Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 33:11 - ಪರಿಶುದ್ದ ಬೈಬಲ್‌

11 “ಯೆಹೋವನೇ, ಲೇವಿಯರಿಗೆ ಇರುವಂಥದನ್ನು ಆಶೀರ್ವದಿಸು; ಅವರು ಮಾಡಿದ್ದೆಲ್ಲಾ ನಿನಗೆ ಮೆಚ್ಚಿಕೆಯಾಗಲಿ. ಅವರ ಮೇಲೆ ಬೀಳುವವರನ್ನು ನಾಶಮಾಡು, ಅವರ ವೈರಿಗಳನ್ನು ಸೋಲಿಸು; ಅವರು ಮತ್ತೆ ಲೇವಿಯರ ಮೇಲೆ ಬೀಳದಂತೆ ಮಾಡು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನೇ, ಅವರ ಆಸ್ತಿಯನ್ನು ವೃದ್ಧಿಪಡಿಸು; ಅವರ ಸೇವೆಯು ನಿನಗೆ ಸಮರ್ಪಕವಾಗಿರಲಿ; ಅವರಿಗೆ ವಿರುದ್ಧವಾಗಿ ಬರುವವರ ನಡುವನ್ನು ಮುರಿದು ಅವರ ವೈರಿಗಳು ಪುನಃ ಎದ್ದು ಬಾರದಂತೆ ಮಾಡು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸರ್ವೇಶ್ವರಾ, ವೃದ್ಧಿಪಡಿಸು ಇವನ ಆಸ್ತಿಯನು ಸಮರ್ಪಕವಾಗಿರಲಿ ನಿನಗೆ ಇವನ ಸೇವೆಯು ಇವನ ಶತ್ರುಗಳ ನಡುವನ್ನು ಮುರಿ ಮರಲಿ ಏಳದಂತೆ ಮಾಡು ಇವನ ವೈರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೆಹೋವನೇ, ಅವರ ಆಸ್ತಿಯನ್ನು ವೃದ್ಧಿಪಡಿಸು; ಅವರ ಸೇವೆಯು ನಿನಗೆ ಸಮರ್ಪಕವಾಗಿರಲಿ; ಅವರಿಗೆ ವಿರೋಧವಾಗಿ ಬರುವವರ ನಡುವನ್ನು ಮುರಿದು ಅವರ ವೈರಿಗಳು ಪುನಃ ಶ್ವಾಸಬಿಡದಂತೆ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯೆಹೋವ ದೇವರೇ, ಅವನ ಎಲ್ಲ ಕೌಶಲ್ಯಗಳನ್ನು ಆಶೀರ್ವದಿಸಿರಿ. ಅವನ ಕೈಕೆಲಸವನ್ನು ಅಂಗೀಕರಿಸಿರಿ. ಅವನಿಗೆ ವಿರೋಧವಾಗಿ ಏಳುವವರ ನಡು ಮುರಿದು ಹೋಗಲಿ. ಅವನನ್ನು ದ್ವೇಷಿಸುವವರು ತಿರುಗಿ ಏಳದ ಹೋಗಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 33:11
18 ತಿಳಿವುಗಳ ಹೋಲಿಕೆ  

ಏಳು ದಿವಸಗಳ ತರುವಾಯ, ಎಂಟನೇ ದಿನದಲ್ಲಿ ಯಾಜಕರು ನಿಮ್ಮ ಪರವಾಗಿ ಸರ್ವಾಂಗಹೋಮವನ್ನೂ ಸಮಾಧಾನಯಜ್ಞವನ್ನೂ ಅರ್ಪಿಸಬೇಕು. ಆಗ ನಾನು ನಿಮಗೆ ಪ್ರಸನ್ನನಾಗುವೆನು.” ನನ್ನ ಒಡೆಯನಾದ ಯೆಹೋವನ ನುಡಿಗಳಿವು.


ರಾಜನೇ, ನಾನು ಎಲ್ಲವನ್ನೂ ನಿನಗೆ ಅರ್ಪಿಸುತ್ತೇನೆ” ಎಂದು ಹೇಳಿದನು. ಇದಲ್ಲದೆ ಅರೌನನು ರಾಜನಿಗೆ, “ನಿನ್ನ ದೇವರಾದ ಯೆಹೋವನು ನಿನ್ನನ್ನು ಮೆಚ್ಚಿಕೊಳ್ಳಲಿ” ಎಂದೂ ಹೇಳಿದನು.


ಆದುದರಿಂದ ಈ ಉಪದೇಶವನ್ನು ಅನುಸರಿಸದವನು ಅವಿಧೇಯನಾಗಿರುವುದು ದೇವರಿಗೇ ಹೊರತು ಮಾನವನಿಗಲ್ಲ. ನಮಗೆ ತನ್ನ ಪವಿತ್ರಾತ್ಮನನ್ನು ನೀಡಿದಾತನು ದೇವರೇ.


“ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನೇ ಕೇಳುವವನಾಗಿದ್ದಾನೆ. ನಿಮ್ಮನ್ನು ಅಂಗೀಕರಿಸದವನು ನನ್ನನ್ನೇ ಅಂಗಿಕರಿಸದವನಾಗಿದ್ದಾನೆ. ನನ್ನನ್ನು ನಿರಾಕರಿಸುವವನು ನನ್ನನ್ನು ಕಳುಹಿಸಿದಾತನನ್ನೇ (ದೇವರು) ನಿರಾಕರಿಸುವವನಾಗಿದ್ದಾನೆ” ಎಂದು ಹೇಳಿದನು.


ಪ್ರವಾದಿಗಳು ಸಾರ್ವಜನಿಕ ಸ್ಥಳಗಳಿಗೆ ಹೋಗಿ ಜನರು ಮಾಡುವ ದುಷ್ಕೃತ್ಯಗಳನ್ನು ಖಂಡಿಸುವರು. ಜನರು ಪ್ರವಾದಿಗಳನ್ನು ಹಗೆಮಾಡುವರು. ಪ್ರವಾದಿಗಳು ಒಳ್ಳೆಯದನ್ನು ಸರಳವಾದ ಸತ್ಯಗಳನ್ನು ಉಪದೇಶಿಸುವರು. ಆದರೆ ಜನರು ಅವರನ್ನು ದ್ವೇಷಿಸುವರು.


ನನ್ನ ತಾಯೀ, ನೀನು ಜನ್ಮಕೊಟ್ಟಿದ್ದಕ್ಕಾಗಿ ನನಗೆ ದುಃಖವಾಗುತ್ತದೆ. ಯೆರೆಮೀಯನಾದ ನಾನು ಇಡೀ ದೇಶದ ಜನರ ವಿರುದ್ಧವಾಗಿ ವಾದಿಸುತ್ತಾ ನಿಂದಿಸುತ್ತಾ ಇರುವೆ. ನಾನು ಯಾರಿಗೂ ಸಾಲವನ್ನು ಕೊಟ್ಟಿಲ್ಲ; ಸಾಲವನ್ನು ತೆಗೆದುಕೊಂಡಿಲ್ಲ. ಆದರೆ ಪ್ರತಿಯೊಬ್ಬರು ನನ್ನನ್ನು ಶಪಿಸುತ್ತಾರೆ.


(ಅವರು ನೀತಿವಂತರ ವಿಷಯವಾಗಿ ಸುಳ್ಳಾಡುವರು. ನ್ಯಾಯಾಲಯದಲ್ಲಿ ಜನರನ್ನು ಸಿಕ್ಕಿಸಿ ಹಾಕುವರು. ದೀನರನ್ನು ನಾಶಮಾಡಲು ಅವರು ಪ್ರಯತ್ನಿಸುವರು.)


ನೀನು ಅರ್ಪಿಸಿದ ಕಾಣಿಕೆಗಳನ್ನೆಲ್ಲ ಆತನು ಜ್ಞಾಪಿಸಿಕೊಳ್ಳಲಿ. ನಿನ್ನ ಯಜ್ಞಗಳನ್ನೆಲ್ಲ ಆತನು ಸ್ವೀಕರಿಸಿಕೊಳ್ಳಲಿ.


ಅವರು ಯಾಕೋಬ ವಂಶದವರಿಗೆ ನಿನ್ನ ವಿಧಿನಿಯಮಗಳನ್ನು ಕಲಿಸುವರು; ನಿನ್ನ ಕಟ್ಟಳೆಗಳನ್ನು ಇಸ್ರೇಲರಿಗೆ ಬೋಧಿಸುವರು. ಅವರು ನಿನ್ನ ಸನ್ನಿಧಾನದಲ್ಲಿ ಧೂಪಹಾಕುವರು. ಬಲಿಪೀಠದಲ್ಲಿ ನಿನಗೆ ಯಜ್ಞಾರ್ಪಣೆ ಮಾಡುವರು.


ಬೆನ್ಯಾಮೀನನ ವಿಷಯವಾಗಿ ಮೋಶೆಯು ಹೇಳಿದ್ದೇನೆಂದರೆ: “ಯೆಹೋವನು ಬೆನ್ಯಾಮೀನನನ್ನು ಪ್ರೀತಿಸುತ್ತಾನೆ. ಬೆನ್ಯಾಮೀನನು ಆತನ ಬಳಿಯಲ್ಲಿ ಸುರಕ್ಷಿತವಾಗಿ ವಾಸಮಾಡುತ್ತಾನೆ. ಯೆಹೋವನು ಅವನನ್ನು ಯಾವಾಗಲೂ ಸಂರಕ್ಷಿಸುತ್ತಾನೆ. ಅವನ ಪ್ರಾಂತ್ಯದಲ್ಲಿ ಯೆಹೋವನು ವಾಸಿಸುವನು.”


ಜನರು ನನ್ನನ್ನು ಹಿಂಸಿಸುತ್ತಿದ್ದಾರೆ. ಆ ಜನರು ಲಜ್ಜೆಪಡುವಂತೆ ಮಾಡು. ನನ್ನನ್ನು ನಿರಾಶೆಗೊಳಿಸಬೇಡ. ಆ ಜನರಿಗೆ ಭೀತಿಯುಂಟಾಗಲಿ, ಆದರೆ ನನಗೆ ಭಯವಾಗುವಂತೆ ಮಾಡಬೇಡ. ನನ್ನ ವೈರಿಗಳಿಗೆ ಭಯಂಕರವಾದ ವಿನಾಶದ ದಿನವು ಬರುವಂತೆ ಮಾಡು. ಅವರನ್ನು ಮುರಿದುಬಿಡು, ಮತ್ತೆಮತ್ತೆ ಮುರಿದುಬಿಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು