Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 32:32 - ಪರಿಶುದ್ದ ಬೈಬಲ್‌

32 ಅವರ ಹೊಲಗಳೂ ದ್ರಾಕ್ಷಾಲತೆಗಳೂ ಸೊದೋಮ್ ಗೊಮೋರಗಳಂತೆ ನಾಶ ಮಾಡಲ್ಪಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಅವರು ಸೊದೋಮ್ಯರೆಂಬ ದ್ರಾಕ್ಷಾಲತೆಯ ಒಂದು ಬಳ್ಳಿಯಂತಿದ್ದಾರೆ; ಮತ್ತು ಅದು ಗೊಮೋರ ಪಟ್ಟಣದ ತೋಟಗಳಲ್ಲಿ ಬೆಳೆಯುವ ಜಾತಿ. ಅದರ ದ್ರಾಕ್ಷಿಹಣ್ಣು ವಿಷದ ದ್ರಾಕ್ಷಿಹಣ್ಣು; ಅದರ ಗೊಂಚಲು ಕಹಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಅವರೋ ಸೊದೋಮ್ಯರೆಂಬ ದ್ರಾಕ್ಷಾಲತೆ ಅವರೋ ಗೊಮೋರ್ಯರೆಂಬ ತೋಟದಬೆಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಅವರು ಸೊದೋಮ್ಯರೆಂಬ ದ್ರಾಕ್ಷಾಲತೆಯ ಒಂದು ಬಳ್ಳಿಯಾಗಿದ್ದಾರೆ; ಅದು ಗೊಮೋರ ಪಟ್ಟಣದ ತೋಟಗಳಲ್ಲಿ ಬೆಳೆಯುವ ಜಾತಿ. ಅದರ ಹಣ್ಣಿನ ಗೊಂಚಲು ವಿಷ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಏಕೆಂದರೆ ಸೊದೋಮಿನ ದ್ರಾಕ್ಷಿಗಿಡದಿಂದಲೂ, ಗೊಮೋರದ ತೋಟದೊಳಗಿಂದಲೂ ಅವರ ದ್ರಾಕ್ಷಿಗಿಡ ಉಂಟಾಯಿತು. ಅವರ ಹಣ್ಣುಗಳು, ವಿಷದ ಹಣ್ಣುಗಳು, ಆ ಹಣ್ಣುಗಳ ಗೊಂಚಲು ಕಹಿಯಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 32:32
11 ತಿಳಿವುಗಳ ಹೋಲಿಕೆ  

ಇಲ್ಲಿರುವ ಯಾವ ಪುರುಷನಾಗಲಿ ಸ್ತ್ರೀಯಾಗಲಿ ಯಾವ ಗೋತ್ರದವರಾಗಲಿ ನಿಮ್ಮ ದೇವರಾದ ಯೆಹೋವನನ್ನು ಬಿಟ್ಟುಹೋಗದಂತೆ ನೋಡಿಕೊಳ್ಳಿರಿ. ಯಾವನೂ ಹೋಗಿ ಬೇರೆ ಜನಾಂಗಗಳ ದೇವರುಗಳ ಸೇವೆಮಾಡಬಾರದು. ಅಂಥದ್ದನ್ನು ಮಾಡುವ ಜನರು ಕಹಿಯಾದ ಮತ್ತು ವಿಷಭರಿತವಾದ ಹಣ್ಣನ್ನು ಬಿಡುವ ಗಿಡದಂತಿದ್ದಾರೆ.


ಸೊದೋಮಿನ ಅಧಿಪತಿಗಳೇ, ಯೆಹೋವನ ಸಂದೇಶವನ್ನು ಕೇಳಿರಿ. ಗೊಮೋರದ ಜನರೇ, ಆತನ ಉಪದೇಶವನ್ನು ಕೇಳಿರಿ.


ಯೆಹೂದವೇ, ನಾನು ನಿನ್ನನ್ನು ಅತ್ಯುತ್ತಮ ದ್ರಾಕ್ಷಾಲತೆಯಂತೆ ನೆಟ್ಟೆ. ನೀನು ಒಳ್ಳೆಯ ಬೀಜದಂತಿದ್ದಿ. ನೀನು ಕೆಟ್ಟ ಫಲಗಳನ್ನು ಫಲಿಸುವ ಬೇರೆ ದ್ರಾಕ್ಷಿಯ ಬಳ್ಳಿಯಾದದ್ದು ಹೇಗೆ?


ನನ್ನ ದ್ರಾಕ್ಷಿತೋಟಕ್ಕೆ ನಾನು ಇನ್ನೇನು ಮಾಡಬೇಕಿತ್ತು. ನಾನು ಮಾಡಬೇಕಿದ್ದನ್ನೆಲ್ಲಾ ಮಾಡಿದೆನು. ಒಳ್ಳೆಯ ದ್ರಾಕ್ಷಿಹಣ್ಣು ಬಿಡುವುದೆಂದು ಆಶಿಸಿದ್ದೆನು. ಆದರೆ ಅದು ಹೊಲಸು ದ್ರಾಕ್ಷಿಗಳನ್ನೇ ಬಿಟ್ಟಿತು. ಹೀಗೆ ಆದದ್ದೇಕೆ?


ನಿಮ್ಮಲ್ಲಿ ಯಾರೂ ದೇವರ ಕೃಪೆಯನ್ನು ಕಳೆದುಕೊಳ್ಳದಂತೆ ಎಚ್ಚರದಿಂದಿರಿ. ನಿಮ್ಮಲ್ಲಿ ಯಾವನೂ ಚಿಗುರಿ ಬೆಳೆಯುವ ವಿಷದ ಬೇರಿನಂತಾಗದಂತೆ ಎಚ್ಚರಿಕೆಯಿಂದಿರಿ. ಅಂಥವನಿಂದ ನಿಮ್ಮ ಇಡೀ ಗುಂಪೇ ಹಾಳಾಗುವುದು.


ಆದರೆ ನ್ಯಾಯತೀರ್ಪಿನ ದಿನದಲ್ಲಿ ನಿನ್ನ ಪರಿಸ್ಥಿತಿ ಸೊದೋಮಿಗಿಂತಲೂ ದುಸ್ಥಿತಿಗೆ ಒಳಗಾಗುವುದು ಎಂದು ನಾನು ನಿನಗೆ ಹೇಳುತ್ತೇನೆ.”


ನನ್ನ ಜನರ ಪಾಪವು ಬಹಳವಾಗಿತ್ತು. ಅವರ ಪಾಪವು ಸೊದೋಮ್ ಪಟ್ಟಣದ ಪಾಪಕ್ಕಿಂತಲೂ ಹೆಚ್ಚಾಗಿತ್ತು. ಸೊದೋಮ್ ಇದ್ದಕ್ಕಿದ್ದಂತೆ ನಾಶವಾಯಿತು. ಅದು ನಾಶವಾದದ್ದು ಯಾವ ಮಾನವನಿಂದಲೂ ಅಲ್ಲ.


ಅವರ ದ್ರಾಕ್ಷೆಯು ವಿಷದಂತೆಯೂ ಅವರ ದ್ರಾಕ್ಷಾರಸವು ಹಾವಿನ ವಿಷದಂತೆಯೂ ಕಹಿಯಾಗಿವೆ.


ನನ್ನ ಪಾಪಗಳನ್ನು ಚೀಲದಲ್ಲಿಟ್ಟು ಮುದ್ರಿಸಿ ದೂರಕ್ಕೆ ಎಸೆದುಬಿಡುವೆ.


ಯೆಹೂದದ ಪ್ರವಾದಿಗಳು ಜೆರುಸಲೇಮಿನಲ್ಲಿ ಭಯಂಕರ ದುಷ್ಕೃತ್ಯಗಳನ್ನು ಮಾಡುವುದನ್ನು ನಾನು ನೋಡಿದ್ದೇನೆ. ಈ ಪ್ರವಾದಿಗಳು ವ್ಯಭಿಚಾರ ಮಾಡುತ್ತಾರೆ. ಅವರು ಸುಳ್ಳುಗಳನ್ನು ಕೇಳಿ, ಆ ಸುಳ್ಳುಬೋಧನೆಗಳನ್ನು ಪಾಲಿಸುತ್ತಾರೆ. ಅವರು ದುಷ್ಟರಿಗೆ ಅವರ ದುಷ್ಟತನವನ್ನು ಮುಂದುವರಿಸಲು ಪ್ರೋತ್ಸಾಹಿಸುತ್ತಾರೆ. ಆದ್ದರಿಂದ ಜನರು ಪಾಪಮಾಡುವುದನ್ನು ನಿಲ್ಲಿಸಲಿಲ್ಲ. ಅವರೆಲ್ಲರು ನನಗೆ ಸೊದೋಮ್ ನಗರದಂತೆ ಇದ್ದಾರೆ. ಜೆರುಸಲೇಮಿನ ಜನರು ಗೊಮೋರ ನಗರದಂತೆ ಇದ್ದಾರೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು