Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 4:31 - ಪರಿಶುದ್ದ ಬೈಬಲ್‌

31 ನಿಮ್ಮ ದೇವರಾದ ಯೆಹೋವನು ಕರುಣೆಯುಳ್ಳ ದೇವರಾಗಿದ್ದಾನೆ. ನಿಮ್ಮನ್ನು ಅಲ್ಲಿಯೇ ಇರಗೊಡಿಸುವುದಿಲ್ಲ; ನಿಮ್ಮನ್ನು ಸಂಪೂರ್ಣವಾಗಿ ನಾಶಪಡಿಸುವುದಿಲ್ಲ; ನಿಮ್ಮ ಪೂರ್ವಿಕರೊಂದಿಗೆ ಮಾಡಿದ ಒಡಂಬಡಿಕೆಯನ್ನು ಆತನು ಮರೆತುಬಿಡುವವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ನಿಮ್ಮ ದೇವರಾದ ಯೆಹೋವನು ಕನಿಕರವುಳ್ಳ ದೇವರಾದುದರಿಂದ ಆತನು ನಿಮ್ಮನ್ನು ಅಲಕ್ಷ್ಯಮಾಡುವುದಿಲ್ಲ, ವಿನಾಶಕ್ಕೆ ಬಿಡುವುದಿಲ್ಲ. ಆತನು ನಿಮ್ಮ ಪೂರ್ವಿಕರ ಸಂಗಡ ಪ್ರಮಾಣಪೂರ್ವಕವಾಗಿ ಮಾಡಿಕೊಂಡ ಒಡಂಬಡಿಕೆಯನ್ನು ಮರೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ನಿಮ್ಮ ದೇವರಾದ ಸರ್ವೇಶ್ವರ ದಯಾಮಯ ದೇವರು. ಅವರು ನಿಮ್ಮನ್ನು ಅಲಕ್ಷ್ಯ ಮಾಡುವುದಿಲ್ಲ. ವಿನಾಶಕ್ಕೆ ಬಿಟ್ಟುಬಿಡುವುದಿಲ್ಲ. ನಿಮ್ಮ ಪೂರ್ವಜರ ಸಂಗಡ ಅವರು ಪ್ರಮಾಣಪೂರ್ವಕವಾಗಿ ಮಾಡಿಕೊಂಡ ಒಡಂಬಡಿಕೆಯನ್ನು ಮರೆತುಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ನಿಮ್ಮ ದೇವರಾದ ಯೆಹೋವನು ಕನಿಕರವುಳ್ಳ ದೇವರಾದದರಿಂದ ಆತನು ನಿಮ್ಮನ್ನು ಅಲಕ್ಷ್ಯಮಾಡುವದಿಲ್ಲ, ನಾಶನಕ್ಕೆ ಬಿಡುವದಿಲ್ಲ; ತಾನು ನಿಮ್ಮ ಪಿತೃಗಳ ಸಂಗಡ ಪ್ರಮಾಣಪೂರ್ವಕವಾಗಿ ಮಾಡಿಕೊಂಡ ಒಡಂಬಡಿಕೆಯನ್ನು ಮರೆಯುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ನಿಮ್ಮ ದೇವರಾದ ಯೆಹೋವ ದೇವರು ಕರುಣೆಯುಳ್ಳ ದೇವರು, ಅವರು ನಿಮ್ಮನ್ನು ಕೈಬಿಡುವುದಿಲ್ಲ, ನಾಶಮಾಡುವುದಿಲ್ಲ, ಅವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಒಡಂಬಡಿಕೆಯನ್ನು ಮರೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 4:31
28 ತಿಳಿವುಗಳ ಹೋಲಿಕೆ  

ಯೆಹೋವನು ಒಳ್ಳೆಯವನೂ ಕೃಪಾಪೂರ್ಣನೂ ಆಗಿದ್ದಾನೆ. ನಮ್ಮ ದೇವರು ಕರುಣಾಮಯನಾಗಿದ್ದಾನೆ.


ಯೆಹೋವನು ನಿನ್ನನ್ನು ನಡೆಸುತ್ತಾನೆ, ಆತನು ತಾನೇ ನಿನ್ನೊಂದಿಗಿರುವನು. ಆತನು ನಿನ್ನ ಕೈಬಿಡುವುದಿಲ್ಲ, ನಿನ್ನನ್ನು ತೊರೆಯುವುದಿಲ್ಲ. ಆದ್ದರಿಂದ ಚಿಂತಿಸಬೇಡ, ಭಯಪಡಬೇಡ” ಎಂದು ಹೇಳಿದನು.


ಯೋನನು ಯೆಹೋವನಿಗೆ ದೂರು ಹೇಳುತ್ತಾ, “ಇದು ಹೀಗಾಗುತ್ತದೆಯೆಂದು ನನಗೆ ಗೊತ್ತಿತ್ತು. ನಾನು ನನ್ನ ದೇಶದಲ್ಲಿದ್ದೆ. ಇಲ್ಲಿಗೆ ಬರಲು ನನಗೆ ಹೇಳಿದವನು ನೀನೇ. ಈ ದುಷ್ಟಪಟ್ಟಣದ ಜನರನ್ನು ನೀನು ಕ್ಷಮಿಸುತ್ತೀ ಎಂದು ನನಗೆ ಆಗಲೇ ಗೊತ್ತಿತ್ತು. ಆದ್ದರಿಂದ ನಾನು ತಾರ್ಷೀಷಿಗೆ ಓಡಿಹೋಗಲು ನಿರ್ಧರಿಸಿದೆನು. ನೀನು ದಯಾಪರನಾದ, ಕೃಪಾಪೂರ್ಣನಾದ, ಕೋಪಗೊಳ್ಳುವುದರಲ್ಲಿ ನಿಧಾನವಾದ ಮತ್ತು ಮಹಾಕನಿಕರವುಳ್ಳ ದೇವರೆಂದು ನನಗೆ ಗೊತ್ತಿತ್ತು. ಆ ಜನರು ಪಾಪ ಮಾಡುವದನ್ನು ನಿಲ್ಲಿಸಿದರೆ, ನೀನು ನಿನ್ನ ಯೋಜನೆಯಂತೆ ಅವರನ್ನು ನಾಶಮಾಡುವುದಿಲ್ಲ ಎಂದು ನನಗೆ ಗೊತ್ತಿತ್ತು.


“ಆದರೂ ನೀನು ದಯಾವಂತನು, ಅವರನ್ನು ಸಂಪೂರ್ಣವಾಗಿ ನಾಶಮಾಡಲಿಲ್ಲ. ಅವರನ್ನು ತೊರೆಯಲಿಲ್ಲ. ನೀನು ಅಂಥಾ ದಯಾಪರನಾದ ದೇವರು.


ನೀವು ಯೆಹೋವನಿಗೆ ವಿಧೇಯರಾದರೆ ನಿಮ್ಮ ಮಕ್ಕಳೂ ಬಂಧುಗಳೂ ತಮ್ಮನ್ನು ಸೆರೆಹಿಡಿದವರಿಂದ ಕರುಣೆಯನ್ನು ಹೊಂದಿ ಮತ್ತೆ ಈ ದೇಶಕ್ಕೆ ಬರುವರು. ದೇವರಾದ ಯೆಹೋವನು ದಯೆಯೂ ಕರುಣೆಯೂ ಉಳ್ಳವನಾಗಿದ್ದಾನೆ. ನೀವು ಆತನ ಕಡೆಗೆ ತಿರುಗಿದರೆ ಆತನು ನಿಮ್ಮನ್ನು ತಳ್ಳಿಬಿಡುವುದಿಲ್ಲ.”


ಆಗ ನಾನು ಯಾಕೋಬನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನೂ ಇಸಾಕನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನೂ ಅಬ್ರಹಾಮನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನೂ ದೇಶವನ್ನೂ ಜ್ಞಾಪಕಮಾಡಿಕೊಳ್ಳುವೆನು.


ಧೈರ್ಯವಾಗಿರಿ, ಶಕ್ತಿಹೊಂದಿದವರಾಗಿರಿ, ಆ ಜನರಿಗೆ ಹೆದರಬೇಡಿರಿ. ಯಾಕೆಂದರೆ ದೇವರಾದ ಯೆಹೋವನು ನಿಮ್ಮ ಸಂಗಡ ಇರುವನು. ಆತನು ನಿಮ್ಮ ಕೈ ಬಿಡುವುದಿಲ್ಲ, ನಿಮ್ಮನ್ನು ತೊರೆಯುವುದಿಲ್ಲ.”


ಕರುಣೆ ತೋರುವುದಾಗಿ ನಮ್ಮ ಪಿತೃಗಳಿಗೆ ನೀಡಿದ ತನ್ನ ಪವಿತ್ರ ವಾಗ್ದಾನವನ್ನು ಆತನು ಜ್ಞಾಪಿಸಿಕೊಂಡಿದ್ದಾನೆ.


ಯೆಹೋವನೇ, ನಿನ್ನ ಹೆಸರಿನ ಒಳ್ಳೆಯತನ ಉಳಿಸಿಕೊಳ್ಳುವದಕ್ಕಾದರೂ ನಮ್ಮನ್ನು ದೂರ ತಳ್ಳಬೇಡ. ನಿನ್ನ ಮಹಿಮೆಯ ಸಿಂಹಾಸನದ ಗೌರವವನ್ನು ಕುಂದಿಸಬೇಡ. ನೀನು ನಮ್ಮೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಸ್ಮರಿಸಿಕೊ. ಆ ಒಡಂಬಡಿಕೆಯನ್ನು ಮುರಿಯಬೇಡ.


ಆತನು ತನ್ನ ಜನರನ್ನು ರಕ್ಷಿಸಿ ಅವರೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಂಡಿದ್ದಾನೆ. ಆತನ ಹೆಸರು ಅದ್ಭುತವಾಗಿಯೂ ಪರಿಶುದ್ಧವಾಗಿಯೂ ಇದೆ.


ಆತನು ತನ್ನ ಭಕ್ತರಿಗೆ ಆಹಾರವನ್ನು ಒದಗಿಸುವನು; ಆತನು ತನ್ನ ಒಡಂಬಡಿಕೆಯನ್ನು ಯಾವಾಗಲೂ ಜ್ಞಾಪಿಸಿಕೊಳ್ಳುವನು.


ನಾನು ಮೋಶೆಯ ಸಂಗಡ ಇದ್ದಂತೆ ನಿನ್ನ ಸಂಗಡವೂ ಇರುತ್ತೇನೆ. ನಿನ್ನ ಜೀವಮಾನದಲ್ಲೆಲ್ಲಾ ಯಾವನೂ ನಿನ್ನನ್ನು ತಡೆಯಲಾರನು. ನಾನು ನಿನ್ನನ್ನು ಕೈಬಿಡುವುದಿಲ್ಲ; ತೊರೆದುಬಿಡುವುದಿಲ್ಲ” ಎಂದು ಹೇಳಿದನು.


ನೀನು ನಿನ್ನ ವಿಷಯದಲ್ಲಿ ‘ಯೆಹೋವನು ದೀರ್ಘಶಾಂತನು, ಬಹುಪ್ರೀತಿಯುಳ್ಳವನು, ಅಪರಾಧ, ಪಾಪಗಳನ್ನು ಕ್ಷಮಿಸುವವನಾಗಿದ್ದರೂ ಎಲ್ಲಾ ದಂಡನೆಯನ್ನು ರದ್ದುಪಡಿಸದವನು, ತಂದೆಗಳ ಪಾಪಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನು’ ಎಂದು ನೀನೇ ಹೇಳಿರುವಿಯಲ್ಲಾ!


ಅವರಿಗೋಸ್ಕರ ಅವರ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ಅವರಿಗೆ ಹಿತವನ್ನು ಮಾಡುವೆ. ನಾನು ಅವರ ದೇವರಾಗಿರಬೇಕೆಂದು ಅವರ ಪೂರ್ವಿಕರನ್ನು ಈಜಿಪ್ಟ್ ದೇಶದಿಂದ ಹೊರಗೆ ಕರೆದುಕೊಂಡು ಬಂದೆನು. ಬೇರೆ ಜನಾಂಗಗಳವರು ಆ ಸಂಗತಿಗಳನ್ನು ನೋಡಿದರು. ನಾನೇ ಯೆಹೋವನು!”


ನಂತರ ನಾನು ಈ ಪ್ರಾರ್ಥನೆ ಮಾಡಿದೆನು: “ಪರಲೋಕದ ದೇವರಾದ ಯೆಹೋವನೇ, ನೀನು ಮಹಾ ದೇವರೂ ಪರಾಕ್ರಮವುಳ್ಳ ದೇವರೂ ಆಗಿರುವಿ. ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳಿಗೆ ವಿಧೇಯರಾಗುವವರಿಗೆ ನೀನು ಮಾಡಿದ ವಾಗ್ದಾನವನ್ನು ನೆರವೇರಿಸುವವನಾಗಿರುವಿ.


ಆತನು ತನ್ನ ಒಡಂಬಡಿಕೆಯನ್ನು ಯಾವಾಗಲೂ ಜ್ಞಾಪಿಸಿಕೊಳ್ಳುವನು. ಆತನು ತನ್ನ ಆಜ್ಞೆಗಳನ್ನು ಸಾವಿರ ತಲೆಮಾರುಗಳವರೆಗೂ ಜ್ಞಾಪಿಸಿಕೊಳ್ಳುವನು.


ಯೆಹೋವನೇ, ಕನಿಕರವೂ ದಯೆಯೂ ಉಳ್ಳ ದೇವರು ನೀನೇ. ನೀನು ತಾಳ್ಮೆಯುಳ್ಳವನೂ ನಂಬಿಗಸ್ತನೂ ಪ್ರೀತಿಪೂರ್ಣನೂ ಆಗಿರುವೆ.


ಯೆಹೋವನೇ, ನೀನು ಒಳ್ಳೆಯವನೂ ಕರುಣಾಮಯನೂ ಆಗಿರುವೆ. ನಿನ್ನ ಜನರು ಸಹಾಯಕ್ಕಾಗಿ ನಿನಗೆ ಮೊರೆಯಿಡುವರು. ನೀನು ಅವರನ್ನು ನಿಜವಾಗಿಯೂ ಪ್ರೀತಿಸುವಿ.


ದಾವೀದನು ತನ್ನ ಮಗನಾದ ಸೊಲೊಮೋನನಿಗೆ, “ಧೈರ್ಯವಾಗಿದ್ದು ಬಲಗೊಳ್ಳು ಮತ್ತು ಈ ಕಾರ್ಯವನ್ನು ಮಾಡಿ ಮುಗಿಸು. ನನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುವದರಿಂದ ನೀನು ಭಯಪಡುವ ಕಾರಣವೇ ಇಲ್ಲ. ಆತನು ನಿನ್ನೊಂದಿಗಿದ್ದು ಆಲಯವನ್ನು ಸಂಪೂರ್ಣ ಮಾಡುವಂತೆ ನಿನ್ನನ್ನು ನಡೆಸುತ್ತಾನೆ. ನೀನು ಯೆಹೋವನ ಆಲಯವನ್ನು ಕಟ್ಟುವೆ.


ನಿನ್ನ ಹಾಗೆ ಬೇರೆ ಯಾವ ದೇವರೂ ಇಲ್ಲ. ಪಾಪದಲ್ಲಿ ಬಿದ್ದವರನ್ನು ನೀನು ಕ್ಷಮಿಸುವೆ. ನಿನ್ನ ಜನಶೇಷವನ್ನು ಮನ್ನಿಸುವೆ. ನೀನು ನಿತ್ಯಕ್ಕೂ ಕೋಪಿಸುವದಿಲ್ಲ. ಯಾಕೆಂದರೆ ದಯೆತೋರಿಸುವದರಲ್ಲಿ ನೀನು ಸಂತೋಷಿಸುವೆ.


ಹಣದ ಮೇಲೆ ನಿಮಗಿರುವ ವ್ಯಾಮೋಹವನ್ನು ದೂರತಳ್ಳಿರಿ. ನಿಮ್ಮಲ್ಲಿರುವ ವಸ್ತುಗಳಲ್ಲಿ ತೃಪ್ತಿಯಿಂದಿರಿ. ದೇವರು ಹೀಗೆ ಹೇಳಿದ್ದಾನೆ: “ನಾನು ನಿಮ್ಮನ್ನು ಎಂದೆಂದಿಗೂ ಕೈಬಿಡುವುದಿಲ್ಲ. ನಾನು ನಿಮ್ಮನ್ನು ಎಂದೆಂದಿಗೂ ತೊರೆದುಬಿಡುವುದಿಲ್ಲ.”


ಅವರು ನಿಜವಾಗಿ ಪಾಪಮಾಡಿದ್ದರೂ ಸಹಾಯಕ್ಕಾಗಿ ಅವರು ನನ್ನ ಬಳಿಗೆ ಬಂದರೆ ನಾನು ಅವರಿಗೆ ವಿಮುಖನಾಗುವುದಿಲ್ಲ. ಅವರು ತಮ್ಮ ಶತ್ರುಗಳ ದೇಶದಲ್ಲಿದ್ದರೂ ನಾನು ಅವರಿಗೆ ಕಿವಿಗೊಡುವೆನು. ಅವರನ್ನು ಸಂಪೂರ್ಣವಾಗಿ ನಾಶಮಾಡುವುದಿಲ್ಲ. ಅವರೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಮರೆಯುವುದಿಲ್ಲ. ಯಾಕೆಂದರೆ ನಾನೇ ಅವರ ದೇವರಾದ ಯೆಹೋವನು!


ಯೆಹೋವನು ಕನಿಕರವುಳ್ಳವನೂ ಕೃಪಾಪೂರ್ಣನೂ ತಾಳ್ಮೆಯುಳ್ಳವನೂ ಪ್ರೀತಿಪೂರ್ಣನೂ ಆಗಿದ್ದಾನೆ.


ದೇವರು ಅಮೋಘವಾದ ಕಾರ್ಯಗಳನ್ನು ಮಾಡುವುದರಿಂದ ಆತನ ದಯೆಯನ್ನೂ ಕೃಪೆಯನ್ನೂ ಜ್ಞಾಪಿಸಿಕೊಳ್ಳುತ್ತೇವೆ.


“ಇಸ್ರೇಲರೇ, ಯೆಹೂದ್ಯರೇ ನಾನು ನಿಮ್ಮೊಂದಿಗಿದ್ದೇನೆ. ನಾನು ನಿಮ್ಮನ್ನು ರಕ್ಷಿಸುತ್ತೇನೆ. ನಾನು ನಿಮ್ಮನ್ನು ಆ ಜನಾಂಗಗಳ ಬಳಿಗೆ ಕಳುಹಿಸಿದೆ. ಆದರೆ ನಾನು ಆ ಎಲ್ಲಾ ಜನಾಂಗಗಳನ್ನು ಸಂಪೂರ್ಣವಾಗಿ ನಾಶಮಾಡುವೆನು. ಇದು ನಿಜ. ನಾನು ಆ ಜನಾಂಗಗಳನ್ನು ನಾಶಮಾಡುವೆನು. ಆದರೆ ನಾನು ನಿಮ್ಮನ್ನು ನಾಶಮಾಡುವದಿಲ್ಲ. ನೀವು ಮಾಡಿದ ದುಷ್ಕೃತ್ಯಗಳಿಗಾಗಿ ನಿಮಗೆ ದಂಡನೆಯಾಗಲೇಬೇಕು. ನಾನು ನಿಮ್ಮನ್ನು ಸರಿಯಾಗಿ ಶಿಕ್ಷಿಸುತ್ತೇನೆ.”


ಇದಲ್ಲದೆ ಅಬ್ರಹಾಮ, ಇಸಾಕ ಮತ್ತು ಯಾಕೋಬರಿಗೆ ನಾನು ವಾಗ್ದಾನ ಮಾಡಿದ ದೇಶಕ್ಕೆ ನಿಮ್ಮನ್ನು ನಡಿಸುವೆನು. ನಾನು ಆ ದೇಶವನ್ನು ನಿಮಗೆ ಕೊಡುವೆನು. ಅದು ನಿಮ್ಮದಾಗಿರುವುದು. ನಾನೇ ಯೆಹೋವನು’” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು