Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 6:11 - ಪರಿಶುದ್ದ ಬೈಬಲ್‌

11 ನೀವು ಕೂಡಿಸಿಡದ ಉತ್ತಮ ವಸ್ತುಗಳಿಂದ ತುಂಬಿರುವ ಮನೆಗಳನ್ನು ಯೆಹೋವನು ನಿಮಗೆ ಕೊಡುತ್ತಾನೆ. ನೀವು ತೋಡದಿರುವ ಬಾವಿಗಳನ್ನು ನಿಮಗೆ ಕೊಡುವನು. ನೀವು ನೆಡದಿರುವ ದ್ರಾಕ್ಷಾತೋಟಗಳನ್ನೂ ಎಣ್ಣೆಮರಗಳ ತೋಪುಗಳನ್ನೂ ನಿಮಗೆ ಕೊಡುವನು. ನಿಮಗೆ ತಿನ್ನಲು ಯಾವ ಕೊರತೆಯೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ತುಂಬಿದ ಮನೆಗಳನ್ನೂ, ನೀವು ತೋಡದ ನೀರುಗುಂಡಿಗಳನ್ನೂ, ನೀವು ಬೆಳಸದ ದ್ರಾಕ್ಷಿತೋಟಗಳನ್ನೂ ಮತ್ತು ಎಣ್ಣೆಮರಗಳನ್ನೂ ಅನುಭವಿಸುತ್ತಾ ತೃಪ್ತರಾಗಿರುವಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನೀನು ಕಟ್ಟದ ಸುಂದರವಾದ ದೊಡ್ಡ ಪಟ್ಟಣಗಳನ್ನು, ನೀನು ಕೂಡಿಸದ ಉತ್ತಮೋತ್ತಮ ವಸ್ತುಗಳಿಂದ ತುಂಬಿದ ಮನೆಗಳನ್ನು, ನೀನು ತೋಡದ ನೀರುಗುಂಡಿಗಳನ್ನು, ನೀನು ಬೆಳಸದ ದ್ರಾಕ್ಷಿತೋಟಗಳನ್ನು ಹಾಗು ಎಣ್ಣೆಮರಗಳನ್ನು ಅನುಭವಿಸುತ್ತಾ ತೃಪ್ತನಾಗಿ ಇರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನೀವು ಕೂಡಿಸದ ಉತ್ತಮವಸ್ತುಗಳಿಂದ ತುಂಬಿದ ಮನೆಗಳನ್ನೂ ನೀವು ಅಗೆಯದ ನೀರಗುಂಡಿಗಳನ್ನೂ ನೀವು ಬೆಳಸದ ದ್ರಾಕ್ಷೇತೋಟಗಳನ್ನೂ ಎಣ್ಣೆಮರಗಳನ್ನೂ ಅನುಭವಿಸುತ್ತಾ ತೃಪ್ತರಾಗಿರುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನೀವು ಕೂಡಿಸದ ಉತ್ತಮ ವಸ್ತುಗಳಿಂದ ತುಂಬಿದ ಮನೆಗಳನ್ನೂ, ನೀವು ಅಗೆಯದಿರುವ ಬಾವಿಗಳನ್ನೂ, ನೀವು ನೆಡದ ದ್ರಾಕ್ಷಿತೋಟಗಳನ್ನೂ, ಓಲಿವ್ ತೋಟಗಳನ್ನೂ ನಿಮಗೆ ಕೊಡಲಾಗಿ, ನೀವು ತಿಂದು ತೃಪ್ತರಾಗಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 6:11
14 ತಿಳಿವುಗಳ ಹೋಲಿಕೆ  

“ಆದರೆ ಯೆಶುರೂನು ಕೊಬ್ಬಿದನು; ಕೊಬ್ಬಿದ ಹೋರಿಯಂತೆ ಒದ್ದನು; ಅವನು ಚೆನ್ನಾಗಿ ತಿಂದು ಕೊಬ್ಬಿ ಊದಿಕೊಂಡನು; ತನ್ನ ನಿರ್ಮಾಣಿಕನಾದ ಯೆಹೋವನನ್ನು ತೊರೆದನು; ತನ್ನನ್ನು ಸಂರಕ್ಷಿಸಿದ ಬಂಡೆಯಿಂದ ಓಡಿಹೋದನು;


ಇಸ್ರೇಲರ ದುಷ್ಕೃತ್ಯಗಳನ್ನು ಯೆಹೋವನು ನೋಡಿದನು. ಇಸ್ರೇಲರು ತಮ್ಮ ದೇವರಾದ ಯೆಹೋವನನ್ನು ಮರೆತು ಬಾಳ್ ಮತ್ತು ಅಶೇರ್ ಎಂಬ ಸುಳ್ಳುದೇವರುಗಳ ಸೇವೆ ಮಾಡುತ್ತಿದ್ದರು.


ನಿಮ್ಮ ಹೊಲಗಳಲ್ಲಿ ಮತ್ತು ನಿಮ್ಮ ಪಶುಗಳಿಗೆ ಹುಲ್ಲು ಹುಲುಸಾಗಿ ಬೆಳೆಯುವಂತೆ ಮಾಡುವೆನು. ನಿಮಗೆ ಆಹಾರವು ಸಮೃದ್ಧಿಕರವಾಗಿರುವುದು.’


ಇದು ಲೇವಿಯರಿಗಾಗಿ. ಯಾಕೆಂದರೆ ಅವರಿಗೆ ಸ್ವಂತ ಭೂಮಿ ಇಲ್ಲವಲ್ಲಾ. ಅಲ್ಲದೆ ಈ ಧಾನ್ಯವನ್ನು ನಿಮ್ಮ ಊರಲ್ಲಿರುವ ಬಡಜನರಿಗೋಸ್ಕರವಾಗಿಯೂ ಪರದೇಶಿಗಳಿಗಾಗಿಯೂ ವಿಧವೆಯರಿಗಾಗಿಯೂ ಅನಾಥ ಮಕ್ಕಳಿಗಾಗಿಯೂ ಉಪಯೋಗಿಸಬೇಕು. ಅವರು ಬಂದು ಊಟಮಾಡಿ ತೃಪ್ತರಾಗಲಿ. ನೀವು ಹೀಗೆ ಮಾಡಿದರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಕಾರ್ಯಗಳನ್ನೆಲ್ಲಾ ಸಫಲಪಡಿಸಿ ಆಶೀರ್ವದಿಸುವನು.


“ಬೇರೆ ಜನಾಂಗಗಳು ವಾಸಿಸುವ ದೇಶವನ್ನು ನಿಮ್ಮ ದೇವರು ನಿಮಗೆ ಕೊಡುತ್ತಿದ್ದಾನೆ. ಆ ಜನಾಂಗಗಳನ್ನು ಆತನು ನಾಶಮಾಡುತ್ತಾನೆ. ಅವರು ವಾಸಿಸುತ್ತಿದ್ದ ಸ್ಥಳಗಳಲ್ಲಿ ನೀವು ವಾಸಿಸುವಿರಿ. ಅವರ ಮನೆಗಳನ್ನೂ ಪಟ್ಟಣಗಳನ್ನೂ ನೀವು ವಶಪಡಿಸಿಕೊಳ್ಳುವಿರಿ. ಅಂಥಾ ಸಮಯದಲ್ಲಿ


“‘ಯೆಹೋವನಾದ ನಾನು ನಿಮಗೆ ಆ ದೇಶವನ್ನು ಕೊಟ್ಟಿದ್ದೇನೆ. ನೀವು ಆ ದೇಶಕ್ಕಾಗಿ ಏನನ್ನೂ ಮಾಡಿಲ್ಲ. ನಿಮಗೆ ಅದನ್ನು ಕೊಟ್ಟವನು ನಾನೇ. ನೀವು ಆ ನಗರಗಳನ್ನು ಕಟ್ಟಲೇ ಇಲ್ಲ. ಅವುಗಳನ್ನು ನಿಮಗೆ ಕೊಟ್ಟವನು ನಾನೇ. ಈಗ ನೀವು ಆ ಪ್ರದೇಶದಲ್ಲಿ ಮತ್ತು ಆ ನಗರಗಳಲ್ಲಿ ವಾಸಮಾಡುತ್ತಿದ್ದೀರಿ. ನೀವು ದ್ರಾಕ್ಷಿ ಮತ್ತು ಆಲಿವ್ ಮರದ ತೋಟಗಳನ್ನು ಹೊಂದಿರುವಿರಿ. ಆದರೆ ಆ ತೋಟಗಳನ್ನು ನೀವು ಬೆಳೆಸಲಿಲ್ಲ.’”


ಬಲಾಢ್ಯ ನಗರಗಳನ್ನು ಸ್ವಾಧೀನಪಡಿಸಿಕೊಂಡರು. ಉತ್ತಮವಾದ ಭೂಮಿಯನ್ನು ವಶಪಡಿಸಿಕೊಂಡರು. ಒಳ್ಳೆಯ ವಸ್ತುಗಳಿಂದ ತುಂಬಿದ್ದ ಮನೆಗಳನ್ನು ಅವರು ವಶಪಡಿಸಿಕೊಂಡರು. ಅಗೆದು ತಯಾರಾಗಿದ್ದ ಬಾವಿಗಳನ್ನು ಅವರಿಗೆ ನೀನು ಕೊಟ್ಟೆ, ದ್ರಾಕ್ಷಿತೋಟವನ್ನು, ಎಣ್ಣೆಮರಗಳ ತೋಪನ್ನು, ಬೇಕಾದಷ್ಟು ಹಣ್ಣಿನ ಮರಗಳನ್ನು ನೀನು ಅವರಿಗೆ ಕೊಟ್ಟೆ. ಅವರ ಹೊಟ್ಟೆ ತುಂಬಿ ಕೊಬ್ಬೇರುವಷ್ಟು ಅವರಿಗೆ ಕೊಟ್ಟೆ. ನೀನು ಕೊಟ್ಟ ಉತ್ತಮವಾದ ವಸ್ತುಗಳಲ್ಲಿ ಅವರು ಆನಂದಿಸಿದರು.


ಅನ್ಯಜನರು ವಾಸವಾಗಿದ್ದ ದೇಶವನ್ನು ದೇವರು ತನ್ನ ಜನರಿಗೆ ಕೊಟ್ಟನು. ಅನ್ಯಜನರು ದುಡಿದು ಸಂಪಾದಿಸಿದ್ದವುಗಳನ್ನು ದೇವಜನರು ಪಡೆದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು