Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 6:13 - ಪರಿಶುದ್ದ ಬೈಬಲ್‌

13 ಆತನ ಹೆಸರಿನಲ್ಲಿಯೇ ವಾಗ್ದಾನಗಳನ್ನು ಮಾಡಿರಿ; ಅನ್ಯ ದೇವರ ಹೆಸರಿನಲ್ಲಿ ಮಾಡಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಿಮ್ಮ ದೇವರಾದ ಯೆಹೋವನಲ್ಲಿಯೇ ಭಯಭಕ್ತಿಯುಳ್ಳವರಾಗಿರಬೇಕು, ಆತನನ್ನೇ ಸೇವಿಸಬೇಕು ಮತ್ತು ಆತನ ಹೆಸರು ಹೇಳಿ ಪ್ರಮಾಣಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಿನ್ನ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವನಾಗಿರು; ಅವರಿಗೇ ಸೇವೆಮಾಡು; ಅವರ ಹೆಸರು ಹೇಳಿ ಪ್ರಮಾಣಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಿಮ್ಮ ದೇವರಾದ ಯೆಹೋವನಲ್ಲಿಯೇ ಭಯಭಕ್ತಿಯುಳ್ಳವರಾಗಿರಬೇಕು; ಆತನನ್ನೇ ಸೇವಿಸಬೇಕು; ಆತನ ಹೆಸರು ಹೇಳಿ ಪ್ರಮಾಣಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಿಮ್ಮ ದೇವರಾದ ಯೆಹೋವ ದೇವರಿಗೆ ನೀವು ಭಯಪಡಬೇಕು. ಅವರಿಗೆ ಮಾತ್ರವೇ ಸೇವೆ ಸಲ್ಲಿಸಬೇಕು ಮತ್ತು ಅವರ ಹೆಸರಿನಲ್ಲಿ ಆಣೆಯಿಟ್ಟುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 6:13
29 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸು, “‘ನಿನ್ನ ಪ್ರಭುವಾದ ದೇವರೊಬ್ಬನನ್ನೇ ಆರಾಧಿಸಬೇಕು, ಆತನೊಬ್ಬನಿಗೇ ಸೇವೆಮಾಡಬೇಕು’ ಎಂಬುದಾಗಿ ಪವಿತ್ರ ಗ್ರಂಥದಲ್ಲಿ ಬರೆದಿದೆ!” ಎಂದನು.


ಯೇಸು ಸೈತಾನನಿಗೆ, “ಇಲ್ಲಿಂದ ತೊಲಗು! ‘ನಿನ್ನ ದೇವರಾದ ಪ್ರಭುವನ್ನೇ ಆರಾಧಿಸಬೇಕು, ಆತನೊಬ್ಬನನ್ನೇ ಸೇವಿಸಬೇಕು’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ” ಎಂದು ಹೇಳಿದನು.


“ನೀವು ನಿಮ್ಮ ದೇವರಾದ ಯೆಹೋವನನ್ನು ಗೌರವಿಸಿ ಆತನೊಬ್ಬನನ್ನೇ ಆರಾಧಿಸಬೇಕು. ಆತನನ್ನು ಬಿಟ್ಟು ತೊಲಗದಿರಿ. ವಾಗ್ದಾನ, ಒಡಂಬಡಿಕೆಗಳನ್ನು ಮಾಡುವಾಗ ಆತನ ಹೆಸರಿನಲ್ಲಿಯೇ ಮಾಡಿರಿ.


ನೀವು ನಿಮ್ಮ ದೇವರಾದ ಯೆಹೋವನನ್ನು ಅನುಸರಿಸಬೇಕು, ಗೌರವಿಸಬೇಕು, ಆತನ ಆಜ್ಞೆಗಳಿಗೆ ವಿಧೇಯರಾಗಬೇಕು. ಆತನು ಹೇಳಿದಂತೆ ನಡೆಯಬೇಕು ಮತ್ತು ಆತನನ್ನು ತೊರೆದುಬಿಡದೆ ಸೇವಿಸಬೇಕು.


ನೀವು ನನ್ನ ಹೆಸರನ್ನು ಉಪಯೋಗಿಸಿ ಸುಳ್ಳಾಣೆ ಇಟ್ಟುಕೊಳ್ಳಬಾರದು; ಇಲ್ಲವಾದರೆ ನೀವು ದೇವರ ಹೆಸರನ್ನು ಅಪಕೀರ್ತಿಗೆ ಗುರಿಪಡಿಸುವಿರಿ; ನಾನೇ ನಿಮ್ಮ ದೇವರಾದ ಯೆಹೋವನು!


ಆ ಜನರು ತಮ್ಮ ಪಾಠಗಳನ್ನು ಸರಿಯಾಗಿ ಕಲಿತುಕೊಳ್ಳಬೇಕೆಂಬುದು ನನ್ನ ಅಪೇಕ್ಷೆ. ಮೊದಲು, ಆ ಜನರು ಬಾಳನ ಹೆಸರೆತ್ತಿ ಪ್ರಮಾಣ ಮಾಡುವುದನ್ನು ನನ್ನ ಜನರಿಗೆ ಕಲಿಸಿಕೊಟ್ಟರು. ಈಗ ಆ ಜನರು ಅದೇ ರೀತಿಯಲ್ಲಿ ತಮ್ಮ ಪಾಠವನ್ನು ಕಲಿತುಕೊಳ್ಳಬೇಕೆಂಬುದು ನನ್ನ ಇಚ್ಛೆ. ಅವರು, ‘ಯೆಹೋವನ ಜೀವದಾಣೆ’ ಎಂದು ಹೇಳಿದರೆ ಅವರನ್ನು ಅಭಿವೃದ್ಧಿಪಡಿಸಿ ಅವರನ್ನು ನಮ್ಮ ಜನರ ಮಧ್ಯದಲ್ಲಿ ನೆಲೆಗೊಳಿಸುವೆನು.


“ಈಗ ಜನರು ಭೂಮಿಯಿಂದ ಆಶೀರ್ವಾದ ಕೇಳುತ್ತಾರೆ. ಆದರೆ ಮುಂದಿನ ದಿನಗಳಲ್ಲಿ ಅವರು ನಂಬಿಗಸ್ತನಾದ ದೇವರಿಂದ ಆಶೀರ್ವಾದ ಕೇಳುವರು. ಈಗ ಜನರು ವಾಗ್ದಾನ ಮಾಡುವಾಗ ಭೂಮಿಯ ಬಲದಲ್ಲಿ ಭರವಸವಿಡುವರು. ಆದರೆ ಮುಂದಿನ ದಿನಗಳಲ್ಲಿ ನಂಬಿಗಸ್ತನಾದ ದೇವರ ಮೇಲೆ ಭರವಸವಿಡುವರು. ಯಾಕೆಂದರೆ ಗತಿಸಿದ ಸಂಕಟಗಳೆಲ್ಲವೂ ಮರೆತುಹೋಗುತ್ತವೆ. ಇವುಗಳು ನನ್ನ ಕಣ್ಣುಗಳಿಗೆ ಮರೆಯಾಗಿರುತ್ತವೆ.”


“ನನ್ನ ಪರಾಕ್ರಮದಿಂದ ನಾನು ವಾಗ್ದಾನ ಮಾಡುತ್ತೇನೆ. ನನ್ನ ಆಜ್ಞೆಯು ನ್ಯಾಯವಾದದ್ದೂ ನೀತಿಯುಳ್ಳದ್ದೂ ಆಗಿದೆ. ಇಂಥದ್ದು ನಾನು ಆಜ್ಞಾಪಿಸಿದಂತೆಯೇ ಸಂಭವಿಸುವದು. ಎಲ್ಲಾ ಜನರು ನನ್ನ ಮುಂದೆ ಅಡ್ಡಬೀಳುವರೆಂದು ನಾನು ವಾಗ್ದಾನ ಮಾಡುತ್ತೇನೆ. ಪ್ರತಿಯೊಬ್ಬನೂ ನನ್ನನ್ನು ಹಿಂಬಾಲಿಸಲು ಪ್ರತಿಜ್ಞೆ ಮಾಡುವನು.


ರಾಜನಾದರೋ ತನ್ನ ದೇವರಲ್ಲಿಯೇ ಸಂತೋಷಿಸುವನು. ಹರಕೆಹೊತ್ತು ಅವನಿಗೆ ವಿಧೇಯರಾಗಿರುವವರು ದೇವರನ್ನು ಕೊಂಡಾಡುವರು, ಯಾಕೆಂದರೆ ಆ ಸುಳ್ಳುಗಾರರನ್ನೆಲ್ಲಾ ಆತನು ಸೋಲಿಸಿದ್ದಾನೆ.


“ಇಸ್ರೇಲ್ ಜನರೇ, ಕೇಳಿರಿ! ನಿಮ್ಮ ದೇವರಾದ ಯೆಹೋವನು ನಿಮ್ಮಿಂದ ನಿಜವಾಗಿಯೂ ಅಪೇಕ್ಷಿಸುವುದೇನು? ನೀವು ಆತನನ್ನು ಗೌರವಿಸಬೇಕೆಂದೂ ಆತನ ಆಜ್ಞಾವಿಧಿಗಳಿಗೆ ವಿಧೇಯರಾಗಬೇಕೆಂದೂ ಅಪೇಕ್ಷಿಸುತ್ತಾನೆ. ನೀವು ಆತನನ್ನು ಪ್ರೀತಿಸಿ, ನಿಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಆತನ ಸೇವೆ ಮಾಡಬೇಕೆಂದು ಆತನು ಅಪೇಕ್ಷಿಸುತ್ತಾನೆ.


ನೀನು ಹೀಗೆ ಮಾಡಿದರೆ ನನ್ನ ಹೆಸರಿನ ಮೇಲೆ ಪ್ರಮಾಣ ಮಾಡಲು ಶಕ್ತಳಾಗುವೆ. ‘ಹಾದು, ಯೆಹೋವನಾಣೆ’ ಎಂದು ಹೇಳಶಕ್ತಳಾಗುವೆ. ನೀನು ಆ ಪದಗಳನ್ನು ಸತ್ಯವಾಗಿಯೂ ಪ್ರಾಮಾಣಿಕವಾಗಿಯೂ ಸರಿಯಾಗಿ ಉಪಯೋಗಿಸಲು ಸಾಧ್ಯವಾಗುತ್ತದೆ. ನೀನು ಹೀಗೆ ಮಾಡಿದರೆ, ಎಲ್ಲಾ ಜನಾಂಗಗಳು ಯೆಹೋವನ ಆಶೀರ್ವಾದವನ್ನು ಪಡೆಯುತ್ತವೆ. ಆತನ ಕಾರ್ಯಗಳಿಗಾಗಿ ಆತನಿಗೆ ಸ್ತೋತ್ರ ಮಾಡುತ್ತವೆ.”


ಈಗ ನೀವು ನನಗೊಂದು ಪ್ರಮಾಣ ಮಾಡಬೇಕು. ನಾನು ನಿಮಗೆ ದಯೆತೋರಿ ಸಹಾಯ ಮಾಡಿದೆ. ಆದ್ದರಿಂದ ನೀವು ಸಹ ನನ್ನ ಕುಟುಂಬದವರಿಗೆ ದಯೆತೋರುವಿರೆಂಬುದಕ್ಕೆ ಒಂದು ಗುರುತನ್ನು ಕೊಡಿರಿ.


ಅವನು ದೇವದೂಷಕರನ್ನು ತಿರಸ್ಕರಿಸುವವನೂ ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಗೌರವಿಸುವವನೂ ತನಗೆ ತೊಂದರೆಯಾದರೂ ಕೊಟ್ಟ ಮಾತಿಗೆ ತಪ್ಪದವನೂ ಆಗಿರಬೇಕು.


ನೀವೂ ಮತ್ತು ನಿಮ್ಮ ಸಂತತಿಯವರೂ ಜೀವಿಸುವ ದಿನಗಳಲ್ಲೆಲ್ಲಾ ದೇವರಾದ ಯೆಹೋವನನ್ನು ಗೌರವಿಸಬೇಕು. ನಾನೀಗ ಕೊಡುವ ಎಲ್ಲಾ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ಅನುಸರಿಸಬೇಕು. ಹಾಗೆ ಮಾಡಿದ್ದಲ್ಲಿ ನೀವು ನೆಲೆಸುವ ಜಾಗದಲ್ಲಿ ನೀವು ಬಹುಕಾಲ ಜೀವಿಸುವಿರಿ.


ಆದರೆ ಅವರು ಆಲೋಚಿಸುವ ರೀತಿಯನ್ನು ನಾನು ಬದಲಾಯಿಸಬೇಕಾಗಿದೆ. ಅವರು ನನಗೆ ವಿಧೇಯರಾಗಿ ನನ್ನ ಆಜ್ಞೆಗಳನ್ನೆಲ್ಲಾ ಅನುಸರಿಸಿ ತಮ್ಮ ಹೃದಯಗಳಿಂದ ನನ್ನನ್ನು ಗೌರವಿಸಬೇಕು. ಆಗ ಅವರಿಗೂ ಅವರ ಸಂತತಿಯವರಿಗೂ ಶಾಶ್ವತವಾಗಿ ಶುಭವಿರುವುದು.


“ಯೆಹೂದವೇ, ನಾನು ನಿನ್ನನ್ನು ಏಕೆ ಕ್ಷಮಿಸಬೇಕು? ಒಂದು ಕಾರಣವನ್ನಾದರೂ ಕೊಡು. ನಿನ್ನ ಮಕ್ಕಳು ನನ್ನನ್ನು ತೊರೆದಿದ್ದಾರೆ. ದೇವರುಗಳೇ ಅಲ್ಲದ ವಿಗ್ರಹಗಳಿಗೆ ಅವರು ಹರಕೆ ಹೊತ್ತಿದ್ದಾರೆ. ನಾನು ನಿನ್ನ ಮಕ್ಕಳಿಗೆ ಬೇಕಾದದ್ದನ್ನು ಕೊಟ್ಟೆ. ಆದರೂ ಅವರು ನನಗೆ ನಂಬಿಗಸ್ತರಾಗಿ ಉಳಿಯಲಿಲ್ಲ. ಅವರು ತಮ್ಮ ಹೆಚ್ಚಿನ ಸಮಯವನ್ನು ವೇಶ್ಯೆಯರ ಮನೆಗಳಲ್ಲಿ ಕಳೆದರು.


ಜನರು ಆಣೆ ಮಾಡುವಾಗ ‘ಯೆಹೋವನಾಣೆ’ ಎಂದು ಹೇಳುವರು. ಆದರೆ ಅದು ಕೇವಲ ಬಾಯಿ ಮಾತಷ್ಟೇ ಹೊರತು ಯಥಾರ್ಥವಾದದ್ದಲ್ಲ.”


“‘ನೀವಿಟ್ಟ ಆಣೆಯನ್ನು ಮೀರಬೇಡಿರಿ. ಪ್ರಭುವಿಗೆ ನೀವಿಟ್ಟ ಆಣೆಗಳನ್ನು ಕೈಗೊಳ್ಳಲೇಬೇಕು’ ಎಂದು ನಮ್ಮ ಪೂರ್ವಿಕರಿಗೆ ಹೇಳಿದ್ದನ್ನು ನೀವು ಕೇಳಿದ್ದೀರಿ.


“ನಿಮ್ಮ ದೇವರಾದ ಯೆಹೋವನ ಹೆಸರನ್ನು ಅಯೋಗ್ಯ ಕಾರ್ಯಕ್ಕಾಗಿ ಉಪಯೋಗಿಸಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಉಪಯೋಗಿಸುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.


ನೀವು ನಿಮ್ಮ ದೇವರಾದ ಯೆಹೋವನನ್ನೇ ಆರಾಧಿಸಬೇಕು. ಆಗ ಆತನು ನಿಮ್ಮ ಅನ್ನಪಾನಗಳನ್ನು ಆಶೀರ್ವದಿಸುವನು. ನಾನು ನಿಮ್ಮೊಳಗಿಂದ ಎಲ್ಲಾ ವ್ಯಾಧಿಯನ್ನು ತೆಗೆದುಬಿಡುವೆನು.


‘ನಿನ್ನ ದೇವರಾದ ಯೆಹೋವನ ಹೆಸರನ್ನು ಅಯೋಗ್ಯ ಕಾರ್ಯಕ್ಕಾಗಿ ಎತ್ತಬಾರದು. ಯಾರಾದರೂ ಅಯೋಗ್ಯ ಕಾರ್ಯಕ್ಕಾಗಿ ನನ್ನ ಹೆಸರನ್ನು ಉಪಯೋಗಿಸಿದರೆ ನಾನು ಅವನನ್ನು ಶಿಕ್ಷಿಸುವೆನು.


ಇಸ್ರೇಲರಲ್ಲದ ಕೆಲವು ಜನರು ನಮ್ಮೊಂದಿಗೆ ವಾಸಮಾಡಿಕೊಂಡಿದ್ದಾರೆ. ಅವರು ತಮ್ಮ ದೇವರುಗಳನ್ನೇ ಪೂಜಿಸುತ್ತಾರೆ. ಅವರೊಂದಿಗೆ ಸ್ನೇಹ ಮಾಡಬೇಡಿ. ಅವರ ದೇವರುಗಳ ಸೇವೆಯನ್ನಾಗಲಿ ಪೂಜೆಯನ್ನಾಗಲಿ ಮಾಡಬೇಡಿ. ಆ ದೇವರುಗಳ ಹೆಸರುಗಳ ಮೂಲಕ ಬೇಡಿಕೊಳ್ಳಬೇಡಿ. ಅವುಗಳ ಮೇಲೆ ಪ್ರಮಾಣ ಮಾಡಬೇಡಿ. ಅವುಗಳಿಗೆ ಅಡ್ಡಬಿದ್ದು ಪೂಜಿಸಬೇಡಿ.


ಸಮುವೇಲನು ಇಸ್ರೇಲರಿಗೆ, “ನೀವು ಯೆಹೋವನ ಬಳಿಗೆ ಪೂರ್ಣಮನಸ್ಸಿನಿಂದ ಮತ್ತೆ ಬರುವುದಾದರೆ ನಿಮ್ಮ ಬಳಿಯಿರುವ ಅನ್ಯದೇವರುಗಳನ್ನು ಎಸೆಯಬೇಕು. ನೀವು ಅಷ್ಟೋರೆತ್ ದೇವತೆಯ ವಿಗ್ರಹಗಳನ್ನು ತ್ಯಜಿಸಬೇಕು. ನೀವು ನಿಮ್ಮನ್ನು ಯೆಹೋವನಿಗೆ ಸಂಪೂರ್ಣವಾಗಿ ಒಪ್ಪಿಸಿಕೊಟ್ಟು ಆತನ ಸೇವೆಯನ್ನು ಮಾತ್ರ ಮಾಡಬೇಕು. ಆಗ ಆತನು ನಿಮ್ಮನ್ನು ಫಿಲಿಷ್ಟಿಯರಿಂದ ರಕ್ಷಿಸುತ್ತಾನೆ” ಎಂದು ಹೇಳಿದನು.


ಆದರೆ ದಾವೀದನು, “ನಾನು ನಿನ್ನ ಗೆಳೆಯನೆಂಬುದು ನಿನ್ನ ತಂದೆಗೆ ಚೆನ್ನಾಗಿ ತಿಳಿದಿದೆ. ನಿನ್ನ ತಂದೆಯು, ‘ಯೋನಾತಾನನಿಗೆ ಇದು ತಿಳಿಯಲೇಬಾರದು. ಅವನಿಗೆ ತಿಳಿದುಬಿಟ್ಟರೆ ಅವನು ತನ್ನ ಹೃದಯದಲ್ಲಿ ದುಃಖಪಟ್ಟು ದಾವೀದನಿಗೆ ಹೇಳಿಬಿಡುತ್ತಾನೆ’ ಎಂದುಕೊಂಡಿದ್ದಾನೆ. ಯೆಹೋವನಾಣೆ, ನಿನ್ನ ಜೀವದಾಣೆ, ನಾನು ಸಾವಿಗೆ ಬಹು ಹತ್ತಿರವಾಗಿದ್ದೇನೆ” ಎಂದು ಹೇಳಿದನು.


ಆದರೆ ನೀವು ಯೆಹೋವನನ್ನು ಅನುಸರಿಸಲೇಬೇಕು. ನಿಮ್ಮನ್ನು ಈಜಿಪ್ಟಿನಿಂದ ಹೊರಗೆತಂದ ದೇವರೇ ನಿಮ್ಮ ಯೆಹೋವ. ಯೆಹೋವನು ನಿಮ್ಮನ್ನು ರಕ್ಷಿಸಲು ತನ್ನ ಮಹಾಶಕ್ತಿಯನ್ನು ಬಳಸಿದನು. ನೀವು ಯೆಹೋವನನ್ನು ಗೌರವಿಸಿ ಆರಾಧಿಸಬೇಕು ಮತ್ತು ಆತನಿಗೆ ಯಜ್ಞಗಳನ್ನು ಅರ್ಪಿಸಬೇಕು.


ಯೆಹೋವನು ಹೇಳುವುದೇನೆಂದರೆ, “ಯಾಕೋಬನ ಮನೆತನದವರೇ, ನನ್ನ ಮಾತುಗಳನ್ನು ಕೇಳಿರಿ. ಜನರು ನಿಮ್ಮನ್ನು ಇಸ್ರೇಲ್ ಎಂದು ಕರೆಯುತ್ತಾರೆ. ನೀವು ಯೆಹೂದದ ಕುಟುಂಬದವರು. ನೀವು ಯೆಹೋವನ ಹೆಸರಿನಲ್ಲಿ ಒಡಂಬಡಿಕೆ ಮಾಡಿಕೊಳ್ಳುವಿರಿ. ನೀವು ಯೆಹೋವನ ನಾಮವನ್ನು ಸ್ತುತಿಸುವಿರಿ, ಆದರೆ ನೀವು ಇವುಗಳನ್ನು ಮಾಡುವಾಗ ನಂಬಿಗಸ್ತರಾಗಿರುವದಿಲ್ಲ; ಯಥಾರ್ಥರಾಗಿರುವುದಿಲ್ಲ.


ಕಾನಾನ್ ದೇಶದ ಕನ್ನಿಕೆಯನ್ನು ನನ್ನ ಮಗನು ಮದುವೆಯಾಗದಂತೆ ನೀನು ನೋಡಿಕೊಳ್ಳುವುದಾಗಿಯೂ


ಅಂಥ ಪ್ರವಾದಿ ಅಥವಾ ಕನಸಿನ ಅರ್ಥ ಹೇಳುವವನನ್ನು ಕೊಂದು ಹಾಕಬೇಕು. ಯಾಕೆಂದರೆ ಅವನು ಯೆಹೋವನನ್ನು ತೊರೆಯಲು ಪ್ರೇರೇಪಿಸಿದನಲ್ಲಾ? ದೇವರಾದ ಯೆಹೋವನೇ ನಿಮ್ಮನ್ನು ಈಜಿಪ್ಟಿನಿಂದ ಬಿಡಿಸಿದವನು. ಆತನು ನಿಮಗೆ ಹೇಳಿದ ನಿಯಮಗಳಿಗೆ ವಿರುದ್ಧವಾಗಿ ನಡೆಯಲು ಪ್ರೇರೇಪಿಸುವವನನ್ನು ಕೊಲ್ಲಬೇಕು; ನಿಮ್ಮ ಮಧ್ಯದಿಂದ ಅಂಥ ದುಷ್ಟತನವನ್ನು ತೆಗೆದುಹಾಕಬೇಕು.


ತರುವಾಯ ಯೆಹೋಶುವನು ಜನರಿಗೆ, “ಈಗ ನೀವು ಯೆಹೋವನ ಮಾತುಗಳನ್ನು ಕೇಳಿದ್ದೀರಿ. ನೀವು ಆತನಲ್ಲಿ ಭಯಭಕ್ತಿಯಿಂದಿರಬೇಕು. ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆಯಲ್ಲಿಯೂ ಈಜಿಪ್ಟಿನಲ್ಲಿಯೂ ಪೂಜಿಸುತ್ತಿದ್ದ ಸುಳ್ಳುದೇವರುಗಳನ್ನು ಎಸೆದುಬಿಡಿ. ಈಗ ನೀವು ಯೆಹೋವನ ಸೇವೆಯನ್ನು ಮಾತ್ರ ಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು