Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 33:29 - ಪರಿಶುದ್ದ ಬೈಬಲ್‌

29 ಇಸ್ರೇಲೇ, ನೀವು ಆಶೀರ್ವದಿಸಲ್ಪಟ್ಟವರು. ನಿಮ್ಮ ದೇಶದ ಹಾಗೆ ಯಾವ ದೇಶವೂ ಇರದು. ಯೆಹೋವನು ನಿಮ್ಮನ್ನು ರಕ್ಷಿಸಿದನು. ಆತನು ನಿಮ್ಮನ್ನು ಕಾಪಾಡುವ ಬಲವಾದ ಗುರಾಣಿ. ಆತನು ನಿಮಗೆ ಶಕ್ತಿಯುತವಾದ ಖಡ್ಗ. ವೈರಿಗಳು ನಿಮಗೆ ಭಯಪಡುವರು. ನೀವು ಅವರ ಪವಿತ್ರ ಸ್ಥಳವನ್ನು ತುಳಿದುಬಿಡುವಿರಿ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 “ಇಸ್ರಾಯೇಲರೇ, ನೀವು ಎಷ್ಟೋ ಧನ್ಯರು; ನಿಮ್ಮಷ್ಟು ಭಾಗ್ಯವಂತರು ಯಾರಿದ್ದಾರೆ? ನೀವು ಯೆಹೋವನ ಅನುಗ್ರಹದಿಂದ ಜಯವನ್ನು ಹೊಂದಿದವರು. ಆತನೇ ನಿಮ್ಮನ್ನು ಕಾಯುವ ಗುರಾಣಿಯು, ನಿಮ್ಮ ಗೌರವವನ್ನು ಕಾಪಾಡುವ ಕತ್ತಿಯೂ ಆಗಿದ್ದಾನೆ. ಆದ್ದರಿಂದ ನಿಮ್ಮ ಶತ್ರುಗಳು ನಿಮ್ಮ ಮುಂದೆ ಮುದುರಿಕೊಳ್ಳುತ್ತಾರೆ; ನೀವೋ ಅವರಿಗಿದ್ದ ಎತ್ತರವಾದ ಸೀಮೆಯಲ್ಲಿ ಜಯಶಾಲಿಗಳಾಗಿ ಸಂಚರಿಸುತ್ತೀರಿ” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಇಸ್ರಯೇಲ್, ನೀನು ಎಷ್ಟೋ ಧನ್ಯ! ಯಾರಿಗಿದೆ ನಿನಗಿರುವಂತೆ ಭಾಗ್ಯ! ಜಯಗಳಿಸಿರುವೆ ಸರ್ವೇಶ್ವರನ ಅನುಗ್ರಹದಿಂದ. ಆತನೇ ನಿನ್ನ ಕಾಪಾಡುವ ಗುರಾಣಿ ನಿನ್ನ ಗೌರವವನ್ನು ಕಾಯುವ ಕತ್ತಿ. ಎಂದೇ ಮುದುರಿಕೊಳ್ಳುವರು ಶತ್ರುಗಳು ನಿನ್ನ ಮುಂದೆ ಜಯಶೀಲನಾಗಿ ನೀ ಮೆರೆವೆ ಅವರ ಮಲೆನಾಡಿನಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಇಸ್ರಾಯೇಲ್ಯರೇ, ನೀವು ಎಷ್ಟೋ ಧನ್ಯರು; ನಿಮ್ಮಷ್ಟು ಭಾಗ್ಯವಂತರು ಯಾರಿದ್ದಾರೆ? ನೀವು ಯೆಹೋವನ ಅನುಗ್ರಹದಿಂದ ಜಯವನ್ನು ಹೊಂದಿದವರು. ಆತನೇ ನಿಮ್ಮನ್ನು ಕಾಯುವ ಡಾಲೂ ನಿಮ್ಮ ಗೌರವವನ್ನು ಕಾಪಾಡುವ ಕತ್ತಿಯೂ ಆಗಿದ್ದಾನೆ. ಆದದರಿಂದ ನಿಮ್ಮ ಶತ್ರುಗಳು ನಿಮ್ಮ ಮುಂದೆ ಮುದುರಿಕೊಳ್ಳುತ್ತಾರೆ; ನೀವೋ ಅವರಿಗಿದ್ದ ಎತ್ತರವಾದ ಸೀಮೆಯಲ್ಲಿ ಜಯಶಾಲಿಗಳಾಗಿ ಸಂಚರಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಇಸ್ರಾಯೇಲರೇ, ನೀವು ಎಷ್ಟೋ ಧನ್ಯರು. ಯೆಹೋವ ದೇವರಿಂದ ರಕ್ಷಣೆಹೊಂದಿದ ಜನಾಂಗವೇ ನಿಮ್ಮಂತೆ ಯಾರಿದ್ದಾರೆ? ದೇವರೇ ನಿಮಗೆ ಗುರಾಣಿ ಹಾಗೂ ಸಹಾಯಕ. ದೇವರು ನಿಮ್ಮ ಮಹಿಮಾ ಖಡ್ಗ. ನಿಮ್ಮ ವೈರಿಗಳು ನಿಮ್ಮ ಮುಂದೆ ಮುದುರಿಕೊಳ್ಳುವರು ಮತ್ತು ಅವರ ಉನ್ನತ ಸ್ಥಳಗಳನ್ನು ನೀವು ತುಳಿದುಬಿಡುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 33:29
43 ತಿಳಿವುಗಳ ಹೋಲಿಕೆ  

ಆದರೆ ಇಸ್ರೇಲು ಯೆಹೋವನಿಂದ ರಕ್ಷಿಸಲ್ಪಡುವದು. ಆ ರಕ್ಷಣೆಯು ಶಾಶ್ವತವಾದದ್ದು. ಇನ್ನೆಂದಿಗೂ ಇಸ್ರೇಲ್ ನಾಚಿಕೆಗೆ ಒಳಗಾಗುವದಿಲ್ಲ.


ದೇವರು ನನ್ನನ್ನು ರಕ್ಷಿಸುತ್ತಾನೆ. ಆತನಲ್ಲಿ ಭರವಸವಿಟ್ಟಿದ್ದೇನೆ. ಆದ್ದರಿಂದ ನಾನು ಭಯಪಡೆನು. ಆತನು ನನ್ನನ್ನು ರಕ್ಷಿಸುತ್ತಾನೆ. ಯೆಹೋವನೇ ನನ್ನ ಬಲವು. ಆತನು ನನ್ನನ್ನು ರಕ್ಷಿಸುತ್ತಾನೆ. ನಾನು ಆತನಿಗೆ ಸ್ತೋತ್ರಗಾನ ಹಾಡುವೆನು.”


“ನಿನ್ನ ಜನರಾದ ಇಸ್ರೇಲರಂಥವರು ಈ ಲೋಕದಲ್ಲಿ ಬೇರೆ ಯಾರೂ ಇಲ್ಲ, ಅವರು ವಿಶೇಷವಾದ ಜನರು. ಅವರು ಗುಲಾಮರಾಗಿದ್ದರು, ಆದರೆ ಅವರನ್ನು ಈಜಿಪ್ಟಿನಿಂದ ನೀನು ಹೊರತಂದು ಸ್ವತಂತ್ರರನ್ನಾಗಿ ಮಾಡಿರುವೆ. ನೀನು ಅವರನ್ನು ನಿನ್ನ ಜನರನ್ನಾಗಿ ಮಾಡಿಕೊಂಡೆ. ಇಸ್ರೇಲರಿಗಾಗಿ ನೀನು ಉತ್ತಮವಾದ ಮತ್ತು ಮಹತ್ತಾದ ಕಾರ್ಯಗಳನ್ನು ಮಾಡಿದೆ. ನಿನ್ನ ದೇಶಕ್ಕಾಗಿ ನೀನು ಮಹತ್ಕಾರ್ಯಗಳನ್ನು ಮಾಡಿದೆ.


ನನ್ನ ಒಡೆಯನಾದ ಯೆಹೋವನು ನನಗೆ ಬಲವನ್ನು ಕೊಡುವನು. ಜಿಂಕೆಯಂತೆ ವೇಗವಾಗಿ ಓಡಲು ನನಗೆ ಸಹಾಯ ಮಾಡುವನು. ಪರ್ವತಗಳಲ್ಲಿ ನನ್ನನ್ನು ಸುರಕ್ಷಿತವಾಗಿ ನಡೆಸುವನು. ಸಂಗೀತ ನಿರ್ದೇಶಕನಿಗೆ. ತಂತಿವಾದ್ಯಗಳಿಂದ ಹಾಡತಕ್ಕದ್ದು.


ಯೆಹೋವ ದೇವರು ನಮ್ಮ ಸಂರಕ್ಷಕನೂ ಮಹಿಮಾ ಪೂರ್ಣನಾದ ರಾಜನೂ ಆಗಿದ್ದಾನೆ. ಯೆಹೋವನು ನಮಗೆ ದಯೆಯನ್ನೂ ಘನತೆಯನ್ನೂ ಅನುಗ್ರಹಿಸುವನು. ಆತನು ಎಲ್ಲಾ ಒಳ್ಳೆಯವುಗಳನ್ನು ತನ್ನ ಭಕ್ತರಿಗೆ ಕೊಡುವನು.


ದೇವರೇ, ನಿನ್ನ ಕಾರ್ಯಗಳು ಎಷ್ಟು ಅದ್ಭುತವಾಗಿವೆ! ನಿನ್ನ ಮಹಾಶಕ್ತಿಯಿಂದಾಗಿ ಶತ್ರುಗಳು ನಿನಗೆ ಭಯಪಟ್ಟು ಅಡ್ಡಬೀಳುವರು.


ಆದ್ದರಿಂದ ಯೆಹೋವನಿಗಾಗಿಯೇ ಕಾದುಕೊಂಡಿರುತ್ತೇವೆ. ಆತನೇ ನಮ್ಮ ಸಹಾಯಕನೂ ಗುರಾಣಿಯೂ ಆಗಿದ್ದಾನೆ.


ಅವರು ನನ್ನ ಕುರಿತಾಗಿ ಕೇಳಿದ ಕೂಡಲೇ ವಿಧೇಯರಾಗುವರು. ಆ ವಿದೇಶಿಯರು ನನ್ನ ವಿಷಯದಲ್ಲಿ ಭಯದಿಂದಿರುವರು.


ಬೆಟ್ಟಗುಡ್ಡಗಳ ಪ್ರಾಂತ್ಯವನ್ನು ವಶಪಡಿಸಲು ಇಸ್ರೇಲನ್ನು ನಡೆಸಿದನು. ಹೊಲದ ಬೆಳೆಯನ್ನು ಇಸ್ರೇಲ್ ಕೊಯಿಲು ಮಾಡಿದನು. ಬಂಡೆಯಿಂದ ಜೇನನ್ನು ಯೆಹೋವನು ಇಸ್ರೇಲಿಗೆ ಕೊಟ್ಟನು. ಗಟ್ಟಿಯಾದ ಬಂಡೆಯಿಂದ ಎಣ್ಣೆಯು ಹೊರಡುವಂತೆ ಮಾಡಿದನು.


ಈ ಸಂಗತಿಗಳಾದ ಮೇಲೆ, ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ಸಂದೇಶ ಬಂದಿತು. ದೇವರು ಅವನಿಗೆ, “ಅಬ್ರಾಮನೇ ಭಯಪಡಬೇಡ; ನಾನೇ ನಿನಗೆ ಗುರಾಣಿಯಾಗಿದ್ದೇನೆ. ನಾನು ನಿನಗೆ ದೊಡ್ಡ ಪ್ರತಿಫಲವನ್ನು ಕೊಡುತ್ತೇನೆ” ಎಂದು ಹೇಳಿದನು.


ಅವರ ಸೈನ್ಯಗಳನ್ನು ಕುದುರೆಯ ಮೇಲೆ ಕುಳಿತಿದ್ದವನ ಬಾಯಿಂದ ಹೊರಬಂದ ಕತ್ತಿಯಿಂದ ಕೊಲ್ಲಲಾಯಿತು. ಈ ದೇಹಗಳನ್ನು ಪಕ್ಷಿಗಳೆಲ್ಲ ಹೊಟ್ಟೆ ತುಂಬುವವರೆಗೆ ತಿಂದವು.


ಆತನು ತನ್ನ ಬಲಗೈಯಲ್ಲಿ ಏಳು ನಕ್ಷತ್ರಗಳನ್ನು ಹಿಡಿದುಕೊಂಡಿದ್ದನು. ಆತನ ಬಾಯೊಳಗಿನಿಂದ ಹರಿತವಾದ ಇಬ್ಬಾಯಿಖಡ್ಗವು ಹೊರಬರುತ್ತಿತ್ತು. ಆತನ ಮುಖವು ಮಧ್ಯಾಹ್ನದಲ್ಲಿ ಪ್ರಕಾಶಿಸುವ ಸೂರ್ಯನಂತಿತ್ತು.


ಆದಕಾರಣವೇ, ನಾವು ಜೀವಸ್ವರೂಪನಾದ ದೇವರ ಮೇಲೆ ನಿರೀಕ್ಷೆಯಿಟ್ಟು ದುಡಿಯುತ್ತಿದ್ದೇವೆ ಮತ್ತು ಹೋರಾಡುತ್ತಿದ್ದೇವೆ. ಆತನು ಎಲ್ಲಾ ಜನರಿಗೆ ರಕ್ಷಕನಾಗಿದ್ದಾನೆ. ತನ್ನಲ್ಲಿ ನಂಬಿಕೆಯಿಡುವ ಜನರಿಗೆಲ್ಲಾ ಆತನು ವಿಶೇಷವಾದ ರೀತಿಯಲ್ಲಿ ರಕ್ಷಕನಾಗಿದ್ದಾನೆ.


ಅನೇಕ ಸೈನಿಕರು ಆ ಬೋಳುಬೆಟ್ಟಗಳನ್ನು ತುಳಿದುಕೊಂಡು ಹೋದರು. ಆ ಸೈನ್ಯಗಳಿಂದ ಯೆಹೋವನು ಆ ದೇಶವನ್ನು ದಂಡಿಸಿದನು. ಆ ದೇಶದ ಒಂದು ತುದಿಯಿಂದ ಇನ್ನೊಂದು ತುದಿಯವರೆಗೆ ವಾಸಿಸಿದ ಎಲ್ಲಾ ಜನರನ್ನು ದಂಡಿಸಲಾಯಿತು. ಯಾರೂ ಸುರಕ್ಷಿತವಾಗಿ ಉಳಿಯಲಿಲ್ಲ.


ಆ ಸಮಯದಲ್ಲಿ ಯೆಹೋವನು ವಂಚನೆಯ ಸರ್ಪವಾದ ಲಿವ್ಯಾತಾನನಿಗೆ ನ್ಯಾಯತೀರಿಸುವನು. ಯೆಹೋವನು ಕಠಿಣವೂ ಮಹತ್ವವೂ ಬಲವೂ ಆಗಿರುವ ತನ್ನ ಖಡ್ಗದಿಂದ ಸುತ್ತಿಕೊಂಡಿರುವ ಸರ್ಪವಾದ ಲಿವ್ಯಾತಾನನನ್ನು ಕೊಲ್ಲುವನು. ಯೆಹೋವನು ಸಮುದ್ರದಲ್ಲಿರುವ ಘಟಸರ್ಪವನ್ನು ಕೊಲ್ಲುವನು.


ಇಂಥ ಸುಸ್ಥಿತಿಯಲ್ಲಿರುವ ಜನರೇ ಧನ್ಯರು. ಯಾರಿಗೆ ಯೆಹೋವನು ದೇವರಾಗಿರುತ್ತಾನೋ ಅವರೇ ಭಾಗ್ಯವಂತರು.


ನಿನ್ನ ಖಡ್ಗವನ್ನು ಕಟ್ಟಿಕೊ. ನಿನ್ನ ಮಹಿಮಾವಸ್ತ್ರವನ್ನು ಧರಿಸಿಕೊ.


ಯಾರಿಗೆ ಯೆಹೋವನು ದೇವರಾಗಿದ್ದಾನೋ ಅವರೇ ಧನ್ಯರು. ಯಾಕೆಂದರೆ ಆತನು ಅವರನ್ನು ಸ್ವಕೀಯರನ್ನಾಗಿ ಆರಿಸಿಕೊಂಡಿದ್ದಾನೆ.


ಆತನು ತಾನು ಮಾಡಿದ ತೀರ್ಮಾನವನ್ನು ಬದಲಾಯಿಸುವುದಿಲ್ಲ.


“ಯಾಕೋಬ್ಯರೇ, ನಿಮ್ಮ ಡೇರೆಗಳು ಬಹಳ ಸುಂದರವಾಗಿವೆ! ಇಸ್ರೇಲರೇ, ನೀವು ವಾಸಿಸುವ ಸ್ಥಳಗಳು ಬಹಳ ರಮ್ಯವಾಗಿವೆ!


“ಅಯ್ಯೋ, ಯೆಹೋವನ ಖಡ್ಗವೇ, ನೀನಿನ್ನೂ ಹೋಗಲಿಲ್ಲವೇ? ಎಷ್ಟು ಹೊತ್ತು ನೀನು ಹೋರಾಡುತ್ತಿರುವೆ? ನಿನ್ನ ಒರೆಯಲ್ಲಿ ಹೋಗು! ಸುಮ್ಮನಿರು, ಶಾಂತವಾಗಿರು!


ಯೆಹೋವನ ಶತ್ರುಗಳು ಭಯದಿಂದ ನಡುಗುವರು. ಅವರು ಶಾಶ್ವತವಾಗಿ ದಂಡಿಸಲ್ಪಡುವರು.


ಅನ್ಯದೇಶದ ಜನರೂ ನನಗೆ ವಿಧೇಯರಾಗಿರುವರು! ಅವರು ನನ್ನ ಬಗ್ಗೆ ಕೇಳಿದಾಗ, ತಕ್ಷಣವೇ ನನಗೆ ವಿಧೇಯರಾಗುವರು! ಆ ಪರದೇಶಿಯರು ನನಗೆ ಭಯಪಡುವರು.


ಆಗ ಗಿದ್ಯೋನನ ಮೂರು ಗುಂಪಿನ ಜನರು ತಮ್ಮ ತುತ್ತೂರಿಗಳನ್ನು ಊದಿದರು ಮತ್ತು ತಮ್ಮ ಮಡಕೆಗಳನ್ನು ಒಡೆದುಹಾಕಿದರು. ಅವರು ಪಂಜುಗಳನ್ನು ತಮ್ಮ ಎಡಗೈಗಳಲ್ಲಿಯೂ ತುತ್ತೂರಿಗಳನ್ನು ತಮ್ಮ ಬಲಗೈಗಳಲ್ಲಿಯೂ ಹಿಡಿದುಕೊಂಡರು. ಅವರು ತಮ್ಮ ತುತ್ತೂರಿಗಳನ್ನು ಊದುತ್ತಾ “ಯೆಹೋವನಿಗೆ ಜಯ, ಗಿದ್ಯೋನನಿಗೆ ಜಯ” ಎಂದು ಕೂಗಿಕೊಂಡರು.


ಆ ದೇಶದ ನಿವಾಸಿಗಳನ್ನೆಲ್ಲ ಹೊರಡಿಸಿಬಿಟ್ಟು ಅವರ ಕೆತ್ತಿದ ಪ್ರತಿಮೆಗಳನ್ನು ಮತ್ತು ಲೋಹದ ವಿಗ್ರಹಗಳನ್ನು ನಾಶಮಾಡಿ ಅವರ ಪೂಜಾಸ್ಥಳಗಳನ್ನು ಹಾಳುಮಾಡಬೇಕು.


“ಇಂಥಾ ಅದ್ಭುತಕಾರ್ಯಗಳು ಹಿಂದೆ ಎಂದಾದರೂ ನಡೆದಿವೆಯೋ? ದೇವರು ಭೂಮಿಯ ಮೇಲೆ ಮಾನವನನ್ನು ನಿರ್ಮಿಸಿದ ಕಾಲದಿಂದಿಡಿದು ಇಂದಿನವರೆಗೂ ಲೋಕದ ಎಲ್ಲಾ ಕಡೆಗಳಲ್ಲಿ ನಡೆದಿರುವ ಸಂಗತಿಗಳನ್ನು ವೀಕ್ಷಿಸಿ ನೋಡಿರಿ. ಇದರಷ್ಟು ಮಹತ್ತಾದ ಯಾವುದನ್ನಾದರೂ ಎಂದಾದರೂ ಕೇಳಿರುವುದುಂಟೇ?


ಬೇರೊಂದು ಜನಾಂಗದೊಳಗಿಂದ ಜನರನ್ನು ತನಗೋಸ್ಕರ ತೆಗೆದುಕೊಳ್ಳಲು ಬೇರೆ ಯಾವ ದೇವರಾದರೂ ಎಂದಾದರೂ ಪ್ರಯತ್ನಿಸಿದ್ದುಂಟೇ? ಇಲ್ಲ! ಆದರೆ ದೇವರಾದ ಯೆಹೋವನು ಇಂಥ ಮಹಾಕಾರ್ಯಗಳನ್ನು ಮಾಡುವುದನ್ನು ನೀವು ನೋಡಿದ್ದೀರಿ! ಆತನು ನಿಮಗೆ ತನ್ನ ಶಕ್ತಿಯನ್ನು, ಬಲವನ್ನು, ಅದ್ಭುತಕಾರ್ಯಗಳನ್ನು ಮತ್ತು ಆಶ್ಚರ್ಯಕರವಾದ ಕಾರ್ಯಗಳನ್ನು ತೋರಿಸಿದ್ದಾನೆ. ಆತನು ಈಜಿಪ್ಟಿನ ಮೇಲೆ ಬರಮಾಡಿದ ವಿಪತ್ತುಗಳನ್ನು ಮತ್ತು ಭಯಂಕರವಾದ ಘಟನೆಗಳನ್ನು ನೀವು ನೋಡಿದ್ದೀರಿ!


ನಾನು ಸಹಾಯಕ್ಕಾಗಿ ದೇವರ ಬಳಿಗೆ ಓಡಿಹೋಗುತ್ತೇನೆ. ಆತನೇ ನನ್ನ ಆಶ್ರಯಗಿರಿ. ಯೆಹೋವನು ನನ್ನ ಗುರಾಣಿ. ಆತನ ಶಕ್ತಿಯು ನನ್ನನ್ನು ರಕ್ಷಿಸುತ್ತದೆ. ಆತನು ನಾನು ಅಡಗಿಕೊಳ್ಳುವ ಸ್ಥಳ; ಬೆಟ್ಟಗಳ ಮೇಲಿರುವ ನನ್ನ ಸುರಕ್ಷಿತ ಸ್ಥಳ; ಆತನು ನನ್ನನ್ನು ಕ್ರೂರ ಶತ್ರುಗಳಿಂದ ರಕ್ಷಿಸುವನು!


ಹಿಜ್ಕೀಯನೂ ಪ್ರಧಾನರೂ ಜನರ ಕಾಣಿಕೆಯ ರಾಶಿಯನ್ನು ನೋಡಿ ಯೆಹೋವನಿಗೆ ಸ್ತೋತ್ರ ಮಾಡಿದರು ಮತ್ತು ಅದನ್ನು ಅರ್ಪಿಸಿದ ಜನರಿಗಾಗಿ ಸ್ತೋತ್ರ ಮಾಡಿದರು.


ಯಾವನು ದುಷ್ಟರ ಮಾರ್ಗವನ್ನು ಅನುಸರಿಸದೆ, ಪಾಪಿಗಳಂತೆ ಜೀವಿಸದೆ, ದೇವರಿಗೆ ಅವಿಧೇಯರಾದ ಜನರೊಂದಿಗೆ ಸೇರದೆ ಇರುವನೋ ಅವನೇ ಭಾಗ್ಯವಂತನು.


ಯಾವನ ಪಾಪಗಳು ಕ್ಷಮಿಸಲ್ಪಟ್ಟಿವೆಯೋ ಯಾವನ ದ್ರೋಹಗಳು ಅಳಿಸಲ್ಪಟ್ಟಿವೆಯೋ ಅವನೇ ಧನ್ಯನು.


ಯೆಹೋವನು ಯಾವನನ್ನು ದೋಷಿಯೆಂದು ಹೇಳುವುದಿಲ್ಲವೋ ಯಾವನು ತನ್ನ ಗುಪ್ತಪಾಪಗಳನ್ನು ಅಡಗಿಸಿಟ್ಟುಕೊಳ್ಳುವುದಿಲ್ಲವೋ ಅವನೇ ಧನ್ಯನು.


ದೇವರ ಬಲವನ್ನು ಕೊಂಡಾಡಿರಿ. ಆತನ ಗಾಂಭೀರ್ಯವು ಇಸ್ರೇಲರ ಆಶ್ರಯವಾಗಿದೆ. ಆತನ ಶಕ್ತಿಯು ಆಕಾಶಗಳಲ್ಲಿ ವ್ಯಾಪಿಸಿದೆ.


ಆಗ ನೀವು ಯೆಹೋವನಲ್ಲಿ ಉಲ್ಲಾಸಿಸುವಿರಿ. ಆತನು ನಿಮ್ಮನ್ನು ಭೂಮಿಯಿಂದ ಮೇಲಕ್ಕಿರುವ ಉನ್ನತಸ್ಥಾನಕ್ಕೆ ಕೊಂಡೊಯ್ಯುವನು; ನಿಮ್ಮ ಪೂರ್ವಿಕನಾದ ಯಾಕೋಬನ ಸ್ವಾಸ್ತ್ಯವನ್ನು ನೀವು ಅನುಭವಿಸುವಂತೆ ಆತನು ನಿಮಗೆ ಅದನ್ನು ಕೊಡುವನು. ಇದು ಯೆಹೋವನ ನುಡಿ.


“ಇಸ್ರೇಲೇ, ನಾನು ನಿನಗೆ ಸಹಾಯ ಮಾಡಿದರೂ ನೀನು ನನಗೆ ವಿರೋಧವಾಗಿ ಎದ್ದಿರುವೆ. ಆದ್ದರಿಂದ ನಾನು ನಿನ್ನನ್ನು ನಾಶಮಾಡುವೆನು.


ಯೆಹೋವನು “ಯಾಕೋಬನ ಮಹಿಮೆ” ಎಂಬ ತನ್ನ ಹೆಸರಿನ ಮೇಲೆ ಆಣೆಯಿಟ್ಟು ವಾಗ್ದಾನ ಮಾಡಿದ್ದಾನೆ. “ಆ ಜನರು ಮಾಡಿದ ಕೃತ್ಯಗಳನ್ನು ನಾನು ಎಂದಿಗೂ ಮರೆಯುವುದಿಲ್ಲ.


ಆ ವಿದೇಶಿಯರು ಧೈರ್ಯವಿಲ್ಲದವರಾಗಿ ನಡುಗುತ್ತಾ ತಮ್ಮ ಕೋಟೆಗಳಿಂದ ಬರುವರು.


ಅಂಥವರು ಉನ್ನತವಾದ ಸ್ಥಳದಲ್ಲಿ ಸುರಕ್ಷಿತವಾಗಿ ವಾಸಿಸುವರು. ಎತ್ತರವಾದ ಬಂಡೆಕಲ್ಲಿನ ಕೋಟೆಯೊಳಗೆ ಅವರು ಕಾಪಾಡಲ್ಪಡುವರು. ಅವರ ಬಳಿ ಆಹಾರ ಮತ್ತು ನೀರು ಯಾವಾಗಲೂ ಇರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು