Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 6:21 - ಪರಿಶುದ್ದ ಬೈಬಲ್‌

21 ಆಗ ನೀವು ಹೀಗೆ ಉತ್ತರಿಸಬೇಕು: ‘ನಾವು ಈಜಿಪ್ಟಿನಲ್ಲಿ ಫರೋಹನ ಗುಲಾಮರಾಗಿದ್ದೆವು. ಆದರೆ ನಮ್ಮ ದೇವರಾದ ಯೆಹೋವನು ತನ್ನ ಪರಾಕ್ರಮದಿಂದ ನಮ್ಮನ್ನು ಬಿಡುಗಡೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನೀವು ಅವರಿಗೆ, “ನಾವು ಐಗುಪ್ತದೇಶದಲ್ಲಿ ಫರೋಹನಿಗೆ ದಾಸರಾಗಿದ್ದಾಗ ಯೆಹೋವನು ತನ್ನ ಭುಜಬಲದಿಂದ ನಮ್ಮನ್ನು ಬಿಡುಗಡೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆಗ ನೀವು ಅವರಿಗೆ, ‘ನಾವು ಈಜಿಪ್ಟಿನಲ್ಲಿ ಫರೋಹನಿಗೆ ಗುಲಾಮರಾಗಿ ಇದ್ದೆವು. ಸರ್ವೇಶ್ವರ ತಮ್ಮ ಭುಜಬಲದಿಂದ ನಮ್ಮನ್ನು ಬಿಡುಗಡೆ ಮಾಡಿದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನೀವು ಅವರಿಗೆ - ನಾವು ಐಗುಪ್ತದೇಶದಲ್ಲಿ ಫರೋಹನಿಗೆ ದಾಸರಾಗಿದ್ದಾಗ ಯೆಹೋವನು ತನ್ನ ಭುಜಬಲದಿಂದ ನಮ್ಮನ್ನು ಬಿಡುಗಡೆ ಮಾಡಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆಗ ನೀವು ಅವರಿಗೆ, “ನಾವು ಈಜಿಪ್ಟ್ ದೇಶದಲ್ಲಿ ಫರೋಹನನಿಗೆ ದಾಸರಾಗಿದ್ದೆವು. ಯೆಹೋವ ದೇವರು ಬಲವಾದ ಕೈಯಿಂದ ನಮ್ಮನ್ನು ಈಜಿಪ್ಟಿನೊಳಗಿಂದ ಹೊರಗೆ ಬರಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 6:21
21 ತಿಳಿವುಗಳ ಹೋಲಿಕೆ  

ನೀವು ಈಜಿಪ್ಟಿನಲ್ಲಿ ದಾಸತ್ವದಲ್ಲಿದ್ದುದನ್ನು ನೆನಪುಮಾಡಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡಿಸಿದನು. ಆದ್ದರಿಂದಲೇ ನಾನು ಈ ಆಜ್ಞೆಯನ್ನು ನಿಮಗೆ ಕೊಡುತ್ತಿದ್ದೇನೆ.


“ಯೆಹೋವನು ಹೇಳಿದ್ದೇನೆಂದರೆ: ‘ನಾನು ನಿಮ್ಮ ದೇವರಾದ ಯೆಹೋವನು. ನೀವು ಈಜಿಪ್ಟಿನಲ್ಲಿ ಗುಲಾಮರಾಗಿದ್ದಾಗ ನಿಮ್ಮನ್ನು ಅಲ್ಲಿಂದ ಬಿಡುಗಡೆ ಮಾಡಿದೆನು. ಆದ್ದರಿಂದ ನೀವು ಈ ಆಜ್ಞೆಗಳಿಗೆ ವಿಧೇಯರಾಗಬೇಕು:


“ಯೆಹೋವನೆಂಬ ನಾನೇ ನಿಮ್ಮ ದೇವರು. ಈಜಿಪ್ಟಿನಲ್ಲಿ ಗುಲಾಮರಾಗಿದ್ದ ನಿಮ್ಮನ್ನು ಆ ದೇಶದಿಂದ ಹೊರಗೆ ನಡಿಸಿದವನು ನಾನೇ.


“ಒಳ್ಳೆಯವರಾಗಿ ಜೀವಿಸಲು ಬಹಳವಾಗಿ ಪ್ರಯತ್ನಿಸುತ್ತಿರುವ ಯೆಹೋವನ ಭಕ್ತರೇ, ನನ್ನ ಮಾತನ್ನು ಕೇಳಿರಿ. ನಿಮ್ಮ ಪಿತೃವಾದ ಅಬ್ರಹಾಮನನ್ನೇ ದೃಷ್ಟಿಸಿ ನೋಡಿರಿ; ಆ ಬಂಡೆಯೊಳಗಿಂದಲೇ ನೀವು ತೆಗೆಯಲ್ಪಟ್ಟಿದ್ದೀರಿ.


ನೀವು ಈಜಿಪ್ಟ್ ದೇಶದಲ್ಲಿ ಗುಲಾಮರಾಗಿದ್ದಿರೆಂಬುದನ್ನು ಮರೆಯಬೇಡಿ. ನಿಮ್ಮ ದೇವರಾದ ಯೆಹೋವನು ತನ್ನ ಮಹಾಶಕ್ತಿಯಿಂದ ನಿಮ್ಮನ್ನು ಈಜಿಪ್ಟಿನಿಂದ ಬಿಡಿಸಿ ನಿಮ್ಮನ್ನು ಸ್ವತಂತ್ರರನ್ನಾಗಿ ಮಾಡಿದನು. ಆದ್ದರಿಂದಲೇ ನಿಮ್ಮ ದೇವರು ಸಬ್ಬತ್ ದಿನವನ್ನು ಆಚರಿಸಬೇಕೆಂದು ಆಜ್ಞೆ ಮಾಡಿದ್ದು.


ಮೋಶೆಯು ಜನರಿಗೆ, “ನೀವು ಈಜಿಪ್ಟಿನ ಗುಲಾಮತನದಿಂದ ಬಿಡುಗಡೆಯಾದ ಈ ದಿನವನ್ನು ಜ್ಞಾಪಕಮಾಡಿಕೊಳ್ಳಿರಿ. ಆದರೆ ಈ ದಿನದಲ್ಲಿ ಯೆಹೋವನು ತನ್ನ ಮಹಾಶಕ್ತಿಯಿಂದ ನಿಮ್ಮನ್ನು ಸ್ವತಂತ್ರರನ್ನಾಗಿ ಮಾಡಿದನು. ನೀವು ಹುಳಿಯಿರುವ ರೊಟ್ಟಿಯನ್ನು ತಿನ್ನಬಾರದು.


“ಆದರೆ ಈಜಿಪ್ಟಿನ ರಾಜನು ನಿಮ್ಮನ್ನು ಹೋಗಗೊಡಿಸುವುದಿಲ್ಲ ಎಂಬುದು ನನಗೆ ಗೊತ್ತಿದೆ.


ಆದರೆ ಲೋಟನು ಗಲಿಬಿಲಿಗೊಂಡು ತಡಮಾಡಲು ಆ ಇಬ್ಬರು ಪುರುಷರು ಲೋಟನನ್ನೂ ಅವನ ಹೆಂಡತಿಯನ್ನೂ ಅವನ ಇಬ್ಬರು ಹೆಣ್ಣುಮಕ್ಕಳನ್ನೂ ಕೈಹಿಡಿದುಕೊಂಡು ನಗರದ ಹೊರಕ್ಕೆ ಸುರಕ್ಷಿತವಾಗಿ ತಂದುಬಿಟ್ಟರು. ಹೀಗೆ ಯೆಹೋವನು ಲೋಟನಿಗೂ ಅವನ ಕುಟುಂಬದವರಿಗೂ ದಯೆತೋರಿದನು.


ಬೇರೊಂದು ಜನಾಂಗದೊಳಗಿಂದ ಜನರನ್ನು ತನಗೋಸ್ಕರ ತೆಗೆದುಕೊಳ್ಳಲು ಬೇರೆ ಯಾವ ದೇವರಾದರೂ ಎಂದಾದರೂ ಪ್ರಯತ್ನಿಸಿದ್ದುಂಟೇ? ಇಲ್ಲ! ಆದರೆ ದೇವರಾದ ಯೆಹೋವನು ಇಂಥ ಮಹಾಕಾರ್ಯಗಳನ್ನು ಮಾಡುವುದನ್ನು ನೀವು ನೋಡಿದ್ದೀರಿ! ಆತನು ನಿಮಗೆ ತನ್ನ ಶಕ್ತಿಯನ್ನು, ಬಲವನ್ನು, ಅದ್ಭುತಕಾರ್ಯಗಳನ್ನು ಮತ್ತು ಆಶ್ಚರ್ಯಕರವಾದ ಕಾರ್ಯಗಳನ್ನು ತೋರಿಸಿದ್ದಾನೆ. ಆತನು ಈಜಿಪ್ಟಿನ ಮೇಲೆ ಬರಮಾಡಿದ ವಿಪತ್ತುಗಳನ್ನು ಮತ್ತು ಭಯಂಕರವಾದ ಘಟನೆಗಳನ್ನು ನೀವು ನೋಡಿದ್ದೀರಿ!


“ಮುಂದಿನ ದಿನಗಳಲ್ಲಿ ನಿಮ್ಮ ಮಕ್ಕಳು ನಿಮಗೆ ಈ ಪ್ರಶ್ನೆ ಕೇಳಬಹುದು: ‘ಯೆಹೋವದೇವರು ನಮಗೆ ನ್ಯಾಯವಿಧಿ, ನಿಯಮಗಳನ್ನು ಕೊಟ್ಟಿರುತ್ತಾನೆ. ಇವುಗಳ ಅರ್ಥವೇನು?’


ಯೆಹೋವನು ಈಜಿಪ್ಟಿನವರನ್ನೂ ಫರೋಹನನ್ನೂ ಅವನ ಪರಿವಾರದವರನ್ನೂ ಸೂಚಕಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ಮಹತ್ಕಾರ್ಯಗಳಿಂದಲೂ ಭಯಂಕರ ಕಾರ್ಯಗಳಿಂದಲೂ ಬಾಧಿಸಿದನು.


“ಈ ಹಬ್ಬವು ನಿಮ್ಮ ಕೈಗಳಲ್ಲಿ ಜ್ಞಾಪಕಪಟ್ಟಿಯಂತಿದ್ದು ಯೆಹೋವನು ತನ್ನ ಮಹಾಶಕ್ತಿಯಿಂದ ನಿಮ್ಮನ್ನು ಈಜಿಪ್ಟಿನಿಂದ ಬಿಡಿಸಿದ್ದನ್ನು ಮತ್ತು ನಿಮಗೆ ಆತನು ನೀಡಿದ ಉಪದೇಶಗಳನ್ನು ನೆನಪಿಗೆ ತರುತ್ತದೆ.


“ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು, ‘ನೀವು ಹೀಗೇಕೆ ಮಾಡುತ್ತೀರಿ?’ ಎಂದು ಕೇಳುವಾಗ ನೀವು, ‘ಯೆಹೋವನು ನಮ್ಮನ್ನು ಈಜಿಪ್ಟಿನಿಂದ ತನ್ನ ಮಹಾಶಕ್ತಿಯಿಂದ ರಕ್ಷಿಸಿದನು. ನಾವು ಅಲ್ಲಿ ಗುಲಾಮರಾಗಿದ್ದೆವು, ಆದರೆ ಯೆಹೋವನು ನಮ್ಮನ್ನು ಇಲ್ಲಿಗೆ ಕರೆದುಕೊಂಡು ಬಂದನು.


ಇದು ನಿಮ್ಮ ಕೈಗೆ ದಾರ ಕಟ್ಟಿದಂತಿರುತ್ತದೆ; ನಿಮ್ಮ ಕಣ್ಣುಗಳ ಮುಂದೆ ಒಂದು ಚಿಹ್ನೆಯಂತೆ ಇರುತ್ತದೆ. ಯೆಹೋವನು ತನ್ನ ಮಹಾಶಕ್ತಿಯಿಂದ ನಮ್ಮನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದನೆಂಬುದನ್ನು ಜ್ಞಾಪಿಸಿಕೊಳ್ಳಲು ಇದು ಸಹಾಯ ಮಾಡುತ್ತದೆ.”


ಆಗ ಅವರೆಲ್ಲರೂ ದೇವರಲ್ಲಿ ಭರವಸೆ ಇಡುವರು. ದೇವರ ಮಹತ್ಕಾರ್ಯಗಳನ್ನು ಅವರು ಮರೆಯುವುದೇ ಇಲ್ಲ. ಅವರು ಜಾಗ್ರತೆಯಿಂದ ದೇವರ ಆಜ್ಞೆಗಳಿಗೆ ವಿಧೇಯರಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು