Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 4:23 - ಪರಿಶುದ್ದ ಬೈಬಲ್‌

23 ನೀವು ಆ ದೇಶದಲ್ಲಿ ವಾಸಿಸುವಾಗ ನಿಮ್ಮ ದೇವರಾದ ಯೆಹೋವನೊಡನೆ ನೀವು ಮಾಡಿರುವ ಒಡಂಬಡಿಕೆಯನ್ನು ಮರೆಯಬೇಡಿರಿ. ನೀವು ಆತನ ಕಟ್ಟಳೆಗಳಿಗೆ ವಿಧೇಯರಾಗಿರಿ. ಯಾವ ವಿಗ್ರಹಗಳನ್ನಾಗಲಿ ಮಾಡಿಕೊಳ್ಳಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಎಚ್ಚರಿಕೆಯಾಗಿರಿ, ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಮಾಡಿದ ನಿಬಂಧನೆಯನ್ನು ನೀವು ಮರೆತು, ಪೂಜಿಸಬೇಡಿರೆಂದು ಆತನು ನಿಷೇಧಿಸಿದ ಯಾವ ವಸ್ತುವಿನ ವಿಗ್ರಹವನ್ನೂ ಮಾಡಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 “ಎಚ್ಚರಿಕೆಯಾಗಿರಿ; ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಮರೆತುಬಿಡಬೇಡಿ. ಅವರು ಪೂಜಿಸಬೇಡಿರೆಂದು ನಿಷೇಧಿಸಿದ ಯಾವ ವಿಗ್ರಹ ವಸ್ತುಗಳನ್ನೂ ಮಾಡಿಕೊಳ್ಳಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಎಚ್ಚರಿಕೆಯಾಗಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಮಾಡಿದ ನಿಬಂಧನೆಯನ್ನು ನೀವು ಮರೆತು ಪೂಜಿಸಬೇಡಿರೆಂದು ಆತನು ನಿಷೇಧಿಸಿದ ಯಾವ ವಸ್ತುವಿನ ವಿಗ್ರಹವನ್ನೂ ಮಾಡಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತುಬಿಡಬೇಡಿರಿ. ನಿಮ್ಮ ದೇವರಾದ ಯೆಹೋವ ದೇವರು ಪೂಜಿಸಬೇಡವೆಂದು ಹೇಳಿದ ಯಾವ ಕೆತ್ತಿದ ವಿಗ್ರಹವನ್ನು ಮಾಡಿಕೊಳ್ಳದಂತೆ ಜಾಗ್ರತೆಯಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 4:23
26 ತಿಳಿವುಗಳ ಹೋಲಿಕೆ  

ಆದರೆ ನೀವು ನೋಡಿದ್ದನ್ನು ನಿಮ್ಮ ಜೀವಮಾನವೆಲ್ಲಾ ಜಾಗ್ರತೆಯುಳ್ಳವರಾಗಿದ್ದು ಮರೆಯದೆ ಅದನ್ನು ನಿಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ತಿಳಿಸಬೇಕು.


ಆದ್ದರಿಂದ ಸಹೋದರ ಸಹೋದರಿಯರೇ, ನಿಮ್ಮಲ್ಲಿ ಯಾರೂ ಕೆಟ್ಟಬುದ್ಧಿಯುಳ್ಳವರಾಗದಂತೆ, ನಂಬದವರಾಗದಂತೆ, ಜೀವಸ್ವರೂಪನಾದ ದೇವರನ್ನು ತೊರೆಯದಂತೆ ಎಚ್ಚರಿಕೆಯಿಂದಿರಿ.


ಯೇಸು ಅವರಿಗೆ ಕೊಟ್ಟ ಉತ್ತರವಿದು: “ಎಚ್ಚರವಾಗಿರಿ! ನಿಮ್ಮನ್ನು ಮೋಸಗೊಳಿಸಲು ಯಾರಿಗೂ ಅವಕಾಶ ಕೊಡಬೇಡಿ.


ಈ ಮಾತುಗಳನ್ನು ನನ್ನ ಒಡೆಯನಾದ ಯೆಹೋವನು ಹೇಳಿದನು. “ನೀನು ಮಾಡಿರುವದನ್ನು ನಾನೂ ನಿನಗೆ ಮಾಡುವೆನು. ನೀನು ನಿನ್ನ ಮದುವೆ ಒಡಂಬಡಿಕೆಯನ್ನು ಮುರಿದುಬಿಟ್ಟೆ. ನಮ್ಮ ಒಡಂಬಡಿಕೆಗೆ ನೀನು ಮಹತ್ವ ಕೊಡಲಿಲ್ಲ.


ದೇಶದ ಜನರು ದೇವರ ಉಪದೇಶಗಳಿಗೆ ವಿರುದ್ಧವಾಗಿ ನಡೆದು ತಮ್ಮ ದೇಶವನ್ನು ಹೊಲಸುಮಾಡಿದರು. ದೇವರ ಕಟ್ಟಳೆಗಳನ್ನು ಅವರು ಅನುಸರಿಸಲಿಲ್ಲ. ಬಹಳ ಕಾಲದ ಹಿಂದೆ ಜನರು ದೇವರೊಂದಿಗೆ ಒಡಂಬಡಿಕೆ ಮಾಡಿಕೊಂಡರು. ಆದರೆ ಆ ಜನರು ಆ ಒಡಂಬಡಿಕೆಯನ್ನು ಮುರಿದರು.


ಯೆಹೋವನ ಒಡಂಬಡಿಕೆಯನ್ನು ಸದಾಕಾಲ ನೆನಪಿನಲ್ಲಿಡಿರಿ. ಆತನು ಆ ಆಜ್ಞೆಗಳನ್ನು ಸಾವಿರ ತಲೆಮಾರುಗಳಿಗೆ ಕೊಟ್ಟನು.


ನಿಮ್ಮ ದೇವರಾದ ಯೆಹೋವನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಪಾಲಿಸದೆ ಬೇರೆ ದೇವರುಗಳ ಸೇವೆಮಾಡಿದರೆ ಈ ದೇಶವನ್ನು ಕಳೆದುಕೊಳ್ಳುವಿರಿ. ನೀವು ಅನ್ಯದೇವರುಗಳನ್ನು ಪೂಜಿಸಬಾರದು. ಇಲ್ಲವಾದರೆ, ಯೆಹೋವನು ನಿಮ್ಮ ಮೇಲೆ ಬಹು ಕೋಪಗೊಂಡು ಆತನು ನಿಮಗೆ ಕೊಟ್ಟ ಈ ಒಳ್ಳೆಯ ದೇಶದಿಂದ ಬಲವಂತವಾಗಿ ಹೊರಡಿಸುವನು,” ಅಂದನು.


ನಾನು ಅವರ ಪೂರ್ವಿಕರಿಗೆ ವಾಗ್ದಾನ ಮಾಡಿದ ದೇಶಕ್ಕೆ ಅವರನ್ನು ಕರೆದುಕೊಂಡು ಹೋಗುವೆನು. ಆ ದೇಶವು ಹಾಲೂಜೇನೂ ಹರಿಯುವ ದೇಶವಾಗಿರುತ್ತದೆ. ಅವರಿಗೆ ಇಷ್ಟ ಬಂದದ್ದನ್ನೆಲ್ಲಾ ತಿನ್ನಲು ಅವರಿಗೆ ಸಿಗುವುದು. ಅವರಿಗೆ ಸಮೃದ್ಧಿಯಾದ ಜೀವಿತವು ಇರುವುದು. ಆದರೆ ಅವರು ಸುಳ್ಳುದೇವರ ಕಡೆಗೆ ತಿರುಗಿ ಅವುಗಳನ್ನು ಪೂಜಿಸುವರು. ಅವರು ನನ್ನಿಂದ ತೊಲಗಿ ನನ್ನ ಒಡಂಬಡಿಕೆಯನ್ನು ಮುರಿದುಬಿಡುವರು.


ಯಾಕೆಂದರೆ ‘ಇಸ್ರೇಲರು ತಮ್ಮ ಪೂರ್ವಿಕರ ದೇವರಾದ ಯೆಹೋವನೊಂದಿಗೆ ಮಾಡಿದ ಒಡಂಬಡಿಕೆಯನ್ನು ಬಿಟ್ಟು ತೊಲಗಿದರು. ಅವರನ್ನು ಈಜಿಪ್ಟಿನಿಂದ ಹೊರತರುವಾಗ ಯೆಹೋವನೊಂದಿಗೆ ಮಾಡಿದ ಒಡಂಬಡಿಕೆಯನ್ನು ಅನುಸರಿಸಲಿಲ್ಲ.


ಯೇಸು ಅವರಿಗೆ, “ಎಚ್ಚರಿಕೆಯಾಗಿರಿ! ಮೋಸ ಹೋಗಬೇಡಿರಿ. ನನ್ನ ಹೆಸರನ್ನು ಹೇಳುತ್ತಾ ಅನೇಕರು ಬರುವರು. ಅವರು, ‘ನಾನೇ ಕ್ರಿಸ್ತನು’ ಎಂದೂ, ‘ಸರಿಯಾದ ಸಮಯ ಬಂದಿದೆ’ ಎಂದೂ ಹೇಳುವರು. ಆದರೆ ಅವರನ್ನು ಹಿಂಬಾಲಿಸಬೇಡಿರಿ.


ಬಳಿಕ ಯೇಸು ನೆರೆದಿದ್ದ ಜನರಿಗೆ, “ಎಚ್ಚರಿಕೆ, ಯಾವ ವಿಧವಾದ ಸ್ವಾರ್ಥಕ್ಕೂ ಒಳಗಾಗದಂತೆ ಜಾಗರೂಕರಾಗಿರಿ. ಒಬ್ಬನಿಗೆ ಎಷ್ಟೇ ಆಸ್ತಿಯಿದ್ದರೂ ಅದರಿಂದ ಅವನು ಜೀವವನ್ನು ಪಡೆದುಕೊಳ್ಳಲಾರನು” ಎಂದನು.


ನೀನು ಅಪನಂಬಿಗಸ್ತಳಾದ ಮಗಳಾಗಿದ್ದೆ. ಆದರೆ ನೀನು ಬದಲಾವಣೆ ಹೊಂದಿದೆ. ಈಗ ನೀನು ಮನೆಗೆ ಹಿಂದಿರುಗಿ ಬರಲು ಎಷ್ಟು ಹೊತ್ತು ಕಾದುಕೊಂಡಿರುವೆ. “ಯೆಹೋವನು ಲೋಕದಲ್ಲಿ ಅಪೂರ್ವವಾದದ್ದನ್ನು ಮಾಡಿದ್ದಾನೆ. ಹೆಂಗಸು ಗಂಡಸನ್ನು ಕಾಪಾಡುವಳು.”


ಆದ್ದರಿಂದ ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸುವುದರಲ್ಲಿ ಬಹು ಎಚ್ಚರಿಕೆಯಿಂದಿರಿ.


ಮೋಶೆಯೂ ಯಾಜಕರೂ ಇಸ್ರೇಲ್ ಸಮೂಹದವರೊಂದಿಗೆ ಮಾತನಾಡಿದರು. ಆಗ ಮೋಶೆಯು, “ಇಸ್ರೇಲರೇ, ಮೌನವಾಗಿ ನನ್ನ ಮಾತುಗಳನ್ನು ಕೇಳಿರಿ. ಈ ದಿನ ನೀವು ದೇವರಾದ ಯೆಹೋವನ ಸ್ವಕೀಯ ಪ್ರಜೆಯಾಗಿರುತ್ತೀರಿ.


“ನಿಮ್ಮ ದೇವರಾದ ಯೆಹೋವನನ್ನು ಸನ್ಮಾನಿಸಿ ಆತನನ್ನೇ ಸೇವಿಸಿರಿ. ಆತನನ್ನು ಮರೆತುಬಿಡಬೇಡಿರಿ. ಈಜಿಪ್ಟ್ ದೇಶದಲ್ಲಿ ಗುಲಾಮರಾಗಿದ್ದಾಗ ಆತನೇ ನಿಮ್ಮನ್ನು ವಿಮೋಚಿಸಿದನಲ್ಲಾ?


“ನೀವು ಈ ಆಜ್ಞೆಗಳಿಗೆಲ್ಲಾ ಜಾಗರೂಕತೆಯಿಂದ ವಿಧೇಯರಾಗಬೇಕು. ಸುಳ್ಳುದೇವರುಗಳನ್ನು ಆರಾಧಿಸಬೇಡಿರಿ. ನೀವು ಅವುಗಳ ಹೆಸರುಗಳನ್ನು ಉಚ್ಚರಿಸಲೂ ಕೂಡದು.


ಈ ಗೊಂಡೆಗಳನ್ನು ನೀವು ನೋಡುವಾಗ, ಯೆಹೋವನು ನಿಮಗೆ ಕೊಟ್ಟ ಅಪ್ಪಣೆಗಳನ್ನೆಲ್ಲ ಜ್ಞಾಪಕಮಾಡಿಕೊಳ್ಳಬೇಕು ಮತ್ತು ಅವುಗಳಿಗೆ ವಿಧೇಯರಾಗಬೇಕು. ನೀವು ನಿಮ್ಮ ಮನಸ್ಸಿಗೆ ಮತ್ತು ಕಣ್ಣಿಗೆ ತೋರಿದ ಪ್ರಕಾರ ನಡೆಯದೆ ನಂಬಿಗಸ್ತರಾಗಿರಬೇಕು.


“ನೀವು ಹೋಗುವ ದೇಶದಲ್ಲಿ ಬಹಳ ವರ್ಷ ಬಾಳಿದ ನಂತರ ನಿಮಗೆ ಮಕ್ಕಳೂ ಮೊಮ್ಮಕ್ಕಳೂ ಆಗುವರು. ಬಳಿಕ ನೀವು ನಿಮ್ಮ ಜೀವಿತಗಳನ್ನು ಹಾಳುಮಾಡಿಕೊಳ್ಳುವಿರಿ. ನೀವು ಎಲ್ಲಾ ಬಗೆಯ ವಿಗ್ರಹಗಳನ್ನು ಮಾಡಿಕೊಳ್ಳುವಿರಿ. ಅದು ದೇವರಿಗೆ ಬಹಳ ಕೋಪವನ್ನು ಉಂಟುಮಾಡುವುದು!


“‘ಸುಳ್ಳುದೇವರನ್ನು ಮಾಡಿ ಗುಪ್ತ ಸ್ಥಳದಲ್ಲಿಡುವವನು ಶಾಪಗ್ರಸ್ತನಾಗಲಿ; ಆ ದೇವರುಗಳು ಮನುಷ್ಯನ ಕೈಕೆಲಸವೇ; ಕಲ್ಲು, ಮರ, ಹಿತ್ತಾಳೆಗಳಿಂದ ಮಾಡಿದವುಗಳೇ. ಯೆಹೋವನು ಅವುಗಳನ್ನು ದ್ವೇಷಿಸುತ್ತಾನೆ.’ “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.


ನಾನು ನಿಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ನೀವು ಮರೆಯಲೇಬಾರದು. ನೀವು ಅನ್ಯದೇವರುಗಳನ್ನು ಪೂಜಿಸಬಾರದು.


“ನನ್ನ ಸೇವಕನಾದ ಮೋಶೆಯ ಕಟ್ಟಳೆಗಳನ್ನು ಅನುಸರಿಸಲು ಮರೆಯಬೇಡಿ. ಹೋರೇಬ್ ಬೆಟ್ಟದಲ್ಲಿ ನಾನು ಆ ನ್ಯಾಯವಿಧಿಗಳನ್ನು ಅವನಿಗೆ ಕೊಟ್ಟೆನು. ಆ ಕಟ್ಟಳೆಗಳೆಲ್ಲಾ ಇಸ್ರೇಲ್ ಜನರಿಗಾಗಿ ಇರುವದು.”


ಹೋರೇಬ್ ಎಂಬ ಸೀನಾಯಿ ಪರ್ವತದಲ್ಲಿ ಯೆಹೋವ ದೇವರು ನಮ್ಮೊಂದಿಗೆ ಒಡಂಬಡಿಕೆಯನ್ನು ಮಾಡಿರುತ್ತಾನೆ.


ಸುಳ್ಳುದೇವರುಗಳ ಪೂಜೆಗಾಗಿ ವಿಶೇಷವಾದ ಕಲ್ಲುಗಳನ್ನು ನೆಡಬಾರದು; ನಿಮ್ಮ ದೇವರಾದ ಯೆಹೋವನು ಅವುಗಳನ್ನು ದ್ವೇಷಿಸುತ್ತಾನೆ.


ನಾನು ಒಳಗೆ ಹೋದಾಗ, ಗೋಡೆಗಳ ಮೇಲೆಲ್ಲಾ ಕೆತ್ತಲ್ಪಟ್ಟಿದ್ದ ಎಲ್ಲಾ ಬಗೆಯ ಕ್ರಿಮಿಕೀಟಗಳನ್ನು ಮತ್ತು ಅಸಹ್ಯಕರವಾದ ಪ್ರಾಣಿಗಳ ವಿಗ್ರಹಗಳನ್ನು ಕಂಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು