ಧರ್ಮೋಪದೇಶಕಾಂಡ 7:16 - ಪರಿಶುದ್ದ ಬೈಬಲ್16 ಆ ದೇಶದಲ್ಲಿ ನೀವು ಯೆಹೋವನ ಸಹಾಯದಿಂದ ಸೋಲಿಸುವ ಜನರನ್ನೆಲ್ಲಾ ಕೊಂದುಬಿಡಬೇಕು. ಅವರಿಗೆ ಕನಿಕರ ತೋರಬಾರದು. ಅವರ ದೇವರುಗಳನ್ನು ಪೂಜಿಸಕೂಡದು! ಯಾಕೆಂದರೆ ಅವು ನಿಮಗೆ ಉರುಲಾಗಿ ನಿಮ್ಮ ಜೀವಿತವನ್ನು ಹಾಳುಮಾಡುತ್ತವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಿಮ್ಮ ದೇವರಾದ ಯೆಹೋವನು ನಿಮ್ಮಿಂದ ಪರಾಜಯ ಹೊಂದುವ ಜನಾಂಗಗಳನ್ನೆಲ್ಲಾ ನೀವು ಕನಿಕರಿಸದೆ ನಾಶಮಾಡಬೇಕು. ಅವರ ದೇವರುಗಳನ್ನು ಪೂಜಿಸಲೇಬಾರದು; ಪೂಜಿಸಿದರೆ ಅವು ನಿಮ್ಮ ಜೀವಕ್ಕೆ ಉರುಲಾಗುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನಿಮ್ಮ ದೇವರಾದ ಸರ್ವೇಶ್ವರಾ, ನಿಮ್ಮಿಂದ ಪರಾಜಯಪಡಿಸುವ ಜನರುಗಳನ್ನೆಲ್ಲಾ ನೀವು ಕನಿಕರಿಸದೆ ನಾಶಮಾಡಬೇಕು. ಅವರ ದೇವರುಗಳನ್ನು ಪೂಜಿಸಲೇಬಾರದು; ಪೂಜಿಸಿದರೆ ಅವು ನಿಮಗೆ ಉರುಲಾಗುವುವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನಿಮ್ಮ ದೇವರಾದ ಯೆಹೋವನು ನಿಮ್ಮಿಂದ ಪರಾಜಯಪಡಿಸುವ ಜನಾಂಗಗಳನ್ನೆಲ್ಲಾ ನೀವು ಕನಿಕರಿಸದೆ ನಾಶಮಾಡಬೇಕು. ಅವರ ದೇವರುಗಳನ್ನು ಪೂಜಿಸಲೇಬಾರದು; ಪೂಜಿಸಿದರೆ ಅವು ನಿಮಗೆ ಉರುಲಾಗುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಒಪ್ಪಿಸುವ ಜನರನ್ನೆಲ್ಲಾ ನೀವು ಸಂಹರಿಸಬೇಕು. ಅವರ ಮೇಲೆ ನೀವು ಕಟಾಕ್ಷವಿಡಬಾರದು. ಅವರ ದೇವರುಗಳನ್ನು ಆರಾಧಿಸಬಾರದು. ಏಕೆಂದರೆ ಅವು ನಿಮಗೆ ಉರುಲಾಗುವವು. ಅಧ್ಯಾಯವನ್ನು ನೋಡಿ |
“‘ಇದಾದ ಮೇಲೆ ನಾನು ಯೆಹೂದದ ರಾಜನಾದ ಚಿದ್ಕೀಯನನ್ನು ಮತ್ತು ಅಧಿಪತಿಗಳನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೆ ಒಪ್ಪಿಸುತ್ತೇನೆ. ಜೆರುಸಲೇಮಿನ ಕೆಲವು ಜನರು ಭಯಂಕರವಾದ ರೋಗದಿಂದ ಸಾಯುವುದಿಲ್ಲ; ಕೆಲವು ಜನರು ಖಡ್ಗಗಳಿಗೆ ಆಹುತಿಯಾಗುವದಿಲ್ಲ; ಕೆಲವರು ಹಸಿವಿನಿಂದ ಸಾಯುವುದಿಲ್ಲ. ಅಂಥವರನ್ನು ನಾನು ನೆಬೂಕದ್ನೆಚ್ಚರನಿಗೆ ಕೊಡುತ್ತೇನೆ. ಯೆಹೂದದ ವೈರಿಯು ಗೆಲ್ಲುವಂತೆ ನಾನು ಮಾಡುತ್ತೇನೆ. ನೆಬೂಕದ್ನೆಚ್ಚರನ ಸೈನಿಕರು ಯೆಹೂದ್ಯರನ್ನು ಕೊಲ್ಲಬಯಸುತ್ತಾರೆ. ಆದ್ದರಿಂದ ಯೆಹೂದ ಮತ್ತು ಜೆರುಸಲೇಮಿನ ಜನರು ಖಡ್ಗಗಳಿಗೆ ಬಲಿಯಾಗುವರು. ನೆಬೂಕದ್ನೆಚ್ಚರನು ಸ್ವಲ್ಪವೂ ದಯೆ ತೋರುವದಿಲ್ಲ. ಆ ಜನರ ಸಲುವಾಗಿ ಅವನು ಮರುಗುವದಿಲ್ಲ.’