Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 32:16 - ಪರಿಶುದ್ದ ಬೈಬಲ್‌

16 ದೇವಜನರು ಇತರ ದೇವರುಗಳನ್ನು ಪೂಜಿಸಿ ಯೆಹೋವನನ್ನು ರೇಗಿಸಿದರು. ಅವರು ಅಸಹ್ಯ ವಿಗ್ರಹಗಳನ್ನು ಪೂಜಿಸಿ ಯೆಹೋವನನ್ನು ಸಿಟ್ಟಿಗೆಬ್ಬಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವರು ಅನ್ಯದೇವರುಗಳನ್ನು ಪೂಜಿಸಿ ಆತನನ್ನು ರೇಗಿಸಿದರು; ನಿಷಿದ್ಧಾಚಾರಗಳನ್ನು ನಡಿಸಿ ಆತನಿಗೆ ಸಿಟ್ಟೇರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ರೇಗಿಸಿದರಾತನನು ಅನ್ಯದೇವರುಗಳನು ಪೂಜಿಸುತ ಸಿಟ್ಟಿಗೇರಿಸಿದರು ನಿಷಿದ್ಧಾಚಾರಗಳನು ನಡೆಸುತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅವರು ಅನ್ಯದೇವರುಗಳನ್ನು ಪೂಜಿಸಿ ಆತನನ್ನು ರೇಗಿಸಿದರು; ನಿಷಿದ್ಧಾಚಾರಗಳನ್ನು ನಡಿಸಿ ಆತನಿಗೆ ಸಿಟ್ಟೇರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅನ್ಯದೇವತೆಗಳಿಂದ ದೇವರಿಗೆ ಅವರು ರೋಷ ಹುಟ್ಟಿಸಿದರು. ಅಸಹ್ಯವಾದವುಗಳಿಂದ ದೇವರಿಗೆ ಕೋಪವನ್ನು ಎಬ್ಬಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 32:16
20 ತಿಳಿವುಗಳ ಹೋಲಿಕೆ  

ಇಸ್ರೇಲರು ಎತ್ತರವಾದ ಸ್ಥಳಗಳನ್ನು ನಿರ್ಮಿಸಿ, ಆತನನ್ನು ಕೋಪಗೊಳಿಸಿದರು. ಸುಳ್ಳುದೇವರುಗಳ ವಿಗ್ರಹಗಳನ್ನು ರೂಪಿಸಿ ಆತನನ್ನು ರೇಗಿಸಿದರು.


ಪ್ರಭುವಿಗೆ ಅಸೂಯೆಯನ್ನು ಉಂಟುಮಾಡಬೇಕೆಂದಿದ್ದೀರೋ? ಆತನಿಗಿಂತಲೂ ನಾವು ಬಲಿಷ್ಠರಾಗಿದ್ದೇವೋ? ಇಲ್ಲ!


ಪೂರ್ವಕಾಲದಲ್ಲಿ, ರಾಜನಾದ ಸೊಲೊಮೋನನು ಜೆರುಸಲೇಮಿನ ಬಳಿಯಲ್ಲಿದ್ದ ವಿಘ್ನಪರ್ವತದ ಮೇಲೆ ಕೆಲವು ಉನ್ನತಸ್ಥಳಗಳನ್ನು ನಿರ್ಮಿಸಿದ್ದನು. ಆ ಉನ್ನತಸ್ಥಳಗಳು ಪರ್ವತದ ದಕ್ಷಿಣದಿಕ್ಕಿನ ಮೇಲಿದ್ದವು. ರಾಜನಾದ ಸೊಲೊಮೋನನು ಚೀದೋನ್ಯರ ಅಷ್ಟೋರೆತ್, ಮೋವಾಬ್ಯರ ಕೆಮೋಷ್, ಅಮ್ಮೋನಿಯರ ಮಿಲ್ಕೋಮ್ ಎಂಬ ಅಸಹ್ಯ ವಿಗ್ರಹಗಳಿಗಾಗಿ ಆ ಉನ್ನತಸ್ಥಳಗಳನ್ನು ನಿರ್ಮಿಸಿದ್ದನು. ಆದರೆ ರಾಜನಾದ ಯೋಷೀಯನು ಆ ಪೂಜಾಸ್ಥಳಗಳನ್ನೆಲ್ಲಾ ನಾಶಪಡಿಸಿದನು.


ಯೆಹೋವನು ತಪ್ಪೆಂದು ಹೇಳಿದ ಕಾರ್ಯಗಳನ್ನೆಲ್ಲ ಯೆಹೂದದ ಜನರು ಮಾಡಿ ಪಾಪಿಗಳಾದರು. ಯೆಹೋವನು ಅವರ ಮೇಲೆ ಹೆಚ್ಚು ಕೋಪಗೊಳ್ಳುವಂತೆ ಆತನಿಗೆ ವಿರುದ್ಧವಾದ ಅನೇಕ ಕಾರ್ಯಗಳನ್ನು ಮಾಡಿದರು. ಅವರಿಗಿಂತಲೂ ಮುಂಚೆ ಜೀವಿಸಿದ್ದ ಅವರ ಪೂರ್ವಿಕರಿಗಿಂತಲೂ ಈ ಜನರು ಹೆಚ್ಚು ಕೀಳಾಗಿದ್ದರು.


“ಅವರ ದೇವರುಗಳ ಪ್ರತಿಮೆಗಳನ್ನು ಬೆಂಕಿಯಲ್ಲಿ ಸುಟ್ಟುಬಿಡಬೇಕು. ಅವರ ವಿಗ್ರಹಗಳಲ್ಲಿರುವ ಬೆಳ್ಳಿಬಂಗಾರಗಳನ್ನು ನೀವು ತೆಗೆದುಕೊಳ್ಳಬೇಡಿ. ನೀವು ತೆಗೆದುಕೊಂಡರೆ ಅವು ನಿಮಗೆ ಉರುಲಾಗಿ ನಿಮ್ಮನ್ನೇ ನಾಶಮಾಡುತ್ತವೆ. ಯಾಕೆಂದರೆ ನಿಮ್ಮ ದೇವರಾದ ಯೆಹೋವನು ವಿಗ್ರಹಗಳನ್ನು ದ್ವೇಷಿಸುತ್ತಾನೆ.


ನಾನೇ ನಿಮ್ಮ ದೇವರಾದ ಯೆಹೋವನು. ಆದ್ದರಿಂದ ನೀವು ಯಾವ ವಿಗ್ರಹವನ್ನೂ ಪೂಜಿಸಬಾರದು ಮತ್ತು ಅದರ ಸೇವೆ ಮಾಡಬಾರದು. ನನ್ನ ಜನರು ಇತರ ದೇವರುಗಳನ್ನು ಆರಾಧಿಸುವುದನ್ನು ನಾನು ದ್ವೇಷಿಸುತ್ತೇನೆ. ನನಗೆ ವಿರುದ್ಧವಾಗಿ ಪಾಪ ಮಾಡಿದವರನ್ನು ನಾನು ಶಿಕ್ಷಿಸುತ್ತೇನೆ. ಅವರ ಮಕ್ಕಳು, ಮೊಮ್ಮಕ್ಕಳು ಮತ್ತು ಮರಿಮೊಮ್ಮಕ್ಕಳು ನನ್ನ ದಂಡನೆಗೆ ಗುರಿಯಾಗುವರು.


ನಿಮಗಿಂತ ಮುಂಚೆ ಈ ದೇಶದಲ್ಲಿ ವಾಸಿಸಿದ ಜನರು ಆ ಭಯಂಕರ ಕೃತ್ಯಗಳನ್ನು ಮಾಡಿದರು. ಆದ್ದರಿಂದ ದೇಶವು ಹೊಲೆಯಾಯಿತು.


ಅವರು ದೆವ್ವಗಳನ್ನು ದೇವರನ್ನಾಗಿ ಮಾಡಿ ನನ್ನಲ್ಲಿ ಅಸೂಯೆಯನ್ನು ಉಂಟುಮಾಡಿದರು. ಆ ವಿಗ್ರಹಗಳು ನಿಜವಾದ ದೇವರುಗಳಲ್ಲ! ಅವರು ಪ್ರಯೋಜನವಿಲ್ಲದ ವಿಗ್ರಹಗಳನ್ನು ಮಾಡಿ ನನ್ನನ್ನು ಸಿಟ್ಟಿಗೆಬ್ಬಿಸಿದರು. ಆದ್ದರಿಂದ ನಿಜವಾದ ಜನಾಂಗವಲ್ಲದವರಿಂದ ನಾನು ಅವರಲ್ಲಿ ಈರ್ಷೆಯನ್ನು ಉಂಟು ಮಾಡುವೆನು. ಮೂರ್ಖ ಜನಾಂಗದಿಂದ ಅವರನ್ನು ಸಿಟ್ಟಿಗೆಬ್ಬಿಸುವೆನು.


ಯೆಹೋವನು ತನ್ನ ಜನರ ಮೇಲೆ ಬಹು ಕೋಪಗೊಂಡು ಅವರಿಗೆ ಭಯಂಕರವಾದ ಕಾಯಿಲೆಯನ್ನು ಬರಮಾಡಿದನು.


ನಾನೇ ನಿಮ್ಮೊಂದಿಗೆ ಮಾತನಾಡಿದೆನು. ನಾನೇ ನಿಮ್ಮನ್ನು ರಕ್ಷಿಸಿದೆನು. ನಾನು ಆ ವಿಷಯಗಳನ್ನು ನಿಮಗೆ ತಿಳಿಸಿದೆನು. ನಿಮ್ಮೊಂದಿಗೆ ಇದ್ದಾತನು ಅಪರಿಚಿತನಾಗಿರಲಿಲ್ಲ. ನೀವು ನನ್ನ ಸಾಕ್ಷಿಗಳಾಗಿದ್ದೀರಿ. ನಾನೇ ನಿಮ್ಮ ದೇವರು.” (ಯೆಹೋವನು ತಾನೇ ಈ ವಿಷಯಗಳನ್ನು ಹೇಳಿದ್ದಾನೆ.)


ಯೆಹೂದವೇ, ವಿಗ್ರಹಗಳ ಬೆನ್ನುಹತ್ತಿ ಹೋಗುವದನ್ನು ನಿಲ್ಲಿಸು! ಆ ಅನ್ಯದೇವರುಗಳ ಬಗ್ಗೆ ನಿನ್ನಲ್ಲಿರುವ ಬಯಕೆಯನ್ನು ತೊರೆದುಬಿಡು. ಆದರೆ ನೀನು ‘ಹಾಗೆ ಮಾಡಿದರೆ ಪ್ರಯೋಜನವೇನು? ನಾನು ಅವುಗಳನ್ನು ಬಿಡಲಾರೆ. ನಾನು ಆ ಅನ್ಯದೇವರುಗಳನ್ನು ಪ್ರೀತಿಸುತ್ತೇನೆ. ನಾನು ಅವುಗಳನ್ನು ಪೂಜಿಸಬಯಸುತ್ತೇನೆ’ ಎಂದು ಹೇಳುವೆ.


ಯೆಹೂದದ ಜನರು ಹೀಗೆ ಮಾಡುತ್ತಿದ್ದಾರೆ; ಮಕ್ಕಳು ಸೌದೆಯನ್ನು ಆರಿಸುತ್ತಾರೆ. ತಂದೆಗಳು ಆ ಸೌಧೆಯಿಂದ ಬೆಂಕಿಯನ್ನು ಹೊತ್ತಿಸುತ್ತಾರೆ. ಹೆಂಗಸರು ಹಿಟ್ಟನ್ನು ನಾದಿ ಸ್ವರ್ಗದ ರಾಣಿಗಾಗಿ ಹೋಳಿಗೆಗಳನ್ನು ಮಾಡುತ್ತಾರೆ. ಈ ಯೆಹೂದದ ಜನರು ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸುತ್ತಾರೆ. ಅವರು ನನ್ನನ್ನು ರೇಗಿಸುವದಕ್ಕಾಗಿಯೇ ಹೀಗೆ ಮಾಡುತ್ತಾರೆ.


ಆಗ ಅದು ಕೈಯಂತಿದ್ದ ಒಂದನ್ನು ಚಾಚಿ ನನ್ನ ತಲೆಯ ಕೂದಲನ್ನು ಹಿಡಿದುಕೊಂಡಿತು. ಬಳಿಕ ಆತ್ಮವು ನನ್ನನ್ನು ಮೇಲಕ್ಕೆ ಎತ್ತಿ ದಿವ್ಯದರ್ಶನದಲ್ಲಿ ಜೆರುಸಲೇಮಿಗೆ ಕೊಂಡೊಯ್ಯಿತು. ಅದು ನನ್ನನ್ನು ಒಳದ್ವಾರಕ್ಕೆ ಕೊಂಡೊಯ್ಯಿತು. ಇದು ಉತ್ತರ ದಿಕ್ಕಿನಲ್ಲಿತ್ತು. ದೇವರನ್ನು ಸಿಟ್ಟಿಗೆಬ್ಬಿಸುವ ವಿಗ್ರಹವು ಈ ದ್ವಾರದ ಬಳಿ ಇತ್ತು.


ಆದರೆ ನೀನು ಅನೇಕ ಪಾಪಗಳನ್ನು ಮಾಡಿರುವೆ. ನಿನಗಿಂತಲೂ ಮೊದಲು ಆಳಿದವರ ಪಾಪಗಳಿಗಿಂತ ನಿನ್ನ ಪಾಪಗಳು ಹೆಚ್ಚು ಭಯಂಕರವಾಗಿವೆ. ನೀನು ನನ್ನನ್ನು ಅನುಸರಿಸುವುದನ್ನು ಬಿಟ್ಟುಬಿಟ್ಟೆ. ನೀನು ವಿಗ್ರಹಗಳನ್ನು ಮತ್ತು ಅನ್ಯದೇವರುಗಳನ್ನು ನಿರ್ಮಿಸಿದೆ. ಇದು ನನ್ನಲ್ಲಿ ಹೆಚ್ಚು ಕೋಪವುಂಟುಮಾಡಿತು.


ಇಸ್ರೇಲರು ಪೂಜಾಸ್ಥಳಗಳಲ್ಲೆಲ್ಲಾ ಧೂಪವನ್ನು ಸುಡುತ್ತಿದ್ದರು. ಯೆಹೋವನು ಆ ದೇಶದಿಂದ ಬಲವಂತವಾಗಿ ಹೊರಗಟ್ಟಿದ ಆ ಮೊದಲಿನ ಜನಾಂಗಗಳಂತೆ ಇಸ್ರೇಲರು ಮಾಡಿದರು. ಇಸ್ರೇಲರು ಮಾಡಿದ ದುಷ್ಕೃತ್ಯಗಳಿಂದ ಯೆಹೋವನು ಕೋಪಗೊಂಡನು.


ಅವರು ತಮ್ಮ ಗಂಡುಮಕ್ಕಳನ್ನು ಮತ್ತು ಹೆಣ್ಣುಮಕ್ಕಳನ್ನು ಬೆಂಕಿಯಲ್ಲಿ ಆಹುತಿಕೊಟ್ಟರು. ಅವರು ಭವಿಷ್ಯವನ್ನು ತಿಳಿಯಲು ಮಾಂತ್ರಿಕ ವಿದ್ಯೆಯನ್ನು ಮತ್ತು ಕಣಿಹೇಳುವುದನ್ನು ಕಲಿತರು. ಯೆಹೋವನು ಕೆಟ್ಟದ್ದೆಂದು ಹೇಳಿದ್ದಕ್ಕೆ ತಮ್ಮನ್ನು ತಾವು ಮಾರಿಕೊಂಡು ಯೆಹೋವನಿಗೆ ಕೋಪವನ್ನು ಉಂಟುಮಾಡಿದರು.


ಮನಸ್ಸೆಯು ತನ್ನ ಮಗನನ್ನು ಆಹುತಿಕೊಟ್ಟು ಅವನನ್ನು ಯಜ್ಞವೇದಿಕೆಯ ಮೇಲೆ ಹೋಮಮಾಡಿದನು. ಮನಸ್ಸೆಯು ಭವಿಷ್ಯತ್ಕಾಲವನ್ನು ಅರಿಯಲು ಅನೇಕ ಮಾರ್ಗಗಳಲ್ಲಿ ಪ್ರಯತ್ನಿಸುತ್ತಿದ್ದನು. ಅವನು ಪ್ರೇತಾತ್ಮಗಳನ್ನು ವಶಪಡಿಸಿಕೊಂಡಿರುವ ಮಾಂತ್ರಿಕರನ್ನು ಮತ್ತು ತಾಂತ್ರಿಕರನ್ನು ಭೇಟಿಮಾಡಿದನು. ಯೆಹೋವನು ಕೆಟ್ಟದ್ದೆಂದು ಹೇಳಿದ ಅನೇಕಾನೇಕ ಕಾರ್ಯಗಳನ್ನು ಮನಸ್ಸೆಯು ಮಾಡಿದನು. ಯೆಹೋವನು ಕೋಪಗೊಳ್ಳಲು ಇದು ಕಾರಣವಾಯಿತು.


ಯಾವ ಜನಾಂಗವಾದರೂ ಎಂದಾದರೂ ತಮ್ಮ ಹಳೆಯ ದೇವರುಗಳನ್ನು ಬದಲಾಯಿಸಿ ಹೊಸ ದೇವರುಗಳನ್ನು ಪಡೆಯಿತೇ? ಇಲ್ಲ. (ಅವರ ದೇವರುಗಳು ನಿಜವಾದ ದೇವರುಗಳೇ ಅಲ್ಲ.) ಆದರೆ ನನ್ನ ಜನರು ತಮ್ಮ ಮಹಿಮಾಶಾಲಿಯಾದ ದೇವರನ್ನು ಅಪ್ರಯೋಜಕವಾದ ವಿಗ್ರಹಗಳೊಂದಿಗೆ ಬದಲಾಯಿಸಿಕೊಂಡಿದ್ದಾರೆ.


ನನ್ನ ಜನರ ಮೊರೆಯನ್ನು ಆಲಿಸು. ದೇಶದ ಎಲ್ಲೆಡೆಯಲ್ಲಿಯೂ ಅವರು ಸಹಾಯಕ್ಕಾಗಿ ಕೂಗುತ್ತಿದ್ದಾರೆ. “ಈಗಲೂ ಯೆಹೋವನು ಚೀಯೋನಿನಲ್ಲಿದ್ದಾನೆಯೇ? ಚೀಯೋನಿನ ರಾಜನು ಈಗಲೂ ಅಲ್ಲಿದ್ದಾನೆಯೇ?” ಎಂದು ಅವರು ಕೇಳುತ್ತಾರೆ. ದೇವರು ಹೀಗೆನ್ನುತ್ತಾನೆ: “ಯೆಹೂದದ ಜನರು ತಮ್ಮ ವಿಗ್ರಹಗಳನ್ನು ಪೂಜಿಸಿ ನನ್ನ ಕೋಪವನ್ನು ಏಕೆ ಕೆರಳಿಸುತ್ತಾರೆ? ಅವರು ನಿಷ್ಪ್ರಯೋಜಕವಾದ ಅನ್ಯದೇವರ ವಿಗ್ರಹಗಳನ್ನು ಪೂಜಿಸಿದರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು