Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 5:6 - ಪರಿಶುದ್ದ ಬೈಬಲ್‌

6 “ಯೆಹೋವನು ಹೇಳಿದ್ದೇನೆಂದರೆ: ‘ನಾನು ನಿಮ್ಮ ದೇವರಾದ ಯೆಹೋವನು. ನೀವು ಈಜಿಪ್ಟಿನಲ್ಲಿ ಗುಲಾಮರಾಗಿದ್ದಾಗ ನಿಮ್ಮನ್ನು ಅಲ್ಲಿಂದ ಬಿಡುಗಡೆ ಮಾಡಿದೆನು. ಆದ್ದರಿಂದ ನೀವು ಈ ಆಜ್ಞೆಗಳಿಗೆ ವಿಧೇಯರಾಗಬೇಕು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 “ನೀನು ದಾಸತ್ವದಲ್ಲಿದ್ದ ಐಗುಪ್ತದೇಶದೊಳಗಿಂದ ನಿನ್ನನ್ನು ಬಿಡುಗಡೆಮಾಡಿದ ಯೆಹೋವನೆಂಬ ನಿನ್ನ ದೇವರು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ‘ನಾನೇ ನಿನ್ನ ದೇವರಾದ ಸರ್ವೇಶ್ವರ; ಗುಲಾಮತನದ ನಾಡಾಗಿದ್ದು, ಈಜಿಪ್ಟಿನಿಂದ ನಿನ್ನನ್ನು ಬಿಡುಗಡೆ ಮಾಡಿದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನೀನು ದಾಸತ್ವದಲ್ಲಿದ್ದ ಐಗುಪ್ತದೇಶದೊಳಗಿಂದ ನಿನ್ನನ್ನು ಬಿಡುಗಡೆ ಮಾಡಿದ ಯೆಹೋವನೆಂಬ ನಿನ್ನ ದೇವರು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ನಿನ್ನನ್ನು ಈಜಿಪ್ಟ್ ದೇಶದಿಂದಲೂ, ದಾಸತ್ವದ ನಾಡಿನೊಳಗಿಂದಲೂ ಹೊರಗೆ ತಂದ ನಿನ್ನ ದೇವರಾದ ಯೆಹೋವ ದೇವರು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 5:6
13 ತಿಳಿವುಗಳ ಹೋಲಿಕೆ  

ಆದರೆ ಯಾರು ದೇವರಾದ ಯೆಹೋವನನ್ನು ಮಾತ್ರ ಸೇವಿಸಿದರೋ ಅವರು ಈಗಲೂ ಜೀವಂತರಾಗಿದ್ದಾರೆ.


“ಇಸ್ರೇಲಿನ ಜನರೇ, ಕಿವಿಗೊಡಿರಿ. ಯೆಹೋವನೇ ನಮ್ಮ ದೇವರು. ದೇವರು ಒಬ್ಬನೇ!


ಮೋಶೆಯು ಜನರಿಗೆ, “ನೀವು ಈಜಿಪ್ಟಿನ ಗುಲಾಮತನದಿಂದ ಬಿಡುಗಡೆಯಾದ ಈ ದಿನವನ್ನು ಜ್ಞಾಪಕಮಾಡಿಕೊಳ್ಳಿರಿ. ಆದರೆ ಈ ದಿನದಲ್ಲಿ ಯೆಹೋವನು ತನ್ನ ಮಹಾಶಕ್ತಿಯಿಂದ ನಿಮ್ಮನ್ನು ಸ್ವತಂತ್ರರನ್ನಾಗಿ ಮಾಡಿದನು. ನೀವು ಹುಳಿಯಿರುವ ರೊಟ್ಟಿಯನ್ನು ತಿನ್ನಬಾರದು.


“ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು, ‘ನೀವು ಹೀಗೇಕೆ ಮಾಡುತ್ತೀರಿ?’ ಎಂದು ಕೇಳುವಾಗ ನೀವು, ‘ಯೆಹೋವನು ನಮ್ಮನ್ನು ಈಜಿಪ್ಟಿನಿಂದ ತನ್ನ ಮಹಾಶಕ್ತಿಯಿಂದ ರಕ್ಷಿಸಿದನು. ನಾವು ಅಲ್ಲಿ ಗುಲಾಮರಾಗಿದ್ದೆವು, ಆದರೆ ಯೆಹೋವನು ನಮ್ಮನ್ನು ಇಲ್ಲಿಗೆ ಕರೆದುಕೊಂಡು ಬಂದನು.


ಬಳಿಕ ಯೆಹೋವನು ಈ ದಶಾಜ್ಞೆಗಳನ್ನು ಅವರಿಗೆ ಕೊಟ್ಟನು:


ಆದರೆ ಯೆಹೋವನು ತನ್ನ ಪರಾಕ್ರಮವನ್ನು ತೋರಿಸಿ ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದನು. ನಿಮ್ಮನ್ನು ದಾಸತ್ವದಿಂದ ಬಿಡುಗಡೆ ಮಾಡಿದನು; ಫರೋಹನ ಹಿಡಿತದಿಂದ ನಿಮ್ಮನ್ನು ಬಿಡಿಸಿದನು; ಯಾಕೆಂದರೆ ಆತನು ನಿಮ್ಮನ್ನು ಪ್ರೀತಿಸುತ್ತಾನೆ; ನಿಮ್ಮ ಪೂರ್ವಿಕರಿಗೆ ತಾನು ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂದಿದ್ದಾನೆ.


ಆಗ ನೀವು ಹೆಮ್ಮೆಯಿಂದ ಸೊಕ್ಕಿನ ಕಣ್ಣುಳ್ಳವರಾಗಿರಬೇಡಿ. ನಿಮ್ಮ ದೇವರಾದ ಯೆಹೋವನನ್ನು ಮರೆತುಬಿಡಬೇಡಿರಿ. ನೀವು ಈಜಿಪ್ಟಿನಲ್ಲಿ ಗುಲಾಮರಾಗಿದ್ದಾಗ ಆತನು ನಿಮ್ಮನ್ನು ಬಿಡಿಸಿ ಸ್ವತಂತ್ರರನ್ನಾಗಿ ಮಾಡಿದನು.


“ಆದರೆ ನನ್ನ ಜನರು ನನಗೆ ಕಿವಿಗೊಡಲಿಲ್ಲ. ಇಸ್ರೇಲರು ನನಗೆ ವಿಧೇಯರಾಗಲಿಲ್ಲ.


ನಾನು ನಿಮ್ಮ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯ ಬಗ್ಗೆ ಮಾತನಾಡುತ್ತಿದ್ದೇನೆ. ನಾನು ಈಜಿಪ್ಟಿನಿಂದ ಅವರನ್ನು ಹೊರತಂದಾಗ ನಾನು ಅವರೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಂಡೆ. ಈಜಿಪ್ಟು ಅನೇಕ ಕಷ್ಟಗಳ ನಾಡಾಗಿತ್ತು. ಅದು ಕಬ್ಬಿಣವನ್ನು ಕರಗಿಸುವ ಉರಿಯುವ ಕುಲುಮೆಯಂತಿತ್ತು. ನಾನು ಅವರಿಗೆ, ‘ನನ್ನ ಆಜ್ಞಾಪಾಲನೆಯನ್ನು ಮಾಡಿರಿ ಮತ್ತು ನಾನು ಹೇಳಿದಂತೆ ಎಲ್ಲವನ್ನು ಮಾಡಿರಿ. ಆಗ ನೀವು ನನ್ನ ಭಕ್ತರಾಗುವಿರಿ. ನಾನು ನಿಮ್ಮ ದೇವರಾಗುವೆನು’ ಎಂದೆ.


ನಾನು ಮಾಡಿದ್ದನ್ನು ನಿಮಗೆ ಹೇಳುತ್ತೇನೆ, ನಾನು ನಿಮ್ಮ ಬಳಿಗೆ ಮೋಶೆ, ಆರೋನ್ ಮತ್ತು ಮಿರ್ಯಾಮಳನ್ನು ಕಳುಹಿಸಿದೆನು. ನಾನು ಈಜಿಪ್ಟ್ ದೇಶದಿಂದ ನಿಮ್ಮನ್ನು ಕರೆತಂದೆನು. ಗುಲಾಮತನದಿಂದ ನಿಮ್ಮನ್ನು ಬಿಡಿಸಿ ಸ್ವತಂತ್ರರನ್ನಾಗಿ ಮಾಡಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು