Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 32:26 - ಪರಿಶುದ್ದ ಬೈಬಲ್‌

26 “‘ನಾನು ಇಸ್ರೇಲರನ್ನು ಸಂಪೂರ್ಣವಾಗಿ ನಿರ್ಮೂಲ ಮಾಡಲು ಯೋಚಿಸಿದೆನು. ಲೋಕದಲ್ಲಿ ಅವರ ಹೆಸರು ಉಳಿಯದಂತೆ ಮಾಡುವೆನು ಎಂದು ನೆನಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅವರನ್ನು ಸಂಪೂರ್ಣವಾಗಿ ನಾಶಮಾಡುತ್ತಿದ್ದೆನು, ಅವರು ಮನುಷ್ಯರ ಜ್ಞಾಪಕದಲ್ಲೂ ಇಲ್ಲದಂತೆ ಮಾಡುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ನಾಶ ಮಾಡುತ್ತಿದ್ದೆ ನಾನವರನು ಸಂಪೂರ್ಣವಾಗಿ ಅವರಿಲ್ಲದಂತೆ ಮಾಡುತ್ತಿದ್ದೆ ಯಾರೊಬ್ಬರ ನೆನಪಿನಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅವರನ್ನು ಸಂಪೂರ್ಣವಾಗಿ ನಾಶಮಾಡುತ್ತಿದ್ದೆನು, ಅವರು ಮನುಷ್ಯರ ಜ್ಞಾಪಕದಲ್ಲೂ ಇಲ್ಲದಂತೆ ಮಾಡುತ್ತಿದ್ದೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ನಾನು ಅವರನ್ನು ಚದರಿಸಿಬಿಡುವೆನು. ಅವರ ನೆನಪೇ ಮನುಷ್ಯರಲ್ಲಿ ಇರದ ಹಾಗೆ ಮಾಡುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 32:26
13 ತಿಳಿವುಗಳ ಹೋಲಿಕೆ  

ಯೆಹೋವನು ನಿಮ್ಮನ್ನು ಲೋಕದ ಎಲ್ಲಾ ದೇಶಗಳಿಗೆ ಚದರಿಸಿಬಿಡುವನು. ಆತನು ಪ್ರಪಂಚದ ಒಂದು ಕಡೆಯಿಂದ ಇನ್ನೊಂದು ಕಡೆಯ ತನಕ ನಿಮ್ಮನ್ನು ಚದರಿಸುವನು. ಅಲ್ಲಿ ನೀವು ಕಲ್ಲುಮರಗಳಿಂದ ಮಾಡಿದ ದೇವರುಗಳನ್ನು ಪೂಜಿಸುವಿರಿ. ಆ ಸುಳ್ಳುದೇವರುಗಳನ್ನು ನೀವಾಗಲಿ ನಿಮ್ಮ ಪೂರ್ವಿಕರಾಗಲಿ ಎಂದೂ ಪೂಜಿಸಿರಲಿಲ್ಲ.


ಇವರಲ್ಲಿ ಕೆಲವರು ಸೈನಿಕರಿಂದ ಕೊಲ್ಲಲ್ಪಡುವರು. ಇನ್ನು ಕೆಲವರು ಬಂಧಿತರಾಗಿ ಪರದೇಶಕ್ಕೆ ಒಯ್ಯಲ್ಪಡುವರು. ಅನ್ಯದೇಶೀಯರು ತಮ್ಮ ಕಾಲ ಮುಗಿಯುವ ತನಕ ಪರಿಶುದ್ಧ ಪಟ್ಟಣವಾದ ಜೆರುಸಲೇಮಿನಲ್ಲಿ ನಡೆದಾಡುವರು.


ನೀನು ನಮ್ಮ ತಂದೆಯಾಗಿರುವೆ. ಅಬ್ರಹಾಮನಿಗೆ ನಮ್ಮ ಪರಿಚಯವಿಲ್ಲ. ಇಸ್ರೇಲನು ನಮ್ಮನ್ನು ಗುರುತಿಸುವುದಿಲ್ಲ. ಯೆಹೋವನೇ, ನೀನೇ ನಮ್ಮ ತಂದೆ. ನೀನೇ ನಮ್ಮನ್ನು ಯಾವಾಗಲೂ ರಕ್ಷಿಸಿದಾತನು.


ಕೆಡುಕರಿಗಾದರೋ ಯೆಹೋವನು ವಿರೋಧವಾಗಿರುವನು. ಆತನು ಅವರನ್ನು ಸಂಪೂರ್ಣವಾಗಿ ನಾಶಮಾಡುವನು.


ನೀವು ಯಾವ ದೇಶಕ್ಕೆ ಕಳುಹಿಸಲ್ಪಡುವಿರೋ ಆ ದೇಶದವರು ನಿಮ್ಮ ದುರವಸ್ಥೆಯನ್ನು ನೋಡಿ ನಗುವರು; ಕೆಟ್ಟಮಾತುಗಳನ್ನಾಡುವರು.


“ನಿಮ್ಮ ವೈರಿಗಳು ಬಂದು ನಿಮ್ಮನ್ನು ಸೋಲಿಸಿಬಿಡುವಂತೆ ಮಾಡುವನು. ನೀವು ಒಂದು ದಾರಿಯಿಂದ ನಿಮ್ಮ ವೈರಿಗೆ ಎದುರಾಗಿ ಯುದ್ಧಕ್ಕೆ ಇಳಿದರೆ ಏಳುದಾರಿಗಳಿಂದ ರಣರಂಗದಿಂದ ಪಲಾಯನ ಮಾಡುವಿರಿ. ನಿಮಗೆ ಸಂಭವಿಸುವ ಬಾಧೆಗಳನ್ನು ನೋಡಿ ಇತರ ಜನಾಂಗದವರು ಭಯಪಡುವರು.


ಯೆಹೋವನು ನಿಮ್ಮನ್ನು ಅನ್ಯದೇಶಗಳಿಗೆ ಚದರಿಸಿಬಿಡುವನು. ಆತನು ನಿಮ್ಮನ್ನು ಚದರಿಸಿಬಿಡುವ ದೇಶಗಳವರ ಮಧ್ಯದಲ್ಲಿ ನಿಮ್ಮಲ್ಲಿ ಕೆಲವರು ಮಾತ್ರ ಜೀವಂತವಾಗಿ ಉಳಿದುಕೊಳ್ಳುವರು.


ನೀವು ಬೇರೆ ಜನಾಂಗಗಳಲ್ಲಿ ಬೆರೆತು ಇಲ್ಲದಂತಾಗುವಿರಿ. ನಿಮ್ಮ ವೈರಿಗಳ ದೇಶದಲ್ಲಿ ನೀವು ಮಾಯವಾಗಿ ಹೋಗುವಿರಿ.


ನಾನು ನಿಮ್ಮನ್ನು ಜನಾಂಗಗಳ ಮಧ್ಯದಲ್ಲಿ ಚದರಿಸಿಬಿಡುವೆನು. ಕತ್ತಿಯನ್ನು ಇರಿದು ನಿಮ್ಮನ್ನು ನಾಶಮಾಡುವೆ. ನಿಮ್ಮ ಭೂಮಿ ಬರಿದಾಗುವುದು ಮತ್ತು ನಿಮ್ಮ ಪಟ್ಟಣಗಳು ನಾಶವಾಗುವವು.


ಇವರನ್ನು ನಾನು ಸಂಪೂರ್ಣವಾಗಿ ನಾಶಮಾಡುತ್ತೇನೆ. ಅವರ ಹೆಸರುಗಳನ್ನು ಯಾರೂ ನೆನಪಿನಲ್ಲಿಟ್ಟುಕೊಳ್ಳದಂತೆ ಮಾಡುತ್ತೇನೆ. ಆಮೇಲೆ ನಾನು ನಿನ್ನಿಂದ ಬಲಿಷ್ಠವಾದ ಮಹಾಜನಾಂಗವನ್ನು ನಿರ್ಮಿಸುತ್ತೇನೆ’ ಎಂದು ಹೇಳಿದನು.


ನಾನು ಇದನ್ನು ನನಗಾಗಿ ಮಾಡುವೆನು. ನಾನು ನಿಮ್ಮನ್ನು ಪ್ರಾಮುಖ್ಯವಾದ ವ್ಯಕ್ತಿಗಳೆಂದು ಪರಿಗಣಿಸುವುದಿಲ್ಲ. ನನ್ನ ಮಹಿಮೆಯನ್ನು ಮತ್ತು ನನಗೆ ಸಲ್ಲತಕ್ಕ ಸ್ತುತಿಯನ್ನು ತೆಗೆದುಕೊಳ್ಳಲು ನಾನು ಸುಳ್ಳುದೇವರುಗಳಿಗೆ ಅವಕಾಶ ಕೊಡುವುದಿಲ್ಲ.


ಆದರೆ ನೀನು ನಿನ್ನ ಜನರನ್ನು ನಾಶಮಾಡಿದರೆ, ಈಜಿಪ್ಟಿನವರು, ‘ಯೆಹೋವನು ತನ್ನ ಜನರಿಗೆ ಕೇಡನ್ನು ಮಾಡುವುದಕ್ಕಾಗಿಯೇ ಈಜಿಪ್ಟಿನಿಂದ ಕರೆದುಕೊಂಡು ಹೋದನು. ಆತನು ಅವರನ್ನು ಬೆಟ್ಟಗಳಲ್ಲಿ ಕೊಲ್ಲಬೇಕೆಂದಿದ್ದನು; ತನ್ನ ಜನರನ್ನು ಭೂಮಿಯಿಂದ ನಿರ್ಮೂಲ ಮಾಡಬೇಕೆಂದಿದ್ದನು’ ಎಂದು ಹೇಳುವರು. ಆದ್ದರಿಂದ ನಿನ್ನ ಜನರ ಮೇಲೆ ಕೋಪಗೊಳ್ಳಬೇಡ. ನಿನ್ನ ಕೋಪವನ್ನು ಬಿಟ್ಟುಬಿಡು. ನಿನ್ನ ಜನರನ್ನು ನಾಶಮಾಡಬೇಡ.


ಯೆಹೋವನಿಗೆ ಪ್ರಾರ್ಥಿಸಿರಿ, ಆತನು ನಿಮಗೆ ಕಿವಿಗೊಡುವನು; ನಿಮ್ಮನ್ನು ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು