10 “ದೇವರಾದ ಯೆಹೋವನು ನಮಗೆ ಈ ದೇಶವನ್ನು ಕೊಡುವುದಾಗಿ ನಮ್ಮ ಪೂರ್ವಿಕರಾದ ಅಬ್ರಹಾಮನಿಗೆ, ಇಸಾಕನಿಗೆ ಮತ್ತು ಯಾಕೋಬನಿಗೆ ವಾಗ್ದಾನ ಮಾಡಿದ್ದನು. ಈಗ ಆ ದೇಶವನ್ನು ನಿಮಗೆ ಕೊಡುತ್ತಿದ್ದಾನೆ. ಅದರಲ್ಲಿರುವ ದೊಡ್ಡದೊಡ್ಡ ನಗರಗಳನ್ನು ನೀವು ಕೈಯಿಂದ ಕಟ್ಟಲಿಲ್ಲ.
10 ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನಿಮ್ಮನ್ನು ಸೇರಿಸಿದಾಗ ನೀವು ಕಟ್ಟದ ಒಳ್ಳೆಯ ದೊಡ್ಡ ಪಟ್ಟಣಗಳನ್ನೂ, ನೀವು ಕೂಡಿಸದ ಉತ್ತಮ ವಸ್ತುಗಳಿಂದ
10 ಇದಲ್ಲದೆ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಪಿತೃಗಳಾದ ಅಬ್ರಹಾಮ, ಇಸಾಕ, ಯಾಕೋಬರಿಗೆ ಪ್ರಮಾಣ ಮಾಡಿದ ದೇಶದಲ್ಲಿ ನಿಮ್ಮನ್ನು ಸೇರಿಸಿ, ನೀವು ಕಟ್ಟಿದ ದೊಡ್ಡದಾದ ಒಳ್ಳೆಯ ಪಟ್ಟಣಗಳನ್ನೂ,
“‘ಯೆಹೋವನಾದ ನಾನು ನಿಮಗೆ ಆ ದೇಶವನ್ನು ಕೊಟ್ಟಿದ್ದೇನೆ. ನೀವು ಆ ದೇಶಕ್ಕಾಗಿ ಏನನ್ನೂ ಮಾಡಿಲ್ಲ. ನಿಮಗೆ ಅದನ್ನು ಕೊಟ್ಟವನು ನಾನೇ. ನೀವು ಆ ನಗರಗಳನ್ನು ಕಟ್ಟಲೇ ಇಲ್ಲ. ಅವುಗಳನ್ನು ನಿಮಗೆ ಕೊಟ್ಟವನು ನಾನೇ. ಈಗ ನೀವು ಆ ಪ್ರದೇಶದಲ್ಲಿ ಮತ್ತು ಆ ನಗರಗಳಲ್ಲಿ ವಾಸಮಾಡುತ್ತಿದ್ದೀರಿ. ನೀವು ದ್ರಾಕ್ಷಿ ಮತ್ತು ಆಲಿವ್ ಮರದ ತೋಟಗಳನ್ನು ಹೊಂದಿರುವಿರಿ. ಆದರೆ ಆ ತೋಟಗಳನ್ನು ನೀವು ಬೆಳೆಸಲಿಲ್ಲ.’”
ಬಲಾಢ್ಯ ನಗರಗಳನ್ನು ಸ್ವಾಧೀನಪಡಿಸಿಕೊಂಡರು. ಉತ್ತಮವಾದ ಭೂಮಿಯನ್ನು ವಶಪಡಿಸಿಕೊಂಡರು. ಒಳ್ಳೆಯ ವಸ್ತುಗಳಿಂದ ತುಂಬಿದ್ದ ಮನೆಗಳನ್ನು ಅವರು ವಶಪಡಿಸಿಕೊಂಡರು. ಅಗೆದು ತಯಾರಾಗಿದ್ದ ಬಾವಿಗಳನ್ನು ಅವರಿಗೆ ನೀನು ಕೊಟ್ಟೆ, ದ್ರಾಕ್ಷಿತೋಟವನ್ನು, ಎಣ್ಣೆಮರಗಳ ತೋಪನ್ನು, ಬೇಕಾದಷ್ಟು ಹಣ್ಣಿನ ಮರಗಳನ್ನು ನೀನು ಅವರಿಗೆ ಕೊಟ್ಟೆ. ಅವರ ಹೊಟ್ಟೆ ತುಂಬಿ ಕೊಬ್ಬೇರುವಷ್ಟು ಅವರಿಗೆ ಕೊಟ್ಟೆ. ನೀನು ಕೊಟ್ಟ ಉತ್ತಮವಾದ ವಸ್ತುಗಳಲ್ಲಿ ಅವರು ಆನಂದಿಸಿದರು.
ನಾನು ನಿನ್ನ ಸಂಗಡವಿದ್ದು ನಿನ್ನನ್ನು ಆಶೀರ್ವದಿಸಿ ನಿನಗೂ ನಿನ್ನ ಕುಟುಂಬಕ್ಕೂ ಈ ಪ್ರದೇಶಗಳನ್ನೆಲ್ಲ ಕೊಡುವೆನು. ನಾನು ನಿನ್ನ ತಂದೆಯಾದ ಅಬ್ರಹಾಮನಿಗೆ ಪ್ರಮಾಣ ಮಾಡಿದ್ದನ್ನು ನೆರವೇರಿಸುವೆನು.
ಆದ್ದರಿಂದ ಅಂದು ಯೆಹೋವನು ಒಂದು ವಾಗ್ದಾನವನ್ನು ಮಾಡಿ ಅಬ್ರಾಮನೊಡನೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡನು. ಯೆಹೋವನು ಅವನಿಗೆ, “ನಾನು ನಿನ್ನ ಸಂತತಿಯವರಿಗೆ ಈ ನಾಡನ್ನು ಕೊಡುವೆನು. ನಾನು ಅವರಿಗೆ ಈಜಿಪ್ಟ್ ನದಿಯಿಂದ ಯೂಫ್ರೇಟೀಸ್ ಮಹಾನದಿಯವರೆಗೂ ಇರುವ ನಾಡನ್ನು ಕೊಡುವೆನು.
ಯೆಹೋವನು ಏಣಿಯ ತುದಿಯಲ್ಲಿ ನಿಂತಿರುವುದನ್ನು ಯಾಕೋಬನು ಕಂಡನು. ಯೆಹೋವನು ಅವನಿಗೆ, “ನಿನ್ನ ತಾತನಾದ ಅಬ್ರಹಾಮನ ದೇವರಾಗಿರುವ ಯೆಹೋವನೇ ನಾನು. ನಾನು ಇಸಾಕನ ದೇವರು. ಈಗ ನೀನು ಮಲಗಿಕೊಂಡಿರುವ ದೇಶವನ್ನು ನಾನು ನಿನಗೆ ಕೊಡುವೆನು. ನಾನು ಈ ದೇಶವನ್ನು ನಿನಗೂ ನಿನ್ನ ಮಕ್ಕಳಿಗೂ ಕೊಡುವೆನು.
“ಇಸ್ರೇಲ್ ಜನರೇ, ಕೇಳಿರಿ. ಈ ದಿನ ನೀವು ಜೋರ್ಡನ್ ನದಿಯನ್ನು ದಾಟಿ ಆ ದೇಶವನ್ನು ಪ್ರವೇಶಿಸಿ ನಿಮಗಿಂತ ಬಲಿಷ್ಠವಾದ ಜನಾಂಗಗಳನ್ನು ಹೊಡೆದೋಡಿಸುವಿರಿ. ಅವರ ಪಟ್ಟಣಗಳು ದೊಡ್ಡದಾಗಿವೆ; ಅದರ ಗೋಡೆಗಳು ಆಕಾಶದಷ್ಟು ಎತ್ತರವಾಗಿವೆ;
“ಬೇರೆ ಜನಾಂಗಗಳು ವಾಸಿಸುವ ದೇಶವನ್ನು ನಿಮ್ಮ ದೇವರು ನಿಮಗೆ ಕೊಡುತ್ತಿದ್ದಾನೆ. ಆ ಜನಾಂಗಗಳನ್ನು ಆತನು ನಾಶಮಾಡುತ್ತಾನೆ. ಅವರು ವಾಸಿಸುತ್ತಿದ್ದ ಸ್ಥಳಗಳಲ್ಲಿ ನೀವು ವಾಸಿಸುವಿರಿ. ಅವರ ಮನೆಗಳನ್ನೂ ಪಟ್ಟಣಗಳನ್ನೂ ನೀವು ವಶಪಡಿಸಿಕೊಳ್ಳುವಿರಿ. ಅಂಥಾ ಸಮಯದಲ್ಲಿ
ನಾನು ಅವರ ಪೂರ್ವಿಕರಿಗೆ ವಾಗ್ದಾನ ಮಾಡಿದ ದೇಶಕ್ಕೆ ಅವರನ್ನು ಕರೆದುಕೊಂಡು ಹೋಗುವೆನು. ಆ ದೇಶವು ಹಾಲೂಜೇನೂ ಹರಿಯುವ ದೇಶವಾಗಿರುತ್ತದೆ. ಅವರಿಗೆ ಇಷ್ಟ ಬಂದದ್ದನ್ನೆಲ್ಲಾ ತಿನ್ನಲು ಅವರಿಗೆ ಸಿಗುವುದು. ಅವರಿಗೆ ಸಮೃದ್ಧಿಯಾದ ಜೀವಿತವು ಇರುವುದು. ಆದರೆ ಅವರು ಸುಳ್ಳುದೇವರ ಕಡೆಗೆ ತಿರುಗಿ ಅವುಗಳನ್ನು ಪೂಜಿಸುವರು. ಅವರು ನನ್ನಿಂದ ತೊಲಗಿ ನನ್ನ ಒಡಂಬಡಿಕೆಯನ್ನು ಮುರಿದುಬಿಡುವರು.
ನಾನು ನಿಮಗೆ ಆ ಪ್ರಾಂತ್ಯವನ್ನೆಲ್ಲಾ ಕೊಡುವೆನು. ಅಲ್ಲಿಗೆ ಹೋಗಿ ಅದನ್ನು ತೆಗೆದುಕೊಳ್ಳಿರಿ. ನಿಮ್ಮ ಪೂರ್ವಿಕರಾದ ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಮತ್ತು ಅವರ ಸಂತತಿಯವರಿಗೆ ಆ ಪ್ರದೇಶವನ್ನು ಕೊಡುವೆನು ಎಂದು ನಾನು ವಾಗ್ದಾನ ಮಾಡಿದ್ದೇನೆ.’”
ಯೋಗ್ಯವಾದವುಗಳನ್ನು, ಸರಿಯಾದವುಗಳನ್ನು ಮತ್ತು ಯೆಹೋವನು ಮೆಚ್ಚುವ ಕಾರ್ಯಗಳನ್ನು ನೀವು ಮಾಡಬೇಕು. ಆಗ ನಿಮ್ಮ ಕಾರ್ಯಗಳೆಲ್ಲವೂ ಸಫಲವಾಗುವುವು. ಅಲ್ಲದೆ ಯೆಹೋವನು ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ದೇಶದೊಳಗೆ ನೀವು ಹೋಗಿ ಅದನ್ನು ವಶಪಡಿಸಿಕೊಳ್ಳಬಹುದು.