Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 4:29 - ಪರಿಶುದ್ದ ಬೈಬಲ್‌

29 ಆಗ ನೀವು ನಿಮ್ಮ ದೇವರಾದ ಯೆಹೋವನನ್ನು ಹುಡುಕುವಿರಿ. ನೀವು ನಿಮ್ಮ ಹೃದಯ ಆತ್ಮಗಳಿಂದ ಹುಡುಕಿದಾಗ ಆತನು ನಿಮಗೆ ಸಿಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆಗ ಅಲ್ಲಿಂದಲಾದರೂ ನೀವು ಸಂಪೂರ್ಣ ಹೃದಯದಿಂದಲೂ, ಪೂರ್ಣ ಮನಸ್ಸಿನಿಂದಲೂ ನಿಮ್ಮ ದೇವರಾದ ಯೆಹೋವನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 “ಅಲ್ಲಿಂದಾದರೂ ನೀವು ಪೂರ್ಣಹೃದಯದಿಂದ, ಪೂರ್ಣಮನಸ್ಸಿನಿಂದ ನಿಮ್ಮ ದೇವರಾದ ಸರ್ವೇಶ್ವರನನ್ನು ಅರಸಿದರೆ ಅವರು ನಿಮಗೆ ಸಿಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಅಲ್ಲಿಂದಲಾದರೂ ನೀವು ಸಂಪೂರ್ಣ ಹೃದಯದಿಂದಲೂ ಮನಸ್ಸಿನಿಂದಲೂ ನಿಮ್ಮ ದೇವರಾದ ಯೆಹೋವನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಆದರೆ ಅಲ್ಲಿಂದಲೂ ನೀವು ನಿಮ್ಮ ದೇವರಾದ ಯೆಹೋವ ದೇವರನ್ನು, ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ಹುಡುಕಿದರೆ, ಅವರನ್ನು ಕಂಡುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 4:29
31 ತಿಳಿವುಗಳ ಹೋಲಿಕೆ  

ಆತನ ಒಡಂಬಡಿಕೆಗೆ ಸಂಪೂರ್ಣಹೃದಯದಿಂದ ವಿಧೇಯರಾಗುವವರು ಧನ್ಯರು.


ಆದರೆ ಇಸ್ರೇಲರು ತಮಗೆ ಕಷ್ಟಬಂದಾಗ ದೇವರ ಕಡೆಗೆ ತಿರುಗಿದರು. ಆತನೇ ಇಸ್ರೇಲಿನ ದೇವರು. ಅವರು ಆತನನ್ನು ಹುಡುಕಿದಾಗ ಆತನು ಅವರಿಗೆ ಸಿಕ್ಕಿದನು.


ನಾನು ಪೂರ್ಣಹೃದಯದಿಂದ ದೇವರ ಸೇವೆಮಾಡುವೆ; ದೇವರೇ, ನಿನ್ನ ಆಜ್ಞೆಗಳಿಗೆ ವಿಧೇಯನಾಗಲು ನನಗೆ ಸಹಾಯಮಾಡು.


ಆತನು ಹೇಳಿದಂತೆ ನೀವು ನಡೆದುಕೊಳ್ಳಬೇಕು. ಈ ಧರ್ಮೋಪದೇಶ ಪುಸ್ತಕದಲ್ಲಿ ಬರೆದಿರುವ ಬೋಧನೆಗಳನ್ನು ನೀವು ಅನುಸರಿಸಬೇಕು. ನಿಮ್ಮ ಪೂರ್ಣಪ್ರಾಣದಿಂದಲೂ ಪೂರ್ಣಆತ್ಮದಿಂದಲೂ ನಿಮ್ಮ ದೇವರಾದ ಯೆಹೋವನನ್ನು ಆರಾಧಿಸಬೇಕು; ಆಗ ನಿಮಗೆ ಈ ಎಲ್ಲಾ ಒಳ್ಳೆಯ ಸಂಗತಿಗಳು ಸಂಭವಿಸುತ್ತವೆ.


ಇದು ಯೆಹೋವನ ಸಂದೇಶ: “ನಿಮ್ಮ ಪೂರ್ಣಹೃದಯದಿಂದ ನನ್ನ ಬಳಿಗೆ ಬನ್ನಿರಿ, ನೀವು ದುಷ್ಟತ್ವವನ್ನು ನಡಿಸಿರುವದರಿಂದ ದುಃಖಿಸಿರಿ, ಅಳಿರಿ, ಉಪವಾಸ ಮಾಡಿರಿ.


ಯೆಹೋವನೇ, ಪೂರ್ಣಹೃದಯದಿಂದ ನಿನಗೆ ಮೊರೆಯಿಟ್ಟಿದ್ದೇನೆ; ಸದುತ್ತರವನ್ನು ದಯಪಾಲಿಸು. ನಾನು ನಿನ್ನ ಆಜ್ಞೆಗಳಿಗೆ ವಿಧೇಯನಾಗುವೆನು.


ನಿನ್ನನ್ನೇ ಸಂಪೂರ್ಣವಾಗಿ ಆಶ್ರಯಿಸಿಕೊಂಡಿದ್ದೇನೆ. ನಿನ್ನ ವಾಗ್ದಾನದಂತೆ ನನಗೆ ಕರುಣೆತೋರು.


ಇಸ್ರೇಲಿಗೆ ಇಷ್ಟೆಲ್ಲಾ ದಂಡನೆ ಆದರೂ ಅವಳ ಸೋದರಿಯಾದ ಯೆಹೂದ ತುಂಬುಹೃದಯದಿಂದ ನನ್ನಲ್ಲಿಗೆ ಬರಲಿಲ್ಲ. ಅವಳು ನನ್ನಲ್ಲಿಗೆ ತಿರುಗಿ ಬರುವ ನಟನೆಯನ್ನು ಮಾತ್ರ ಮಾಡಿದಳು. ಇದು ಯೆಹೋವನಾದ ನನ್ನ ನುಡಿ” ಎಂದು ಹೇಳಿದನು.


ಆದರೆ ನೀವು ಹಿಂತಿರುಗಿ ನನ್ನ ಬಳಿಗೆ ಬಂದು, ನನ್ನ ಕಟ್ಟಳೆಗಳಿಗೆ ವಿಧೇಯರಾದರೆ, ನಿಮ್ಮ ಜನರನ್ನು ಬಲವಂತವಾಗಿ ಭೂಲೋಕದ ಕಟ್ಟಕಡೆಯವರೆಗೆ ಕೊಂಡೊಯ್ದಿದ್ದರೂ ಅಲ್ಲಿಂದ ನನ್ನ ಹೆಸರನ್ನು ನೆಲೆಗೊಳಿಸುವುದಕ್ಕಾಗಿ ನಾನು ಆರಿಸಿಕೊಂಡ ಸ್ಥಳಕ್ಕೆ ಕರೆದುಕೊಂಡು ಬರುವೆನು” ಎಂದು ಹೇಳಿರುವೆ.


ಹಿಜ್ಕೀಯನು ತಾನು ಪ್ರಾರಂಭಿಸಿದ ಪ್ರತಿಯೊಂದು ಕಾರ್ಯಗಳನ್ನೂ ದೇವಾಲಯದ ಕಾರ್ಯಗಳನ್ನೂ ದೇವರ ಕಟ್ಟಳೆಗಳನ್ನೂ ಅನುಸರಿಸುವದನ್ನು ಪೂರ್ಣಹೃದಯದಿಂದ ಮಾಡಿ ಯಶಸ್ವಿಯಾದನು.


ಯೆಹೂದದ ಎಲ್ಲಾ ಜನರು ತಾವು ಯೆಹೋವನಿಗೆ ಮಾಡಿದ ಪ್ರಮಾಣದ ನಿಮಿತ್ತ ಸಂತೋಷಪಟ್ಟರು. ಯಾಕೆಂದರೆ ಅವರು ತಮ್ಮ ಪೂರ್ಣ ಹೃದಯದಿಂದ ಪ್ರಮಾಣಮಾಡಿದ್ದರು. ಅವರು ಯೆಹೋವನನ್ನು ಪೂರ್ಣ ಮನಸ್ಸಿನಿಂದ ಹಿಂಬಾಲಿಸಿದರು. ಅವರು ಆತನನ್ನು ಹುಡುಕಿದಾಗ ಆತನು ಅವರಿಗೆ ಪ್ರಸನ್ನನಾಗಿ ಅವರಿಗೆ ಸಮಾಧಾನವನ್ನು ಕೊಟ್ಟನು.


ತಮ್ಮ ಪೂರ್ವಿಕರು ಸೇವೆಮಾಡಿದ ದೇವರೊಂದಿಗೆ ಅಲ್ಲಿ ಅವರು ಒಡಂಬಡಿಕೆ ಮಾಡಿಕೊಂಡು ತಾವು ಪೂರ್ಣ ಹೃದಯದಿಂದಲೂ ಪೂರ್ಣ ಆತ್ಮದಿಂದಲೂ ಆತನ ಸೇವೆ ಮಾಡುವುದಾಗಿ ಪ್ರಮಾಣಮಾಡಿದರು.


ಆದರೆ ಯೇಹು ಇಸ್ರೇಲಿನ ದೇವರಾದ ಯೆಹೋವನ ನಿಯಮಗಳನ್ನು ಪೂರ್ಣಮನಸ್ಸಿನಿಂದಲೂ ಎಚ್ಚರಿಕೆಯಿಂದಲೂ ಪಾಲಿಸಲಿಲ್ಲ. ಇಸ್ರೇಲಿನ ಪಾಪಗಳಿಗೆ ಪ್ರೇರಕನಾದ ಯಾರೊಬ್ಬಾಮನ ಪಾಪಗಳನ್ನು ಯೇಹುವು ಮಾಡುವುದನ್ನು ನಿಲ್ಲಿಸಲೇ ಇಲ್ಲ.


ರಾಜನು ಸ್ತಂಭದ ಬಳಿ ನಿಂತು ತಾನು ಯೆಹೋವನ ಮಾರ್ಗದಲ್ಲಿ ನಡೆಯುವುದಾಗಿಯೂ ಆತನ ಆಜ್ಞೆಗಳಿಗೆ, ಒಡಂಬಡಿಕೆಗೆ ಮತ್ತು ಆತನ ನಿಯಮಗಳಿಗೆ ಪೂರ್ಣಹೃದಯದಿಂದಲೂ ಪೂರ್ಣಆತ್ಮದಿಂದಲೂ ವಿಧೇಯನಾಗಿರುವುದಾಗಿಯೂ ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವುದಾಗಿಯೂ ಯೆಹೋವನಿಗೆ ಪ್ರಮಾಣಮಾಡಿದನು. ರಾಜನ ಪ್ರಮಾಣಕ್ಕೆ ಬೆಂಬಲ ನೀಡಲು ಜನರೆಲ್ಲರೂ ಎದ್ದುನಿಂತರು.


ನಿಮ್ಮ ದೇವರಾದ ಯೆಹೋವನನ್ನು ನಿಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು.


“ಇಸ್ರೇಲ್ ಜನರೇ, ಕೇಳಿರಿ! ನಿಮ್ಮ ದೇವರಾದ ಯೆಹೋವನು ನಿಮ್ಮಿಂದ ನಿಜವಾಗಿಯೂ ಅಪೇಕ್ಷಿಸುವುದೇನು? ನೀವು ಆತನನ್ನು ಗೌರವಿಸಬೇಕೆಂದೂ ಆತನ ಆಜ್ಞಾವಿಧಿಗಳಿಗೆ ವಿಧೇಯರಾಗಬೇಕೆಂದೂ ಅಪೇಕ್ಷಿಸುತ್ತಾನೆ. ನೀವು ಆತನನ್ನು ಪ್ರೀತಿಸಿ, ನಿಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಆತನ ಸೇವೆ ಮಾಡಬೇಕೆಂದು ಆತನು ಅಪೇಕ್ಷಿಸುತ್ತಾನೆ.


“ಯೆಹೋವನು ಹೀಗೆನ್ನುತ್ತಾನೆ: ‘ಇಂದು ನಾನು ನಿಮಗೆ ಕೊಟ್ಟ ಆಜ್ಞೆಗಳನ್ನೆಲ್ಲ ಗಮನವಿಟ್ಟು ಕೇಳಿರಿ: ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ನಿಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಆತನ ಸೇವೆ ಮಾಡಬೇಕು. ಹೀಗೆ ಮಾಡಿದರೆ


“ಈ ಎಲ್ಲಾ ಕಟ್ಟಳೆಗಳನ್ನು ಮತ್ತು ನಿಯಮಗಳನ್ನು ಅನುಸರಿಸಲು ನಿಮ್ಮ ದೇವರಾದ ಯೆಹೋವನು ಇಂದು ನಿಮಗೆ ಆಜ್ಞಾಪಿಸುತ್ತಾನೆ. ನಿಮ್ಮ ಪೂರ್ಣಹೃದಯದಿಂದಲೂ ಆತ್ಮದಿಂದಲೂ ಅವುಗಳನ್ನು ಎಚ್ಚರಿಕೆಯಿಂದ ಅನುಸರಿಸಿರಿ.


ಆದರೆ ಮೋಶೆಯು ನಿಮಗೆ ಕೊಟ್ಟ ಧರ್ಮೋಪದೇಶವನ್ನು ಮತ್ತು ವಿಧಿಗಳನ್ನು ಪಾಲಿಸಬೇಕೆಂಬುದನ್ನು ಜ್ಞಾಪಕದಲ್ಲಿಡಿ. ನೀವು ನಿಮ್ಮ ದೇವರಾದ ಯೆಹೋವನನ್ನು ನಿಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪ್ರೀತಿಸಬೇಕು ಮತ್ತು ಆತನ ಸೇವೆ ಮಾಡಬೇಕು. ನೀವು ಆತನನ್ನು ಅನುಸರಿಸುತ್ತಾ ನಿಮ್ಮಿಂದ ಸಾಧ್ಯವಾದಷ್ಟು ಆತನ ಸೇವೆ ಮಾಡಬೇಕು” ಎಂದು ಹೇಳಿದನು.


ಆದ್ದರಿಂದ ಅವರ ಶತ್ರುಗಳು ಅವರನ್ನು ಸದೆಬಡಿಯುವಂತೆ ಮಾಡಿದೆ. ವೈರಿಗಳು ಅವರಿಗೆ ತುಂಬಾ ಕಷ್ಟಕೊಟ್ಟರು. ಕಷ್ಟಬಂದಾಗ ನಮ್ಮ ಪೂರ್ವಿಕರು ನಿನಗೆ ಮೊರೆಯಿಟ್ಟರು. ಪರಲೋಕದಿಂದ ನೀನು ಅವರನ್ನು ಆಲೈಸಿದೆ. ನಿನ್ನ ಮಹಾಕರುಣೆಗನುಸಾರವಾಗಿ ನೀನು ಅವರ ಬಳಿಗೆ ಜನರನ್ನು ಕಳುಹಿಸಿ ಅವರನ್ನು ಅವರ ವೈರಿಗಳ ಕೈಗಳಿಂದ ರಕ್ಷಿಸಿದೆ.


ನೀವು ಖಡ್ಗಗಳಿಂದ ತಪ್ಪಿಸಿಕೊಂಡಿರಿ. ನೀವು ಅವಸರ ಮಾಡಿ ಬಾಬಿಲೋನನ್ನು ಬಿಡಬೇಕು. ತಡೆಯಬೇಡಿ, ನೀವು ಬಹಳ ದೂರಪ್ರದೇಶದಲ್ಲಿ ಇದ್ದೀರಿ. ಆದರೆ ನೀವು ಇರುವಲ್ಲಿಯೇ ಯೆಹೋವನನ್ನು ಸ್ಮರಿಸಿರಿ; ಜೆರುಸಲೇಮನ್ನೂ ಸ್ಮರಿಸಿಕೊಳ್ಳಿರಿ.


ಆಗ ಉಳಿದವರು ಸೆರೆಹಿಡಿಯಲ್ಪಡುವರು. ಅವರು ಪರದೇಶಕ್ಕೆ ಒಯ್ಯಲ್ಪಟ್ಟು ಅಲ್ಲಿ ವಾಸಿಸುವರು. ಅಲ್ಲಿ ಅಳಿದುಳಿದ ಜನರು ನನ್ನನ್ನು ಜ್ಞಾಪಿಸಿಕೊಳ್ಳುವರು ಮತ್ತು ಅವರ ಅಪನಂಬಿಗಸ್ತಿಕೆಯ ಹೃದಯವನ್ನು ನಾನು ಜಜ್ಜಿದೆನು. ತಾವು ಮಾಡಿದ ಕೆಟ್ಟ ಕೆಲಸಗಳಿಗಾಗಿ ತಮ್ಮನ್ನು ತಾವೇ ದ್ವೇಷಿಸುವರು. ಹಿಂದಿನ ಕಾಲದಲ್ಲಿ ಅವರು ನನ್ನಿಂದ ದೂರವಾಗಿ ನನ್ನನ್ನು ತ್ಯಜಿಸಿದರು. ತಮ್ಮ ಹೊಲಸು ವಿಗ್ರಹಗಳ ಹಿಂದೆ ಹೋದರು. ಗಂಡನನ್ನು ಬಿಟ್ಟು ಬೇರೆ ಪುರುಷನ ಸಂಗಡ ಓಡುವ ಸ್ತ್ರೀಯಂತೆ ಅವರಿದ್ದರು. ಅವರು ಇನ್ನೂ ಅನೇಕ ಅಸಹ್ಯಕರವಾದ ಕಾರ್ಯಗಳನ್ನು ಮಾಡಿದರು.


ಇಸ್ರೇಲ್ ಜನಾಂಗಕ್ಕೆ ಯೆಹೋವನು ಹೀಗೆನ್ನುತ್ತಾನೆ: “ನನ್ನನ್ನು ಹುಡುಕುತ್ತಾ ಬಂದು ಬದುಕುವವನಾಗು.


ಸಮುವೇಲನು ಇಸ್ರೇಲರಿಗೆ, “ನೀವು ಯೆಹೋವನ ಬಳಿಗೆ ಪೂರ್ಣಮನಸ್ಸಿನಿಂದ ಮತ್ತೆ ಬರುವುದಾದರೆ ನಿಮ್ಮ ಬಳಿಯಿರುವ ಅನ್ಯದೇವರುಗಳನ್ನು ಎಸೆಯಬೇಕು. ನೀವು ಅಷ್ಟೋರೆತ್ ದೇವತೆಯ ವಿಗ್ರಹಗಳನ್ನು ತ್ಯಜಿಸಬೇಕು. ನೀವು ನಿಮ್ಮನ್ನು ಯೆಹೋವನಿಗೆ ಸಂಪೂರ್ಣವಾಗಿ ಒಪ್ಪಿಸಿಕೊಟ್ಟು ಆತನ ಸೇವೆಯನ್ನು ಮಾತ್ರ ಮಾಡಬೇಕು. ಆಗ ಆತನು ನಿಮ್ಮನ್ನು ಫಿಲಿಷ್ಟಿಯರಿಂದ ರಕ್ಷಿಸುತ್ತಾನೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು