೇಮಿಸಿದನು. ಆಗ ನೂನನ ಮಗನಾದ ಯೆಹೋಶುವನು ಜ್ಞಾನದ ಆತ್ಮನಿಂದ ತುಂಬಲ್ಪಟ್ಟವನಾದನು. ಇಸ್ರೇಲಿನ ಜನರು ಯೆಹೋಶುವನಿಗೆ ವಿಧೇಯರಾದರು. ಯೆಹೋವನು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಇಸ್ರೇಲರು ಮಾಡಿದರು.


ಯೆಹೋವನು ಮೋಶೆಗೆ, “ನೀನು ಸಾಯುವ ಸಮಯವು ಹತ್ತಿರವಾಗುತ್ತಾ ಬಂತು. ಯೆಹೋಶುವನನ್ನು ದೇವದರ್ಶನ ಗುಡಾರಕ್ಕೆ ಕರೆದುಕೊಂಡು ಬಾ. ಅವನು ಮಾಡಬೇಕಾದ ವಿಷಯಗಳನ್ನು ನಾನು ಯೆಹೋಶುವನಿಗೆ ತಿಳಿಸುವೆನು” ಎಂದು ಹೇಳಿದನು. ಮೋಶೆಯೂ ಯೆಹೋಶುವನೂ ದೇವದರ್ಶನ ಗುಡಾರದೊಳಗೆ ಹೋದರು.


ಬಳಿಕ ಇಸ್ರೇಲನು ಯೋಸೇಫನಿಗೆ, “ನೋಡು, ನಾನು ಸಾಯುವ ಕಾಲ ಸಮೀಪಿಸಿದೆ. ಆದರೆ ದೇವರು ಇನ್ನೂ ನಿನ್ನ ಸಂಗಡವಿರುವನು. ಅವನು ನಿನ್ನನ್ನು ನಿನ್ನ ಪೂರ್ವಿಕರ ದೇಶಕ್ಕೆ ಹಿಂತಿರುಗಿಸುವನು.


“ಯೆಹೋವನು ಸೀಹೋನನನ್ನು ಮತ್ತು ಓಗನನ್ನು ನಾಶಮಾಡಿದನು. ಅಮೋರಿಯ ಅರಸರನ್ನು ನಾಶಮಾಡಿದನು; ಅದೇ ರೀತಿಯಾಗಿ ನೀವು ಹೋಗುವ ದೇಶದಲ್ಲಿಯೂ ಮಾಡುವನು.


ನಿಮ್ಮ ದೇವರಾದ ಯೆಹೋವನು ನಿಮ್ಮ ಮುಂದೆ ಹೋಗಿ ಅವರೊಂದಿಗೆ ಯುದ್ಧಮಾಡುವನು. ಈಜಿಪ್ಟ್‌ನಲ್ಲಿ ಆತನು ಮಾಡಿದಂತೆಯೇ ಇಲ್ಲಿಯೂ ಮಾಡುವನು.


“ನಿಮಗೆ ಸ್ವಾಸ್ತ್ಯವಾಗಿ ಕೊಡುವ ದೇಶಕ್ಕೆ ಯೆಹೋವನು ನಿಮ್ಮನ್ನು ನಡೆಸುವನು. ನಿಮಗಿಂತ ಬಲಿಷ್ಠವಾಗಿದ್ದು ಅಲ್ಲಿ ವಾಸಿಸುತ್ತಿರುವ ಹಿತ್ತಿಯರು, ಗಿರ್ಗಾಷಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ಎಂಬ ಏಳು ಜನಾಂಗಗಳನ್ನು ಆ ದೇಶದಿಂದ ನಿಮಗಾಗಿ ಹೊರಗಟ್ಟುವನು.


ಹೀಗೆ ಮಾಡಬೇಕೆಂದು ಯೆಹೋವನು ತನ್ನ ಸೇವಕನಾದ ಮೋಶೆಗೆ ಬಹುಕಾಲದ ಹಿಂದೆಯೇ ಹೇಳಿದ್ದನು. ಮೋಶೆಯು ಈ ಕಾರ್ಯವನ್ನು ಮಾಡಲು ಯೆಹೋಶುವನಿಗೆ ಆಜ್ಞಾಪಿಸಿದ್ದನು. ಹೀಗೆ ಯೆಹೋಶುವನು ದೇವರ ಆಜ್ಞೆಯನ್ನು ಪಾಲಿಸಿದನು. ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೆಲ್ಲವನ್ನು ಯೆಹೋಶುವನು ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು