Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 7:2 - ಪರಿಶುದ್ದ ಬೈಬಲ್‌

2 ನಿಮ್ಮ ದೇವರಾದ ಯೆಹೋವನು ಆ ಜನಾಂಗಗಳನ್ನು ನಿಮಗೆ ಅಧೀನಪಡಿಸುವನು. ನೀವು ಅವರನ್ನು ಸೋಲಿಸಿಬಿಡುವಿರಿ. ನೀವು ಅವರನ್ನು ಸಂಪೂರ್ಣವಾಗಿ ನಾಶಮಾಡಬೇಕು. ಅವರೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳಬೇಡಿ ಮತ್ತು ಅವರಿಗೆ ಕರುಣೆಯನ್ನು ತೋರಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೆಹೋವನು ಅವರನ್ನು ನಿಮಗೆ ಒಪ್ಪಿಸಲು ನೀವು ಅವರನ್ನು ಸಂಪೂರ್ಣವಾಗಿ ಸಂಹರಿಸಬೇಕು. ಅವರ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು ಹಾಗು ಅವರಿಗೆ ಕನಿಕರ ತೋರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅಂಥ ಏಳು ಜನಾಂಗಗಳು ಯಾವುವೆಂದರೆ ಹಿತ್ತಿಯರು, ಗಿರ್ಗಾಷಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು ಹಾಗು ಯೆಬೂಸಿಯರು. ಅವರನ್ನು ನೀವು ಸೋಲಿಸಿ ವಿನಾಶ ಶಾಪಗ್ರಸ್ತರನ್ನಾಗಿಸಬೇಕು. ಅವರ ಸಂಗಡ ಒಪ್ಪಂದಮಾಡಿಕೊಳ್ಳಬಾರದು, ಅವರನ್ನು ಕನಿಕರಿಸಬಾರದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಿಮ್ಮ ಎದುರಿನಿಂದ ಹೊರಡಿಸುವವನಾಗಿ ಅವರನ್ನು ನಿಮ್ಮಿಂದ ಪರಾಜಯಪಡಿಸುವಾಗ ನೀವು ಅವರನ್ನು ನಿಶ್ಶೇಷವಾಗಿ ಸಂಹರಿಸಬೇಕು. ಅವರ ಸಂಗಡ ಒಡಂಬಡಿಕೆಮಾಡಿಕೊಳ್ಳಬಾರದು, ಅವರನ್ನು ಕನಿಕರಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ದಂಡಿಸಿ ಸಂಪೂರ್ಣವಾಗಿ ತೆಗೆದುಹಾಕಿಬಿಡುವರು. ಅವರ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು. ಅವರಿಗೆ ದಯೆ ತೋರಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 7:2
45 ತಿಳಿವುಗಳ ಹೋಲಿಕೆ  

ಆದರೆ ಅದಕ್ಕೆ ಪ್ರತಿಯಾಗಿ ನೀವು ಈ ಪ್ರದೇಶದಲ್ಲಿ ವಾಸಮಾಡುತ್ತಿರುವ ಜನಗಳೊಂದಿಗೆ ಯಾವ ಒಪ್ಪಂದವನ್ನೂ ಮಾಡಿಕೊಳ್ಳಬಾರದು. ಅವರ ಯಜ್ಞವೇದಿಕೆಗಳನ್ನು ನಾಶಮಾಡಬೇಕು’ ಎಂದು ನಾನು ನಿಮಗೆ ಹೇಳಿದ್ದೆ. ಆದರೆ ನೀವು ನನಗೆ ವಿಧೇಯರಾಗಲಿಲ್ಲ.


ಆ ಗೂಢಚಾರರು ಬೇತೇಲ್ ನಗರದಲ್ಲಿ ಸಂಚರಿಸುತ್ತಿದ್ದಾಗ ಒಬ್ಬನು ನಗರದಿಂದ ಹೊರಬರುವುದನ್ನು ನೋಡಿದರು. ಗೂಢಚಾರರು ಅವನಿಗೆ, “ನಮಗೆ ಈ ನಗರದೊಳಗೆ ಹೋಗಲು ಮಾಡಿರುವ ಗುಪ್ತಮಾರ್ಗವನ್ನು ತೋರಿಸು. ನಾವು ಈ ಪಟ್ಟಣದ ಮೇಲೆ ಧಾಳಿ ಮಾಡಬೇಕೆಂದಿದ್ದೇವೆ. ನೀನು ನಮಗೆ ಸಹಾಯ ಮಾಡಿದರೆ ನಿನಗೆ ದಯೆತೋರುವೆವು” ಎಂದರು.


ಇಸ್ರೇಲರು ಆ ಪಟ್ಟಣವನ್ನು ಮತ್ತು ಅದರ ಅರಸನನ್ನು ಸ್ವಾಧೀನಪಡಿಸಿಕೊಳ್ಳುವಂತೆ ಯೆಹೋವನು ಮಾಡಿದನು. ಆ ಪಟ್ಟಣದ ಪ್ರತಿಯೊಬ್ಬ ವ್ಯಕ್ತಿಯನ್ನು ಇಸ್ರೇಲರು ಕೊಂದುಹಾಕಿದರು. ಒಬ್ಬರನ್ನೂ ಜೀವಸಹಿತ ಬಿಡಲಿಲ್ಲ. ಅವರು ಜೆರಿಕೊ ನಗರದ ಅರಸನಿಗೆ ಮಾಡಿದಂತೆಯೇ ಆ ಅರಸನಿಗೂ ಮಾಡಿದರು.


ಅದಕ್ಕೆ ಅವರು, “ನಮ್ಮ ಪ್ರಾಣವನ್ನಾದರೂ ಕೊಟ್ಟು ನಿಮ್ಮ ಪ್ರಾಣ ಉಳಿಸುತ್ತೇವೆ. ಆದರೆ ನೀವು ಇದನ್ನು ಯಾರಿಗೂ ಹೇಳಬೇಡಿ. ಯೆಹೋವನು ಈ ದೇಶವನ್ನು ನಮಗೆ ಅನುಗ್ರಹಿಸಿದ ಮೇಲೆ ನಾವು ನಿಮಗೆ ದಯೆ ತೋರುತ್ತೇವೆ. ನೀನು ನಮ್ಮನ್ನು ನಂಬಬಹುದು” ಎಂದರು.


ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸಂರಕ್ಷಿಸಲೂ ವೈರಿಗಳನ್ನು ಸೋಲಿಸುವಂತೆ ಸಹಾಯ ಮಾಡಲೂ ನಿಮ್ಮೊಂದಿಗೆ ಪಾಳೆಯದಲ್ಲಿರುವುದರಿಂದ ನಿಮ್ಮ ಪಾಳೆಯವು ಪವಿತ್ರವಾಗಿರಬೇಕು. ಇಲ್ಲದಿದ್ದಲ್ಲಿ ನಿಮ್ಮ ಪಾಳೆಯದಲ್ಲಿರುವ ಹೊಲಸನ್ನು ನೋಡಿ ಆತನು ಹಿಂದಿರುಗಿ ಹೋಗುವನು.


(ಗಿಬ್ಯೋನ್ಯರು ಇಸ್ರೇಲರಲ್ಲ, ಅವರು ಇನ್ನೂ ಜೀವಂತವಾಗಿ ಉಳಿದಿರುವ ಅಮೋರಿಯರ ಕುಟುಂಬದವರು. ಗಿಬ್ಯೋನ್ಯರನ್ನು ಹಿಂಸಿಸುವುದಿಲ್ಲವೆಂದು ಇಸ್ರೇಲರು ಪ್ರಮಾಣ ಮಾಡಿದ್ದರು. ಆದರೆ ಸೌಲನು ಇಸ್ರೇಲಿನ ಮತ್ತು ಯೆಹೂದದ ಜನರ ಮೇಲೆ ಹೆಚ್ಚಿನ ಅಭಿಮಾನವನ್ನಿಟ್ಟಿದ್ದನು. ಆದ್ದರಿಂದ ಅವನು ಗಿಬ್ಯೋನ್ಯರನ್ನು ಕೊಲ್ಲಲು ಪ್ರಯತ್ನಿಸಿದನು.) ರಾಜನಾದ ದಾವೀದನು ಗಿಬ್ಯೋನ್ಯರನ್ನು ಒಟ್ಟಾಗಿ ಕರೆದು ಅವರೊಂದಿಗೆ ಮಾತನಾಡಿದನು.


ಯೆಹೋವನು ಕಾನಾನ್ಯರನ್ನೂ ಪೆರಿಜ್ಜೀಯರನ್ನೂ ಸೋಲಿಸುವುದರಲ್ಲಿ ಯೆಹೂದ್ಯರಿಗೆ ಸಹಾಯ ಮಾಡಿದನು. ಯೆಹೂದ್ಯರು ಬೆಜೆಕ್ ನಗರದಲ್ಲಿ ಹತ್ತು ಸಾವಿರ ಜನರನ್ನು ಕೊಂದುಹಾಕಿದರು.


ಯೆಹೋವನು ಅವರ ಪೂರ್ವಿಕರಿಗೆ ಪ್ರಮಾಣ ಮಾಡಿದಂತೆ ಅವರ ಪ್ರದೇಶದಲ್ಲೆಲ್ಲಾ ಶಾಂತಿ ನೆಲೆಸುವಂತೆ ಮಾಡಿದನು. ಅವರ ಯಾವ ಶತ್ರುಗಳೂ ಅವರನ್ನು ಸೋಲಿಸಲಿಲ್ಲ. ಇಸ್ರೇಲರು ತಮ್ಮ ಎಲ್ಲ ಶತ್ರುಗಳನ್ನು ಸೋಲಿಸುವಂತೆ ಯೆಹೋವನು ಮಾಡಿದನು.


ಯೆಹೋಶುವನು ಆ ಎಲ್ಲ ಪಟ್ಟಣಗಳನ್ನು ಮತ್ತು ಅವುಗಳ ಅರಸರನ್ನು ಒಂದೇ ದಂಡೆಯಾತ್ರೆಯಲ್ಲಿ ಸ್ವಾಧೀನಪಡಿಸಿಕೊಂಡನು. ಇಸ್ರೇಲಿನ ದೇವರಾದ ಯೆಹೋವನು ಇಸ್ರೇಲಿನವರಿಗಾಗಿ ಯುದ್ಧ ಮಾಡುತ್ತಿದ್ದುದರಿಂದ ಯೆಹೋಶುವನಿಗೆ ಇದು ಸಾಧ್ಯವಾಯಿತು.


ಹೀಗೆ ಯೆಹೋಶುವನು ಬೆಟ್ಟದ ಮೇಲಿನ ಪ್ರದೇಶ, ನೆಗೆವ್ ಪ್ರದೇಶ, ಪಶ್ಚಿಮದ ಇಳಕಲಿನ ಪ್ರದೇಶ, ಪೂರ್ವದ ಇಳಕಲಿನ ಪ್ರದೇಶ, ಈ ಎಲ್ಲ ಪ್ರದೇಶಗಳ ಅರಸರನ್ನು ಸೋಲಿಸಿದನು. ಇಸ್ರೇಲಿನ ದೇವರಾದ ಯೆಹೋವನು ಎಲ್ಲಾ ಜನರನ್ನು ಕೊಲ್ಲು ಎಂದು ಯೆಹೋಶುವನಿಗೆ ಹೇಳಿದ್ದನು. ಅದಕ್ಕಾಗಿ ಯೆಹೋಶುವನು ಆ ಸ್ಥಳಗಳಲ್ಲಿ ಯಾರೊಬ್ಬರನ್ನೂ ಸಜೀವವಾಗಿ ಉಳಿಸಲಿಲ್ಲ.


ಇಸ್ರೇಲರ ಜನರು ಲಾಕೀಷ್ ಪಟ್ಟಣವನ್ನು ವಶಪಡಿಸಿಕೊಳ್ಳುವಂತೆ ಯೆಹೋವನು ಮಾಡಿದನು. ಅವರು ಎರಡನೆಯ ದಿನ ಪಟ್ಟಣವನ್ನು ಸ್ವಾಧೀನಪಡಿಸಿಕೊಂಡರು. ಇಸ್ರೇಲರು ಆ ಪಟ್ಟಣದಲ್ಲಿದ್ದವರನ್ನೆಲ್ಲಾ ಕೊಂದುಹಾಕಿದರು. ಅವರು ಲಿಬ್ನ ಪಟ್ಟಣಕ್ಕೆ ಮಾಡಿದಂತೆ ಇದಕ್ಕೂ ಮಾಡಿದರು.


ಆ ದಿನ ಯೆಹೋಶುವನು ಮಕ್ಕೇದವನ್ನು ಸ್ವಾಧೀನಪಡಿಸಿಕೊಂಡು ಆ ಪಟ್ಟಣದ ಅರಸನನ್ನು ಮತ್ತು ಜನರನ್ನು ಸಂಹರಿಸಿದನು. ಒಬ್ಬರೂ ಜೀವಂತವಾಗಿ ಉಳಿಯಲಿಲ್ಲ. ಯೆಹೋಶುವನು ಜೆರಿಕೊವಿನ ಅರಸನಿಗೆ ಮಾಡಿದಂತೆಯೇ ಮಕ್ಕೇದದ ಅರಸನಿಗೂ ಮಾಡಿದನು.


ಗಿಬ್ಯೋನ್ಯರು, “ನೀವು ನಮ್ಮನ್ನು ಕೊಲ್ಲಬಹುದೆಂಬ ಭಯದಿಂದ ನಾವು ನಿಮಗೆ ಸುಳ್ಳು ಹೇಳಿದೆವು; ದೇವರು ತನ್ನ ಸೇವಕನಾದ ಮೋಶೆಗೆ ಈ ಎಲ್ಲ ಭೂಪ್ರದೇಶವನ್ನು ನಿಮಗೆ ಕೊಡಬೇಕೆಂದು ಆಜ್ಞಾಪಿಸಿರುವುದನ್ನೂ ಈ ಪ್ರದೇಶದ ಎಲ್ಲ ಜನರನ್ನು ಕೊಂದುಬಿಡಬೇಕೆಂದು ನಿಮಗೆ ಹೇಳಿರುವನೆಂದೂ ನಾವು ಕೇಳಿದ್ದೆವು. ಆದ್ದರಿಂದ ನಾವು ನಿಮಗೆ ಸುಳ್ಳು ಹೇಳಿದೆವು.


ಯುದ್ಧದಲ್ಲಿ ಇಸ್ರೇಲರು “ಆಯಿ”ಯ ಜನರನ್ನು ಬೆನ್ನಟ್ಟಿ ಬಯಲುಗಳಲ್ಲಿಯೂ ಅರಣ್ಯದಲ್ಲಿಯೂ ಕೊಂದುಹಾಕಿದರು. ಬಳಿಕ ಇಸ್ರೇಲರು “ಆಯಿ”ಗೆ ಹಿಂತಿರುಗಿ ಪಟ್ಟಣದಲ್ಲಿ ಜೀವಸಹಿತ ಉಳಿದಿದ್ದ ಎಲ್ಲರನ್ನು ಕೊಂದುಹಾಕಿದರು.


ಎಂದರೆ ಆ ವ್ಯಕ್ತಿಯ ಸಲಹೆಗೆ ನೀವು ಒಪ್ಪಬಾರದು. ಅವನಿಗೆ ಕಿವಿಗೊಡಬೇಡಿ; ಅವನಿಗೆ ಕನಿಕರತೋರಬೇಡಿ; ಅವನು ಸ್ವತಂತ್ರನಾಗಿ ಹೋಗಲು ಬಿಡಬೇಡಿ; ಅವನನ್ನು ಸಂರಕ್ಷಿಸಬೇಡಿ.


“ಅದೇ ಪ್ರಕಾರ ನಾವು ಓಗನನ್ನು ಸೋಲಿಸುವಂತೆ ದೇವರಾದ ಯೆಹೋವನು ಸಹಾಯ ಮಾಡಿದನು. ಅವನನ್ನೂ ಅವನ ಸೈನದಲ್ಲಿರುವವರನ್ನೆಲ್ಲಾ ನಾಶಮಾಡಿದೆವು.


ಆ ದೇಶದ ನಿವಾಸಿಗಳನ್ನೆಲ್ಲ ಹೊರಡಿಸಿಬಿಟ್ಟು ಅವರ ಕೆತ್ತಿದ ಪ್ರತಿಮೆಗಳನ್ನು ಮತ್ತು ಲೋಹದ ವಿಗ್ರಹಗಳನ್ನು ನಾಶಮಾಡಿ ಅವರ ಪೂಜಾಸ್ಥಳಗಳನ್ನು ಹಾಳುಮಾಡಬೇಕು.


ನಿನ್ನ ಶತ್ರುಗಳನ್ನು ಸೋಲಿಸಲು ನಿನಗೆ ಸಹಾಯ ಮಾಡಿದ ಮಹೋನ್ನತನಾದ ದೇವರಿಗೆ ಕೊಂಡಾಟವಾಗಲಿ.” ಅಬ್ರಾಮನು ಯುದ್ಧದಿಂದ ತಂದಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಮೆಲ್ಕೀಚೆದೆಕನಿಗೆ ಕೊಟ್ಟನು.


“ಸುಳ್ಳುದೇವರಿಗೆ ಯಜ್ಞವನ್ನರ್ಪಿಸುವವನನ್ನು ನಾಶ ಮಾಡಬೇಕು. ನೀವು ದೇವರಾದ ಯೆಹೋವನೊಬ್ಬನಿಗೇ ಯಜ್ಞವನ್ನರ್ಪಿಸಬೇಕು.


ಆದ್ದರಿಂದ ಈ ಗುಂಪಿನಲ್ಲಿರುವ ಎಲ್ಲಾ ಗಂಡುಮಕ್ಕಳನ್ನೂ ಪುರುಷಸಂಗಮ ಮಾಡಿದ ಎಲ್ಲಾ ಮಿದ್ಯಾನ್ ಹೆಂಗಸರನ್ನೂ ಕೊಲ್ಲಬೇಕು.


ಆದರೆ ನಮ್ಮ ದೇವರಾದ ಯೆಹೋವನು ಅವನನ್ನು ನಮ್ಮ ವಶಕ್ಕೆ ಕೊಟ್ಟನು. ನಾವು ಸೀಹೋನ್ ಅರಸನನ್ನೂ ಅವನ ಮಕ್ಕಳನ್ನೂ ಅವನ ಎಲ್ಲಾ ಜನರನ್ನೂ ಸದೆಬಡೆದು ಸೋಲಿಸಿದೆವು.


ಅವನಿಗೆ ಒಳಪಟ್ಟ ಪಟ್ಟಣಗಳನ್ನೆಲ್ಲಾ ವಶಪಡಿಸಿಕೊಂಡೆವು. ಪ್ರತಿಯೊಂದು ಪಟ್ಟಣದಲ್ಲಿದ್ದ ಗಂಡಸರು, ಹೆಂಗಸರು, ಮಕ್ಕಳನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿದೆವು. ಯಾರನ್ನೂ ಜೀವಂತವಾಗಿ ಉಳಿಸಲಿಲ್ಲ.


ಆ ದೇಶದಲ್ಲಿ ನೀವು ಯೆಹೋವನ ಸಹಾಯದಿಂದ ಸೋಲಿಸುವ ಜನರನ್ನೆಲ್ಲಾ ಕೊಂದುಬಿಡಬೇಕು. ಅವರಿಗೆ ಕನಿಕರ ತೋರಬಾರದು. ಅವರ ದೇವರುಗಳನ್ನು ಪೂಜಿಸಕೂಡದು! ಯಾಕೆಂದರೆ ಅವು ನಿಮಗೆ ಉರುಲಾಗಿ ನಿಮ್ಮ ಜೀವಿತವನ್ನು ಹಾಳುಮಾಡುತ್ತವೆ.


ನೀವು ಅವನ ವಿಷಯದಲ್ಲಿ ದುಃಖಪಡಬಾರದು. ಯಾಕೆಂದರೆ ಅವನು ನಿರಪರಾಧಿಯನ್ನು ಕೊಂದ ಅಪರಾಧಿಯಾಗಿದ್ದಾನೆ. ಅವನು ಮಾಡಿದ ಪಾಪವನ್ನು ಇಸ್ರೇಲಿನಿಂದ ತೆಗೆದುಹಾಕಬೇಕು. ಆಗ ನಿಮಗೆ ಶುಭವಾಗುವುದು.


ಅಂಥವಳ ಕೈಯನ್ನು ಕಡಿದುಹಾಕಿರಿ; ದಯೆ ತೋರಿಸಬೇಡಿ.


ಯೆಹೋವನು ಆ ಜನಾಂಗಗಳನ್ನು ಸೋಲಿಸಲು ಸಹಾಯ ಮಾಡುವನು. ಆದರೆ ನಾನು ಹೇಳಿದ ಪ್ರಕಾರ ನೀವು ಅವರಿಗೆ ಮಾಡಬೇಕು.


ಆತನು ನಿರಂತರಕ್ಕೂ ಜೀವಿಸುವವನಾಗಿದ್ದಾನೆ. ಆತನೇ ನಿಮ್ಮ ಆಶ್ರಯಸ್ಥಾನ. ಆತನ ಸಾಮರ್ಥ್ಯ ಸದಾಕಾಲವಿರುವುದು. ಆತನು ನಿಮ್ಮನ್ನು ಸಂರಕ್ಷಿಸಿ ಕಾಪಾಡುವನು; ನಿಮ್ಮ ದೇಶವನ್ನು ಬಿಟ್ಟುಹೋಗಲು ಜನರನ್ನು ದೂಡುವನು; ‘ವೈರಿಗಳನ್ನು ನಾಶಮಾಡಿರಿ’ ಎಂದು ಹೇಳುವನು.


ಹಿವ್ವಿಯರಾದ ಅವರಿಗೆ ಇಸ್ರೇಲಿನ ಜನರು, “ಒಂದುವೇಳೆ ನೀವು ನಮ್ಮನ್ನು ಮೋಸಗೊಳಿಸಲು ಪ್ರಯತ್ನಿಸುತ್ತಿರಬಹುದು. ಒಂದುವೇಳೆ ನೀವು ನಮ್ಮ ಹತ್ತಿರದಲ್ಲಿಯೇ ವಾಸಮಾಡುತ್ತಿರಬಹುದು; ನೀವು ಎಲ್ಲಿಯವರು ಎಂಬುದು ನಮಗೆ ಗೊತ್ತಾಗುವವರೆಗೆ ನಾವು ನಿಮ್ಮ ಸಂಗಡ ಶಾಂತಿ ಒಪ್ಪಂದವನ್ನು ಮಾಡಿಕೊಳ್ಳಲು ಸಾಧ್ಯವಿಲ್ಲ” ಎಂದು ಉತ್ತರಕೊಟ್ಟರು.


ಈಗ ನಾವು ದೇವರ ಮುಂದೆ ಅನ್ಯರಾದ ಹೆಂಡತಿಯರನ್ನೂ ಅವರ ಮಕ್ಕಳನ್ನೂ ತೊರೆದುಬಿಡುತ್ತೇವೆಂದು ಒಡಂಬಡಿಕೆ ಮಾಡೋಣ. ಹೀಗೆ ಮಾಡುವುದರಿಂದ ಎಜ್ರನ ಮತ್ತು ದೇವರ ಕಟ್ಟಳೆಗಳನ್ನು ಗೌರವಿಸುವವರ ಸಲಹೆಯನ್ನು ನಾವು ಅನುಸರಿಸುವವರಾಗಿರುತ್ತೇವೆ; ನಾವು ದೇವರ ಕಟ್ಟಳೆಗೆ ವಿಧೇಯರಾಗುತ್ತೇವೆ.


ಕಾನಾನಿನಲ್ಲಿ ವಾಸವಾಗಿದ್ದ ಅನ್ಯ ಜನಾಂಗಗಳನ್ನು ನಾಶಮಾಡಲು ಯೆಹೋವನು ಅವರಿಗೆ ಹೇಳಿದನು. ಆದರೆ ಇಸ್ರೇಲರು ದೇವರಿಗೆ ವಿಧೇಯರಾಗಲಿಲ್ಲ.


ಇಸ್ರೇಲರು ಯೆಹೋವನಿಗೆ ಹರಕೆಯನ್ನು ಮಾಡಿಕೊಂಡು, “ನಾವು ಈ ಜನರನ್ನು ಜಯಿಸುವಂತೆ ನೀನು ಅನುಗ್ರಹಿಸಿದರೆ ನಾವು ಅವರ ಗ್ರಾಮಗಳನ್ನು ಪೂರ್ಣವಾಗಿ ಹಾಳುಮಾಡಿ ಯೆಹೋವನಿಗಾಗಿಯೇ ಬಿಟ್ಟುಬಿಡುತ್ತೇವೆ” ಅಂದರು.


ಆದರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಮುಂದೆ ನದಿಯನ್ನು ದಾಟುತ್ತಾನೆಂಬುದು ನಿಮಗೆ ನಿಶ್ಚಯವಾಗಿ ತಿಳಿದಿರಲಿ. ಆತನು ದಹಿಸುವ ಬೆಂಕಿಯಂತಿದ್ದಾನೆ. ಆತನು ಆ ಜನಾಂಗಗಳನ್ನು ಬೇಗನೆ ನಾಶಪಡಿಸುವನು; ನಿಮ್ಮ ಎದುರಿನಲ್ಲಿ ಅವರು ಬಿದ್ದುಹೋಗುವಂತೆ ಮಾಡುವನು. ಇದು ನೆರವೇರುವುದಾಗಿ ಯೆಹೋವನೇ ನಿಮಗೆ ವಾಗ್ದಾನ ಮಾಡಿದ್ದಾನೆ.


ನೀವು ಅವನನ್ನು ಕೊಂದುಹಾಕಬೇಕು. ನೀವು ಕಲ್ಲೆಸೆದು ಅವನನ್ನು ಸಾಯಿಸಬೇಕು. ನೀವು ಅವನ ಮೇಲೆ ಮೊದಲನೆ ಕಲ್ಲನ್ನು ಎಸೆಯಬೇಕು. ಈಜಿಪ್ಟಿನ ದಾಸತ್ವದಿಂದ ನಿಮ್ಮನ್ನು ಬಿಡಿಸಿಕೊಂಡು ಬಂದ ನಿಮ್ಮ ದೇವರಾದ ಯೆಹೋವನಿಗೆ ವಿರುದ್ಧವಾಗಿ ನಡೆದುಕೊಳ್ಳುವಂತೆ ನಿಮ್ಮನ್ನು ಪ್ರೇರೇಪಿಸಿದವನು ಅವನೇ ಅಲ್ಲವೇ?


ಇಸ್ರೇಲರು ಶತ್ರುಗಳನ್ನು ಸೋಲಿಸುವಂತೆ ಯೆಹೋವನು ಮಾಡಿದನು. ಇಸ್ರೇಲರ ಸೈನ್ಯವು ಶತ್ರುಗಳನ್ನು ಸೋಲಿಸಿ ಅವರನ್ನು ದೊಡ್ಡ ಚೀದೋನ್ ಮತ್ತು ಮಿಸ್ರೆಪೋತ್ಮಯಿಮ್‌ವರೆಗೂ ಪೂರ್ವದಿಕ್ಕಿನಲ್ಲಿ ಮಿಚ್ಛೆಯ ಕಣಿವೆಯವರೆಗೂ ಬೆನ್ನಟ್ಟಿತು. ಶತ್ರುಗಳಲ್ಲಿ ಯಾರೂ ಉಳಿದುಕೊಳ್ಳದಂತೆ ಇಸ್ರೇಲರು ಯುದ್ಧಮಾಡಿದರು.


ಬೆನ್ಹದದನು ಅವನಿಗೆ, “ಅಹಾಬನೇ, ನನ್ನ ತಂದೆಯು ನಿನ್ನ ತಂದೆಯಿಂದ ವಶಪಡಿಸಿಕೊಂಡಿರುವ ಪಟ್ಟಣಗಳನ್ನು ನಿನಗೇ ಬಿಟ್ಟುಬಿಡುತ್ತೇನೆ. ನನ್ನ ತಂದೆಯು ಸಮಾರ್ಯದಲ್ಲಿ ಮಾಡಿದಂತೆ ನೀನೂ ದಮಸ್ಕದಲ್ಲಿ ಅಂಗಡಿಗಳನ್ನು ಹಾಕಬಹುದು” ಎಂದನು. ಅಹಾಬನು, “ನೀನು ಇದಕ್ಕೆ ಒಪ್ಪಿಕೊಂಡರೆ, ನಾನು ನಿನ್ನನ್ನು ಸ್ವತಂತ್ರವಾಗಿ ಹೋಗಲು ಬಿಡುತ್ತೇನೆ” ಎಂದನು. ಆ ಇಬ್ಬರು ರಾಜರುಗಳು ಶಾಂತಿಸಂಧಾನವನ್ನು ಮಾಡಿಕೊಂಡರು. ರಾಜನಾದ ಅಹಾಬನು ಬೆನ್ಹದದನಿಗೆ ಸ್ವತಂತ್ರವನ್ನು ಕೊಟ್ಟು ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು