Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 6:3 - ಪರಿಶುದ್ದ ಬೈಬಲ್‌

3 ಇಸ್ರೇಲಿನ ಜನರೇ, ಕಿವಿಗೊಟ್ಟು ಕೇಳಿರಿ. ದೇವರ ಆಜ್ಞೆಗಳಿಗೆ ವಿಧೇಯರಾಗಿರಿ. ಆಗ ನಿಮಗೆ ಎಲ್ಲಾದರಲ್ಲಿ ಶುಭವಾಗುವುದು. ನಿಮಗೆ ಹೆಚ್ಚು ಮಕ್ಕಳಾಗುವವು. ನೀವು ನೆಲೆಸುವ ದೇಶವು ನಿಮ್ಮ ಪೂರ್ವಿಕರಿಗೆ ದೇವರು ವಾಗ್ದಾನ ಮಾಡಿದ ಪ್ರಕಾರ ಫಲಭರಿತವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆದುದರಿಂದ ಇಸ್ರಾಯೇಲರೇ, ನಿಮ್ಮ ಪೂರ್ವಿಕರ ದೇವರಾದ ಯೆಹೋವನು ವಾಗ್ದಾನಮಾಡಿದ ಪ್ರಕಾರ ಹಾಲೂ ಮತ್ತು ಜೇನೂ ಹರಿಯುವ ಆ ದೇಶದಲ್ಲಿ ನಿಮಗೆ ಶುಭವುಂಟಾಗುವುದಕ್ಕೂ, ನೀವು ಬಹಳವಾಗಿ ಹೆಚ್ಚುವುದಕ್ಕೂ ಈ ಆಜ್ಞೆಗಳನ್ನು ಲಕ್ಷ್ಯವಿಟ್ಟು ಕೇಳಿ ಅನುಸರಿಸಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆದುದರಿಂದ ಇಸ್ರಯೇಲರೇ, ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ವಾಗ್ದಾನ ಮಾಡಿದ ಪ್ರಕಾರ, ಹಾಲೂಜೇನೂ ಹರಿಯುವ ಆ ನಾಡಿನಲ್ಲಿ ನಿಮಗೆ ಶುಭವುಂಟಾಗುವಂತೆ, ನೀವು ಬಹಳವಾಗಿ ಹೆಚ್ಚಿ, ಅಭಿವೃದ್ಧಿಯಾಗುವಂತೆ, ಈ ಆಜ್ಞೆಗಳನ್ನು ಲಕ್ಷ್ಯವಿಟ್ಟು ಕೇಳಿ ಅನುಸರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆದದರಿಂದ ಇಸ್ರಾಯೇಲ್ಯರೇ, ನಿಮ್ಮ ಪಿತೃಗಳ ದೇವರಾದ ಯೆಹೋವನು ವಾಗ್ದಾನಮಾಡಿದ ಪ್ರಕಾರ ಹಾಲೂ ಜೇನೂ ಹರಿಯುವ ಆ ದೇಶದಲ್ಲಿ ನಿಮಗೆ ಶುಭವುಂಟಾಗುವದಕ್ಕೂ ನೀವು ಬಹಳವಾಗಿ ಹೆಚ್ಚುವದಕ್ಕೂ ಈ ಆಜ್ಞೆಗಳನ್ನು ಲಕ್ಷ್ಯವಿಟ್ಟು ಕೇಳಿ ಅನುಸರಿಸಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಹೀಗಿರುವುದರಿಂದ ಓ ಇಸ್ರಾಯೇಲರೇ, ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರು ವಾಗ್ದಾನ ಮಾಡಿದ ಪ್ರಕಾರ ಹಾಲೂ ಜೇನೂ ಹರಿಯುವ ದೇಶದಲ್ಲಿ ನಿಮಗೆ ಒಳ್ಳೆಯದಾಗುವ ಹಾಗೆಯೂ ನೀವು ಬಹಳವಾಗಿ ಹೆಚ್ಚುವ ಹಾಗೆಯೂ ಲಕ್ಷ್ಯವಿಟ್ಟು ಕೇಳಿ ವಿಧೇಯರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 6:3
25 ತಿಳಿವುಗಳ ಹೋಲಿಕೆ  

ನಾನು ನಿನ್ನನ್ನು ಖಂಡಿತವಾಗಿಯೂ ಆಶೀರ್ವದಿಸುವೆನು; ನಿನ್ನ ಸಂತತಿಯನ್ನು ಖಂಡಿತವಾಗಿಯೂ ಹೆಚ್ಚಿಸುವೆನು; ನಿನ್ನ ಸಂತತಿಯವರನ್ನು ಆಕಾಶದ ನಕ್ಷತ್ರಗಳಂತೆಯೂ ಸಮುದ್ರತೀರದ ಮರಳಿನಂತೆಯೂ ಅಸಂಖ್ಯಾತರನ್ನಾಗಿ ಮಾಡುವೆನು. ಅವರು ತಮ್ಮ ಶತ್ರುಗಳ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು.


ಈಗ ನಾನು ಇಳಿದುಹೋಗಿ ಈಜಿಪ್ಟಿನವರಿಂದ ನನ್ನ ಜನರನ್ನು ರಕ್ಷಿಸುವೆನು. ನಾನು ಅವರನ್ನು ಆ ದೇಶದಿಂದ ಬಿಡುಗಡೆ ಮಾಡಿ ಒಳ್ಳೆಯದಾದ ಮತ್ತು ವಿಶಾಲವಾದ ದೇಶಕ್ಕೆ ಅವರನ್ನು ನಡೆಸುವೆನು. ಅದು ಸಮೃದ್ಧಿಕರವಾದ ದೇಶ. ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ವಾಸವಾಗಿರುವ ದೇಶ ಅದಾಗಿದೆ.


ಭೂಮಿಯ ಮೇಲೆ ಧೂಳಿನ ಕಣಗಳಿರುವಂತೆ ನಿನಗೆ ಅನೇಕಾನೇಕ ಸಂತತಿಗಳಿರುವರು. ಅವರು ಪೂರ್ವಪಶ್ಚಿಮಗಳಿಗೂ ಉತ್ತರದಕ್ಷಿಣಗಳಿಗೂ ಹರಡಿಕೊಳ್ಳುವರು. ನಿನ್ನ ಮೂಲಕವೂ ನಿನ್ನ ಸಂತತಿಯವರ ಮೂಲಕವೂ ಭೂಮಿಯ ಮೇಲಿರುವ ಎಲ್ಲಾ ಕುಲಗಳವರು ಆಶೀರ್ವಾದ ಹೊಂದುವರು.


ನಾನು ನಿನ್ನ ಸಂತಾನವನ್ನು ಆಕಾಶದಲ್ಲಿನ ನಕ್ಷತ್ರಗಳಷ್ಟು ಹೆಚ್ಚಿಸಿ ಅವರಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ಭೂಮಿಯ ಮೇಲಿರುವ ಎಲ್ಲಾ ಜನಾಂಗಗಳವರು ನಿನ್ನ ಸಂತತಿಯಿಂದ ಆಶೀರ್ವಾದ ಹೊಂದುವರು.


ನಂತರ ದೇವರು ಅಬ್ರಾಮನನ್ನು ಹೊರಗೆ ಕರೆದುಕೊಂಡು ಬಂದು ಅವನಿಗೆ, “ಆಕಾಶದ ಕಡೆಗೆ ಕಣ್ಣೆತ್ತಿ ನಕ್ಷತ್ರಗಳನ್ನು ನೋಡು. ನೀನು ಲೆಕ್ಕ ಮಾಡಲಾರದಷ್ಟು ನಕ್ಷತ್ರಗಳಿವೆ. ಮುಂದಿನ ಕಾಲದಲ್ಲಿ ನಿನ್ನ ಕುಟುಂಬವು ಅದೇ ರೀತಿಯಲ್ಲಿರುವುದು” ಎಂದು ಹೇಳಿದನು.


“ಈಜಿಪ್ಟಿನಲ್ಲಿ ನಮ್ಮ ಜನರಾದ ಯೆಹೂದ್ಯರ ಸಂಖ್ಯೆಯು ಹೆಚ್ಚತೊಡಗಿತು. (ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದ ಕಾಲ ಬಹು ಶೀಘ್ರದಲ್ಲೇ ಬರಲಿತ್ತು.)


ಒಳ್ಳೆಯವರಿಗೆ ಒಳ್ಳೆಯವುಗಳೇ ಸಂಭವಿಸುತ್ತವೆ ಎಂಬುದಾಗಿ ತಿಳಿಸು. ಅವರು ಮಾಡುವ ಒಳ್ಳೆಯ ಕಾರ್ಯಗಳಿಗಾಗಿ ಅವರಿಗೆ ಬಹುಮಾನ ದೊರೆಯುವುದು.


ಒಬ್ಬ ಪಾಪಿಯು ನೂರು ದುಷ್ಕೃತ್ಯಗಳನ್ನು ಮಾಡಿ ಬಹುಕಾಲ ಬದುಕಬಹುದು. ಆದರೆ ದೇವರಲ್ಲಿ ಭಯಭಕ್ತಿಯುಳ್ಳವರಿಗೆ ಅದಕ್ಕಿಂತಲೂ ಮೇಲೇ ಆಗುವುದು.


ಆ ನಿಯಮಗಳನ್ನು ಪರಿಪೂರ್ಣವಾಗಿ ಅಭ್ಯಾಸಿಸಿರಿ, ‘ಆಗ ಅನ್ಯಜನರು ನಿಮ್ಮನ್ನು ನೋಡಿ ನೀವು ಜ್ಞಾನಿಗಳು’ ಎಂದು ತಿಳಿದುಕೊಳ್ಳುವರು. ಆ ದೇಶದ ಜನರು ನಿಮ್ಮ ವಿಧಿನಿಯಮಗಳನ್ನು ಕೇಳಿ, ‘ನಿಜವಾಗಿಯೂ ಈ ಮಹಾ ಜನಾಂಗದ ಜನರು ಬುದ್ಧಿಯುಳ್ಳವರು ಮತ್ತು ಜ್ಞಾನಿಗಳು’ ಎಂದು ಹೇಳುವರು


ಆದರೆ ಇಸ್ರೇಲರಿಗೆ ಅನೇಕ ಮಕ್ಕಳಿದ್ದರು; ಅವರ ಸಂಖ್ಯೆಯು ಹೆಚ್ಚಾಗತೊಡಗಿತು. ಇಸ್ರೇಲರು ಬಲಗೊಂಡರು; ಈಜಿಪ್ಟಿನಲ್ಲೆಲ್ಲಾ ತುಂಬಿಕೊಂಡರು.


ನಾನು ನಿನ್ನ ಜನರನ್ನು ಭೂಮಿಯ ಮೇಲಿರುವ ಧೂಳಿನಷ್ಟು ಹೆಚ್ಚಿಸುವೆನು. ಯಾವನಾದರೂ ಭೂಮಿಯ ಮೇಲಿರುವ ಧೂಳಿನ ಕಣಗಳನ್ನು ಲೆಕ್ಕಮಾಡಬಹುದಾದರೆ ನಿನ್ನ ಸಂತತಿಯವರ ಸಂಖ್ಯೆಯು ಅದರಷ್ಟೇ ಇರುವುದು.


ನಾನು ನಿನ್ನನ್ನು ಆಶೀರ್ವದಿಸುವೆನು; ನಿನ್ನನ್ನು ದೊಡ್ಡ ಜನಾಂಗವನ್ನಾಗಿ ಮಾಡಿ ನಿನ್ನ ಹೆಸರನ್ನು ಪ್ರಖ್ಯಾತಿಪಡಿಸುವೆನು; ನೀನು ಆಶೀರ್ವಾದದಾಯಕನಾಗುವಂತೆ ಮಾಡುವೆನು.


ಈಜಿಪ್ಟಿನಲ್ಲಿ ನೀವು ಅನುಭವಿಸುತ್ತಿರುವ ಸಂಕಟಗಳಿಂದ ಬಿಡಿಸಬೇಕೆಂದು ತೀರ್ಮಾನಿಸಿದ್ದೇನೆ. ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ವಾಸವಾಗಿರುವ ಸಮೃದ್ಧಿಕರವಾದ ದೇಶಕ್ಕೆ ನಾನು ನಿಮ್ಮನ್ನು ನಡೆಸುವೆನು!’ ಎಂದು ಹೇಳು.


ನಾನು ಈ ಹೊತ್ತು ಕೊಡಲಿರುವ ಆತನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ನೀವು ಪರಿಪಾಲಿಸಬೇಕು. ಆಗ ನಿಮಗೂ ನಿಮ್ಮ ನಂತರ ಜೀವಿಸುವ ನಿಮ್ಮ ಮಕ್ಕಳಿಗೂ ಶುಭವಾಗುವುದು. ದೇವರಾದ ಯೆಹೋವನು ನಿಮಗೆ ಕೊಡಲಿರುವ ದೇಶದಲ್ಲಿ ಶಾಶ್ವತವಾಗಿ ಬಾಳುವಿರಿ!”


ನಾನು ಅವರಿಗೆ, ‘ನನಗೆ ವಿಧೇಯರಾಗಿರಿ. ನಾನು ನಿಮಗೆ ದೇವರಾಗಿರುತ್ತೇನೆ, ನೀವು ನನ್ನ ಭಕ್ತರಾಗಿರುತ್ತೀರಿ. ನಾನು ಆಜ್ಞಾಪಿಸಿದ್ದನ್ನೆಲ್ಲವನ್ನು ಮಾಡಿರಿ, ಅದರಿಂದ ನಿಮಗೆ ಒಳ್ಳೆಯದಾಗುವುದು’ ಎಂದು ಮಾತ್ರ ಆಜ್ಞಾಪಿಸಿದ್ದೆ.


ಯೆಹೋವನ ಸಂದೇಶವು ನಮಗೆ ಇಷ್ಟವಾಗಲಿ ಅಥವಾ ಇಷ್ಟವಾಗದಿರಲಿ ನಾವು ನಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಪಾಲಿಸುತ್ತೇವೆ. ಯೆಹೋವನ ಸಂದೇಶಕ್ಕಾಗಿ ನಾವು ನಿನ್ನನ್ನು ಆತನಲ್ಲಿಗೆ ಕಳುಹಿಸುತ್ತಿದ್ದೇವೆ. ಆತನು ಹೇಳಿದಂತೆ ನಾವು ನಡೆದುಕೊಳ್ಳುತ್ತೇವೆ. ಆಗ ನಮಗೆ ಒಳ್ಳೆಯದಾಗುತ್ತದೆ. ಹೌದು, ನಮ್ಮ ದೇವರಾದ ಯೆಹೋವನು ಹೇಳಿದಂತೆಯೇ ನಾವು ನಡೆದುಕೊಳ್ಳುತ್ತೇವೆ” ಎಂದು ಹೇಳಿದರು.


ನಾನು ನಿನ್ನ ಪೂರ್ವಿಕರ ದೇವರು, ನಾನು ಅಬ್ರಹಾಮನ ದೇವರು, ನಾನು ಇಸಾಕನ ದೇವರು, ನಾನು ಯಾಕೋಬನ ದೇವರು” ಎಂದು ಹೇಳಿದನು. ದೇವರನ್ನು ನೋಡುವುದಕ್ಕೆ ಭಯಪಟ್ಟು ಮೋಶೆ ತನ್ನ ಮುಖವನ್ನು ಮುಚ್ಚಿಕೊಂಡನು.


ಆ ದೇಶವು ಗೋಧಿ, ಜವೆಗೋಧಿ, ದ್ರಾಕ್ಷಾಲತೆಗಳು, ಅಂಜೂರ, ದಾಳಿಂಬೆ ಮರಗಳಿಂದ ತುಂಬಿದೆ. ಅಲ್ಲಿ ಎಣ್ಣೆ, ಜೇನುತುಪ್ಪ ಧಾರಾಳವಾಗಿ ಸಿಗುವವು.


ಆ ದೇಶದಲ್ಲಿ ನೀವು ಬಹುಕಾಲ ಬಾಳುವಿರಿ. ಆ ದೇಶವು ಎಲ್ಲಾ ಒಳ್ಳೆಯ ವಸ್ತುಗಳಿಂದ ತುಂಬಿದೆ. ಆ ದೇಶವನ್ನು ನಿಮ್ಮ ಪೂರ್ವಿಕರಿಗೆ ಕೊಡುವುದಾಗಿ ದೇವರು ವಾಗ್ದಾನ ಮಾಡಿದ್ದಾನೆ.


ಅಲ್ಲಿಂದ ನಮ್ಮನ್ನು ಕರೆದುತಂದು ನಮಗೆ ಈ ಒಳ್ಳೆಯ ದೇಶವನ್ನು ಕೊಟ್ಟನು.


ನಿನ್ನ ಪರಿಶುದ್ಧ ನಿವಾಸದಿಂದ ನನ್ನನ್ನು ನೋಡು. ನಿನ್ನ ಜನಾಂಗವಾದ ಇಸ್ರೇಲನ್ನು ಆಶೀರ್ವದಿಸು. ನೀನು ನಮಗೆ ಕೊಟ್ಟಿರುವ ದೇಶವನ್ನು ಆಶೀರ್ವದಿಸು. ಸಮೃದ್ಧಿಯಿಂದ ಕೂಡಿದ ಈ ದೇಶವನ್ನು ನಮಗೆ ಕೊಡುವೆ ಎಂದು ನಮ್ಮ ಪೂರ್ವಿಕರಿಗೆ ನೀನು ವಾಗ್ದಾನ ಮಾಡಿರುವೆ.’


ಅದರ ಮೇಲೆ ನಾನು ಆಜ್ಞಾಪಿಸಿದ್ದನ್ನೆಲ್ಲಾ ಬರೆಯಿರಿ. ನೀವು ನದಿಯನ್ನು ದಾಟಿದಾಗ ಈ ಕಾರ್ಯವನ್ನು ಮಾಡಬೇಕು. ಅನಂತರ, ಆತನು ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ಸಮೃದ್ಧಿಯಾದ ದೇಶದೊಳಕ್ಕೆ ಹೋಗಿರಿ.


ನಾನು ಅವರ ಪೂರ್ವಿಕರಿಗೆ ವಾಗ್ದಾನ ಮಾಡಿದ ದೇಶಕ್ಕೆ ಅವರನ್ನು ಕರೆದುಕೊಂಡು ಹೋಗುವೆನು. ಆ ದೇಶವು ಹಾಲೂಜೇನೂ ಹರಿಯುವ ದೇಶವಾಗಿರುತ್ತದೆ. ಅವರಿಗೆ ಇಷ್ಟ ಬಂದದ್ದನ್ನೆಲ್ಲಾ ತಿನ್ನಲು ಅವರಿಗೆ ಸಿಗುವುದು. ಅವರಿಗೆ ಸಮೃದ್ಧಿಯಾದ ಜೀವಿತವು ಇರುವುದು. ಆದರೆ ಅವರು ಸುಳ್ಳುದೇವರ ಕಡೆಗೆ ತಿರುಗಿ ಅವುಗಳನ್ನು ಪೂಜಿಸುವರು. ಅವರು ನನ್ನಿಂದ ತೊಲಗಿ ನನ್ನ ಒಡಂಬಡಿಕೆಯನ್ನು ಮುರಿದುಬಿಡುವರು.


ಯೆಹೋವನೇ, ನಮಗೆ ಆಜ್ಞೆಗಳನ್ನು ಕೊಟ್ಟವನೂ ನೀನೇ. ಅವುಗಳಿಗೆ ಸಂಪೂರ್ಣವಾಗಿ ವಿಧೇಯರಾಗಬೇಕೆಂದು ನಮಗೆ ಹೇಳಿದವನೂ ನೀನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು