Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 33:24 - ಪರಿಶುದ್ದ ಬೈಬಲ್‌

24 ಆಶೇರನ ವಿಷಯವಾಗಿ ಮೋಶೆಯ ಮಾತುಗಳು: “ಮಕ್ಕಳಲ್ಲಿ, ಆಶೇರನೇ ಹೆಚ್ಚಾಗಿ ಆಶೀರ್ವದಿಸಲ್ಪಟ್ಟವನು. ಅವನ ಅಣ್ಣತಮ್ಮಂದಿರೊಳಗೆ ಅವನೇ ಅಚ್ಚುಮೆಚ್ಚಿನವನಾಗಲಿ. ಎಣ್ಣೆಯಲ್ಲಿ ಅವನು ತನ್ನ ಕಾಲುಗಳನ್ನು ತೊಳೆಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆಶೇರ್ ಕುಲದ ವಿಷಯದಲ್ಲಿ, “ಪುತ್ರಶ್ರೇಷ್ಠರಾದ ಆಶೇರ್ಯರು ಭಾಗ್ಯವನ್ನು ಹೊಂದಲಿ; ಅವರು ಸಹೋದರರ ದಯೆಯನ್ನು ಪಡೆಯಲಿ; ಅವರು ಎಣ್ಣೆಯಲ್ಲೇ ಕಾಲನ್ನು ಅದ್ದಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಆಶೇರ್ ಕುಲ ಕುರಿತು ಮೋಶೆ ನುಡಿದದ್ದು: “ಕುಲೋತ್ತಮನಾದ ಆಶೇರನು ಭಾಗ್ಯಹೊಂದಲಿ ಎಲ್ಲದರಲಿ ಸೋದರರಲ್ಲಿ ಶ್ರೇಷ್ಠತೆಯನು ಪಡೆಯಲಿ ಎಣ್ಣೆಯಲಿ ಪಾದಸ್ನಾನ ಮಾಡುವಂತಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆಶೇರ್ ಕುಲದ ವಿಷಯದಲ್ಲಿ ಹೀಗಂದನು - ಪುತ್ರಶ್ರೇಷ್ಠರಾದ ಆಶೇರ್ಯರು ಭಾಗ್ಯವನ್ನು ಹೊಂದಲಿ; ಅವರು ಸಹೋದರರ ದಯೆಯನ್ನು ಪಡೆಯಲಿ; ಅವರು ಎಣ್ಣೆಯಲ್ಲೇ ಕಾಲನ್ನು ಅದ್ದಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಮೋಶೆ ಆಶೇರನ ವಿಷಯವಾಗಿ ಹೇಳಿದ್ದೇನೆಂದರೆ: “ಪುತ್ರರಲ್ಲಿಯೇ ಶ್ರೇಷ್ಠನಾದ ಆಶೇರನು ಭಾಗ್ಯ ಹೊಂದಲಿ. ಅವನ ಸಹೋದರರು ಅವನನ್ನು ಮೆಚ್ಚಿಕೊಳ್ಳಲಿ, ಎಣ್ಣೆಯಲ್ಲಿ ಪಾದಸ್ನಾನ ಮಾಡುವಂತಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 33:24
11 ತಿಳಿವುಗಳ ಹೋಲಿಕೆ  

“ಆಶೇರನ ನಾಡು ಒಳ್ಳೆಯ ಆಹಾರವನ್ನು ಯಥೇಚ್ಛವಾಗಿ ಫಲಿಸುತ್ತದೆ; ರಾಜನಿಗೆ ಸಾಕಾಗುವಷ್ಟು ಒಳ್ಳೆಯ ಆಹಾರವು ಅವನಲ್ಲಿರುವುದು.”


ಈ ರೀತಿಯಲ್ಲಿ ಕ್ರಿಸ್ತನ ಸೇವೆಮಾಡುವವನು ದೇವರನ್ನು ಮೆಚ್ಚಿಸುವವನಾಗಿದ್ದಾನೆ. ಜನರೂ ಅವನನ್ನು ಸ್ವೀಕರಿಸಿಕೊಳ್ಳುವರು.


ನೀನು ಜೀವದಿಂದಿದ್ದು ನಿನ್ನ ಮೊಮ್ಮಕ್ಕಳನ್ನು ಕಾಣುವಂತಾಗಲಿ. ಇಸ್ರೇಲಿನಲ್ಲಿ ಶಾಂತಿ ನೆಲೆಸಿರಲಿ.


ಮನೆಯಲ್ಲಿರುವ ನಿನ್ನ ಹೆಂಡತಿ ಫಲಭರಿತವಾದ ದ್ರಾಕ್ಷಿಬಳ್ಳಿಯಂತಿರುವಳು. ಊಟದ ಮೇಜಿನ ಸುತ್ತಲೂ ಕುಳಿತುಕೊಳ್ಳುವ ನಿನ್ನ ಮಕ್ಕಳು, ನೀನು ನೆಟ್ಟ ಆಲಿವ್ ಮರಗಳಂತಿರುವರು.


ಆ ದಿನಗಳಲ್ಲಿ ನನ್ನ ಜೀವಿತವು ತುಂಬ ಚೆನ್ನಾಗಿತ್ತು. ನನ್ನ ಮಾರ್ಗಗಳು ಕೆನೆಯಿಂದ ತುಂಬಿರುವಂತೆಯೂ ಬಂಡೆಗಳು ನನಗಾಗಿ ಆಲೀವ್ ಎಣ್ಣೆಯ ನದಿಗಳನ್ನೇ ಹರಿಸುತ್ತಿರುವಂತೆಯೂ ನನ್ನ ಜೀವಿತವಿತ್ತು.


ಯೋಸೇಫನಿಗೆ ಅಲ್ಲಿ ಅನೇಕ ತೊಂದರೆಗಳು ಬಂದವು. ಆದರೆ ದೇವರು ಆ ಎಲ್ಲಾ ತೊಂದರೆಗಳಿಂದ ಅವನನ್ನು ರಕ್ಷಿಸಿದನು. ಆಗ ಫರೋಹನು ಈಜಿಪ್ಟಿನ ರಾಜನಾಗಿದ್ದನು. ದೇವರು ಯೋಸೇಫನಿಗೆ ಕೊಟ್ಟ ಜ್ಞಾನದ ದೆಸೆಯಿಂದ ಫರೋಹನು ಯೋಸೇಫನನ್ನು ಇಷ್ಟಪಟ್ಟನು ಮತ್ತು ಗೌರವಿಸಿದನು. ಫರೋಹನು ಯೋಸೇಫನನ್ನು ಈಜಿಪ್ಟಿನ ರಾಜ್ಯಪಾಲನನ್ನಾಗಿಯೂ ತನ್ನ ಮನೆಯಲ್ಲಿದ್ದ ಎಲ್ಲಾ ಜನರ ಮೇಲೆ ಅಧಿಪತಿಯನ್ನಾಗಿಯೂ ಮಾಡಿದನು.


ಯೆಹೋವನಿಂದ ನಿಮಗೆ ಆಶೀರ್ವಾದವಾಗಲಿ. ಪರಲೋಕವನ್ನೂ ಭೂಲೋಕವನ್ನೂ ಸೃಷ್ಟಿಮಾಡಿದಾತನು ಆತನೇ.


ಅದರ ಮಾಂಸವನ್ನೆಲ್ಲಾ ಆ ರಾತ್ರಿಯಲ್ಲಿಯೇ ತಿನ್ನಬೇಕು. ಬೆಳಗಾಗುವವರೆಗೆ ಮಾಂಸವೇನಾದರೂ ಉಳಿದರೆ ಅದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.


ಜುದೇಯದಲ್ಲಿರುವ ಅವಿಶ್ವಾಸಿಗಳ ಕೈಯಿಂದ ನಾನು ಪಾರಾಗುವಂತೆ ಪ್ರಾರ್ಥಿಸಿರಿ. ನಾನು ಜೆರುಸಲೇಮಿಗೆ ತೆಗೆದುಕೊಂಡು ಹೋಗುತ್ತಿರುವ ಈ ಸಹಾಯಧನವು ಅಲ್ಲಿರುವ ದೇವಮಕ್ಕಳಿಗೆ ಮೆಚ್ಚಿಕೆಯಾಗುವಂತೆ ಪ್ರಾರ್ಥಿಸಿರಿ.


ಈ ನಗರಗಳು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳು ಆಶೇರ್ ಕುಲದವರಿಗೆ ಕೊಡಲಾಗಿತ್ತು. ಆ ಕುಲದ ಪ್ರತಿಯೊಂದು ಕುಟುಂಬವು ತನ್ನ ಪಾಲಿನ ಭೂಭಾಗವನ್ನು ಪಡೆಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು