Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 33:28 - ಪರಿಶುದ್ದ ಬೈಬಲ್‌

28 ಇಸ್ರೇಲ್ ಸುರಕ್ಷಿತವಾಗಿ ಜೀವಿಸುವುದು. ಯಾಕೋಬನ ಬಾವಿ ಅವರ ವಶದಲ್ಲಿದೆ. ಧಾನ್ಯದ ಮತ್ತು ದ್ರಾಕ್ಷಾರಸದ ದೇಶವು ಅವರಿಗೆ ದೊರಕುತ್ತದೆ. ಆ ದೇಶಕ್ಕೆ ಅಧಿಕವಾಗಿ ಮಳೆ ಸುರಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆದಕಾರಣ ಇಸ್ರಾಯೇಲರು ಆಕಾಶದಿಂದ ಮಂಜು ಸುರಿದು, ಧಾನ್ಯವೂ ಮತ್ತು ದ್ರಾಕ್ಷಾರಸವೂ ಸಮೃದ್ಧಿಯಾಗಿರುವ ದೇಶದಲ್ಲೇ ಸೇರಿ ನಿರ್ಭಯವಾಗಿ ವಾಸಿಸುವವರಾದರು, ಯಾಕೋಬನ ವಂಶದವರು ಸುರಕ್ಷಿತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ವಾಸಿಸಿರಿ ಇಸ್ರಯೇಲರೇ, ನಿರ್ಭಯರಾಗಿ ಯಕೋಬನ ಸಂತತಿಯೇ, ಸುರಕ್ಷಿತವಾಗಿ ಆಗಸದಿಂದ ಮಳೆಸುರಿಯುವ ನಾಡಿನಲ್ಲಿ ಧಾನ್ಯ, ದ್ರಾಕ್ಷಾರಸ ಸಮೃದ್ಧಿಯಾಗಿರುವಲ್ಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆದಕಾರಣ ಇಸ್ರಾಯೇಲ್ಯರು ಆಕಾಶದಿಂದ ಮಂಜು ಸುರಿದು ಧಾನ್ಯವೂ ದ್ರಾಕ್ಷಾರಸವೂ ಸಮೃದ್ಧಿಯಾಗಿರುವ ದೇಶದಲ್ಲೇ ಸೇರಿ ನಿರ್ಭಯವಾಗಿ ವಾಸಿಸುವವರಾದರು, ಯಾಕೋಬ್‍ಸಂಭವರು ಸುರಕ್ಷಿತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆದಕಾರಣ ಆಕಾಶದಿಂದ ಮಂಜನ್ನು ಸುರಿಯುವ, ಧಾನ್ಯ, ಹೊಸ ದ್ರಾಕ್ಷಾರಸ ಸಮೃದ್ಧಿಯಾಗಿರುವ ನಾಡಿನಲ್ಲಿ, ಯಾಕೋಬನ ವಂಶದವರು ಸುರಕ್ಷಿತರಾದರು. ಇಸ್ರಾಯೇಲರು ನಿರ್ಭಯವಾಗಿ ವಾಸಿಸುವವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 33:28
26 ತಿಳಿವುಗಳ ಹೋಲಿಕೆ  

ಬೆಟ್ಟದ ಶಿಖರದಿಂದ ಅವರನ್ನು ನಾನು ನೋಡಿದೆನು; ಗುಡ್ಡದಿಂದ ಅವರನ್ನು ಕಂಡೆನು. ಅವರು ತಮ್ಮನ್ನು ಇತರ ಜನಾಂಗಗಳಿಗಿಂತ ಬೇರೆಯಾದವರು ಎಂದು ಪರಿಗಣಿಸಿಕೊಂಡಿದ್ದಾರೆ.


ಮಾತ್ರವಲ್ಲದೆ ನನಗೂ ಈ ಜನರಿಗೂ ನಿನ್ನ ದಯೆ ದೊರಕಿದೆಯೆಂದು ನಾವು ತಿಳಿದುಕೊಳ್ಳುವುದಾದರೂ ಹೇಗೆ? ನೀನು ನಮ್ಮೊಡನೆ ಬಂದರೆ, ಆಗ ನಾವು ಇದನ್ನು ಖಚಿತವಾಗಿ ತಿಳಿದುಕೊಳ್ಳುವೆವು. ನೀನು ನಮ್ಮೊಡನೆ ಬಾರದಿದ್ದರೆ, ಆಗ ನಮಗೂ ಭೂಮಿಯ ಮೇಲಿರುವ ಇತರ ಜನರಿಗೂ ಯಾವ ವ್ಯತ್ಯಾಸವಿರುವುದಿಲ್ಲ” ಎಂದು ಹೇಳಿದನು.


ಯೆಹೋವನು ನಿನಗೆ ಬೇಕಾದಷ್ಟು ಮಳೆಯನ್ನು ಕೊಡಲಿ; ನಿನಗೆ ಸಾರವುಳ್ಳ ಭೂಮಿಯೂ ಮಹಾಸುಗ್ಗಿಗಳೂ ಮತ್ತು ದ್ರಾಕ್ಷಾರಸವೂ ದೊರೆಯಲಿ.


ಪರಿಶುದ್ಧವಾಗಿಲ್ಲದ ಯಾವುದೂ ನಗರವನ್ನು ಪ್ರವೇಶಿಸುವುದೇ ಇಲ್ಲ. ಅವಮಾನಕರವಾದ ಕಾರ್ಯಗಳನ್ನು ಮಾಡುವವನಾಗಲಿ ಸುಳ್ಳು ಹೇಳುವವನಾಗಲಿ ನಗರವನ್ನು ಎಂದಿಗೂ ಪ್ರವೇಶಿಸುವುದಿಲ್ಲ. ಕುರಿಮರಿಯಾದಾತನು ಜೀವಬಾಧ್ಯರ ಪುಸ್ತಕದಲ್ಲಿ ಯಾರ ಹೆಸರುಗಳನ್ನು ಬರೆದಿರುವನೋ ಅವರು ಮಾತ್ರ ಆ ನಗರವನ್ನು ಪ್ರವೇಶಿಸುವರು.


ಸದ್ಧರ್ಮದ ‘ಸಸಿಯ’ ಸಮಯದಲ್ಲಿ ಯೆಹೂದದ ಜನರು ರಕ್ಷಿಸಲ್ಪಡುವರು ಮತ್ತು ಇಸ್ರೇಲ್ ಸುರಕ್ಷಿತವಾಗಿರುವುದು. ಯೆಹೋವನೇ, ನಮ್ಮ ಸದ್ಧರ್ಮ ಎಂಬ ಹೆಸರು ಅವನಿಗಾಗುವುದು.”


ಆಗ ಯೆಹೂದ್ಯರು ಸುರಕ್ಷಿತರಾಗಿರುವರು. ಜೆರುಸಲೇಮಿನಲ್ಲಿ ಜನರು ಸುರಕ್ಷಿತರಾಗಿರುವರು. ಆ ‘ಮೊಳಕೆಯ’ ಹೆಸರು ‘ಯೆಹೋವನು ಒಳ್ಳೆಯವನು.’”


ಮಹಾಸಭೆಯಲ್ಲಿ ದೇವರಿಗೆ ಸ್ತೋತ್ರವಾಗಲಿ! ಇಸ್ರೇಲ್ ಜನರೇ, ಯೆಹೋವನಿಗೆ ಸ್ತೋತ್ರಮಾಡಿರಿ!


ನಿಮಗೆ ಶೀಘ್ರದಲ್ಲಿಯೇ ದೊರಕಲಿರುವ ಭೂಮಿ ಅಂಥದ್ದಲ್ಲ. ಅದು ಬೆಟ್ಟತಗ್ಗುಗಳ ಪ್ರಾಂತ್ಯ; ಮಳೆಯ ನೀರು ಭೂಮಿಯನ್ನು ತೊಯಿಸುತ್ತದೆ.


ಯೋಸೇಫನ ಪ್ರಾಂತ್ಯವನ್ನು ಯೆಹೋವನು ಆಶೀರ್ವದಿಸಲಿ: “ಯೆಹೋವನೇ, ಅವರಿಗೆ ಆಕಾಶದಿಂದ ಮಳೆ ಸುರಿಸು, ನೆಲದಿಂದ ಬುಗ್ಗೆಯು ಹೊರಬರಲಿ;


ನನ್ನ ಬೋಧನೆಯು ಮಳೆಯಂತೆ ಬರುವುದು. ನೆಲದ ಮೇಲೆ ಬೀಳುವ ಇಬ್ಬನಿಯಂತಿರುವುದು; ಮೃದುವಾದ ಹುಲ್ಲಿನ ಮೇಲೆ ಬೀಳುವ ಹದವಾದ ಮಳೆಯಂತಿರುವುದು; ಹಸಿರು ಸಸಿಗಳ ಮೇಲೆ ಬೀಳುವ ಮಳೆಯ ಹನಿಯಂತಿರುವುದು.


“ನಾನು ನನ್ನ ಕುರಿಗಳೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡುವೆನು. ಕೆಟ್ಟ ಕುರಿಗಳನ್ನು ನಾನು ದೇಶದೊಳಗಿಂದ ತೆಗೆದುಬಿಡುವೆನು. ಆಮೇಲೆ ನನ್ನ ಕುರಿಗಳು ಅಡವಿಯಲ್ಲಿ ಸುರಕ್ಷಿತವಾಗಿದ್ದು ಕಾಡುಗಳಲ್ಲಿ ಮಲಗಿಕೊಳ್ಳುವವು.


ಯೆಹೋವನು ಹೇಳುವುದೇನೆಂದರೆ, “ಯಾಕೋಬನ ಮನೆತನದವರೇ, ನನ್ನ ಮಾತುಗಳನ್ನು ಕೇಳಿರಿ. ಜನರು ನಿಮ್ಮನ್ನು ಇಸ್ರೇಲ್ ಎಂದು ಕರೆಯುತ್ತಾರೆ. ನೀವು ಯೆಹೂದದ ಕುಟುಂಬದವರು. ನೀವು ಯೆಹೋವನ ಹೆಸರಿನಲ್ಲಿ ಒಡಂಬಡಿಕೆ ಮಾಡಿಕೊಳ್ಳುವಿರಿ. ನೀವು ಯೆಹೋವನ ನಾಮವನ್ನು ಸ್ತುತಿಸುವಿರಿ, ಆದರೆ ನೀವು ಇವುಗಳನ್ನು ಮಾಡುವಾಗ ನಂಬಿಗಸ್ತರಾಗಿರುವದಿಲ್ಲ; ಯಥಾರ್ಥರಾಗಿರುವುದಿಲ್ಲ.


ಇಸಾಕನು, “ಇಲ್ಲ, ತುಂಬ ತಡವಾಯಿತು. ನಿನ್ನ ಮೇಲೆ ಆಡಳಿತ ಮಾಡುವ ಅಧಿಕಾರವನ್ನು ನಾನು ಯಾಕೋಬನಿಗೆ ಕೊಟ್ಟಿದ್ದೇನೆ. ಅವನ ಸಹೋದರರೆಲ್ಲ ಅವನಿಗೆ ಸೇವಕರಾಗಿರುವರು ಎಂದು ನಾನು ಹೇಳಿದ್ದೇನೆ. ಅವನಿಗೆ ಬೇಕಾದಷ್ಟು ದವಸಧಾನ್ಯಗಳೂ ದ್ರಾಕ್ಷಾರಸವೂ ದೊರೆಯುವಂತೆ ಆಶೀರ್ವಾದ ಮಾಡಿದ್ದೇನೆ. ನಿನಗೆ ಕೊಡಲು ನನ್ನಲ್ಲಿ ಏನೂ ಉಳಿದಿಲ್ಲ ಮಗನೇ” ಎಂದು ಹೇಳಿದನು.


ಆಗ ಇಸಾಕನು ಅವನಿಗೆ ಹೀಗೆ ಹೇಳಿದನು: “ನೀನು ಒಳ್ಳೆಯ ಪ್ರದೇಶದಲ್ಲಿ ಜೀವಿಸುವುದಿಲ್ಲ. ನಿನಗೆ ಬೇಕಾದಷ್ಟು ಇಬ್ಬನಿ ಇರುವುದಿಲ್ಲ.


ಪರಲೋಕದಲ್ಲಿರುವ ದೇವರು ಭೂಮಿಯ ಮೇಲಿದ್ದ ಜನರನ್ನು ಪ್ರತ್ಯೇಕಿಸಿದನು. ಪ್ರತಿಯೊಂದು ಜನಾಂಗಕ್ಕೆ ಅದರದೇ ಆದ ದೇಶವನ್ನು ಕೊಟ್ಟನು. ಅದಕ್ಕೆ ಮೇರೆಯನ್ನು ಆತನು ಮಾಡಿಕೊಟ್ಟನು. ಇಸ್ರೇಲರಲ್ಲಿ ಎಷ್ಟು ಜನರು ಇದ್ದಾರೋ ಅಷ್ಟು ಜನಾಂಗಗಳಿವೆ.


ಬೆನ್ಯಾಮೀನನ ವಿಷಯವಾಗಿ ಮೋಶೆಯು ಹೇಳಿದ್ದೇನೆಂದರೆ: “ಯೆಹೋವನು ಬೆನ್ಯಾಮೀನನನ್ನು ಪ್ರೀತಿಸುತ್ತಾನೆ. ಬೆನ್ಯಾಮೀನನು ಆತನ ಬಳಿಯಲ್ಲಿ ಸುರಕ್ಷಿತವಾಗಿ ವಾಸಮಾಡುತ್ತಾನೆ. ಯೆಹೋವನು ಅವನನ್ನು ಯಾವಾಗಲೂ ಸಂರಕ್ಷಿಸುತ್ತಾನೆ. ಅವನ ಪ್ರಾಂತ್ಯದಲ್ಲಿ ಯೆಹೋವನು ವಾಸಿಸುವನು.”


ಯೆಹೋವನು ತನ್ನ ತಿಳುವಳಿಕೆಯಿಂದ ಸಮುದ್ರಗಳನ್ನು ವಿಭಜಿಸಿದನು. ಮೋಡವು ಮಳೆಸುರಿಸುವುದಕ್ಕೆ ಆತನ ತಿಳುವಳಿಕೆಯೇ ಕಾರಣ.


ರಾಜನ ಕೋಪವು ಸಿಂಹ ಘರ್ಜನೆಯಂತಿರುತ್ತದೆ. ರಾಜನಿಗೆ ನಿನ್ನ ಮೇಲಿರುವ ಸಂತೋಷವು ತುಂತುರು ಮಳೆಯಂತಿರುತ್ತದೆ.


“ಒಂದು ಜನಾಂಗವು ಯಾರೂ ತಮ್ಮನ್ನು ಸೋಲಿಸಲಾರರು ಎಂದು ನೆಮ್ಮದಿಯಿಂದಲೂ ಸಮಾಧಾನದಿಂದಲೂ ಇದೆ. ಅದು ತನ್ನ ರಕ್ಷಣೆಗಾಗಿ ಒಂದು ಕೋಟೆಯನ್ನಾಗಲಿ ಒಂದು ಬಾಗಿಲನ್ನಾಗಲಿ ಹೊಂದಿಲ್ಲ. ಆ ಜನರು ಪ್ರತ್ಯೇಕವಾಗಿ ವಾಸವಾಗಿದ್ದಾರೆ. ಆ ಜನಾಂಗದ ಮೇಲೆ ಧಾಳಿ ಮಾಡಿರಿ.” ಎಂದು ಯೆಹೋವನು ಹೇಳಿದನು.


“ಈ ಜನರು ನೆಮ್ಮದಿಯಿಂದ ಭೂಮಿಯ ಮೇಲೆ ನಡೆಯುವರು. ಅವರ ದ್ರಾಕ್ಷಾಲತೆಗಳು ದ್ರಾಕ್ಷಿಹಣ್ಣನ್ನು ಕೊಡುವವು. ದೇಶವು ಸಮೃದ್ಧಿಯಾದ ಬೆಳೆಯನ್ನು ಕೊಡುವದು. ಆಕಾಶವು ಮಳೆಯನ್ನು ಸುರಿಸುವದು. ಇವೆಲ್ಲವನ್ನು ನಾನು ನನ್ನ ಜನರಿಗೆ ಕೊಡುವೆನು.


ನೀವು ಜೋರ್ಡನ್ ನದಿಯನ್ನು ದಾಟಿ, ಯೆಹೋವನು ನಿಮಗೆ ಕೊಡುವ ದೇಶದಲ್ಲಿ ವಾಸಿಸುವಿರಿ. ನಿಮ್ಮ ಎಲ್ಲಾ ವೈರಿಗಳಿಂದ ತಪ್ಪಿಸಿ ದೇವರು ನಿಮಗೆ ಸಮಾಧಾನವನ್ನು ಅನುಗ್ರಹಿಸುವನು; ನೀವು ಅಲ್ಲಿ ಸುರಕ್ಷಿತವಾಗಿರುವಿರಿ.


“ನನ್ನ ತಂದೆಯಾದ ದಾವೀದನಿಗೆ ಯೆಹೋವನು, ‘ನಿನ್ನ ನಂತರ ನಿನ್ನ ಮಗನನ್ನು ನಾನು ರಾಜನನ್ನಾಗಿ ಮಾಡುತ್ತೇನೆ. ನನ್ನನ್ನು ಸನ್ಮಾನಿಸಲು ನಿನ್ನ ಮಗನು ನನಗೆ ಒಂದು ದೇವಾಲಯವನ್ನು ಕಟ್ಟುತ್ತಾನೆ’ ಎಂದು ವಾಗ್ದಾನ ಮಾಡಿದ್ದನು. ಈಗ, ನನ್ನ ದೇವರಾದ ಯೆಹೋವನ ಗೌರವಾರ್ಥವಾಗಿ ದೇವಾಲಯವನ್ನು ನಿರ್ಮಿಸಬೇಕೆಂದಿದ್ದೇನೆ.


ಜನರು ಅಲ್ಲಿಗೆ ವಾಸಿಸಲು ಹೋಗುವರು. ಇನ್ನು ಮುಂದೆ ಯಾವ ಶತ್ರುವೂ ಅವರನ್ನು ನಾಶಮಾಡಲು ಬರುವುದಿಲ್ಲ. ಜೆರುಸಲೇಮ್ ಸುರಕ್ಷಿತವಾಗಿರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು