Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 33:23 - ಪರಿಶುದ್ದ ಬೈಬಲ್‌

23 ಮೋಶೆಯು ನಫ್ತಾಲಿಯ ವಿಷಯವಾಗಿ ಹೇಳಿದ ಮಾತುಗಳು: “ನಫ್ತಾಲಿಯೇ, ನಿನಗೆ ಉತ್ತಮವಾದ ವಸ್ತುಗಳು ಅಧಿಕವಾಗಿ ದೊರೆಯುತ್ತವೆ. ಯೆಹೋವನು ನಿನ್ನನ್ನು ನಿಜವಾಗಿಯೂ ಆಶೀರ್ವದಿಸುವನು. ಗಲಿಲಾಯದ ಬಳಿಯಲ್ಲಿರುವ ಪ್ರಾಂತ್ಯವು ನಿನಗೆ ದೊರಕುವದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನಫ್ತಾಲಿ ಕುಲದ ವಿಷಯದಲ್ಲಿ, “ನಫ್ತಾಲಿ ಕುಲವೇ, ನೀನು ಯೆಹೋವನ ದಯೆಯನ್ನು ಹೊಂದಿ ಸಂತೃಪ್ತನಾದೆ; ಆತನ ಆಶೀರ್ವಾದದಿಂದ ನಿನಗೆ ಸಮೃದ್ಧಿಯುಂಟು. (ಕಿನ್ನೆರೆತ್) ಸಮುದ್ರವೂ ದಕ್ಷಿಣಪ್ರದೇಶವೂ ನಿನಗೆ ಸ್ವಾಸ್ತ್ಯವಾಗಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನಫ್ತಾಲಿ ಕುಲ ಕುರಿತು ಮೋಶೆ ನುಡಿದದ್ದು: “ಎಲೈ ನಫ್ತಾಲಿ, ಸರ್ವೇಶ್ವರನ ದಯೆಹೊಂದಿ ನೀ ತೃಪ್ತನಾದೆ ಆತನ ಆಶೀರ್ವಾದದಿಂದ ಸಮೃದ್ಧಿಯುಂಟು ನಿನಗೆ ಸಮುದ್ರದ ದಕ್ಷಿಣಪ್ರದೇಶ ಸೊತ್ತಾಗಲಿ ನಿನಗೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನಫ್ತಾಲಿಕುಲದ ವಿಷಯದಲ್ಲಿ ಹೀಗಂದನು - ನಫ್ತಾಲಿಕುಲವೇ, ನೀನು ಯೆಹೋವನ ದಯೆಯನ್ನು ಹೊಂದಿ ಸಂತೃಪ್ತವಾದಿ; ಆತನ ಆಶೀರ್ವಾದದಿಂದ ನಿನಗೆ ಸಮೃದ್ಧಿಯುಂಟು. [ಕಿನ್ನೆರೆತ್] ಸಮುದ್ರವೂ ದಕ್ಷಿಣ ಪ್ರದೇಶವೂ ನಿನಗೆ ಸ್ವಾಸ್ತ್ಯವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಮೋಶೆಯು ನಫ್ತಾಲಿಯ ವಿಷಯವಾಗಿ ಹೇಳಿದ್ದೇನೆಂದರೆ: “ನಫ್ತಾಲಿಯೇ, ಯೆಹೋವ ದೇವರ ಅನುಗ್ರಹದಿಂದ ತೃಪ್ತನಾದವನೇ, ದೇವರ ಆಶೀರ್ವಾದದಿಂದ ತುಂಬಿದವನೇ; ಸಮುದ್ರವೂ ದಕ್ಷಿಣ ಪ್ರದೇಶವೂ ನಿನಗೆ ಸೊತ್ತಾಗಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 33:23
10 ತಿಳಿವುಗಳ ಹೋಲಿಕೆ  

“ನಫ್ತಾಲಿಯು ಸ್ವತಂತ್ರವಾಗಿ ಓಡುವ ಜಿಂಕೆಯಂತಿದ್ದಾನೆ. ಅವನ ಮಾತುಗಳು ಅದರ ಸುಂದರವಾದ ಮರಿಗಳಂತಿವೆ.”


ಜನರು ಕತ್ತಲಲ್ಲಿ ಜೀವಿಸುತ್ತಿದ್ದರು. ಆಗ ಅವರಿಗೆ ದೊಡ್ಡ ಬೆಳಕೊಂದು ಕಾಣಿಸಿತು. ಸಮಾಧಿಯಂತಿರುವ ಕಾರ್ಗತ್ತಲೆಯ ದೇಶದಲ್ಲಿ ವಾಸಿಸುವ ಆ ಜನರಿಗೆ ಬೆಳಕು ದೊರೆಯಿತು.”


ಯಾಜಕರು ತಮಗೆ ಬೇಕಾಗುವದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ನೈವೇದ್ಯಗಳನ್ನು ಪಡೆಯುವರು. ನಾನು ಅವರಿಗೆ ಕೊಡುವ ಉತ್ತಮ ವಸ್ತುಗಳನ್ನು ಮನದಣಿಯುವ ಹಾಗೆ ಅನುಭವಿಸಿ ನನ್ನ ಜನರು ತೃಪ್ತಿಪಡುವರು.” ಇದು ಯೆಹೋವನ ನುಡಿ.


ನಿನ್ನ ಆಲಯದ ಸಮೃದ್ಧಿಯಿಂದ ಅವರು ನವಚೈತನ್ಯವನ್ನು ಪಡೆದುಕೊಳ್ಳುವರು. ನಿನ್ನ ಶ್ರೇಷ್ಠ ನದಿಯಲ್ಲಿ ಕುಡಿಯಲು ಅವರಿಗೆ ಆಸ್ಪದನೀಡು.


ಆತನು ನಜರೇತಿನಲ್ಲಿ ಇಳಿದುಕೊಳ್ಳದೆ ಹೊರಟುಹೋಗಿ ಗಲಿಲಾಯ ಸರೋವರಕ್ಕೆ ಹತ್ತಿರವಿದ್ದ ಕಪೆರ್ನೌಮ್ ಎಂಬ ಊರಲ್ಲಿ ವಾಸಿಸಿದನು. ಈ ಊರು ಜೆಬುಲೋನ್ ಮತ್ತು ನಫ್ತಾಲಿ ಸೀಮೆಗಳ ಬಳಿಯಲ್ಲಿದೆ.


ಪ್ರತಿ ಮುಂಜಾನೆ ನಿನ್ನ ಪ್ರೀತಿಯಿಂದ ನಮ್ಮನ್ನು ತುಂಬಿಸು. ಆಗ ಜೀವಮಾನವೆಲ್ಲಾ ಉಲ್ಲಾಸಿಸಿ ಹರ್ಷಿಸುವೆವು.


“ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ. ನಾನು ನಿಮಗೆ ವಿಶ್ರಾಂತಿಯನ್ನು ಕೊಡುತ್ತೇನೆ.


ಆಶೇರನ ವಿಷಯವಾಗಿ ಮೋಶೆಯ ಮಾತುಗಳು: “ಮಕ್ಕಳಲ್ಲಿ, ಆಶೇರನೇ ಹೆಚ್ಚಾಗಿ ಆಶೀರ್ವದಿಸಲ್ಪಟ್ಟವನು. ಅವನ ಅಣ್ಣತಮ್ಮಂದಿರೊಳಗೆ ಅವನೇ ಅಚ್ಚುಮೆಚ್ಚಿನವನಾಗಲಿ. ಎಣ್ಣೆಯಲ್ಲಿ ಅವನು ತನ್ನ ಕಾಲುಗಳನ್ನು ತೊಳೆಯಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು