Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 32:17 - ಪರಿಶುದ್ದ ಬೈಬಲ್‌

17 ಅವರು ದೆವ್ವಗಳಿಗೆ ಯಜ್ಞವನ್ನರ್ಪಿಸಿದರು. ಅವುಗಳು ನಿಜ ದೇವರುಗಳಲ್ಲ. ಅವುಗಳು ಮಾಡಲ್ಪಟ್ಟ ದೇವರುಗಳೆಂದು ಅವರಿಗೆ ಗೊತ್ತಿರಲಿಲ್ಲ. ಅವುಗಳು ಕೈಯಿಂದ ಮಾಡಲ್ಪಟ್ಟ ದೇವರುಗಳು. ಅವರ ಪೂರ್ವಿಕರಿಗೆ ತಿಳಿಯದಂಥ ದೇವರುಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ದೇವರೇ ಅಲ್ಲದ ಕ್ಷುದ್ರದೇವತೆಗಳಿಗೂ, ಪೂರ್ವಿಕರು ಭಜಿಸದೆ ಇದ್ದ ಮತ್ತು ತಮಗೆ ಮೊದಲಿನಿಂದಲೂ ಗೊತ್ತಿಲ್ಲದೆ ಇರುವ ನೂತನದೇವತೆಗಳಿಗೂ ಬಲಿಯನ್ನರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಬಲಿಯನರ್ಪಿಸಿದರು ನೂತನಾ ದೇವತೆಗಳಿಗೆ, ದೇವರಲ್ಲದಾ ಅಸುರರಿಗೆ, ಪಿತೃಗಳು ಭಜಿಸದಾ, ತಮಗೇ ತಿಳಿಯದಾ ಹೊಸ ದೇವತೆಗಳಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ದೇವರೇ ಅಲ್ಲದ ಕ್ಷುದ್ರದೇವತೆಗಳಿಗೂ ಪಿತೃಗಳು ಭಜಿಸದೆಯೂ ತಮಗೆ ಮುಂಚಿತವಾಗಿ ಗೊತ್ತಿಲ್ಲದೆಯೂ ಇರುವ ನೂತನ ದೇವತೆಗಳಿಗೂ ಬಲಿಯನ್ನರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ದೇವರಿಗೆ ಅಲ್ಲ, ದೆವ್ವಗಳಿಗೆ, ಅವರು ಮುಂಚಿತವಾಗಿ ಅರಿಯದ ದೇವರುಗಳಿಗೆ, ಸಮೀಪದಲ್ಲಿ ಹೊಸದಾಗಿ ತೋರಿ ಬಂದ ದೇವರುಗಳಿಗೆ, ಅಂದರೆ, ಅವರ ಪಿತೃಗಳು ಭಜಿಸದವುಗಳಿಗೆ ಬಲಿ ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 32:17
16 ತಿಳಿವುಗಳ ಹೋಲಿಕೆ  

ಅವರು ಹೊಸ ದೇವರುಗಳನ್ನು ಆರಿಸಿಕೊಂಡರು; ಅದಕ್ಕಾಗಿ ಅವರು ತಮ್ಮ ಪಟ್ಟಣ ದ್ವಾರಗಳಲ್ಲಿ ಯುದ್ಧ ಮಾಡಬೇಕಾಯಿತು. ಇಸ್ರೇಲರ ನಲವತ್ತು ಸಾವಿರ ಸೈನಿಕರಲ್ಲಿ ಒಬ್ಬನಿಗೂ ಗುರಾಣಿ ಬರ್ಜಿಗಳಿರಲಿಲ್ಲ.


ಯೆಹೋವನು ನಿಮ್ಮನ್ನು ಲೋಕದ ಎಲ್ಲಾ ದೇಶಗಳಿಗೆ ಚದರಿಸಿಬಿಡುವನು. ಆತನು ಪ್ರಪಂಚದ ಒಂದು ಕಡೆಯಿಂದ ಇನ್ನೊಂದು ಕಡೆಯ ತನಕ ನಿಮ್ಮನ್ನು ಚದರಿಸುವನು. ಅಲ್ಲಿ ನೀವು ಕಲ್ಲುಮರಗಳಿಂದ ಮಾಡಿದ ದೇವರುಗಳನ್ನು ಪೂಜಿಸುವಿರಿ. ಆ ಸುಳ್ಳುದೇವರುಗಳನ್ನು ನೀವಾಗಲಿ ನಿಮ್ಮ ಪೂರ್ವಿಕರಾಗಲಿ ಎಂದೂ ಪೂಜಿಸಿರಲಿಲ್ಲ.


ಅವರು “ಅಜದೇವತೆಗಳಿಗೆ” ಇನ್ನು ಮುಂದೆ ಬಲಿಕೊಡಬಾರದು. ಅವರು ಅನ್ಯದೇವತೆಗಳ ಹಿಂದೆ ಹೋಗಿದ್ದಾರೆ. ಆ ರೀತಿಯಲ್ಲಿ ಅವರು ಸೂಳೆಯರ ಹಾಗೆ ವರ್ತಿಸಿದ್ದಾರೆ. ಈ ನಿಯಮಗಳು ಶಾಶ್ವತವಾಗಿವೆ.


ಮುಂದಿನ ದಿನಗಳಲ್ಲಿ ಕೆಲವು ಜನರು ಸತ್ಯ ಬೋಧನೆಯನ್ನು ನಂಬುವುದಿಲ್ಲವೆಂದು ಪವಿತ್ರಾತ್ಮನು ಸ್ಪಷ್ಟವಾಗಿ ಹೇಳುತ್ತಾನೆ. ಆ ಜನರು ಸುಳ್ಳಾಡುವ ದುರಾತ್ಮಗಳಿಗೆ ವಿಧೇಯರಾಗುವರು; ದೆವ್ವಗಳ ಬೋಧನೆಯನ್ನು ಅನುಸರಿಸುವರು.


“ನೀವು ಭಯಪಡಬೇಡಿ, ಚಿಂತಿಸಬೇಡಿ. ನಾನು ಭವಿಷ್ಯದ ಸಂಭವಗಳನ್ನು ಯಾವಾಗಲೂ ನಿಮಗೆ ತಿಳಿಸುತ್ತಾ ಬಂದಿದ್ದೇನೆ. ನೀವೇ ನನ್ನ ಸಾಕ್ಷಿಗಳು. ನನ್ನ ಹೊರತು ಬೇರೆ ದೇವರುಗಳಿಲ್ಲ. ನನ್ನ ಹೊರತು ಬೇರೆ ಯಾವ ‘ಬಂಡೆ’ಯೂ ಇಲ್ಲ. ನಾನೊಬ್ಬನೇ!”


ಅವರು ದೆವ್ವಗಳನ್ನು ದೇವರನ್ನಾಗಿ ಮಾಡಿ ನನ್ನಲ್ಲಿ ಅಸೂಯೆಯನ್ನು ಉಂಟುಮಾಡಿದರು. ಆ ವಿಗ್ರಹಗಳು ನಿಜವಾದ ದೇವರುಗಳಲ್ಲ! ಅವರು ಪ್ರಯೋಜನವಿಲ್ಲದ ವಿಗ್ರಹಗಳನ್ನು ಮಾಡಿ ನನ್ನನ್ನು ಸಿಟ್ಟಿಗೆಬ್ಬಿಸಿದರು. ಆದ್ದರಿಂದ ನಿಜವಾದ ಜನಾಂಗವಲ್ಲದವರಿಂದ ನಾನು ಅವರಲ್ಲಿ ಈರ್ಷೆಯನ್ನು ಉಂಟು ಮಾಡುವೆನು. ಮೂರ್ಖ ಜನಾಂಗದಿಂದ ಅವರನ್ನು ಸಿಟ್ಟಿಗೆಬ್ಬಿಸುವೆನು.


ಈ ಉಪದ್ರವಗಳಿಂದ ಸಾಯದೆ ಉಳಿದ ಜನರು ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಲಿಲ್ಲ. ತಮ್ಮ ಸ್ವಂತ ಕೈಗಳಿಂದ ನಿರ್ಮಿಸಿದ ವಿಗ್ರಹಗಳನ್ನು ತೊರೆದುಬಿಡಲಿಲ್ಲ. ಅವರು ದೆವ್ವಗಳ ಆರಾಧನೆಯನ್ನು ನಿಲ್ಲಿಸಲಿಲ್ಲ. ಚಿನ್ನ, ಬೆಳ್ಳಿ, ತಾಮ್ರ, ಕಲ್ಲು ಮತ್ತು ಮರಗಳಿಂದ ಮಾಡಲ್ಪಟ್ಟು, ನಡೆಯಲಾರದ, ನೋಡಲಾರದ ಮತ್ತು ಕೇಳಲಾರದ ವಿಗ್ರಹಗಳನ್ನು ಪೂಜಿಸುವುದನ್ನು ಅವರು ನಿಲ್ಲಿಸಲಿಲ್ಲ.


ಹೀಗಿರಲಾಗಿ, ವಿಗ್ರಹಗಳಿಗೆ ಅರ್ಪಿಸಿದ ಮಾಂಸವನ್ನು ತಿನ್ನುವುದರ ಬಗ್ಗೆ ನಾನು ಹೇಳುವುದೇನೆಂದರೆ: ಜಗತ್ತಿನಲ್ಲಿ ವಿಗ್ರಹವು ಕ್ಷುಲ್ಲಕವಾದದ್ದೆಂದು ನಮಗೆ ಗೊತ್ತಿದೆ. ಒಬ್ಬನೇ ಒಬ್ಬ ದೇವರಿದ್ದಾನೆ ಎಂಬುದು ನಮಗೆ ಗೊತ್ತಿದೆ.


ಆ ವಿಗ್ರಹಗಳು ನಿಷ್ಪ್ರಯೋಜಕ ವಸ್ತುಗಳಾಗಿವೆ. ಅವು ಅಪಹಾಸ್ಯಕ್ಕೆ ಯೋಗ್ಯವಾದವುಗಳಾಗಿವೆ. ನ್ಯಾಯನಿರ್ಣಯದ ಸಮಯದಲ್ಲಿ ಆ ವಿಗ್ರಹಗಳನ್ನು ನಾಶಪಡಿಸಲಾಗುವುದು.


ನಾನು ಅವರಿಗೆ ಆಜ್ಞಾಪಿಸಿದವುಗಳಿಗೆ ಬಹುಬೇಗನೆ ಅವಿಧೇಯರಾಗಿದ್ದಾರೆ. ಚಿನ್ನವನ್ನು ಕರಗಿಸಿ ಅದರಿಂದ ಬಸವನನ್ನು ಮಾಡಿಕೊಂಡು ಅದನ್ನು ಪೂಜಿಸುತ್ತಾ ಅದಕ್ಕೆ ಯಜ್ಞಗಳನ್ನು ಸಮರ್ಪಿಸುತ್ತಿದ್ದಾರೆ. ‘ಇಸ್ರೇಲರೇ ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರುಗಳು ಇವುಗಳು’ ಎಂದು ಜನರು ಹೇಳುತ್ತಿದ್ದಾರೆ” ಎಂದನು.


ಅಲ್ಲಿ ವಾಸಿಸುವ ಜನರು ದುಷ್ಕೃತ್ಯಗಳನ್ನು ಮಾಡಿದ್ದರಿಂದ ಸ್ಥಳಗಳನ್ನು ನಾಶಮಾಡಲಾಯಿತು. ಆ ಜನರು ಬೇರೆ ದೇವರುಗಳಿಗೆ ಬಲಿಯನ್ನು ಅರ್ಪಿಸಿದ್ದಾರೆ. ಆದ್ದರಿಂದ ನನಗೆ ಕೋಪ ಬಂದಿದೆ. ಹಿಂದೆ ನಿಮ್ಮ ಜನರು ಮತ್ತು ನಿಮ್ಮ ಪೂರ್ವಿಕರು ಆ ದೇವರುಗಳನ್ನು ಪೂಜಿಸಿರಲಿಲ್ಲ.


ಇಸ್ರೇಲೇ, ನೀನು ನಲವತ್ತು ವರ್ಷ ಮರುಭೂಮಿಯಲ್ಲಿ ನನಗೆ ಯಜ್ಞಹೋಮಗಳನ್ನು ಅರ್ಪಿಸಿದೆ.


ಎಂದರೆ ಆ ವ್ಯಕ್ತಿಯ ಸಲಹೆಗೆ ನೀವು ಒಪ್ಪಬಾರದು. ಅವನಿಗೆ ಕಿವಿಗೊಡಬೇಡಿ; ಅವನಿಗೆ ಕನಿಕರತೋರಬೇಡಿ; ಅವನು ಸ್ವತಂತ್ರನಾಗಿ ಹೋಗಲು ಬಿಡಬೇಡಿ; ಅವನನ್ನು ಸಂರಕ್ಷಿಸಬೇಡಿ.


ಯೆಹೂದದ ಜನರು ನನ್ನ ಅನುಸರಣೆಯನ್ನು ಬಿಟ್ಟಿದ್ದರಿಂದ ನಾನು ಹೀಗೆ ಮಾಡುವೆನು. ಇದನ್ನು ಅವರು ಅನ್ಯದೇವರುಗಳ ಸ್ಥಳವನ್ನಾಗಿ ಮಾಡಿದ್ದಾರೆ. ಯೆಹೂದದ ಜನರು ಈ ಸ್ಥಳದಲ್ಲಿ ಅನ್ಯದೇವರುಗಳಿಗಾಗಿ ಧೂಪವನ್ನು ಹಾಕಿದ್ದಾರೆ. ಬಹಳ ಹಿಂದೆ ಈ ಜನರು ಆ ದೇವರುಗಳನ್ನು ಪೂಜಿಸುತ್ತಿರಲಿಲ್ಲ. ಅವರ ಹಿರಿಯರೂ ಆ ದೇವರುಗಳನ್ನು ಪೂಜಿಸುತ್ತಿರಲಿಲ್ಲ. ಇವುಗಳು ಅನ್ಯದೇಶದ ಹೊಸ ದೇವರುಗಳು. ಯೆಹೂದದ ರಾಜರು ಈ ಸ್ಥಳವನ್ನು ಮುಗ್ಧಮಕ್ಕಳ ರಕ್ತದಿಂದ ತುಂಬಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು