Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 6:7 - ಪರಿಶುದ್ದ ಬೈಬಲ್‌

7 ನಿಮ್ಮ ಮಕ್ಕಳಿಗೆ ಇದನ್ನು ಕಲಿಸಲು ಮರೆಯಬೇಡಿರಿ. ನಿಮ್ಮ ಮನೆಗಳಲ್ಲಿ ಕುಳಿತಿರುವಾಗ, ರಸ್ತೆಗಳಲ್ಲಿ ನಡೆಯುತ್ತಿರುವಾಗ, ನೀವು ಮಲಗಿರುವಾಗ, ಎದ್ದಾಗ ಈ ಆಜ್ಞೆಗಳ ಕುರಿತಾಗಿ ಮಾತಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇವುಗಳನ್ನು ನಿಮ್ಮ ಮಕ್ಕಳಿಗೆ ಅಭ್ಯಾಸಮಾಡಿಸಿ, ಮನೆಯಲ್ಲಿ ಕುಳಿತಿರುವಾಗಲೂ, ದಾರಿಯಲ್ಲಿ ನಡೆಯುವಾಗಲೂ, ಮಲಗುವಾಗಲೂ ಮತ್ತು ಏಳುವಾಗಲೂ ಇವುಗಳ ವಿಷಯದಲ್ಲಿ ಮಾತನಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಇವುಗಳನ್ನು ನಿನ್ನ ಮಕ್ಕಳಿಗೆ ಮನದಟ್ಟಾಗಿಸು; ಮನೆಯಲ್ಲಿರುವಾಗಲು, ಪ್ರಯಾಣದಲ್ಲಿರುವಾಗಲು, ಮಲಗುವಾಗಲು, ಏಳುವಾಗಲು ಇವುಗಳನ್ನು ಕುರಿತು ಪಾಠಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇವುಗಳನ್ನು ನಿಮ್ಮ ಮಕ್ಕಳಿಗೆ ಅಭ್ಯಾಸಮಾಡಿಸಿ ಮನೆಯಲ್ಲಿ ಕೂತಿರುವಾಗಲೂ ದಾರಿನಡೆಯುವಾಗಲೂ ಮಲಗುವಾಗಲೂ ಏಳುವಾಗಲೂ ಇವುಗಳ ವಿಷಯದಲ್ಲಿ ಮಾತಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವುಗಳನ್ನು ನಿಮ್ಮ ಮಕ್ಕಳಿಗೆ ಅಭ್ಯಾಸ ಮಾಡಿಸಿ, ನಿಮ್ಮ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ನಡೆಯುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯವಾಗಿ ಮಾತನಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 6:7
29 ತಿಳಿವುಗಳ ಹೋಲಿಕೆ  

ಈ ಕಟ್ಟಳೆಗಳನ್ನು ನಿಮ್ಮ ಮಕ್ಕಳಿಗೆ ಬೋಧಿಸಿರಿ. ಅವುಗಳ ವಿಷಯವಾಗಿ ನೀವು ನಿಮ್ಮ ಮನೆಗಳಲ್ಲಿ ಕುಳಿತಿರುವಾಗ, ದಾರಿಯಲ್ಲಿ ನಡೆಯುತ್ತಿರುವಾಗ, ಮಲಗುವಾಗ, ಏಳುವಾಗ ನೀವು ಮಾತನಾಡುತ್ತಾ ಇರಬೇಕು.


ತಂದೆಗಳೇ, ನಿಮ್ಮ ಮಕ್ಕಳನ್ನು ಸಿಟ್ಟಿಗೆಬ್ಬಿಸದೆ ಪ್ರಭುವಿನ ಉಪದೇಶದಿಂದಲೂ ಬಾಲಶಿಕ್ಷೆಯಿಂದಲೂ ಬೆಳೆಸಿರಿ.


ನಿಮ್ಮ ಹೃದಯಗಳಲ್ಲಿ ಕ್ರಿಸ್ತನೇ ಪ್ರಭುವಾಗಿರಲಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೇನೆಂದು ನಿಮ್ಮನ್ನು ಕೇಳುವ ಪ್ರತಿಯೊಬ್ಬರಿಗೂ ಉತ್ತರ ಹೇಳಲು ಯಾವಾಗಲೂ ಸಿದ್ಧವಾಗಿರಿ.


ನೀವೂ ಮತ್ತು ನಿಮ್ಮ ಸಂತತಿಯವರೂ ಜೀವಿಸುವ ದಿನಗಳಲ್ಲೆಲ್ಲಾ ದೇವರಾದ ಯೆಹೋವನನ್ನು ಗೌರವಿಸಬೇಕು. ನಾನೀಗ ಕೊಡುವ ಎಲ್ಲಾ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ಅನುಸರಿಸಬೇಕು. ಹಾಗೆ ಮಾಡಿದ್ದಲ್ಲಿ ನೀವು ನೆಲೆಸುವ ಜಾಗದಲ್ಲಿ ನೀವು ಬಹುಕಾಲ ಜೀವಿಸುವಿರಿ.


ನಿಮ್ಮ ಬಾಯಿಂದ ಕೆಟ್ಟ ಮಾತುಗಳು ಬಾರದಿರಲಿ. ಭಕ್ತಿಯನ್ನು ವೃದ್ಧಿಮಾಡುವಂಥ ಕಾಲೋಚಿತವಾದ ಮಾತು ಇದ್ದರೆ ಕೇಳುವವರ ಹಿತಕ್ಕಾಗಿ ಅದನ್ನು ಆಡಿರಿ.


ನಾನು ಅವನೊಡನೆ ವಿಶೇಷವಾದ ಒಡಂಬಡಿಕೆಯನ್ನು ಮಾಡಿಕೊಂಡಿದ್ದೇನೆ. ಅವನು ತನ್ನ ಮಕ್ಕಳಿಗೂ ಸಂತತಿಯವರಿಗೂ ನನಗೆ ವಿಧೇಯರಾಗುವಂತೆ ಮತ್ತು ನ್ಯಾಯನೀತಿಗಳಿಂದ ಜೀವಿಸುವಂತೆ ಆಜ್ಞಾಪಿಸಲೆಂದು ನಾನು ಅವನೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡೆನು. ಅವರು ಹೀಗೆ ಜೀವಿಸಿದರೆ, ನನ್ನ ವಾಗ್ದಾನಗಳನ್ನೆಲ್ಲಾ ನೆರವೇರಿಸುವೆನು.”


ನೀನು ಹೋಗುವಲ್ಲೆಲ್ಲಾ ಅವರ ಉಪದೇಶಗಳು ನಿನ್ನನ್ನು ನಡೆಸುತ್ತವೆ. ನೀನು ಮಲಗಿರುವಾಗಲೂ ಅವು ನಿನ್ನನ್ನು ಕಾಯುತ್ತವೆ. ನೀನು ಎಚ್ಚರಗೊಂಡಾಗ ಅವು ನಿನ್ನೊಡನೆ ಮಾತಾಡಿ ನಿನಗೆ ಮಾರ್ಗದರ್ಶನ ನೀಡುತ್ತವೆ.


ಒಳ್ಳೆಯವನ ಹೃದಯದಲ್ಲಿ ಒಳ್ಳೆಯವು ಇರುತ್ತವೆ. ಆದ್ದರಿಂದ ಅವನ ಹೃದಯದೊಳಗಿಂದ ಒಳ್ಳೆಯವು ಹೊರಬರುತ್ತವೆ. ಆದರೆ ಕೆಟ್ಟವನ ಹೃದಯದಲ್ಲಿ ಕೆಟ್ಟವು ಇರುತ್ತವೆ. ಆದ್ದರಿಂದ ಅವನ ಹೃದಯದೊಳಗಿಂದ ಕೆಟ್ಟವು ಹೊರಬರುತ್ತವೆ. ಹೃದಯದಲ್ಲಿ ತುಂಬಿರುವುದೇ ಬಾಯಲ್ಲಿ ಬರುವುದು.


ಒಳ್ಳೆಯವನು ತನ್ನ ಹೃದಯದಲ್ಲಿ ಒಳ್ಳೆಯವುಗಳನ್ನು ಇಟ್ಟುಕೊಂಡಿರುತ್ತಾನೆ. ಆದ್ದರಿಂದ ಅವನು ತನ್ನ ಹೃದಯದಿಂದ ಬರುವ ಒಳ್ಳೆಯವುಗಳನ್ನೇ ಮಾತಾಡುತ್ತಾನೆ. ಆದರೆ ದುಷ್ಟನು ತನ್ನ ಹೃದಯದಲ್ಲಿ ಕೆಟ್ಟವುಗಳನ್ನು ಶೇಖರಿಸಿಕೊಂಡಿರುತ್ತಾನೆ. ಆದ್ದರಿಂದ ಅವನು ತನ್ನ ಹೃದಯದಿಂದ ಬರುವ ಕೆಟ್ಟವುಗಳನ್ನೇ ಮಾತಾಡುತ್ತಾನೆ.


ನೀವು ಮಾತನಾಡುವಾಗಲೆಲ್ಲಾ ದಯೆಯುಳ್ಳವರಾಗಿಯೂ ಜ್ಞಾನವುಳ್ಳವರಾಗಿಯೂ ಮಾತನಾಡಿರಿ. ಆಗ ಪ್ರತಿಯೊಬ್ಬರಿಗೂ ಯೋಗ್ಯವಾದ ರೀತಿಯಲ್ಲಿ ಉತ್ತರಿಸಲು ಶಕ್ತರಾಗುವಿರಿ.


ಜ್ಞಾನಿಯ ಮಾತುಗಳು ತಿಳುವಳಿಕೆಯನ್ನು ಹರಡುತ್ತವೆ. ಮೂಢರ ಮಾತುಗಳು ಕೇಳಲು ಯೋಗ್ಯವಲ್ಲ.


ಒಳ್ಳೆಯವನ ಮಾತುಗಳು ಅನೇಕರಿಗೆ ಸಹಾಯಮಾಡುತ್ತವೆ. ಮೂಢನ ಮೂಢತನವಾದರೋ ಅನೇಕರನ್ನು ಕೊಲ್ಲುವುದು.


ದೇವರನ್ನು ಅನುಸರಿಸುವ ಭಕ್ತರು ಒಬ್ಬರಿಗೊಬ್ಬರು ಮಾತನಾಡಿಕೊಳ್ಳಲು ಯೆಹೋವನು ಆಲೈಸಿದನು. ಆತನ ಮುಂದೆ ದೇವಜನರ ಹೆಸರುಗಳನ್ನು ಬರೆದಿರುವ ಒಂದು ಪುಸ್ತಕವಿತ್ತು. ಯೆಹೋವನ ಹೆಸರನ್ನು ಘನಪಡಿಸುವವರ ಹೆಸರುಗಳು ಅದರಲ್ಲಿದ್ದವು.


ಜ್ಞಾನಿಯ ಮಾತನ್ನು ಜನರು ಕೇಳಬಯಸುತ್ತಾರೆ. ಮೂಢನು ಕೇವಲ ಮೂರ್ಖತನವನ್ನೇ ಮಾತಾಡುವನು.


ಅವರ ಸಮೀಪದಲ್ಲಿ ನಡೆದುಹೋಗುವವರು, “ಯೆಹೋವನು ನಿಮ್ಮನ್ನು ಆಶೀರ್ವದಿಸಲಿ” ಎಂದು ಹೇಳುವುದಿಲ್ಲ. “ಯೆಹೋವನ ಹೆಸರಿನಲ್ಲಿ ನಿಮಗೆ ಆಶೀರ್ವಾದವಾಗಲಿ” ಎಂದು ಜನರು ಅವರನ್ನು ಆಶೀರ್ವದಿಸುವುದಿಲ್ಲ.


ರಾಜರುಗಳ ಮುಂದೆಯೂ ಯೆಹೋವನ ಒಡಂಬಡಿಕೆಯ ಕುರಿತು ಚರ್ಚಿಸುವೆನು, ನಾಚಿಕೆಪಡುವುದಿಲ್ಲ.


ನಗರದ್ವಾರದಲ್ಲಿ ಸೇರಿದ್ದ ಜನರೆಲ್ಲರು ಮತ್ತು ಹಿರಿಯರು ಸಾಕ್ಷಿಗಳಾಗಿದ್ದರು. ಅವರು, “ಈ ಸ್ತ್ರೀಯು ನಿನ್ನ ಮನೆಗೆ ಬರುವಳು. ಯೆಹೋವನು ಅವಳನ್ನು ರಾಹೇಲಳಂತೆಯೂ ಲೇಯಾಳಂತೆಯೂ ಮಾಡಲಿ. ರಾಹೇಲಳು ಮತ್ತು ಲೇಯಾಳು ಇಸ್ರೇಲಿನ ಮನೆಯನ್ನು ಕಟ್ಟಿದರು. ಎಫ್ರಾತಿನಲ್ಲಿ ಪ್ರಭಾವ ಶಾಲಿಯಾಗು! ಬೆತ್ಲೆಹೇಮಿನಲ್ಲಿ ಸುಪ್ರಸಿದ್ಧನಾಗು!


ನೀತಿವಂತನು ಒಳ್ಳೆಯ ಬುದ್ಧಿವಾದ ಹೇಳುವನು. ಅವನ ತೀರ್ಮಾನಗಳು ನ್ಯಾಯಬದ್ಧವಾಗಿರುತ್ತವೆ.


ನೀನು ಮಾಡಿದ ಎಲ್ಲ ಸತ್ಕಾರ್ಯಕ್ಕೆ ಯೆಹೋವನು ನಿನಗೆ ಸಂಪೂರ್ಣ ಪ್ರತಿಫಲ ಕೊಡುವನು; ಯಾಕೆಂದರೆ ನೀನು ಯಾವಾತನ ಆಶ್ರಯವನ್ನು ಕೋರಿ ಬಂದಿರುವಿಯೋ ಆತನು ನಿನ್ನನ್ನು ರಕ್ಷಿಸುತ್ತಾನೆ” ಎಂದು ಸಮಾಧಾನ ಪಡಿಸಿದನು.


ತರುವಾಯ ಬೋವಜನು ಬೆತ್ಲೆಹೇಮಿನಿಂದ ಹೊಲಕ್ಕೆ ಬಂದನು. ಅವನು ಕೆಲಸಗಾರರಿಗೆ, “ಯೆಹೋವನು ನಿಮ್ಮ ಸಂಗಡ ಇರಲಿ” ಎಂದು ಹರಸಿದನು. ಆ ಕೆಲಸಗಾರರು, “ಯೆಹೋವನು ನಿನಗೆ ಕೃಪೆ ತೋರಲಿ” ಎಂದು ಉತ್ತರಿಸಿದರು.


ದೇವರೇ, ಬಾಲ್ಯದಿಂದಲೂ ನೀನೇ ನನಗೆ ಉಪದೇಶಕನಾಗಿರುವೆ. ನಿನ್ನ ಅದ್ಭುತಕಾರ್ಯಗಳ ಕುರಿತು ಇಂದಿನವರೆಗೂ ಪ್ರಚುರಪಡಿಸುತ್ತಿದ್ದೇನೆ.


ನನ್ನ ಹಾಗೆ ಈ ದಿನ ಜೀವಿಸುವವರೆಲ್ಲಾ ನಿನ್ನನ್ನು ಕೊಂಡಾಡುವರು. ತಂದೆಯು ತನ್ನ ಮಕ್ಕಳಿಗೆ ನಿನ್ನ ಮೇಲೆ ಭರವಸವಿಡಲು ಕಲಿಸುವರು.


ಅವರು ನಿನಗೆ ಉಪದೇಶಮಾಡಿ ಬುದ್ಧಿ ಹೇಳುವರು; ತಾವು ಕಲಿತುಕೊಂಡದ್ದನ್ನು ನಿನಗೆ ಹೇಳಿಕೊಡುವರು.


ನನ್ನ ತುಟಿಗಳು ನಿನ್ನ ಜ್ಞಾನದ ನಿರ್ಧಾರಗಳ ಕುರಿತು ವರ್ಣಿಸುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು