Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 7:25 - ಪರಿಶುದ್ದ ಬೈಬಲ್‌

25 “ಅವರ ದೇವರುಗಳ ಪ್ರತಿಮೆಗಳನ್ನು ಬೆಂಕಿಯಲ್ಲಿ ಸುಟ್ಟುಬಿಡಬೇಕು. ಅವರ ವಿಗ್ರಹಗಳಲ್ಲಿರುವ ಬೆಳ್ಳಿಬಂಗಾರಗಳನ್ನು ನೀವು ತೆಗೆದುಕೊಳ್ಳಬೇಡಿ. ನೀವು ತೆಗೆದುಕೊಂಡರೆ ಅವು ನಿಮಗೆ ಉರುಲಾಗಿ ನಿಮ್ಮನ್ನೇ ನಾಶಮಾಡುತ್ತವೆ. ಯಾಕೆಂದರೆ ನಿಮ್ಮ ದೇವರಾದ ಯೆಹೋವನು ವಿಗ್ರಹಗಳನ್ನು ದ್ವೇಷಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅವರು ದೇವರೆಂದು ಮಾಡಿಕೊಂಡ ಮರದ ವಿಗ್ರಹಗಳನ್ನು ನೀವು ಬೆಂಕಿಯಿಂದ ಸುಟ್ಟುಬಿಡಬೇಕು. ಆ ವಿಗ್ರಹಗಳ ಮೇಲಿರುವ ಬೆಳ್ಳಿಬಂಗಾರವನ್ನು ನೀವು ಆಶಿಸಬಾರದು; ಅದನ್ನು ತೆಗೆದುಕೊಂಡರೆ ಅದು ನಿಮಗೆ ಉರುಲಾಗುವುದು. ಅದು ನಿಮ್ಮ ದೇವರಾದ ಯೆಹೋವನಿಗೆ ಅಸಹ್ಯವಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 “ಆ ಜನರು ದೇವರೆಂದು ಮಾಡಿಕೊಂಡ ಮರದ ವಿಗ್ರಹಗಳನ್ನು ನೀವು ಬೆಂಕಿಯಿಂದ ಸುಟ್ಟುಬಿಡಬೇಕು. ಆ ವಿಗ್ರಹಗಳ ಮೇಲಿರುವ ಬೆಳ್ಳಿಬಂಗಾರವನ್ನು ನೀವು ಬಯಸಬಾರದು. ಅದನ್ನು ತೆಗೆದುಕೊಂಡರೆ ಅದೇ ನಿಮಗೆ ಉರುಲಾಗುವದು. ಅದು ನಿಮ್ಮ ದೇವರಾದ ಸರ್ವೇಶ್ವರನಿಗೆ ಹೇಯವಾದುದು; ಅವರಿಂದ ಶಾಪಗ್ರಸ್ತವಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅವರು ದೇವರೆಂದು ಮಾಡಿಕೊಂಡ ಮರದ ವಿಗ್ರಹಗಳನ್ನು ನೀವು ಬೆಂಕಿಯಿಂದ ಸುಟ್ಟುಬಿಡಬೇಕು. ಆ ವಿಗ್ರಹಗಳ ಮೇಲಿರುವ ಬೆಳ್ಳಿಬಂಗಾರವನ್ನು ನೀವು ಆಶಿಸಬಾರದು; ಅದನ್ನು ತೆಗೆದುಕೊಂಡರೆ ಅದು ನಿಮಗೆ ಉರುಲಾಗುವದು. ಅದು ನಿಮ್ಮ ದೇವರಾದ ಯೆಹೋವನಿಗೆ ಹೇಯವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅವರ ದೇವರುಗಳ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು. ಅವುಗಳ ಮೇಲಿರುವ ಬೆಳ್ಳಿಬಂಗಾರವನ್ನು ಆಶಿಸಿ ನೀವು ತೆಗೆದುಕೊಳ್ಳಬಾರದು. ಅದು ನಿಮಗೆ ಉರುಲಾದೀತು. ಏಕೆಂದರೆ ಅದು ನಿಮ್ಮ ದೇವರಾದ ಯೆಹೋವ ದೇವರಿಗೆ ಅಸಹ್ಯವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 7:25
22 ತಿಳಿವುಗಳ ಹೋಲಿಕೆ  

ಬಳಿಕ ಮೋಶೆಯು ಆ ಬಸವನ ಮೂರ್ತಿಯನ್ನು ಬೆಂಕಿಯಲ್ಲಿ ಕರಗಿಸಿ ಅದರ ಚಿನ್ನವನ್ನು ಧೂಳಿನಂತೆ ಅರೆದು ನೀರಿಗೆ ಹಾಕಿ ಆ ನೀರನ್ನು ಇಸ್ರೇಲರಿಗೆ ಕುಡಿಸಿದನು.


ಫಿಲಿಷ್ಟಿಯರು ತಮ್ಮ ವಿಗ್ರಹಗಳನ್ನು ಅಲ್ಲಿಯೇ ಬಿಟ್ಟು ಓಡಿಹೋಗಿದ್ದರು. ದಾವೀದನು ಅವುಗಳನ್ನೆಲ್ಲಾ ಒಟ್ಟುಸೇರಿಸಿ ಸುಡಿಸಿಬಿಟ್ಟನು.


“ನಿಮ್ಮ ದೇವರಾದ ಯೆಹೋವನಿಗೆ ನೀವು ಪಶುಗಳನ್ನಾಗಲಿ ಆಡುಕುರಿಮರಿಗಳನ್ನಾಗಲಿ ಸಮರ್ಪಿಸುವಾಗ ಅವು ಕಳಂಕವಿಲ್ಲದೆ ಪೂರ್ಣಾಂಗವಾಗಿರಬೇಕು; ದೋಷಪೂರಿತ ಯಜ್ಞವನ್ನು ಆತನು ದ್ವೇಷಿಸುತ್ತಾನೆ.


ನಾವು ಜೆರಿಕೊ ನಗರವನ್ನು ಮತ್ತು ಅದರಲ್ಲಿದ್ದ ಎಲ್ಲ ವಸ್ತುಗಳನ್ನು ಸ್ವಾಧೀನಪಡಿಸಿಕೊಂಡು ಕೊಳ್ಳೆ ಹೊಡೆಯುತ್ತಿದ್ದಾಗ, ಬಾಬಿಲೋನಿನ ಒಂದು ಸುಂದರವಾದ ನಿಲುವಂಗಿಯನ್ನೂ ಸುಮಾರು ಐದು ಪೌಂಡಿನಷ್ಟು ಬೆಳ್ಳಿಯನ್ನೂ ಒಂದು ಪೌಂಡಿಗಿಂತಲೂ ಹೆಚ್ಚು ಬಂಗಾರವನ್ನೂ ಕಂಡೆನು. ಈ ವಸ್ತುಗಳನ್ನು ನನಗಾಗಿ ಇಟ್ಟುಕೊಳ್ಳಬೇಕೆಂದು ತುಂಬ ಆಶೆಯಾಯಿತು. ಅದಕ್ಕಾಗಿ ನಾನು ಅವುಗಳನ್ನು ತೆಗೆದುಕೊಂಡೆ. ಅವುಗಳನ್ನು ನನ್ನ ಗುಡಾರದಲ್ಲಿ ಹುಗಿದಿಟ್ಟಿದ್ದೇನೆ. ಬೆಳ್ಳಿಯು ನಿಲುವಂಗಿಯ ಕೆಳಗಡೆ ಇದೆ” ಎಂದು ಒಪ್ಪಿಕೊಂಡನು.


ನೀವು ಅವರ ಯಜ್ಞವೇದಿಕೆಗಳನ್ನು ಪುಡಿಪುಡಿಮಾಡಿ, ಅವರ ಸ್ಮಾರಕ ಕಲ್ಲುಗಳನ್ನು ಕೆಡವಬೇಕು. ಅವರ ಅಶೇರ ಕಂಬಗಳನ್ನು ಸುಟ್ಟುಬಿಡಬೇಕು ಮತ್ತು ದೇವರುಗಳ ವಿಗ್ರಹಗಳನ್ನು ಕತ್ತರಿಸಿಹಾಕಬೇಕು. ಹೀಗೆ ನೀವು ಅವುಗಳ ಹೆಸರನ್ನು ಆ ಸ್ಥಳದಿಂದ ನಿರ್ಮೂಲ ಮಾಡಬೇಕು.


ನಿಮ್ಮಲ್ಲಿ ಬೆಳ್ಳಿಬಂಗಾರಗಳ ವಿಗ್ರಹಗಳಿವೆ. ಆ ಸುಳ್ಳುದೇವರುಗಳು ನಿಮ್ಮನ್ನು ಹೊಲೆಯನ್ನಾಗಿ ಮಾಡಿವೆ. ನೀವು ಅವುಗಳ ಸೇವೆಯನ್ನು ನಿಲ್ಲಿಸುವಿರಿ. ಅವು ಹೊಲಸು ವಸ್ತುಗಳೋ ಎಂಬಂತೆ ಅವುಗಳನ್ನೆತ್ತಿ ಬಿಸಾಡಿಬಿಡುವಿರಿ.


ಇಸ್ರೇಲರು ಯೆಹೋವನ ಆಜ್ಞೆಗೆ ವಿಧೇಯರಾಗಲಿಲ್ಲ. ಯೆಹೂದ ಕುಲದವನೂ ಕರ್ಮೀಯ ಮಗನೂ ಜಬ್ದೀಯ ಮೊಮ್ಮಗನೂ ಜೆರಹನ ಗೋತ್ರದವನೂ ಆದ ಆಕಾನ ಎಂಬವನು ನಾಶಮಾಡಬೇಕಾದ ವಸ್ತುಗಳಲ್ಲಿ ಕೆಲವನ್ನು ಇಟ್ಟುಕೊಂಡಿದ್ದನು. ಅದಕ್ಕಾಗಿ ಯೆಹೋವನು ಇಸ್ರೇಲಿನವರ ಮೇಲೆ ತುಂಬಾ ಕೋಪಗೊಂಡನು.


ಸೂಳೆತನದಿಂದ ಗಳಿಸಿದ ಹಣವನ್ನು ನಿಮ್ಮ ದೇವರಾದ ಯೆಹೋವನ ವಿಶೇಷ ವಾಸಸ್ಥಾನಕ್ಕೆ ತೆಗೆದುಕೊಂಡು ಬರಬಾರದು. ಒಬ್ಬನು ತಾನು ಹೊತ್ತುಕೊಂಡ ಹರಕೆಯನ್ನು ಆ ಹಣದಿಂದ ಪೂರೈಸಕೂಡದು. ಯಾಕೆಂದರೆ ಲೈಂಗಿಕ ಪಾಪದಲ್ಲಿ ತಮ್ಮ ದೇಹಗಳನ್ನು ಮಾರುವವರನ್ನು ನಿಮ್ಮ ದೇವರಾದ ಯೆಹೋವನು ದ್ವೇಷಿಸುತ್ತಾನೆ; ಲೈಂಗಿಕ ಪಾಪಗಳ ಆದಾಯದಿಂದ ಬಂದ ಹಣದಿಂದ ಖರೀದಿ ಮಾಡಿದ ಕಾಣಿಕೆಗಳನ್ನು ಆತನು ದ್ವೇಷಿಸುತ್ತಾನೆ.


“ಆ ಜನಾಂಗಗಳ ಯಜ್ಞವೇದಿಕೆಗಳನ್ನೆಲ್ಲಾ ನೀವು ಕೆಡವಿಹಾಕಿ ನೆಲಸಮಮಾಡಬೇಕು. ಅವರ ಸ್ಮಾರಕ ಕಲ್ಲುಗಳನ್ನು ಒಡೆದು ಚೂರುಚೂರು ಮಾಡಬೇಕು. ಅವರ ಅಶೇರಸ್ತಂಭಗಳನ್ನು ಕತ್ತರಿಸಿಹಾಕಬೇಕು; ಅವುಗಳ ಪ್ರತಿಮೆಗಳನ್ನು ಸುಟ್ಟುಹಾಕಬೇಕು.


ಅವಳ ಹಣೆಯ ಮೇಲೆ ಒಂದು ಬರಹವನ್ನು ಬರೆದಿತ್ತು. ಆ ಬರಹಕ್ಕೆ ಗೂಢಾರ್ಥವಿತ್ತು. ಅಲ್ಲಿ ಬರೆದಿದ್ದುದು ಹೀಗಿತ್ತು: ಬಾಬಿಲೋನ್ ಎಂಬ ಮಹಾನಗರಿಯು ಭೂಮಿಯಲ್ಲಿರುವ ಕೆಟ್ಟಕಾರ್ಯಗಳಿಗೆ ಮತ್ತು ಜಾರಸ್ತ್ರೀಯರಿಗೆ ತಾಯಿ.


ಲೋಕದೊಳಗಿರುವ ಎಲ್ಲಾ ಮನುಷ್ಯರನ್ನೂ ಪ್ರಾಣಿಗಳನ್ನೂ ಆಕಾಶದಲ್ಲಿರುವ ಎಲ್ಲಾ ಪಕ್ಷಿಗಳನ್ನೂ ನೀರಿನಲ್ಲಿರುವ ಎಲ್ಲಾ ಮೀನುಗಳನ್ನೂ ನಾನು ನಾಶಮಾಡುವೆನು. ಎಲ್ಲಾ ದುಷ್ಟ ಜನರನ್ನೂ ಮತ್ತು ಅವರನ್ನು ಪಾಪಕ್ಕೆ ನಡಿಸುವ ಎಲ್ಲಾ ವಸ್ತುಗಳನ್ನೂ ನಾನು ನಾಶಮಾಡುವೆನು. ಭೂಮಿಯ ಮೇಲಿರುವ ಎಲ್ಲಾ ಜನರನ್ನು ನಿರ್ಮೂಲ ಮಾಡುವೆನು.” ಈ ವಿಷಯಗಳನ್ನು ಯೆಹೋವನು ತಿಳಿಸಿದನು.


ಆ ದೇಶದಲ್ಲಿ ನೀವು ಯೆಹೋವನ ಸಹಾಯದಿಂದ ಸೋಲಿಸುವ ಜನರನ್ನೆಲ್ಲಾ ಕೊಂದುಬಿಡಬೇಕು. ಅವರಿಗೆ ಕನಿಕರ ತೋರಬಾರದು. ಅವರ ದೇವರುಗಳನ್ನು ಪೂಜಿಸಕೂಡದು! ಯಾಕೆಂದರೆ ಅವು ನಿಮಗೆ ಉರುಲಾಗಿ ನಿಮ್ಮ ಜೀವಿತವನ್ನು ಹಾಳುಮಾಡುತ್ತವೆ.


ಅದಕ್ಕೆ ಮೋಶೆ, “ಅದು ಸರಿಯಲ್ಲ. ನಮ್ಮ ದೇವರಾದ ಯೆಹೋವನಿಗೆ ನಾವು ಅರ್ಪಿಸುವ ಯಜ್ಞಗಳು ಈಜಿಪ್ಟಿನವರಿಗೆ ನಿಷಿದ್ಧವಾಗಿವೆ. ಹೀಗಿರಲು ಅವರ ಕಣ್ಣೆದುರಿಗೇ ಅಂಥ ಯಜ್ಞಗಳನ್ನು ಅರ್ಪಿಸಿದರೆ, ಅವರು ನಮ್ಮನ್ನು ಕಲ್ಲೆಸೆದು ಕೊಲ್ಲುವುದಿಲ್ಲವೇ?


“ನೀವು ನೆರೆಯವನ ಮನೆಯನ್ನು ಆಶಿಸಬಾರದು. ನೀವು ಮತ್ತೊಬ್ಬನ ಹೆಂಡತಿಯನ್ನಾಗಲಿ ಸೇವಕರನ್ನಾಗಲಿ ದಾಸಿಯರನ್ನಾಗಲಿ ಪಶುಗಳನ್ನಾಗಲಿ ಆಶಿಸಬಾರದು.”


ನೀವು ಆ ಪಟ್ಟಣದಲ್ಲಿದ್ದ ಎಲ್ಲಾ ಬೆಲೆಬಾಳುವ ವಸ್ತುಗಳನ್ನು ಪಟ್ಟಣದ ಮಧ್ಯದಲ್ಲಿ ತಂದುಹಾಕಿ ಅದಕ್ಕೆ ಬೆಂಕಿಹೊತ್ತಿಸಿ ಇಡೀ ಪಟ್ಟಣವನ್ನು ಬೆಂಕಿಯಿಂದ ಸುಡಬೇಕು. ಇದು ದೇವರಾದ ಯೆಹೋವನಿಗೆ ಸರ್ವಾಂಗಹೋಮವಾಗುವುದು. ಆ ಪಟ್ಟಣವು ಕಲ್ಲುಗಳ ರಾಶಿಯಾಗಿ ಪರಿಣಮಿಸುವುದು ಮತ್ತು ಯಾರೂ ಆ ಪಟ್ಟಣವನ್ನು ಮತ್ತೆ ಕಟ್ಟಬಾರದು.


ರಾಜನಾದ ಯೋಷೀಯನು ಎಲ್ಲಾ ಸ್ಮಾರಕಕಲ್ಲುಗಳನ್ನು ಮತ್ತು ಅಶೇರಸ್ತಂಭಗಳನ್ನು ಒಡೆದು ಹಾಕಿಸಿದನು. ಆಮೇಲೆ ಅವನು ಆ ಸ್ಥಳದ ಮೇಲೆ ಸತ್ತವರ ಎಲುಬುಗಳನ್ನು ಹರಡಿದನು.


“ವಿಗ್ರಹಾರಾಧನೆ ಮಾಡಬೇಡಿರಿ! ಎರಕದ ವಿಗ್ರಹಗಳನ್ನು ಮಾಡಿಕೊಳ್ಳಬೇಡಿರಿ. ನಾನೇ ನಿಮ್ಮ ದೇವರಾದ ಯೆಹೋವನು!


“‘ಸುಳ್ಳುದೇವರನ್ನು ಮಾಡಿ ಗುಪ್ತ ಸ್ಥಳದಲ್ಲಿಡುವವನು ಶಾಪಗ್ರಸ್ತನಾಗಲಿ; ಆ ದೇವರುಗಳು ಮನುಷ್ಯನ ಕೈಕೆಲಸವೇ; ಕಲ್ಲು, ಮರ, ಹಿತ್ತಾಳೆಗಳಿಂದ ಮಾಡಿದವುಗಳೇ. ಯೆಹೋವನು ಅವುಗಳನ್ನು ದ್ವೇಷಿಸುತ್ತಾನೆ.’ “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.


“ಸುಳ್ಳುದೇವರುಗಳೇ, ಕೇಳಿ. ನೀವು ಶೂನ್ಯಕ್ಕಿಂತ ಕಡಿಮೆಯಾದವರು. ನೀವು ಏನನ್ನೂ ಮಾಡಲಾರಿರಿ. ದೇವರ ದೃಷ್ಠಿಯಲ್ಲಿ ತುಚ್ಛನಾದವನು ಮಾತ್ರ ನಿಮ್ಮನ್ನು ಪೂಜಿಸುವನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು