Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 5:27 - ಪರಿಶುದ್ದ ಬೈಬಲ್‌

27 ಮೋಶೆಯೇ, ನೀನು ಹತ್ತಿರ ಹೋಗಿ ಯೆಹೋವನು ಹೇಳುವುದನ್ನೆಲ್ಲಾ ಕೇಳಿ ನಮಗೆ ಅದನ್ನು ತಿಳಿಸು. ನಾವು ನಿನ್ನ ಮಾತುಗಳನ್ನು ಕೇಳಿ ನೀನು ಹೇಳಿದ ಹಾಗೆ ಮಾಡುವೆವು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ನೀನೇ ಹತ್ತಿರಕ್ಕೆ ಹೋಗಿ ನಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೆಲ್ಲಾ ತಿಳಿದುಕೊಂಡು ಬಂದು ನಮಗೆ ತಿಳಿಸು; ತಿಳಿಸಿದಾಗ ನಾವು ನಡಿಸುವೆವು” ಎಂದು ಹೇಳಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ನೀನೇ ಹತ್ತಿರಕ್ಕೆ ಹೋಗಿ, ನಮ್ಮ ದೇವರಾದ ಸರ್ವೇಶ್ವರನ ಆಜ್ಞೆಗಳನ್ನೆಲ್ಲಾ ತಿಳಿದುಕೊಂಡು ಬಂದು ನಮಗೆ ತಿಳಿಸು; ತಿಳಿಸಿದಾಗ ನಾವು ಅದರಂತೆ ನಡೆಯುತ್ತೇವೆ’ ಎಂದು ಹೇಳಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ನೀನೇ ಹತ್ತಿರಕ್ಕೆ ಹೋಗಿ ನಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೆಲ್ಲಾ ತಿಳಿದುಕೊಂಡು ಬಂದು ನಮಗೆ ತಿಳಿಸು; ತಿಳಿಸಿದಾಗ ನಾವು ನಡಿಸುವೆವು ಎಂದು ಹೇಳಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ನೀನೇ ಸಮೀಪಕ್ಕೆ ಹೋಗಿ ನಮ್ಮ ದೇವರಾದ ಯೆಹೋವ ದೇವರು ಹೇಳುವುದನ್ನೆಲ್ಲಾ ಕೇಳಿ, ನಮ್ಮ ದೇವರಾದ ಯೆಹೋವ ದೇವರು ನಿನಗೆ ಹೇಳಿದ್ದನ್ನೆಲ್ಲಾ ನಮಗೆ ಹೇಳು. ಆಗ ನಾವು ಕೇಳಿ ಅದರಂತೆ ಮಾಡುತ್ತೇವೆ,” ಎಂದು ಹೇಳಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 5:27
11 ತಿಳಿವುಗಳ ಹೋಲಿಕೆ  

ಆಗ ಜನರು ಮೋಶೆಗೆ, “ನೀನು ನಮ್ಮೊಡನೆ ಮಾತಾಡು; ನಾವು ನಿನಗೆ ಕಿವಿಗೊಡುವೆವು. ಆದರೆ ಯೆಹೋವನು ನಮ್ಮೊಡನೆ ಮಾತಾಡದಿರಲಿ. ಇಲ್ಲವಾದರೆ ನಾವು ಸಾಯುವೆವು” ಅಂದರು.


ನೀವು ತುತೂರಿಯ ಧ್ವನಿಯ ಬಳಿಗಾಗಲಿ ಅಥವಾ ನಿಮ್ಮೊಂದಿಗೆ ಮಾತನಾಡುವ ಸ್ವರದ ಬಳಿಗಾಗಲಿ ಬಂದಿಲ್ಲ. ಜನರು ಆ ಧ್ವನಿಯನ್ನು ಕೇಳಿದಾಗ, ಮತ್ತೊಂದು ಮಾತನ್ನು ತಮಗೆ ಹೇಳಬಾರದೆಂದು ಬೇಡಿಕೊಂಡರು.


ಜನರೆಲ್ಲರೂ ಒಟ್ಟಾಗಿ ಮಾತಾಡಿದರು. “ಯೆಹೋವನು ಹೇಳುವ ಪ್ರತಿಯೊಂದಕ್ಕೂ ನಾವು ವಿಧೇಯರಾಗುವೆವು” ಎಂದು ಅವರು ಅರಿಕೆಮಾಡಿದರು. ಬಳಿಕ ಮೋಶೆಯು ತಿರುಗಿ ಬೆಟ್ಟವನ್ನೇರಿ ಯೆಹೋವನ ಸನ್ನಿಧಿಗೆ ಹೋಗಿ ಜನರ ಪ್ರತಿಕ್ರಿಯೆಯನ್ನು ದೇವರಿಗೆ ತಿಳಿಸಿದನು.


ಮೋಶೆಯು ಯೆಹೋವನ ಎಲ್ಲಾ ನಿಯಮಗಳನ್ನು ಮತ್ತು ಆಜ್ಞೆಗಳನ್ನು ಜನರಿಗೆ ತಿಳಿಸಿದನು. ಆಗ ಜನರೆಲ್ಲರೂ, “ಯೆಹೋವನ ಆಜ್ಞೆಗಳಿಗೆಲ್ಲಾ ನಾವು ವಿಧೇಯರಾಗುವೆವು” ಎಂದು ಒಂದೇ ಸ್ವರದಿಂದ ಹೇಳಿದರು.


ಜೀವಸ್ವರೂಪನಾದ ದೇವರ ನುಡಿಯನ್ನು ಪ್ರತ್ಯಕ್ಷವಾಗಿ ನಾವು ಕೇಳಿದ ಹಾಗೆ ಬೇರೆ ಯಾರೂ ಕೇಳಿಲ್ಲ. ಆದರೂ ನಾವು ಜೀವದಿಂದಿದ್ದೇವೆ.


“ನೀವು ಹೇಳಿದ್ದನ್ನು ಯೆಹೋವನು ಕೇಳಿ ನನ್ನೊಡನೆ ಹೀಗೆಂದನು: ‘ನಿನ್ನ ಜನರು ಹೇಳುವುದನ್ನು ನಾನು ಕೇಳಿದೆನು. ಆ ಮಾತುಗಳೆಲ್ಲಾ ಒಳ್ಳೆಯವೇ.


ಆಗ ಜನರು ಯೆಹೋಶುವನಿಗೆ, “ನಾವು ನಮ್ಮ ದೇವರಾದ ಯೆಹೋವನ ಸೇವೆಯನ್ನೇ ಮಾಡುವೆವು. ನಾವು ಆತನ ಆಜ್ಞೆಯನ್ನು ಪಾಲಿಸುವೆವು” ಎಂದರು.


ಯೆಹೋವನ ಸಂದೇಶವು ನಮಗೆ ಇಷ್ಟವಾಗಲಿ ಅಥವಾ ಇಷ್ಟವಾಗದಿರಲಿ ನಾವು ನಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಪಾಲಿಸುತ್ತೇವೆ. ಯೆಹೋವನ ಸಂದೇಶಕ್ಕಾಗಿ ನಾವು ನಿನ್ನನ್ನು ಆತನಲ್ಲಿಗೆ ಕಳುಹಿಸುತ್ತಿದ್ದೇವೆ. ಆತನು ಹೇಳಿದಂತೆ ನಾವು ನಡೆದುಕೊಳ್ಳುತ್ತೇವೆ. ಆಗ ನಮಗೆ ಒಳ್ಳೆಯದಾಗುತ್ತದೆ. ಹೌದು, ನಮ್ಮ ದೇವರಾದ ಯೆಹೋವನು ಹೇಳಿದಂತೆಯೇ ನಾವು ನಡೆದುಕೊಳ್ಳುತ್ತೇವೆ” ಎಂದು ಹೇಳಿದರು.


ನೀನು ದೇವರ ಕಟ್ಟಳೆಗಳನ್ನು ಮತ್ತು ಬೋಧನೆಗಳನ್ನು ಜನರಿಗೆ ಬೋಧಿಸಬೇಕು; ನಿಬಂಧನೆಗಳನ್ನು ಉಲ್ಲಂಘಿಸದಂತೆ ಅವರನ್ನು ಎಚ್ಚರಿಸಬೇಕು; ಜೀವಿಸಲು ಸರಿಯಾದ ಮಾರ್ಗವನ್ನು ಅವರಿಗೆ ಬೋಧಿಸಬೇಕು; ಅವರು ಮಾಡಬೇಕಾದದ್ದನ್ನು ಅವರಿಗೆ ತಿಳಿಸಬೇಕು.


ಆಗ ಅಲ್ಲಿದ್ದ ಜನರು ಗುಡುಗಿನ ಧ್ವನಿಯನ್ನು ಕೇಳಿದರು; ಬೆಟ್ಟದ ಮೇಲೆ ಮಿಂಚುಗಳನ್ನು ನೋಡಿದರು; ಹೊಗೆಯು ಬೆಟ್ಟದಿಂದ ಏರುವುದನ್ನು ಕಂಡರು. ಅವರೆಲ್ಲರೂ ಭಯದಿಂದ ನಡುಗಿದರು; ಬೆಟ್ಟದಿಂದ ದೂರದಲ್ಲಿದ್ದುಕೊಂಡು ಅವುಗಳನ್ನೆಲ್ಲಾ ಗಮನಿಸಿದರು.


ಆಗ ಅವರು, “ನಿನ್ನ ದೇವರಾದ ಯೆಹೋವನು ಹೇಳಿದ ಎಲ್ಲವನ್ನು ನಾವು ಮಾಡದಿದ್ದಲ್ಲಿ ಯೆಹೋವನು ಸ್ವತಃ ನಮ್ಮ ವಿರುದ್ಧ ಸ್ಥಿರವಾದ ಸತ್ಯಸಾಕ್ಷಿಯಾಗಿ ನಿಲ್ಲಲಿ. ನಾವು ಏನು ಮಾಡಬೇಕೆಂಬುದನ್ನು ತಿಳಿಸಲು ನಿನ್ನ ದೇವರಾದ ಯೆಹೋವನು ನಿನ್ನನ್ನು ಕಳುಹಿಸುತ್ತಾನೆಂದು ನಾವು ಬಲ್ಲೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು