ಧರ್ಮೋಪದೇಶಕಾಂಡ 31:7 - ಪರಿಶುದ್ದ ಬೈಬಲ್7 ಆಮೇಲೆ ಮೋಶೆಯು ಯೆಹೋಶುವನನ್ನು ಕರೆದು ಎಲ್ಲಾ ಇಸ್ರೇಲರ ಎದುರಿನಲ್ಲಿ, “ಶಕ್ತಿಶಾಲಿಯಾಗಿದ್ದು ಧೈರ್ಯಗೊಂಡಿರು. ನೀನು ಈ ಜನರನ್ನು ಯೆಹೋವನು ನಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದಂಥ ದೇಶಕ್ಕೆ ನಡೆಸು. ಆ ದೇಶವನ್ನು ಸ್ವಾಧೀನ ಮಾಡಿಕೊಳ್ಳಲು ಇಸ್ರೇಲರಿಗೆ ಸಹಾಯ ಮಾಡು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆಗ ಮೋಶೆ ಯೆಹೋಶುವನನ್ನು ಕರೆದು ಇಸ್ರಾಯೇಲರ ಮುಂದೆ ಅವನಿಗೆ, “ಯೆಹೋವನು ಇವರ ಪೂರ್ವಿಕರಿಗೆ ಪ್ರಮಾಣಮಾಡಿಕೊಟ್ಟ ದೇಶಕ್ಕೆ ನೀನೇ ಇವರೊಡನೆ ಹೋಗಿ ಅದನ್ನು ಅವರಿಗೆ ಸ್ವಾಧೀನಪಡಿಸಬೇಕು. ಆದುದರಿಂದ ಶೂರನಾಗಿ ಧೈರ್ಯದಿಂದಿರು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅನಂತರ ಮೋಶೆ ಯೆಹೋಶುವನನ್ನು ಕರೆದು ಇಸ್ರಯೇಲರೆಲ್ಲರ ಮುಂದೆ, “ಸರ್ವೇಶ್ವರ ಇವರ ಪಿತೃಗಳಿಗೆ ಪ್ರಮಾಣಮಾಡಿಕೊಟ್ಟ ನಾಡಿಗೆ ನೀನೇ ಇವರೊಡನೆ ಹೋಗಿ ಅದನ್ನು ಅವರಿಗೆ ಸ್ವಾಧೀನಪಡಿಸಬೇಕು. ಆದುದರಿಂದ ಶೂರನಾಗಿರು, ಧೈರ್ಯದಿಂದಿರು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆಗ ಮೋಶೆ ಯೆಹೋಶುವನನ್ನು ಕರೆದು ಇಸ್ರಾಯೇಲ್ಯರೆಲ್ಲರ ಮುಂದೆ ಅವನಿಗೆ - ಯೆಹೋವನು ಇವರ ಪಿತೃಗಳಿಗೆ ಪ್ರಮಾಣ ಮಾಡಿಕೊಟ್ಟ ದೇಶಕ್ಕೆ ನೀನೇ ಇವರೊಡನೆ ಹೋಗಿ ಅದನ್ನು ಅವರಿಗೆ ಸ್ವಾಧೀನಪಡಿಸಬೇಕು. ಆದದರಿಂದ ಶೂರನಾಗಿ ಧೈರ್ಯದಿಂದಿರು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆಗ ಮೋಶೆಯು ಯೆಹೋಶುವನನ್ನು ಕರೆದು, ಸಮಸ್ತ ಇಸ್ರಾಯೇಲಿನ ಮುಂದೆ ಅವನಿಗೆ, “ಶಕ್ತಿಶಾಲಿಯಾಗಿರು, ಧೈರ್ಯವಾಗಿರು. ಏಕೆಂದರೆ ನೀನು ಈ ಜನರ ಸಂಗಡ ಹೋಗಿ ಯೆಹೋವ ದೇವರು ಅವರ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ದೇಶದಲ್ಲಿ ಸೇರಿಸಬೇಕು. ನೀನು ಅವರಿಗೆ ಅದನ್ನು ಸೊತ್ತಾಗಿ ಹಂಚಿಕೊಡಬೇಕು. ಅಧ್ಯಾಯವನ್ನು ನೋಡಿ |