Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 32:6 - ಪರಿಶುದ್ದ ಬೈಬಲ್‌

6 ಹೀಗೆ ಆತನು ನಿಮಗೆ ಮಾಡಿದ ಒಳ್ಳೆಯದಕ್ಕೆ ಉಪಕಾರ ತೋರಿಸುವಿರಾ? ಇಲ್ಲ! ನೀವು ಬುದ್ಧಿಹೀನರಾಗಿದ್ದೀರಿ. ಯೆಹೋವನು ನಿಮ್ಮ ತಂದೆಯಾಗಿದ್ದಾನೆ. ಆತನೇ ನಿಮ್ಮನ್ನು ನಿರ್ಮಿಸಿದಾತನು. ಆತನೇ ನಿಮ್ಮನ್ನು ಉಂಟುಮಾಡಿದಾತನು. ಆತನೇ ಆಧಾರ ನೀಡುವಾತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ದುರಾಚಾರಿಗಳಿರಾ, ಅವಿವೇಕಿಗಳಿರಾ, ಯೆಹೋವನ ವಿಷಯದಲ್ಲಿ ಈ ರೀತಿಯಾಗಿ ವರ್ತಿಸಬಹುದೇ? ಆತನು ನಿಮ್ಮನ್ನು ಸೃಷ್ಟಿಸಿದ ತಂದೆಯಲ್ಲವೇ; ನಿಮ್ಮನ್ನು ಜನಾಂಗವನ್ನಾಗಿ ಮಾಡಿ ಸ್ಥಾಪಿಸಿದನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ದುರಾಚಾರಿಗಳೇ, ಅವಿವೇಕಿಗಳೇ, ಸರ್ವೇಶ್ವರನ ಬಗ್ಗೆ ಹೀಗೆ ವರ್ತಿಸಬಹುದೇ? ಆತ ನಿಮ್ಮನ್ನು ಸೃಷ್ಟಿಸಿದ ತಂದೆಯಲ್ಲವೆ? ನಿಮ್ಮನ್ನೊಂದು ರಾಷ್ಟ್ರವಾಗಿ ಸ್ಥಾಪಿಸಿದವನಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ದುರಾಚಾರಿಗಳಿರಾ, ಅವಿವೇಕಿಗಳಿರಾ, ಯೆಹೋವನ ವಿಷಯದಲ್ಲಿ ಈ ರೀತಿಯಾಗಿ ನಡೆಯಬಹುದೇ? ಆತನು ನಿಮ್ಮನ್ನು ಸೃಷ್ಟಿಸಿದ ತಂದೆಯಲ್ಲವೇ; ನಿಮ್ಮನ್ನು [ಜನಾಂಗವನ್ನಾಗಿ] ಮಾಡಿ ಸ್ಥಾಪಿಸಿದನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯೆಹೋವ ದೇವರಿಗೆ ಪ್ರತಿಯಾಗಿ ಹೀಗೆ ವರ್ತಿಸುವುದು ಸರಿಯೋ? ಜ್ಞಾನವಿಲ್ಲದ ಬುದ್ಧಿಹೀನ ಜನರೇ, ದೇವರು ನಿಮ್ಮನ್ನು ಸೃಷ್ಟಿಸಿದ ತಂದೆಯಲ್ಲವೋ? ನಿಮ್ಮನ್ನು ಸೃಷ್ಟಿಸಿ ಸ್ಥಿರಪಡಿಸಿದ್ದು ದೇವರಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 32:6
39 ತಿಳಿವುಗಳ ಹೋಲಿಕೆ  

ನೀನು ನಮ್ಮ ತಂದೆಯಾಗಿರುವೆ. ಅಬ್ರಹಾಮನಿಗೆ ನಮ್ಮ ಪರಿಚಯವಿಲ್ಲ. ಇಸ್ರೇಲನು ನಮ್ಮನ್ನು ಗುರುತಿಸುವುದಿಲ್ಲ. ಯೆಹೋವನೇ, ನೀನೇ ನಮ್ಮ ತಂದೆ. ನೀನೇ ನಮ್ಮನ್ನು ಯಾವಾಗಲೂ ರಕ್ಷಿಸಿದಾತನು.


ತಂದೆಯು ನಮ್ಮನ್ನು ಬಹಳವಾಗಿ ಪ್ರೀತಿಸಿದನು! ದೇವರ ಮಕ್ಕಳು ಎಂಬ ಹೆಸರನ್ನು ನಮಗೆ ಕೊಡುವಷ್ಟರ ಮಟ್ಟಿಗೆ ದೇವರು ನಮ್ಮನ್ನು ಪ್ರೀತಿಸಿದನು. ನಾವು ನಿಜವಾಗಿಯೂ ದೇವರ ಮಕ್ಕಳಾಗಿದ್ದೇವೆ. ಆದರೆ ಲೋಕದಲ್ಲಿರುವ ಜನರಾದರೋ ನಾವು ದೇವರ ಮಕ್ಕಳೆಂಬುದನ್ನು ಅರ್ಥ ಮಾಡಿಕೊಳ್ಳುವುದಿಲ್ಲ. ಏಕೆಂದರೆ ಅವರು ದೇವರನ್ನು ತಿಳಿದಿಲ್ಲ.


ಯೆಹೋವನೇ, ನೀನು ನಮ್ಮ ತಂದೆಯಾಗಿರುವೆ. ನಾವು ಜೇಡಿಮಣ್ಣಿನಂತಿದ್ದೇವೆ. ನೀನಾದರೋ ಕುಂಬಾರನಾಗಿರುವೆ. ನಿನ್ನ ಕೈಗಳು ನಮ್ಮನ್ನು ನಿರ್ಮಿಸಿದವು.


ಯೆಹೋವನಾದ ನಾನೇ ನಿನ್ನನ್ನು ನಿರ್ಮಿಸಿದಾತನು. ನೀನು ತಾಯಿಯ ಗರ್ಭದಲ್ಲಿರುವಾಗಲೇ ನಾನು ನಿನಗೆ ಸಹಾಯ ಮಾಡಿದೆನು. ಯಾಕೋಬೇ, ನನ್ನ ಸೇವಕನೇ, ಹೆದರದಿರು. ಯೆಶುರೂನೇ (ಇಸ್ರೇಲೇ), ನಾನು ನಿನ್ನನ್ನು ಆರಿಸಿಕೊಂಡಿದ್ದೇನೆ.


ಬಹುಕಾಲದ ಹಿಂದೆ ನೀನು ಕೊಂಡುಕೊಂಡ ನಿನ್ನ ಜನರನ್ನು ಜ್ಞಾಪಿಸಿಕೊ. ನೀನು ನಮ್ಮನ್ನು ರಕ್ಷಿಸಿದೆ. ನಾವು ನಿನ್ನವರೇ. ನೀನು ವಾಸಿಸಿದ ಚೀಯೋನ್ ಪರ್ವತವನ್ನು ಜ್ಞಾಪಿಸಿಕೊ.


ಹಿಂದಿನ ಕಾಲದಲ್ಲಿ, ದೇವಜನರಲ್ಲಿ ಸುಳ್ಳುಪ್ರವಾದಿಗಳಿದ್ದರು. ಈಗಲೂ ಇದ್ದಾರೆ. ನಿಮ್ಮಲ್ಲಿಯೂ ಸಹ ಕೆಲವು ಸುಳ್ಳುಪ್ರವಾದಿಗಳಿರುತ್ತಾರೆ. ಜನರನ್ನು ನಾಶನಕ್ಕೆ ನಡೆಸುವ ಸುಳ್ಳುಬೋಧನೆಗಳನ್ನು ಅವರು ಬೋಧಿಸುತ್ತಾರೆ. ತಾವು ಸುಳ್ಳುಬೋಧಕರೆಂಬುದು ನಿಮಗೆ ಸುಲಭವಾಗಿ ತಿಳಿಯದ ರೀತಿಯಲ್ಲಿ ಅವರು ಬೋಧಿಸುತ್ತಾರೆ. ಅವರು ತಮಗೆ ಬಿಡುಗಡೆ ತಂದುಕೊಟ್ಟ ಒಡೆಯನನ್ನೇ (ಯೇಸು) ಒಪ್ಪಿಕೊಳ್ಳುವುದಿಲ್ಲ. ಆದ್ದರಿಂದ ಅವರು ಬಹುಬೇಗನೆ ತಮ್ಮನ್ನು ತಾವೇ ನಾಶಪಡಿಸಿಕೊಳ್ಳುತ್ತಾರೆ.


ನೀವು ದೇವರ ಮಕ್ಕಳು. ಆದಕಾರಣವೇ ದೇವರು ತನ್ನ ಆತ್ಮವನ್ನು ನಿಮ್ಮ ಹೃದಯಗಳಿಗೆ ಕಳುಹಿಸಿದನು. “ತಂದೆಯೇ, ಅಪ್ಪಾ ತಂದೆಯೇ” ಎಂದು ಆತ್ಮನು ಕೂಗುತ್ತಾನೆ.


ನೀವೆಲ್ಲರೂ ಕ್ರಿಸ್ತನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡಿದ್ದರಿಂದ ಕ್ರಿಸ್ತನನ್ನೇ ಧರಿಸಿಕೊಂಡಿರಿ. ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಡುವುದರ ಮೂಲಕ ನೀವೆಲ್ಲರೂ ದೇವರ ಮಕ್ಕಳಾಗಿದ್ದೀರೆಂಬುದನ್ನು ಇದು ತೋರಿಸುತ್ತದೆ.


ನೀವು ದೇವರಿಂದ ಕ್ರಯಕ್ಕೆ ಕೊಳ್ಳಲ್ಪಟ್ಟವರು. ಆದ್ದರಿಂದ ನಿಮ್ಮ ದೇಹಗಳಿಂದ ದೇವರನ್ನು ಘನಪಡಿಸಿರಿ.


ನಾವು ಹೊಂದಿಕೊಂಡಿರುವ ಆತ್ಮನು ನಮ್ಮನ್ನು ಮತ್ತೆ ಗುಲಾಮರನ್ನಾಗಿ ಮಾಡುವವನಲ್ಲ ಮತ್ತು ನಮ್ಮಲ್ಲಿ ಭಯವನ್ನು ಹುಟ್ಟಿಸುವವನಲ್ಲ. ನಾವು ಹೊಂದಿರುವ ಪವಿತ್ರಾತ್ಮನು ನಮ್ಮನ್ನು ದೇವರ ಮಕ್ಕಳನ್ನಾಗಿ ಮಾಡುತ್ತಾನೆ. ಈ ಆತ್ಮನ ಮೂಲಕವಾಗಿ ನಾವು, “ಅಪ್ಪಾ ತಂದೆಯೇ” ಎಂದು ಹೇಳುತ್ತೇವೆ.


ಆದ್ದರಿಂದ ನಿಮ್ಮ ವಿಷಯದಲ್ಲಿಯೂ ಪವಿತ್ರಾತ್ಮನು ನಿಮ್ಮ ಪಾಲನೆಗೆ ವಹಿಸಿರುವ ಮಂದೆಯ ವಿಷಯದಲ್ಲಿಯೂ ಎಚ್ಚರಿಕೆಯಿಂದಿರಿ. ದೇವರು ತನ್ನ ಸ್ವಂತ ರಕ್ತದಿಂದ ಕೊಂಡುಕೊಂಡಿರುವ ಸಭೆಗೆ ನೀವು ಕುರುಬರಾಗಿದ್ದೀರಿ.


ಆದ್ದರಿಂದ ನಿಮ್ಮ ಸ್ವಂತ ತಂದೆ ಮಾಡಿದ್ದನ್ನೇ ನೀವು ಮಾಡುತ್ತಿದ್ದೀರಿ” ಎಂದು ಹೇಳಿದನು. ಆದರೆ ಯೆಹೂದ್ಯರು, “ನಾವು ಹಾದರಕ್ಕೆ ಹುಟ್ಟಿದವರಲ್ಲ. ದೇವರೇ ನಮ್ಮ ತಂದೆ. ನಮಗಿರುವ ತಂದೆ ಆತನೊಬ್ಬನೇ” ಎಂದು ಹೇಳಿದರು.


ನನ್ನ ಹೆಸರನ್ನು ಹೊಂದಿರುವ ನನ್ನ ಜನರನ್ನೆಲ್ಲಾ ನನ್ನ ಬಳಿಗೆ ಕರೆದುಕೊಂಡು ಬಾ. ನನಗಾಗಿಯೇ ನಿರ್ಮಿಸಿದ ನನ್ನ ಜನರನ್ನು ನನ್ನ ಬಳಿಗೆ ಕರೆದುಕೊಂಡು ಬಾ. ಅವರನ್ನು ನಿರ್ಮಿಸಿದಾತನು ನಾನೇ, ಅವರು ನನ್ನವರೇ!


ಇಸ್ರೇಲರು ತಮ್ಮ ಸೃಷ್ಟಿಕರ್ತನಲ್ಲಿ ಉಲ್ಲಾಸಿಸಲಿ! ಚೀಯೋನಿನ ಜನರು ತಮ್ಮ ರಾಜನಲ್ಲಿ ಹರ್ಷಿಸಲಿ.


ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ. ನಮ್ಮನ್ನು ಸೃಷ್ಟಿಸಿದವನು ಆತನೇ, ನಾವು ಆತನವರು. ನಾವು ಆತನ ಜನರೂ ಮಂದೆಯೂ ಆಗಿದ್ದೇವೆ.


ನೀವು ನಿಮ್ಮನ್ನು ನಿರ್ಮಿಸಿದ ಬಂಡೆಯಂತಿರುವ ದೇವರನ್ನು ತೊರೆದುಬಿಟ್ಟಿರಿ; ನಿಮಗೆ ಪ್ರಾಣವನ್ನು ಕೊಟ್ಟ ದೇವರನ್ನು ನೀವು ಮರೆತುಬಿಟ್ಟಿರಿ.


“ಆದರೆ ಯೆಶುರೂನು ಕೊಬ್ಬಿದನು; ಕೊಬ್ಬಿದ ಹೋರಿಯಂತೆ ಒದ್ದನು; ಅವನು ಚೆನ್ನಾಗಿ ತಿಂದು ಕೊಬ್ಬಿ ಊದಿಕೊಂಡನು; ತನ್ನ ನಿರ್ಮಾಣಿಕನಾದ ಯೆಹೋವನನ್ನು ತೊರೆದನು; ತನ್ನನ್ನು ಸಂರಕ್ಷಿಸಿದ ಬಂಡೆಯಿಂದ ಓಡಿಹೋದನು;


ಅಡವಿಗಳಲ್ಲಿಯೂ ಮರುಭೂಮಿಗಳಲ್ಲಿಯೂ ಮನುಷ್ಯನು ತನ್ನ ಮಗುವನ್ನು ಹೊತ್ತುಕೊಂಡು ತರುವಂತೆ ದೇವರಾದ ಯೆಹೋವನು ನಿಮ್ಮನ್ನು ಹೊತ್ತುಕೊಂಡು ತಂದಿದ್ದಾನೆ. ಈ ಸ್ಥಳಕ್ಕೆ ಸುರಕ್ಷಿತವಾಗಿ ನಿಮ್ಮನ್ನು ತಂದು ಮುಟ್ಟಿಸಿದ್ದಾನೆ’ ಎಂದು ಹೇಳಿದೆನು.


ಬುದ್ಧಿ ಇಲ್ಲದ ಮೂರ್ಖಜನರೇ, ಈ ಸಂದೇಶವನ್ನು ಕೇಳಿರಿ. ನಿಮಗೆ ಕಣ್ಣುಗಳಿವೆ ಆದರೆ ನೀವು ನೋಡುವದಿಲ್ಲ, ನಿಮಗೆ ಕಿವಿಗಳಿವೆ ಆದರೆ ನೀವು ಕೇಳುವದಿಲ್ಲ.


ದೇವರು, “ನನ್ನ ಜನರು ಮೂರ್ಖರಾಗಿದ್ದಾರೆ. ಅವರು ನನ್ನನ್ನು ಅರಿಯದವರಾಗಿದ್ದಾರೆ. ಅವರು ಮೂಢ ಮಕ್ಕಳಾಗಿದ್ದಾರೆ. ಅವರು ಅವಿವೇಕಿಗಳಾಗಿದ್ದಾರೆ. ಅವರು ದುಷ್ಕೃತ್ಯದಲ್ಲಿ ನಿಪುಣರಾಗಿದ್ದಾರೆ. ಅವರು ಒಳ್ಳೆಯದನ್ನು ಮಾಡಲರಿಯದವರಾಗಿದ್ದಾರೆ” ಎಂದನು.


ದ್ರಾಕ್ಷಿಬಳ್ಳಿ ಒಣಗಿಹೋಗುವದು. ಅದರ ಕೊಂಬೆಗಳು ಮುರಿದುಬೀಳುವವು. ಹೆಂಗಸರು ಆ ಕೊಂಬೆಗಳನ್ನು ಸೌದೆಯಾಗಿ ಉಪಯೋಗಿಸುವರು. ಜನರು ತಿಳಿದುಕೊಳ್ಳುವದಕ್ಕೆ ಮನಸ್ಸು ಕೊಡುವದಿಲ್ಲ. ಆದ್ದರಿಂದ ಅವರ ನಿರ್ಮಾಣಿಕನಾದ ದೇವರು ಅವರನ್ನು ಸಂತೈಸುವದಿಲ್ಲ. ಅವರ ನಿರ್ಮಾಣಿಕನು ಅವರಿಗೆ ದಯೆ ತೋರುವದಿಲ್ಲ.


ಭೂಮ್ಯಾಕಾಶಗಳೇ, ಯೆಹೋವನ ಮಾತನ್ನು ಆಲಿಸಿರಿ! ಯೆಹೋವನು ಹೇಳುತ್ತಿದ್ದಾನೆ: “ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹಮಾಡಿದ್ದಾರೆ.


ಯೆಹೋವನ ಮಹೋಪಕಾರಗಳಿಗೆ ಬದಲೇನು ಕೊಡಲಿ? ನನ್ನಲ್ಲಿರುವುದೆಲ್ಲ ಯೆಹೋವನದೇ.


ಬನ್ನಿರಿ, ಆತನಿಗೆ ಅಡ್ಡಬಿದ್ದು ಆರಾಧಿಸೋಣ. ನಮ್ಮನ್ನು ಸೃಷ್ಟಿಸಿದ ಯೆಹೋವನನ್ನು ಕೊಂಡಾಡೋಣ.


ದೇವರೇ, ಇವುಗಳನ್ನೆಲ್ಲಾ ಜ್ಞಾಪಿಸಿಕೊ. ವೈರಿಯು ನಿನಗೆ ಮಾಡಿದ ಅವಮಾನವನ್ನು ನೆನಸಿಕೊ! ಆ ಮೂರ್ಖರು ನಿನ್ನ ನಾಮವನ್ನು ದ್ವೇಷಿಸುತ್ತಾರೆ.


ನನ್ನನ್ನು ಸೃಷ್ಟಿಸಿದ್ದೂ ನನ್ನ ದೇಹವನ್ನು ರೂಪಿಸಿದ್ದೂ ನಿನ್ನ ಕೈಗಳೇ. ಈಗ ಮನಸ್ಸು ಬೇರೆಮಾಡಿಕೊಂಡು ನೀನು ನನ್ನನ್ನು ನಾಶಮಾಡುತ್ತಿರುವೆ!


ನಿನ್ನ ಭುಜಬಲವನ್ನು ಅವರು ಕಂಡು ಭಯಭೀತರಾಗುವರು. ಯೆಹೋವನ ಜನರು ದಾಟಿ ಹೋಗುವವರೆಗೆ, ನೀನು ರೂಪಿಸಿದ ಜನರು ದಾಟಿ ಹೋಗುವವರೆಗೆ, ಅವರು ಬಂಡೆಯಂತೆ ಮೌನವಾಗಿರುವರು.


ಆಗ ನೀನು ಫರೋಹನಿಗೆ, ‘ಇಸ್ರೇಲ್ ಜನಾಂಗವು ಯೆಹೋವನಿಗೆ ಚೊಚ್ಚಲು ಮಗನಂತಿದೆ.


“ಇಸ್ರೇಲರು ಬುದ್ಧಿಹೀನರಾಗಿದ್ದಾರೆ; ಅವರಿಗೇನೂ ತಿಳಿಯುವುದಿಲ್ಲ.


ಇಸ್ರೇಲಿನ ಜನರನ್ನು ಎಂದೆಂದಿಗೂ ನಿನ್ನ ಸ್ವಂತ ಜನರನ್ನಾಗಿ ಮಾಡಿಕೊಂಡೆ. ಯೆಹೋವನೇ, ನೀನು ಅವರಿಗಾಗಿ ದೇವರಾದೆ.


ಅವನಿಗಾಗುವ ಶಿಕ್ಷೆಯು ಒಬ್ಬ ಸ್ತ್ರೀಯ ಪ್ರಸವವೇದನೆಯಂತಿರುವದು. ಅವನು ಜಾಣನಾದ ಮಗನಾಗಿರುವದಿಲ್ಲ; ಹುಟ್ಟುವ ಸಮಯ ಬಂದರೂ ಅವನು ಜೀವಿಸುವದಿಲ್ಲ.


“ನೀವು ನಿಮ್ಮ ದೇವರಾದ ಯೆಹೋವನ ಮಕ್ಕಳು. ನಿಮ್ಮಲ್ಲಿ ಯಾರಾದರೂ ಸತ್ತರೆ ನೀವು ತಲೆಬೋಳಿಸಿಕೊಂಡಾಗಲಿ ನಿಮ್ಮನ್ನು ಕತ್ತರಿಸಿಕೊಂಡಾಗಲಿ ನಿಮ್ಮ ದುಃಖವನ್ನು ಪ್ರದರ್ಶಿಸಕೂಡದು.


ಯಾಕೋಬೇ, ಯೆಹೋವನು ನಿನ್ನನ್ನು ನಿರ್ಮಿಸಿದನು. ಇಸ್ರೇಲೇ, ಯೆಹೋವನು ನಿನ್ನನ್ನು ನಿರ್ಮಿಸಿದನು. ಈಗ ಆತನು ಹೇಳುವುದೇನೆಂದರೆ: “ಭಯಪಡಬೇಡ. ನಾನೇ ನಿನ್ನನ್ನು ರಕ್ಷಿಸಿದ್ದೇನೆ. ನಾನು ನಿನಗೆ ಹೆಸರಿಟ್ಟೆನು. ನೀನು ನನ್ನವನೇ.


ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ, “ಮಕ್ಕಳು ಹೆತ್ತವರನ್ನು ಗೌರವಿಸುವರು. ಸೇವಕರು ಯಜಮಾನನನ್ನು ಗೌರವಿಸುತ್ತಾರೆ. ನಾನು ನಿಮ್ಮ ತಂದೆಯಾಗಿದ್ದೇನೆ, ಆದರೆ ನನ್ನನ್ನು ಯಾಕೆ ಗೌರವಿಸುವದಿಲ್ಲ? ನಾನು ನಿಮ್ಮ ಯಜಮಾನನಾಗಿದ್ದೇನೆ, ಆದರೆ ನನ್ನನ್ಯಾಕೆ ಗೌರವಿಸುವದಿಲ್ಲ? ಯಾಜಕರೇ, ನೀವು ನನ್ನ ಹೆಸರನ್ನು ಗೌರವಿಸುವದಿಲ್ಲ.” ಆದರೆ ನೀವು, “ನಾವು ನಿನಗೆ ಯಾವ ವಿಷಯದಲ್ಲಿ ಗೌರವ ಕೊಟ್ಟಿಲ್ಲ” ಎಂದು ಕೇಳುತ್ತೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು