Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 4:28 - ಪರಿಶುದ್ದ ಬೈಬಲ್‌

28 ಅಲ್ಲಿ, ಮನುಷ್ಯರು ಕೈಯಿಂದ ಮಾಡಿದ ದೇವರುಗಳನ್ನು ಪೂಜಿಸುವಿರಿ. ಅವು ಮರಕಲ್ಲುಗಳಿಂದ ರೂಪಿಸಲ್ಪಟ್ಟಿವೆ. ಅವು ನೋಡಲಾರವು, ಕೇಳಲಾರವು, ತಿನ್ನಲಾರವು ಮತ್ತು ಮೂಸಿನೋಡಲಾರವು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನೀವು ಆ ದೇಶಗಳಲ್ಲಿ ಮನುಷ್ಯರು ಮಾಡಿಕೊಂಡ ದೇವರುಗಳನ್ನು ಅಂದರೆ ಮರದಲ್ಲಾಗಲಿ, ಕಲ್ಲಿನಲ್ಲಾಗಲಿ ಕೆತ್ತಲ್ಪಟ್ಟು ನೋಡಲಾರದೆ, ಕೇಳಲಾರದೆ, ತಿನ್ನಲಾರದೆ, ವಾಸನೆ ಗ್ರಹಿಸಲಾರದೆ ಇರುವ ದೇವರುಗಳನ್ನು ಪೂಜಿಸುವವರಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಅಲ್ಲಿ ಮಾನವರ ಕೈಯಿಂದ ಮಾಡಲಾದ ಮರ ಮತ್ತು ಕಲ್ಲಿನ ದೇವರುಗಳನ್ನು ಪೂಜಿಸುವಿರಿ; ಅವುಗಳಿಂದ ನೋಡುವುದಕ್ಕಾಗಲಿ, ಕೇಳುವುದಕ್ಕಾಗಲಿ, ತಿನ್ನಲಿಕ್ಕಾಗಲಿ, ಮೂಸುವುದಕ್ಕಾಗಲಿ ಆಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನೀವು ಆ ದೇಶಗಳಲ್ಲಿ ಮನುಷ್ಯರು ಮಾಡಿಕೊಂಡ ದೇವರುಗಳನ್ನು ಅಂದರೆ ಮರದಲ್ಲಾಗಲಿ ಕಲ್ಲಿನಲ್ಲಾಗಲಿ ಕೆತ್ತಲ್ಪಟ್ಟು ನೋಡಲಾರದೆ ಕೇಳಲಾರದೆ ತಿನ್ನಲಾರದೆ ವಾಸನೆ ತಿಳುಕೊಳ್ಳಲಾರದೆ ಇರುವ ದೇವರುಗಳನ್ನು ಪೂಜಿಸುವವರಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅಲ್ಲಿ ನೀವು ಮನುಷ್ಯರ ಕೈಯಿಂದ ಮಾಡಿದ ಎಂದರೆ, ನೋಡದೆಯೂ, ಕೇಳದೆಯೂ, ಉಣ್ಣದೆಯೂ, ಮೂಸಿ ನೋಡದೆಯೂ ಇರುವಂಥ ಮರ ಮತ್ತು ಕಲ್ಲುಗಳಿಂದ ಮಾಡಿದ ದೇವರುಗಳನ್ನು ಸೇವಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 4:28
22 ತಿಳಿವುಗಳ ಹೋಲಿಕೆ  

ಯೆಹೋವನು ನಿಮ್ಮನ್ನು ಲೋಕದ ಎಲ್ಲಾ ದೇಶಗಳಿಗೆ ಚದರಿಸಿಬಿಡುವನು. ಆತನು ಪ್ರಪಂಚದ ಒಂದು ಕಡೆಯಿಂದ ಇನ್ನೊಂದು ಕಡೆಯ ತನಕ ನಿಮ್ಮನ್ನು ಚದರಿಸುವನು. ಅಲ್ಲಿ ನೀವು ಕಲ್ಲುಮರಗಳಿಂದ ಮಾಡಿದ ದೇವರುಗಳನ್ನು ಪೂಜಿಸುವಿರಿ. ಆ ಸುಳ್ಳುದೇವರುಗಳನ್ನು ನೀವಾಗಲಿ ನಿಮ್ಮ ಪೂರ್ವಿಕರಾಗಲಿ ಎಂದೂ ಪೂಜಿಸಿರಲಿಲ್ಲ.


ಆದ್ದರಿಂದ ನಾನು ನಿಮ್ಮನ್ನು ಈ ದೇಶದ ಹೊರಗೆ ಎಸೆಯುತ್ತೇನೆ. ನೀವು ಪರದೇಶಕ್ಕೆ ಸೆರೆಹೋಗುವಂತೆ ಮಾಡುತ್ತೇನೆ. ನೀವು ಮತ್ತು ನಿಮ್ಮ ಪೂರ್ವಿಕರು ಎಂದೂ ನೋಡದ ಪ್ರದೇಶಕ್ಕೆ ನೀವು ಹೋಗುವಿರಿ. ಆ ಪ್ರದೇಶದಲ್ಲಿ ನೀವು ನಿಮ್ಮ ಮನಸ್ಸಿಗೆ ಬಂದಷ್ಟು ಸುಳ್ಳುದೇವತೆಗಳ ಸೇವೆಮಾಡಬಹುದು. ನಾನು ನಿಮಗೆ ಸಹಾಯವನ್ನೂ ಮಾಡುವದಿಲ್ಲ, ಯಾವ ರೀತಿಯ ಒಲವನ್ನೂ ತೋರುವದಿಲ್ಲ.’”


ಅವರು ಆ ವಿಗ್ರಹವನ್ನು ಹೆಗಲ ಮೇಲೆ ಕುಳ್ಳಿರಿಸಿಕೊಂಡು ಹೊರುತ್ತಾರೆ. ಆ ಸುಳ್ಳುದೇವರುಗಳು ನಿಷ್ಪ್ರಯೋಜಕವಾಗಿವೆ. ಜನರೇ ಅವುಗಳನ್ನು ಹೊತ್ತುಕೊಳ್ಳಬೇಕು. ಜನರು ಅವುಗಳನ್ನು ನೆಲದ ಮೇಲೆ ಇಟ್ಟಾಗ ಅವು ಅಲ್ಲಾಡುವದಿಲ್ಲ. ತಮ್ಮ ಸ್ಥಳದಿಂದ ಆ ಸುಳ್ಳುದೇವರುಗಳು ಎದ್ದುಹೋಗುವದಿಲ್ಲ. ಜನರು ಅದರ ಮುಂದೆ ಕೂಗಿಕೊಂಡರೂ ಅವು ಕೇಳಿಸಿಕೊಳ್ಳುವದಿಲ್ಲ. ಆ ಸುಳ್ಳುದೇವರುಗಳು ಕೇವಲ ವಿಗ್ರಹಗಳಷ್ಟೇ. ಅವು ಜನರನ್ನು ಅವರ ಕಷ್ಟಗಳಿಂದ ಬಿಡಿಸಲಾರವು.


“ಯೆಹೋವನು ನಿಮ್ಮನ್ನೂ ನಿಮ್ಮ ಅರಸನನ್ನೂ ನೀವು ಅರಿಯದ ದೇಶಕ್ಕೆ ಅಟ್ಟಿಬಿಡುವನು. ನೀವಾಗಲಿ ನಿಮ್ಮ ಪೂರ್ವಿಕರಾಗಲಿ ಆ ದೇಶವನ್ನು ಎಂದೂ ನೋಡಲಿಲ್ಲ. ಅಲ್ಲಿ ಮರ, ಕಲ್ಲುಗಳಿಂದ ಮಾಡಿದ ಸುಳ್ಳುದೇವರನ್ನು ಆರಾಧಿಸುವಿರಿ.


ಇಸ್ರೇಲ್ ಜನರೇ, ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಆ ಹೊಲಸು ವಿಗ್ರಹಗಳನ್ನು ಆರಾಧಿಸಬೇಕೆನ್ನುವವನು ಹೋಗಿ ಆರಾಧಿಸಲಿ. ಮುಂದಿನ ಕಾಲದಲ್ಲಂತೂ ನೀವು ನನ್ನ ಬುದ್ಧಿಮಾತನ್ನು ಕೇಳೇ ಕೇಳುವಿರಿ. ನನ್ನ ಪರಿಶುದ್ಧ ಹೆಸರನ್ನು ನೀವು ನಿಮ್ಮ ಬಲಿಗಳಿಂದಲೂ ಬೊಂಬೆಗಳಿಂದಲೂ ಅಪಕೀರ್ತಿಗೆ ಗುರಿಮಾಡುವುದೇ ಇಲ್ಲ.”


“ಬೇರೆ ದೇಶಗಳಿಂದ ಪಾರಾಗಿ ಬಂದ ಜನರೇ, ಒಟ್ಟಾಗಿ ಸೇರಿಕೊಂಡು ನನ್ನ ಮುಂದೆ ಬನ್ನಿರಿ. (ಈ ಜನರು ಮರದ ವಿಗ್ರಹಗಳನ್ನು ಇಟ್ಟುಕೊಂಡಿದ್ದಾರೆ. ತಮ್ಮನ್ನು ರಕ್ಷಿಸಲಾರದ ವಿಗ್ರಹಕ್ಕೆ ಅವರು ಪ್ರಾರ್ಥಿಸುತ್ತಿದ್ದಾರೆ. ಅವರು ಮಾಡುವದು ಅವರಿಗೇ ತಿಳಿಯದು.


ಜನರು ವಿಗ್ರಹಗಳನ್ನು ಮಾಡಿಕೊಳ್ಳುವರು. ಆದರೆ ಅವು ನಿಷ್ಪ್ರಯೋಜಕವಾದ ವಸ್ತುಗಳಾಗಿವೆ. ಜನರು ಆ ವಿಗ್ರಹಗಳನ್ನು ಪ್ರೀತಿಸುತ್ತಾರೆ. ಆದರೆ ಅವುಗಳು ಯಾವ ಪ್ರಯೋಜನಕ್ಕೂ ಬಾರವು. ಆ ಜನರು ಆ ವಿಗ್ರಹದ ಸಾಕ್ಷಿಗಳಾಗಿದ್ದಾರೆ. ಆದರೆ ಅವುಗಳಿಗೆ ದೃಷ್ಟಿ ಇಲ್ಲ. ಅವುಗಳಿಗೆ ಏನೂ ಗೊತ್ತಿಲ್ಲ. ತಮ್ಮ ಕಾರ್ಯಗಳು ನಾಚಿಕೆಗೆಟ್ಟವುಗಳೆಂಬ ತಿಳುವಳಿಕೆಯೂ ಅವರಲ್ಲಿಲ್ಲ.


ನನ್ನ ಒಡೆಯನೇ, ನನ್ನ ರಾಜನೇ, ನನ್ನ ಮಾತುಗಳನ್ನು ಆಲಿಸು! ನೀನು ನನ್ನ ಮೇಲೆ ಕೋಪಗೊಳ್ಳುವಂತೆ ಯೆಹೋವನು ಮಾಡಿರುವುದಾದರೆ ಆತನಿಗೆ ನೈವೇದ್ಯವನ್ನು ಅರ್ಪಿಸೋಣ. ಆದರೆ ನೀನು ನನ್ನ ಮೇಲೆ ಕೋಪಗೊಳ್ಳುವಂತೆ ಜನರು ಮಾಡಿದ್ದರೆ, ಅವರಿಗೆ ಯೆಹೋವನು ಕೇಡಾಗುವಂತೆ ಮಾಡಲಿ. ನನಗೆ ಯೆಹೋವನು ನೀಡಿದ ಭೂಮಿಯನ್ನು ನಾನು ಬಿಡುವಂತೆ ಜನರು ಬಲವಂತಪಡಿಸಿದರು. ‘ಹೋಗು, ಹೊರದೇಶೀಯರೊಂದಿಗೆ ನೆಲೆಸು. ಹೋಗು, ಇತರ ದೇವರುಗಳನ್ನು ಆರಾಧಿಸು’ ಎಂದು ಜನರು ನನಗೆ ಹೇಳಿದರು.


ಆದರೆ ದೇವರು ಅವರಿಗೆ ವಿರೋಧವಾಗಿ, ಆಕಾಶದ ಸುಳ್ಳುದೇವರುಗಳನ್ನು ಪೂಜಿಸುವಂತೆ ಅವರನ್ನು ಬಿಟ್ಟುಬಿಟ್ಟನು. ಇದರ ಬಗ್ಗೆ ಪ್ರವಾದಿಗಳ ಪುಸ್ತಕದಲ್ಲಿ ಹೀಗೆ ಬರೆದಿದೆ: ದೇವರು ಹೀಗೆನ್ನುತ್ತಾನೆ, ‘ಯೆಹೂದ್ಯ ಜನರಾದ ನೀವು ನಲವತ್ತು ವರ್ಷಗಳ ಕಾಲ ಮರಳುಗಾಡಿನಲ್ಲಿದ್ದಾಗ ನನಗೆ ಯಜ್ಞಗಳನ್ನು ಅರ್ಪಿಸಲಿಲ್ಲ; ಕಾಣಿಕೆಗಳನ್ನು ತರಲಿಲ್ಲ.


ಅವರು ತಾರ್ಷೀಷ್ ನಗರದ ಬೆಳ್ಳಿಯಿಂದಲೂ ಧಿಫಜ್ ನಗರದ ಬಂಗಾರದಿಂದಲೂ ತಮ್ಮ ವಿಗ್ರಹಗಳನ್ನು ಮಾಡುತ್ತಾರೆ. ಆ ವಿಗ್ರಹಗಳನ್ನು ಬಡಗಿಗಳು, ಕಮ್ಮಾರರು ಮತ್ತು ಅಕ್ಕಸಾಲಿಗರು ಮಾಡುತ್ತಾರೆ; ಅವರು ನೀಲಿ ಮತ್ತು ಕಂದು ಬಣ್ಣದ ಬಟ್ಟೆಗಳನ್ನು ಆ ವಿಗ್ರಹಗಳಿಗೆ ತೊಡಿಸುತ್ತಾರೆ. ಅವು ಕುಶಲರ ಕೌಶಲ್ಯವಾಗಿವೆ.


ಬೇರೆ ಜನರ ಸಂಪ್ರದಾಯಗಳು ನಿಷ್ಪ್ರಯೋಜಕವಾದವುಗಳಾಗಿವೆ. ಅವರ ವಿಗ್ರಹಗಳು ಅರಣ್ಯದ ಮರವಲ್ಲದೆ ಮತ್ತೇನಲ್ಲ. ಅವರ ವಿಗ್ರಹಗಳು ಬಡಗಿಯು ಉಳಿಯಿಂದ ಮಾಡಲ್ಪಟ್ಟವುಗಳು.


ನಾವು ಮರದ ಮತ್ತು ಕಲ್ಲಿನ ವಸ್ತುಗಳನ್ನು ಪೂಜಿಸುತ್ತಾ ಇತರ ಜನಾಂಗಗಳಂತೆ ಇರೋಣ ಎಂದು ನೀವು ಯೋಚಿಸುತ್ತಲೇ ಇರುತ್ತೀರಿ. ನಿಮ್ಮ ಮನಸ್ಸುಗಳಲ್ಲಿರುವ ಈ ಆಲೋಚನೆಯು ಎಂದಿಗೂ ನೆರವೇರುವುದಿಲ್ಲ.’”


ಆದರೆ ಪೌಲ ಎಂಬುವನು ಏನು ಮಾಡುತ್ತಿದ್ದಾನೆಂಬುದನ್ನು ನೋಡಿರಿ! ಅವನು ಏನು ಹೇಳುತ್ತಿದ್ದಾನೆಂಬುದನ್ನು ಕೇಳಿರಿ! ಪೌಲನು ಅನೇಕ ಜನರ ಮೇಲೆ ಪ್ರಭಾವಬೀರಿ ಅವರನ್ನು ಪರಿವರ್ತಿಸಿದ್ದಾನೆ. ಅವನು ಎಫೆಸದಲ್ಲಿಯೂ ಏಷ್ಯಾ ದೇಶದ ಎಲ್ಲಾ ಕಡೆಗಳಲ್ಲಿಯೂ ಹೀಗೆಯೇ ಮಾಡಿದ್ದಾನೆ. ಮನುಷ್ಯರು ತಯಾರಿಸುವ ದೇವರುಗಳು ನಿಜವಾದ ದೇವರುಗಳಲ್ಲ ಎಂದು ಹೇಳುತ್ತಿದ್ದಾನೆ.


ಈ ಉಪದ್ರವಗಳಿಂದ ಸಾಯದೆ ಉಳಿದ ಜನರು ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಲಿಲ್ಲ. ತಮ್ಮ ಸ್ವಂತ ಕೈಗಳಿಂದ ನಿರ್ಮಿಸಿದ ವಿಗ್ರಹಗಳನ್ನು ತೊರೆದುಬಿಡಲಿಲ್ಲ. ಅವರು ದೆವ್ವಗಳ ಆರಾಧನೆಯನ್ನು ನಿಲ್ಲಿಸಲಿಲ್ಲ. ಚಿನ್ನ, ಬೆಳ್ಳಿ, ತಾಮ್ರ, ಕಲ್ಲು ಮತ್ತು ಮರಗಳಿಂದ ಮಾಡಲ್ಪಟ್ಟು, ನಡೆಯಲಾರದ, ನೋಡಲಾರದ ಮತ್ತು ಕೇಳಲಾರದ ವಿಗ್ರಹಗಳನ್ನು ಪೂಜಿಸುವುದನ್ನು ಅವರು ನಿಲ್ಲಿಸಲಿಲ್ಲ.


ನೀವು ಅವರ ಅಸಹ್ಯವಾದ ವಿಗ್ರಹಗಳನ್ನು ನೋಡಿದಿರಿ. ಅವುಗಳು ಮರ, ಕಲ್ಲು, ಬೆಳ್ಳಿಬಂಗಾರಗಳಿಂದ ಕೆತ್ತಲ್ಪಟ್ಟವುಗಳಾಗಿದ್ದವು.


ಇತರ ದೇವರುಗಳಿಗೆ ಜೀವವಿಲ್ಲ. ಪ್ರೇತಗಳು ಸತ್ತವರೊಳಗಿಂದ ಏಳುವದಿಲ್ಲ. ನೀನು ಅವುಗಳನ್ನು ನಾಶಮಾಡಲು ತೀರ್ಮಾನಿಸಿದೆ. ಅದರ ಬಗ್ಗೆ ನಮಗೆ ನೆನಪು ಹುಟ್ಟಿಸುವ ಎಲ್ಲಾ ವಿಚಾರಗಳನ್ನು ನೀನು ನಾಶಮಾಡಿದೆ.


ಒಬ್ಬನು ಕುಲಿಮೆಯ ಬೆಂಕಿಯ ಮೇಲೆ ಕಬ್ಬಿಣವನ್ನು ಕಾಯಿಸುತ್ತಾನೆ. ಅವನು ತನ್ನ ಸುತ್ತಿಗೆಯಿಂದ ಆ ಲೋಹವನ್ನು ವಿಗ್ರಹವನ್ನಾಗಿ ಮಾಡುತ್ತಾನೆ. ಅವನು ಅದನ್ನು ತನ್ನ ತೋಳ್ಬಲದಿಂದ ಮಾಡುತ್ತಾನೆ. ಆದರೆ ಅವನು ಹಸಿದಾಗ ಅವನ ಶಕ್ತಿಯು ಕಡಿಮೆಯಾಗುತ್ತದೆ. ಆ ಮನುಷ್ಯನು ನೀರನ್ನು ಕುಡಿಯದಿದ್ದರೆ ಅವನು ಬಲಹೀನನಾಗುವನು.


ಆದರೆ ಇಸ್ರೇಲರು ಆತನ ಮಾತಿಗೆ ಕಿವಿಗೊಡದೆ ತಮ್ಮ ಮೊದಲಿನ ಕಾರ್ಯಗಳನ್ನೇ ಮುಂದುವರಿಸಿದರು.


ಕುಶಲಕರ್ಮಿಗಳು ಆ ದೇವರುಗಳನ್ನು ಮಾಡಿದರು. ಆ ಕುಶಲಕರ್ಮಿಗಳೆಲ್ಲಾ ಜನರೇ, ಅವರು ದೇವರುಗಳಲ್ಲ. ಆ ದೇವರುಗಳೆಲ್ಲಾ ಒಟ್ಟಾಗಿ ಸೇರಿ ತಮ್ಮೊಳಗೆ ಮಾತಾಡಿಕೊಂಡರೆ ಆಗ ಅವುಗಳಿಗೆ ನಾಚಿಕೆಯೂ ಭಯವೂ ಉಂಟಾಗುವದು.


ಬೇರೆ ಜನಾಂಗದವರ ವಿಗ್ರಹಗಳು ಸೌತೆಕಾಯಿ ತೋಟಗಳಲ್ಲಿ ನಿಲ್ಲಿಸುವ ಬೆದರುಕಂಬಗಳಂತಿವೆ. ಅವರ ವಿಗ್ರಹಗಳು ಮಾತಾಡಲಾರವು; ಅವು ನಡೆಯಲಾರವು. ಜನರು ಆ ವಿಗ್ರಹಗಳನ್ನು ಹೊತ್ತುಕೊಂಡು ಹೋಗಬೇಕು. ಆದ್ದರಿಂದ ಆ ವಿಗ್ರಹಗಳಿಗೆ ಹೆದರಬೇಡಿರಿ. ಅವು ನಿಮಗೆ ಕೇಡನ್ನೂ ಮಾಡಲಾರವು; ಸಹಾಯವನ್ನೂ ಮಾಡಲಾರವು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು