Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 32:51 - ಪರಿಶುದ್ದ ಬೈಬಲ್‌

51 ಯಾಕೆಂದರೆ ನೀವಿಬ್ಬರೂ ನನಗೆ ವಿರುದ್ಧವಾಗಿ ಪಾಪಮಾಡಿದಿರಿ. ಚಿನ್ ಮರುಭೂಮಿಯಲ್ಲಿರುವ ಕಾದೇಶ್ ಬಳಿಯಲ್ಲಿದ್ದ ಮೆರೀಬಾ ಎಂಬ ಸ್ಥಳದ ನೀರಿನ ಬಳಿಯಲ್ಲಿ ನೀನು ಜನರ ಮುಂದೆ ನನ್ನನ್ನು ಅವಮಾನಪಡಿಸಿದೆ. ನೀನು ನನ್ನನ್ನು ಮಹಾಪವಿತ್ರನೆಂದು ಗೌರವಿಸಬೇಕಿತ್ತು, ಆದರೆ ನೀನು ಗೌರವಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

51 ನೀವಿಬ್ಬರೂ ಚಿನ್ ಅರಣ್ಯದ ಕಾದೇಶಿನ ಮೆರೀಬಾದಲ್ಲಿ ನೀರು ಹೊರಟ ಸ್ಥಳದ ಬಳಿಯಲ್ಲಿದ್ದಾಗ, ಇಸ್ರಾಯೇಲರ ಮಧ್ಯದಲ್ಲಿ ನೀನು ನನಗೆ ವಿರುದ್ಧವಾಗಿ ದ್ರೋಹಮಾಡಿ ಅವರ ಮುಂದೆ ನನ್ನ ಗೌರವವನ್ನು ಕಾಪಾಡದೆಹೋದುದರಿಂದ ಹೀಗೆ ಆಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

51 ನೀವಿಬ್ಬರೂ ಚಿನ್ ಮರುಭೂಮಿಯಲ್ಲಿನ ಮೆರೀಬಾ ಕಾದೇಶಿನಲ್ಲಿ ನೀರು ಹೊರಟು ಬಂದ ಸ್ಥಳದ ಬಳಿಯಲ್ಲಿ, ಇಸ್ರಯೇಲರ ಮಧ್ಯೆ ನನಗೆ ವಿರೋಧವಾಗಿ ದ್ರೋಹಮಾಡಿದಿರಿ; ಅವರ ಮುಂದೆ ನನ್ನ ಗೌರವವನ್ನು ಕಾಪಾಡದೆಹೋದಿರಿ. ಆದುದರಿಂದಲೇ ಹೀಗೆ ಆಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

51 ನೀವಿಬ್ಬರೂ ಚಿನ್ ಅರಣ್ಯದಲ್ಲಿನ ಮೆರೀಬಾ ಕಾದೇಶಿನಲ್ಲಿ ನೀರು ಹೊರಟ ಸ್ಥಳದ ಬಳಿಯಲ್ಲಿ ಇಸ್ರಾಯೇಲ್ಯರ ಮಧ್ಯದಲ್ಲಿ ನನಗೆ ವಿರೋಧವಾಗಿ ದ್ರೋಹಮಾಡಿ ಅವರ ಮುಂದೆ ನನ್ನ ಗೌರವವನ್ನು ಕಾಪಾಡದೆ ಹೋದದರಿಂದ ಹೀಗೆ ಆಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

51 ನೀವಿಬ್ಬರೂ ಚಿನ್ ಮರುಭೂಮಿಯಲ್ಲಿ ಕಾದೇಶಿನ ಮೆರೀಬಾದ ನೀರಿನ ಬಳಿಯಲ್ಲಿ ನನ್ನನ್ನು ಇಸ್ರಾಯೇಲರ ಮುಂದೆ ನಂಬದೆ, ನನ್ನ ಪವಿತ್ರತೆಯನ್ನು ಇಸ್ರಾಯೇಲರ ನಡುವೆ ಕಾಪಾಡದೆ ನಂಬದೆ ಹೋದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 32:51
10 ತಿಳಿವುಗಳ ಹೋಲಿಕೆ  

ಇಸ್ರೇಲರ ಸಮೂಹದವರು ಚಿನ್ ಮರುಭೂಮಿಯಲ್ಲಿ ನನ್ನೊಡನೆ ವಿವಾದಿಸಿದಾಗ ನೀವಿಬ್ಬರೂ ನನ್ನ ಪವಿತ್ರತೆಯನ್ನು ಜನರ ಮುಂದೆ ತೋರಿಸದೆ ನನ್ನ ಆಜ್ಞೆಗೆ ಅವಿಧೇಯರಾದ ಕಾರಣ ಆ ದೇಶವನ್ನು ನೀನು ಸೇರಬಾರದು.” ಚಿನ್ ಮರುಭೂಮಿಯಲ್ಲಿ ಕಾದೇಶಿನ ಬಳಿ ಮೆರೀಬಾ ಬುಗ್ಗೆಯ ಕುರಿತಾಗಿ ಯೆಹೋವನು ಇದನ್ನು ಹೇಳಿದನು.


“ಆರೋನನು ಸತ್ತು ಪೂರ್ವಿಕರ ಬಳಿ ಸೇರುವ ಸಮಯ ಬಂದಿದೆ. ಇಸ್ರೇಲರಿಗೆ ನಾನು ವಾಗ್ದಾನ ಮಾಡಿದ ದೇಶದೊಳಗೆ ಆರೋನನು ಪ್ರವೇಶಿಸುವುದಿಲ್ಲ. ಯಾಕೆಂದರೆ ನೀವಿಬ್ಬರೂ ಮೆರೀಬಾ ಬುಗ್ಗೆಯ ಕುರಿತಾಗಿ ನಾನು ಕೊಟ್ಟ ಆಜ್ಞೆಗೆ ವಿಧೇಯರಾಗದಿದ್ದುದರಿಂದ ನಾನು ನಿಮಗೆ ಇದನ್ನು ಹೇಳುತ್ತಿದ್ದೇನೆ.


ಆಗ ಮೋಶೆ ಆರೋನನಿಗೆ, “ಯೆಹೋವನು ಹೇಳುವುದೇನೆಂದರೆ, ‘ನನ್ನ ಬಳಿಗೆ ಬರುವ ಯಾಜಕರು ನನ್ನನ್ನು ಗೌರವಿಸಬೇಕು. ಯಾಕೆಂದರೆ ನಾನು ಅವರ ಮೂಲಕ ಜನರಿಗೆ ಪ್ರಕಟಿಸಿಕೊಳ್ಳುವೆನು. ನಾನು ಪರಿಶುದ್ಧನೆಂದು ಅವರು ಮತ್ತು ಎಲ್ಲಾ ಜನರು ತಿಳಿದುಕೊಂಡು ನನ್ನನ್ನು ಘನಪಡಿಸಬೇಕು’” ಎಂದು ಹೇಳಿದನು. ಆದ್ದರಿಂದ ಆರೋನನು ತನ್ನ ಪುತ್ರರು ಸತ್ತಿದ್ದರ ಬಗ್ಗೆ ಏನೂ ಹೇಳದೆ ಸುಮ್ಮನಿದ್ದನು.


ನಿಮ್ಮ ನ್ಯಾಯನಿರ್ಣಯದ ಕಾಲ ಬಂದಿದೆ. ಅದು ದೇವರ ಕುಟುಂಬದಿಂದಲೇ ಆರಂಭವಾಗುವುದು. ನಮ್ಮಲ್ಲಿಯೇ ಅದು ಆರಂಭವಾದರೆ, ದೇವರ ಸುವಾರ್ತೆಗೆ ವಿಧೇಯರಾಗದ ಜನರಿಗೆ ಏನಾಗಬಹುದು?


“ಸರ್ವಶಕ್ತನಾದ ಯೆಹೋವನೊಬ್ಬನಿಗೇ ನೀನು ಭಯಪಡಬೇಕು. ಆತನನ್ನೇ ನೀನು ಗೌರವಿಸಬೇಕು. ನೀನು ಭಯಪಡಬೇಕಾದದ್ದು ಆತನೊಬ್ಬನಿಗೇ.


ಯೆಹೂದಕುಲಕ್ಕೆ ಕೊಟ್ಟ ಸ್ವಾಸ್ತ್ಯವನ್ನು ಆ ಕುಲದ ಗೋತ್ರಗಳಲ್ಲಿ ಹಂಚಲಾಗಿತ್ತು. ಆ ಪ್ರದೇಶವು ಎದೋಮಿನ ಗಡಿಯವರೆಗೂ ದಕ್ಷಿಣದಲ್ಲಿ ತೇಮಾನಿನ ಅಂಚಿನಲ್ಲಿರುವ ಚಿನ್ ಅರಣ್ಯದವರೆಗೂ ವಿಸ್ತರಿಸಿಕೊಂಡಿತ್ತು.


“ದಕ್ಷಿಣ ಮೇರೆಯು ತಾಮಾರಿನಿಂದ ಹೊರಟು ಮೆರೀಬೋತ್-ಕಾದೇಶ್ ನಲ್ಲಿರುವ ನೀರಿನ ಬುಗ್ಗೆಯವರೆಗೂ ಹೋಗುವರು. ಬಳಿಕ ಅಲ್ಲಿಂದ ಹೊರಟು ಈಜಿಪ್ಟಿನ ನೀರಿನ ತೊರೆಯ ಮಾರ್ಗದಿಂದ ಭೂಮಧ್ಯ ಸಮುದ್ರವನ್ನು ಸೇರುವದು. ಇದು ದಕ್ಷಿಣದ ಮೇರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು