Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 4:4 - ಪರಿಶುದ್ದ ಬೈಬಲ್‌

4 ಆದರೆ ಯಾರು ದೇವರಾದ ಯೆಹೋವನನ್ನು ಮಾತ್ರ ಸೇವಿಸಿದರೋ ಅವರು ಈಗಲೂ ಜೀವಂತರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಿಮ್ಮ ದೇವರಾದ ಯೆಹೋವನನ್ನು ನೀವು ನಂಬಿ ನಡೆದುದರಿಂದ ನೀವಾದರೋ ಇಂದಿನವರೆಗೂ ಉಳಿದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಿಮ್ಮ ದೇವರಾದ ಸರ್ವೇಶ್ವರನನ್ನು ಅವಲಂಭಿಸಿದ ನೀವಾದರೋ ಇಂದಿನವರೆಗೂ ಉಳಿದುಕೊಂಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಿಮ್ಮ ದೇವರಾದ ಯೆಹೋವನನ್ನು ಹೊಂದಿಕೊಂಡವರಾದ ನೀವಾದರೋ ಇಂದಿನವರೆಗೂ ಉಳಿದುಕೊಂಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದರೆ ನಿಮ್ಮ ದೇವರಾದ ಯೆಹೋವ ದೇವರಿಗೆ ವಿಧೇಯರಾದ ನೀವೆಲ್ಲರು ಇಂದಿನವರೆಗೆ ಬದುಕಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 4:4
17 ತಿಳಿವುಗಳ ಹೋಲಿಕೆ  

“ನೀವು ನಿಮ್ಮ ದೇವರಾದ ಯೆಹೋವನನ್ನು ಗೌರವಿಸಿ ಆತನೊಬ್ಬನನ್ನೇ ಆರಾಧಿಸಬೇಕು. ಆತನನ್ನು ಬಿಟ್ಟು ತೊಲಗದಿರಿ. ವಾಗ್ದಾನ, ಒಡಂಬಡಿಕೆಗಳನ್ನು ಮಾಡುವಾಗ ಆತನ ಹೆಸರಿನಲ್ಲಿಯೇ ಮಾಡಿರಿ.


ನಿಮ್ಮ ದೇವರಾದ ಯೆಹೋವನನ್ನೇ ಅನುಸರಿಸಿಕೊಂಡಿರಿ. ಈವರೆಗೆ ನೀವು ಹೇಗಿದ್ದಿರೋ ಅದೇ ರೀತಿಯಲ್ಲಿ ಮುಂದೆಯೂ ಇರಿ.


ಇವರು ಸ್ತ್ರೀ ಸಹವಾಸದಿಂದ ಮಲಿನರಾಗದೆ ಕನ್ನಿಕೆಯರಂತೆ ಉಳಿದಿದ್ದರು. ಕುರಿಮರಿಯಾದಾತನು ಹೋದಕಡೆಯಲ್ಲೆಲ್ಲಾ ಅವರು ಆತನನ್ನು ಹಿಂಬಾಲಿಸುತ್ತಾರೆ. ಭೂಲೋಕದ ಜನರ ಮಧ್ಯದಿಂದ ಬಿಡುಗಡೆ ಹೊಂದಿದವರೇ 1,44,000 ಮಂದಿ. ದೇವರಿಗೂ ಕುರಿಮರಿಯಾದಾತನಿಗೂ ಅರ್ಪಿತರಾದವರಲ್ಲಿ ಇವರೇ ಮೊದಲಿಗರಾಗಿದ್ದರು.


ನಿಮ್ಮ ಪ್ರೀತಿಯು ಯಥಾರ್ಥವಾಗಿರಲಿ. ದುಷ್ಕೃತ್ಯಗಳನ್ನು ದ್ವೇಷಿಸಿರಿ. ಒಳ್ಳೆಯ ಕಾರ್ಯಗಳನ್ನು ಮಾತ್ರ ಮಾಡಿರಿ.


ಬಾರ್ನಬನು ಒಳ್ಳೆಯ ಮನುಷ್ಯನಾಗಿದ್ದನು. ಅವನು ಪವಿತ್ರಾತ್ಮಭರಿತನಾಗಿದ್ದನು ಮತ್ತು ಪೂರ್ಣನಂಬಿಕೆಯುಳ್ಳವನಾಗಿದ್ದನು. ಬಾರ್ನಬನು ಅಂತಿಯೋಕ್ಯಕ್ಕೆ ಹೋದಾಗ, ದೇವರು ಆ ಜನರನ್ನು ಅಧಿಕವಾಗಿ ಆಶೀರ್ವದಿಸಿರುವುದನ್ನು ಕಂಡನು. ಇದರಿಂದ ಬಾರ್ನಬನಿಗೆ ತುಂಬಾ ಸಂತೋಷವಾಯಿತು. ಅಂತಿಯೋಕ್ಯದಲ್ಲಿದ್ದ ವಿಶ್ವಾಸಿಗಳನ್ನೆಲ್ಲ ಅವನು ಪ್ರೋತ್ಸಾಹಿಸಿದನು. ಅವನು ಅವರಿಗೆ, “ನಿಮ್ಮ ನಂಬಿಕೆಯನ್ನು ಎಂದಿಗೂ ಕಳೆದುಕೊಳ್ಳಬೇಡಿ. ಪ್ರಭುವಿಗೆ ನಿಮ್ಮ ಪೂರ್ಣಹೃದಯಗಳಿಂದ ಯಾವಾಗಲೂ ವಿಧೇಯರಾಗಿರಿ” ಎಂದು ಹೇಳಿದನು. ಅನೇಕ ಜನರು ಪ್ರಭುವಾದ ಯೇಸುವಿನ ಹಿಂಬಾಲಕರಾದರು.


ಆಗ ಯೆಹೋವನು ಅವನಿಗೆ, “ಜೆರುಸಲೇಮ್ ನಗರದಲ್ಲೆಲ್ಲಾ ತಿರುಗಾಡು. ಜೆರುಸಲೇಮಿನಲ್ಲಿ ನಡೆಯುತ್ತಿರುವ ಅಸಹ್ಯವಾದ ದುಷ್ಕೃತ್ಯಗಳ ಬಗ್ಗೆ ನರಳಾಡುತ್ತಿರುವವರ ಮತ್ತು ನಿಟ್ಟುಸಿರುಬಿಡುತ್ತಿರುವವರ ಹಣೆಯ ಮೇಲ್ಗಡೆ ಒಂದು ಗುರುತನ್ನಿಡು” ಎಂದು ಹೇಳಿದನು.


ನನ್ನ ಜನರೇ, ನಿಮ್ಮ ನಿಮ್ಮ ಕೋಣೆಯೊಳಗೆ ಹೋಗಿ ಕದಮುಚ್ಚಿರಿ. ಸ್ವಲ್ಪಕಾಲ ನೀವು ಅಲ್ಲಿಯೇ ಅಡಗಿಕೊಳ್ಳಿರಿ. ದೇವರ ಕೋಪ ತೀರುವ ತನಕ ಅಲ್ಲಿಯೇ ಅವಿತುಕೊಳ್ಳಿರಿ.


ನನ್ನ ಆತ್ಮವು ನಿನ್ನನ್ನು ಅಂಟಿಕೊಂಡಿರುವುದು. ನಿನ್ನ ಬಲಗೈ ನನ್ನ ಕೈಹಿಡಿದು ನಡೆಸುವುದು.


ಆದರೆ ಮೋಶೆಯು ನಿಮಗೆ ಕೊಟ್ಟ ಧರ್ಮೋಪದೇಶವನ್ನು ಮತ್ತು ವಿಧಿಗಳನ್ನು ಪಾಲಿಸಬೇಕೆಂಬುದನ್ನು ಜ್ಞಾಪಕದಲ್ಲಿಡಿ. ನೀವು ನಿಮ್ಮ ದೇವರಾದ ಯೆಹೋವನನ್ನು ನಿಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪ್ರೀತಿಸಬೇಕು ಮತ್ತು ಆತನ ಸೇವೆ ಮಾಡಬೇಕು. ನೀವು ಆತನನ್ನು ಅನುಸರಿಸುತ್ತಾ ನಿಮ್ಮಿಂದ ಸಾಧ್ಯವಾದಷ್ಟು ಆತನ ಸೇವೆ ಮಾಡಬೇಕು” ಎಂದು ಹೇಳಿದನು.


ನೀವು ನಿಮ್ಮ ದೇವರಾದ ಯೆಹೋವನನ್ನು ಅನುಸರಿಸಬೇಕು, ಗೌರವಿಸಬೇಕು, ಆತನ ಆಜ್ಞೆಗಳಿಗೆ ವಿಧೇಯರಾಗಬೇಕು. ಆತನು ಹೇಳಿದಂತೆ ನಡೆಯಬೇಕು ಮತ್ತು ಆತನನ್ನು ತೊರೆದುಬಿಡದೆ ಸೇವಿಸಬೇಕು.


ನಂತರ ನಾನು ಕೆಲವು ಸಿಂಹಾಸನಗಳನ್ನು ಮತ್ತು ಅವುಗಳ ಮೇಲೆ ಜನರು ಕುಳಿತಿರುವುದನ್ನು ನೋಡಿದೆನು. ಈ ಜನರು ತೀರ್ಪು ನೀಡುವ ಅಧಿಕಾರವನ್ನು ಹೊಂದಿದ್ದರು. ಯೇಸುವಿನ ಸತ್ಯಕ್ಕೆ ಮತ್ತು ದೇವರ ಸಂದೇಶಕ್ಕೆ ನಂಬಿಗಸ್ತರಾಗಿದ್ದರ ನಿಮಿತ್ತವಾಗಿ ಕೊಲ್ಲಲ್ಪಟ್ಟವರ ಜೀವಾತ್ಮಗಳನ್ನು ನಾನು ನೋಡಿದೆನು. ಆ ಜನರು ಮೃಗವನ್ನಾಗಲಿ ಅದರ ವಿಗ್ರಹವನ್ನಾಗಲಿ ಆರಾಧಿಸಿರಲಿಲ್ಲ. ಅವರು ತಮ್ಮ ಹಣೆಯ ಮೇಲಾಗಲಿ ಕೈಗಳ ಮೇಲಾಗಲಿ ಮೃಗದ ಗುರುತನ್ನು ಹಾಕಿಸಿಕೊಂಡಿರಲಿಲ್ಲ. ಆ ಜನರು ಮತ್ತೆ ಜೀವವನ್ನು ಪಡೆದು ಕ್ರಿಸ್ತನೊಂದಿಗೆ ಒಂದುಸಾವಿರ ವರ್ಷ ಆಳಿದರು.


“ಬಾಳ್‌ಪೆಗೋರಿನಲ್ಲಿ ನಡೆದ ಸಂಗತಿಯನ್ನು ನೀವು ನೋಡಿದ್ದೀರಿ. ಅಲ್ಲಿ ಬಾಳನನ್ನು ಪೂಜಿಸಿದವರನ್ನೆಲ್ಲಾ ಯೆಹೋವನು ನಾಶಮಾಡಿದನು.


“ಯೆಹೋವನು ನನಗೆ ಆಜ್ಞಾಪಿಸಿದ ವಿಧಿನಿಯಮಗಳನ್ನು ನಾನು ನಿಮಗೆ ಬೋಧಿಸಿದೆನು. ಈಗ ನೀವು ಸ್ವಾಧೀನಪಡಿಸಿಕೊಳ್ಳುವ ದೇಶದಲ್ಲಿ ನೀವು ನೆಲೆಸುವಾಗ ಆ ವಿಧಿನಿಯಮಗಳನ್ನು ಅನುಸರಿಸಬೇಕೆಂದು ನಾನು ನಿಮಗೆ ಬೋಧಿಸಿದೆನು.


ನೀವು ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ ಆತನಿಗೆ ವಿಧೇಯರಾಗಬೇಕು. ಯೆಹೋವನು ನಿಮ್ಮ ಜೀವವಾಗಿದ್ದಾನೆ. ನಿಮ್ಮ ಪೂರ್ವಿಕರಾದ ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಕೊಡುವುದಾಗಿ ವಾಗ್ದಾನ ಮಾಡಿದ್ದ ದೇಶದಲ್ಲಿ ನಿಮಗೆ ದೀರ್ಘವಾದ ಆಯುಷ್ಯನ್ನು ಅನುಗ್ರಹಿಸುತ್ತಾನೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು