Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 7:9 - ಪರಿಶುದ್ದ ಬೈಬಲ್‌

9 “ಆದ್ದರಿಂದ ನಿಮ್ಮ ದೇವರಾದ ಯೆಹೋವನೊಬ್ಬನೇ ನಿಜವಾದ ದೇವರೆಂಬುದು ನಿಮಗೆ ತಿಳಿದಿರಲಿ. ನೀವು ಆತನ ಮೇಲೆ ಭರವಸವಿಡಬಹುದು. ಆತನು ತಾನು ಮಾಡಿದ ಒಡಂಬಡಿಕೆಯನ್ನು ನೆರವೇರಿಸುವಾತನಾಗಿದ್ದಾನೆ. ಆತನನ್ನು ಪ್ರೀತಿಸಿ ಆತನ ಕಟ್ಟಳೆಗಳಿಗೆ ವಿಧೇಯರಾಗುವವರನ್ನೆಲ್ಲಾ ಆತನು ಪ್ರೀತಿಸುತ್ತಾನೆ; ಅವರಿಗೆ ಕರುಣೆ ತೋರುತ್ತಾನೆ. ಈ ಪ್ರೀತಿ, ಕರುಣೆಗಳು ಸಾವಿರ ತಲೆಮಾರುಗಳವರೆಗೂ ಮುಂದುವರಿಯುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆದುದರಿಂದ ನಿಮ್ಮ ದೇವರಾದ ಯೆಹೋವನೊಬ್ಬನೇ ದೇವರೆಂದು ತಿಳಿದುಕೊಳ್ಳಬೇಕು. ಆತನು ನಂಬಿಗಸ್ತನಾದ ದೇವರು; ತನ್ನನ್ನು ಪ್ರೀತಿಸಿ ತನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ತಾನು ಮಾಡಿದ ವಾಗ್ದಾನವನ್ನೂ ಮತ್ತು ಕೃಪೆಯನ್ನೂ ಅವರ ಸಂತತಿಯವರಲ್ಲಿ ಸಾವಿರ ತಲೆಗಳವರೆಗೂ ನೆರವೇರಿಸುವವನಾಗಿಯೂ ಮತ್ತು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆದುದರಿಂದ ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯೊಬ್ಬರೇ ದೇವರೆಂದು ತಿಳಿದುಕೊಳ್ಳಬೇಕು. ಅವರೇ ನಂಬಿಕಸ್ತರಾದ ದೇವರು; ತಮ್ಮನ್ನು ಪ್ರೀತಿಸಿ ತಮ್ಮ ಆಜ್ಞೆಗಳನ್ನು ಅನುಸರಿಸುವವರಿಗೆ ತಾವು ಮಾಡಿದ ವಾಗ್ದಾನವನ್ನು ನೆರವೇರಿಸಿ, ತಮ್ಮ ಅಚಲಪ್ರೀತಿಯನ್ನು ಅವರ ಸಂತತಿಯವರಲ್ಲಿ ಸಾವಿರ ತಲೆಗಳವರೆಗೂ ತೋರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆದದರಿಂದ ನಿಮ್ಮ ದೇವರಾದ ಯೆಹೋವನೊಬ್ಬನೇ ದೇವರೆಂದು ತಿಳಿದುಕೊಳ್ಳಬೇಕು. ಆತನು ನಂಬಿಗಸ್ತನಾದ ದೇವರು; ತನ್ನನ್ನು ಪ್ರೀತಿಸಿ ತನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ಮಾಡಿದ ವಾಗ್ದಾನವನ್ನೂ ಕೃಪೆಯನ್ನೂ ಅವರ ಸಂತತಿಯವರಲ್ಲಿ ಸಾವಿರ ತಲೆಗಳವರೆಗೂ ನೆರವೇರಿಸುವವನಾಗಿಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಹೀಗಿರುವುದರಿಂದ ನಿಮ್ಮ ದೇವರಾದ ಯೆಹೋವ ದೇವರು ಒಬ್ಬರೇ ದೇವರು; ಅವರೇ ನಂಬಿಗಸ್ತರಾದ ದೇವರು; ತಮ್ಮನ್ನು ಪ್ರೀತಿಸಿ, ತಮ್ಮ ಆಜ್ಞೆಗಳನ್ನು ಕೈಗೊಳ್ಳುವವರಿಗೆ, ಅವರು ತಮ್ಮ ಒಡಂಬಡಿಕೆಯ ಪ್ರೀತಿಯನ್ನು ಸಾವಿರ ತಲೆಗಳವರೆಗೂ ತೋರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 7:9
41 ತಿಳಿವುಗಳ ಹೋಲಿಕೆ  

ನಮ್ಮಲ್ಲಿರುವ ನಿರೀಕ್ಷೆಯನ್ನು ದೃಢವಾಗಿ ಕಾಯ್ದುಕೊಂಡು ಅದರ ಬಗ್ಗೆ ಜನರಿಗೆ ತಿಳಿಸುವುದರಲ್ಲಿ ದೃಢವಾಗಿರೋಣ. ದೇವರು ತನ್ನ ವಾಗ್ದಾನವನ್ನು ಈಡೇರಿಸುತ್ತಾನೆ ಎಂಬ ಭರವಸೆ ನಮ್ಮಲ್ಲಿರಬೇಕು.


ನಾವು ನಂಬಿಗಸ್ತರಾಗಿಲ್ಲದಿದ್ದರೂ, ಆತನು ಇನ್ನೂ ನಂಬಿಗಸ್ತನಾಗಿರುವನು; ಏಕೆಂದರೆ ಆತನು ತನ್ನ ಸ್ವಭಾವಕ್ಕೆ ವಿರುದ್ಧನಾಗಲಾರನು.


ಆದರೆ ಪ್ರಭುವು ನಂಬಿಗಸ್ತನು. ಆತನು ನಿಮ್ಮನ್ನು ಬಲಗೊಳಿಸುವನು ಮತ್ತು ಕೆಡುಕನಿಂದ (ಸೈತಾನನಿಂದ) ನಿಮ್ಮನ್ನು ರಕ್ಷಿಸುವನು.


ನಾನು ಯೆಹೋವನಾದ ನನ್ನ ದೇವರನ್ನು ಪ್ರಾರ್ಥಿಸಿದೆ. ನಾನು ನನ್ನ ಎಲ್ಲ ಪಾಪಗಳ ಬಗ್ಗೆ ಆತನಿಗೆ ಹೇಳಿದೆ. ನಾನು, “ಯೆಹೋವನೇ, ನೀನು ಭಯಂಕರನಾಗಿರುವೆ. ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳನ್ನು ಅನುಸರಿಸುವವರಿಗೆ, ಮಾಡಿದ ಪ್ರೀತಿಯ ಮತ್ತು ಕರುಣೆಯ ವಾಗ್ದಾನಗಳನ್ನು ನೀನು ನೆರವೇರಿಸುವೆ.


ದೇವರು ನಂಬಿಗಸ್ತನಾಗಿದ್ದಾನೆ. ದೇವರ ಮಗನಾದ ಮತ್ತು ಪ್ರಭುವಾದ ಯೇಸು ಕ್ರಿಸ್ತನ ಜೀವದಲ್ಲಿ ಪಾಲುಹೊಂದಬೇಕೆಂದು ನಮ್ಮನ್ನು ಕರೆದಿರುವಾತನು ದೇವರೇ.


ನಂತರ ನಾನು ಈ ಪ್ರಾರ್ಥನೆ ಮಾಡಿದೆನು: “ಪರಲೋಕದ ದೇವರಾದ ಯೆಹೋವನೇ, ನೀನು ಮಹಾ ದೇವರೂ ಪರಾಕ್ರಮವುಳ್ಳ ದೇವರೂ ಆಗಿರುವಿ. ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳಿಗೆ ವಿಧೇಯರಾಗುವವರಿಗೆ ನೀನು ಮಾಡಿದ ವಾಗ್ದಾನವನ್ನು ನೆರವೇರಿಸುವವನಾಗಿರುವಿ.


ನಿಮ್ಮನ್ನು ಕರೆಯುವಾತನೇ ಅದನ್ನು ನಿಮಗಾಗಿ ಮಾಡುತ್ತಾನೆ. ಆತನು ನಂಬಿಗಸ್ತನು.


ದೇವರು ತನ್ನನ್ನು ಪ್ರೀತಿಸುವವರ ಒಳ್ಳೆಯದಕ್ಕಾಗಿ ಪ್ರತಿಯೊಂದು ಕಾರ್ಯವನ್ನೂ ಅನುಕೂಲ ಮಾಡುತ್ತಾನೆಂದು ನಮಗೆ ಗೊತ್ತಿದೆ. ಆ ಜನರನ್ನು ದೇವರೇ ಆರಿಸಿಕೊಂಡನು, ಏಕೆಂದರೆ ಅದು ಆತನ ಯೋಜನೆಯಾಗಿತ್ತು.


ಆದರೆ ನನ್ನನ್ನು ಪ್ರೀತಿಸಿ ನನ್ನ ಆಜ್ಞೆಗಳಿಗೆ ವಿಧೇಯರಾಗುವವರ ಮೇಲೆ ನಾನು ದಯೆ ತೋರಿಸುವೆನು. ಅವರ ಕುಟುಂಬಗಳವರಿಗೆ ಸಾವಿರ ತಲೆಮಾರುಗಳವರೆಗೂ ಕರುಣೆಯನ್ನು ತೋರಿಸುವೆನು.


ಆದರೆ ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ, ಆತನು ನಂಬಿಗಸ್ತನೂ ನೀತಿವಂತನೂ ಆಗಿರುವುದರಿಂದ ನಮ್ಮ ಎಲ್ಲಾ ಪಾಪಗಳನ್ನು ಕ್ಷಮಿಸಿ ನಮ್ಮನ್ನು ಶುದ್ಧೀಕರಿಸುತ್ತಾನೆ.


ಇಸ್ರೇಲಿನ ಪರಿಶುದ್ಧನೂ ವಿಮೋಚಕನೂ ಆದ ಯೆಹೋವನು ಇಸ್ರೇಲನ್ನು ಬಿಡಿಸುವನು. ಆತನು ಹೇಳುವುದೇನೆಂದರೆ, “ನನ್ನ ಸೇವಕನು ದೀನನಾಗಿದ್ದಾನೆ. ಆತನು ಅರಸರನ್ನು ಸೇವಿಸುವನು. ಆದರೆ ಜನರು ಆತನನ್ನು ದ್ವೇಷಿಸುವರು. ಆದರೆ ರಾಜರುಗಳು ಅವನನ್ನು ನೋಡಿ ಎದ್ದುನಿಂತು ಗೌರವಿಸುವರು. ಶ್ರೇಷ್ಠ ನಾಯಕರು ಆತನ ಮುಂದೆ ಅಡ್ಡಬೀಳುವರು.” ಇದು ಇಸ್ರೇಲರ ಪರಿಶುದ್ಧನಾದ ಯೆಹೋವನ ಚಿತ್ತಕ್ಕನುಸಾರವಾಗಿದೆ. ಆತನು ಭರವಸೆಗೆ ಯೋಗ್ಯನಾಗಿದ್ದಾನೆ. ಆತನೇ ನಿನ್ನನ್ನು ಆರಿಸಿಕೊಂಡನು.


ಶೋಧನೆಯನ್ನು ಎದುರಿಸುತ್ತಿದ್ದರೂ ದೃಢವಾಗಿರುವವನೇ ಧನ್ಯನು. ಏಕೆಂದರೆ ಅವನು ತನ್ನ ನಂಬಿಕೆಯನ್ನು ನಿರೂಪಿಸಿದಾಗ, ಜೀವವೆಂಬ ಜಯಮಾಲೆಯನ್ನು ಹೊಂದುವನು. ದೇವರು ತನ್ನನ್ನು ಪ್ರೀತಿಸುವ ಜನರಿಗೆಲ್ಲರಿಗೂ ಇದನ್ನು ವಾಗ್ದಾನ ಮಾಡಿದ್ದಾನೆ.


ನೀವು ದೇವರನ್ನು ನಂಬಬಲ್ಲವರಾಗಿದ್ದರೆ, ನಾವು ನಿಮಗೆ ಏಕಕಾಲದಲ್ಲಿಯೇ “ಹೌದು” ಮತ್ತು “ಇಲ್ಲ” ಎಂದು ಹೇಳಲಿಲ್ಲವೆಂದು ನೀವು ನಂಬಬಲ್ಲಿರಿ.


ಆದರೆ ನನ್ನ ಆಜ್ಞೆಗಳಿಗೆ ವಿಧೇಯರಾಗಿರುವವರಿಗೆ ಅವರ ಸಾವಿರ ತಲೆಮಾರುಗಳವರೆಗೂ ದಯೆತೋರಿಸುವೆನು.


ನಾನು ನಿನ್ನೊಂದಿಗೆ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ಈ ಒಡಂಬಡಿಕೆಯು ನಿನ್ನ ಎಲ್ಲಾ ಸಂತತಿಯವರಿಗೆ ಶಾಶ್ವತವಾಗಿ ಅನ್ವಯಿಸುವುದು. ನಾನೇ ನಿನಗೂ ನಿನ್ನ ಎಲ್ಲಾ ಸಂತತಿಯವರಿಗೂ ದೇವರಾಗಿರುವೆನು.


ದೇವರ ವಾಗ್ದಾನ ಮತ್ತು ಆಣೆ ಅಚಲವಾದ ಎರಡು ಆಧಾರಗಳಾಗಿವೆ. ಇವುಗಳ ವಿಷಯದಲ್ಲಿ ನಮಗೆಂದಿಗೂ ಮೋಸವಾಗುವುದಿಲ್ಲ. ಇದರಿಂದಾಗಿ, ದೇವರ ರಕ್ಷಣೆಗಾಗಿ ಓಡಿ ಬಂದಿರುವ ನಾವು ನಮ್ಮ ನಿರೀಕ್ಷೆಯಲ್ಲಿ ಸ್ಥಿರವಾಗಿರಲು ಬಲವಾದ ಪ್ರೋತ್ಸಾಹ ಉಂಟಾಯಿತು.


ಯೆಹೋವನೇ, ನಿನ್ನ ತೀರ್ಪುಗಳು ನ್ಯಾಯವಾದವುಗಳೆಂದು ನನಗೆ ತಿಳಿದಿದೆ. ನೀನು ನನ್ನನ್ನು ಶಿಕ್ಷಿಸಿದ್ದು ನನ್ನ ದೃಷ್ಟಿಯಲ್ಲಿ ನ್ಯಾಯವಾಗಿತ್ತು.


ಅಬ್ರಹಾಮನು ಮಕ್ಕಳನ್ನು ಪಡೆಯಲಾಗದಷ್ಟು ವೃದ್ಧನಾಗಿದ್ದನು. ಸಾರಳು ಮಕ್ಕಳನ್ನು ಪಡೆಯಲು ಸಮರ್ಥಳಾಗಿರಲಿಲ್ಲ. ಆದರೆ ಅಬ್ರಹಾಮನಿಗೆ ದೇವರಲ್ಲಿ ನಂಬಿಕೆಯಿದ್ದುದರಿಂದ, ಅವರು ಮಕ್ಕಳನ್ನು ಪಡೆಯಲು ಸಮರ್ಥರಾಗುವಂತೆ ದೇವರು ಮಾಡಿದನು.


ಯೆಹೋವನು ನಿಮಗೆ ಇವುಗಳನ್ನು ತೋರಿಸಿದ್ದಾನೆ, ಯಾಕೆಂದರೆ ಆತನೇ ದೇವರೆಂದೂ ಆತನಲ್ಲದೆ ಬೇರೆ ಯಾವ ದೇವರಿಲ್ಲವೆಂದೂ ನೀವು ತಿಳಿದುಕೊಳ್ಳಬೇಕೆಂಬುದು ಆತನ ಉದ್ದೇಶವಾಗಿತ್ತು.


ನಿತ್ಯಜೀವದ ಮೇಲೆ ನಮಗಿರುವ ನಿರೀಕ್ಷೆಯಿಂದಲೇ ಆ ನಂಬಿಕೆ ಮತ್ತು ಜ್ಞಾನಗಳು ಉಂಟಾಗಿವೆ. ನಿತ್ಯಜೀವವನ್ನು ಕೊಡುವುದಾಗಿ ದೇವರು ನಮಗೆ ಅನಾದಿಕಾಲದಲ್ಲಿಯೇ ವಾಗ್ದಾನ ಮಾಡಿದ್ದನು. ದೇವರು ಸುಳ್ಳು ಹೇಳುವುದಿಲ್ಲ.


ಒಂದೇ ಆತ್ಮಿಕ ಆಹಾರವನ್ನು ಊಟ ಮಾಡಿದರು;


ಯಾವನು ದೇವರನ್ನು ಪ್ರೀತಿಸುತ್ತಾನೋ ಅವನನ್ನು ದೇವರು ತಿಳಿದುಕೊಂಡಿದ್ದಾನೆ.


ಯೆಹೋವನ ಒಡಂಬಡಿಕೆಯನ್ನು ಸದಾಕಾಲ ನೆನಪಿನಲ್ಲಿಡಿರಿ. ಆತನು ಆ ಆಜ್ಞೆಗಳನ್ನು ಸಾವಿರ ತಲೆಮಾರುಗಳಿಗೆ ಕೊಟ್ಟನು.


ಪ್ರತಿ ಮುಂಜಾನೆಯೂ ಆತನು ಅದನ್ನು ಹೊಸ ರೀತಿಗಳಲ್ಲಿ ತೋರಿಸುವನು. ಯೆಹೋವನೇ, ನೀನು ಎಷ್ಟೋ ಸತ್ಯವಂತನು ಮತ್ತು ನಂಬಿಗಸ್ತನು!


ಯೆಹೋವನು ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಸಿದನು. ಆತನು ಅವುಗಳನ್ನು ಶಾಶ್ವತವಾಗಿ ಸಂರಕ್ಷಿಸುವನು.


ನಾನು ಈ ಮುಗಿಲುಬಿಲ್ಲನ್ನು ನೋಡುವಾಗ, ನನಗೂ ನಿಮಗೂ ಮತ್ತು ಭೂಮಿಯ ಮೇಲಿರುವ ಎಲ್ಲಾ ಜೀವಿಗಳಿಗೂ ಆಗಿರುವ ಒಡಂಬಡಿಕೆಯನ್ನು ನೆನಪುಮಾಡಿಕೊಳ್ಳುವೆನು. ಜಲಪ್ರಳಯವು ಇನ್ನೆಂದಿಗೂ ಭೂಮಿಯ ಮೇಲಿರುವ ಎಲ್ಲಾ ಜೀವಿಗಳನ್ನು ನಾಶಗೊಳಿಸುವುದಿಲ್ಲ ಎಂಬುದೇ ಈ ಒಡಂಬಡಿಕೆ.


“ನಾನು ನಿನ್ನ ಸಂಗಡವಿದ್ದು ನೀನು ಹೋಗುವ ಪ್ರತಿಯೊಂದು ಸ್ಥಳದಲ್ಲಿಯೂ ನಿನ್ನನ್ನು ಕಾಪಾಡುವೆನು; ನಿನ್ನನ್ನು ಈ ಸ್ಥಳಕ್ಕೆ ಮತ್ತೆ ಕರೆದುಕೊಂಡು ಬರುವೆನು. ನಾನು ವಾಗ್ದಾನ ಮಾಡಿದ್ದನ್ನು ನೆರವೇರಿಸುವ ತನಕ ನಾನು ನಿನ್ನನ್ನು ಬಿಟ್ಟು ಹೋಗುವುದಿಲ್ಲ” ಎಂದು ಹೇಳಿದನು.


ನೀನು ನಿನ್ನ ವಿಷಯದಲ್ಲಿ ‘ಯೆಹೋವನು ದೀರ್ಘಶಾಂತನು, ಬಹುಪ್ರೀತಿಯುಳ್ಳವನು, ಅಪರಾಧ, ಪಾಪಗಳನ್ನು ಕ್ಷಮಿಸುವವನಾಗಿದ್ದರೂ ಎಲ್ಲಾ ದಂಡನೆಯನ್ನು ರದ್ದುಪಡಿಸದವನು, ತಂದೆಗಳ ಪಾಪಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನು’ ಎಂದು ನೀನೇ ಹೇಳಿರುವಿಯಲ್ಲಾ!


“ಆದ್ದರಿಂದ ಈ ಹೊತ್ತು ನೀವೆಲ್ಲಾ ಯೆಹೋವನನ್ನು ದೇವರೆಂದು ಸ್ವೀಕರಿಸಬೇಕು. ಆತನು ಮೇಲಿರುವ ಆಕಾಶಕ್ಕೂ ಕೆಳಗಿರುವ ಭೂಮಿಗೂ ದೇವರಾಗಿದ್ದಾನೆ. ಆತನ ಹೊರತು ಬೇರೆ ದೇವರುಗಳಿಲ್ಲ.


“ಯೆಹೋವನ ಕಾರ್ಯವು ನಿಷ್ಕಳಂಕವಾದದ್ದು. ಯಾಕೆಂದರೆ ಆತನ ಮಾರ್ಗವೆಲ್ಲವೂ ಸರಿಯಾದದ್ದೇ. ದೇವರು ಸತ್ಯವಂತನೂ ನಂಬಿಗಸ್ತನೂ ಆಗಿದ್ದಾನೆ. ಆತನು ಒಳ್ಳೆಯವನೂ ಪ್ರಾಮಾಣಿಕನೂ ಆಗಿದ್ದಾನೆ.


ಯೆಹೋವನ ದೂತನು ಗಿಲ್ಗಾಲ್ ನಗರದಿಂದ ಬೋಕೀಮ್ ನಗರದವರೆಗೆ ಹೋದನು. ಆ ದೂತನು ಇಸ್ರೇಲರಿಗೆ ಯೆಹೋವನ ಒಂದು ಸಂದೇಶವನ್ನು ತಿಳಿಸಿದನು. ಆ ಸಂದೇಶವು ಹೀಗೆದೆ: “ನಾನು ನಿಮ್ಮನ್ನು ಈಜಿಪ್ಟಿನಿಂದ ಬಿಡಿಸಿ ಹೊರಗೆತಂದೆ. ನಾನು ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ಪ್ರದೇಶಕ್ಕೆ ನಿಮ್ಮನ್ನು ಕರೆದುಕೊಂಡು ಬಂದೆನು. ‘ನಾನು ನಿಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಎಂದಿಗೂ ಮುರಿಯುವುದಿಲ್ಲ.


“ಇಸ್ರೇಲಿನ ದೇವರಾದ ಯೆಹೋವನೇ, ಭೂಲೋಕದಲ್ಲಾಗಲಿ ಆಕಾಶಮಂಡಲದಲ್ಲಾಗಲಿ ನಿನ್ನಂತಹ ದೇವರು ಮತ್ತೊಬ್ಬರಿಲ್ಲ. ನೀನು ಜನರನ್ನು ಪ್ರೀತಿಸುವುದರಿಂದ ಅವರೊಂದಿಗೆ ಒಡಂಬಡಿಕೆ ಮಾಡಿಕೊಂಡೆ. ನೀನು ನಿನ್ನ ಒಡಂಬಡಿಕೆಗಳನ್ನು ನೆರವೇರಿಸುವೆ. ನಿನ್ನನ್ನು ಪೂರ್ಣಮನಸ್ಸಿನಿಂದ ಅನುಸರಿಸುವ ಜನರಿಗೆ ನೀನು ದಯಾಳುವಾಗಿರುವೆ ಮತ್ತು ನಂಬಿಗಸ್ತನಾಗಿರುವೆ.


“ಇಸ್ರೇಲರ ದೇವರಾದ ಯೆಹೋವನೇ, ಭೂಪರಲೋಕಗಳಲ್ಲಿ ನಿನಗೆ ಸಮಾನರಾದ ಬೇರೆ ದೇವರುಗಳಿಲ್ಲ. ನೀನು ನಿನ್ನ ಪ್ರೀತಿ ಕರುಣೆಯಿಂದೊಡಗೂಡಿದ ವಾಗ್ದಾನಗಳನ್ನು ನೆರವೇರಿಸುವೆ. ನಿನ್ನ ಸೇವಕರು ಹೃದಯಪೂರ್ವಕವಾಗಿ ನಿನಗೆ ಯೋಗ್ಯರಾಗಿ ನಡೆದು, ನಿನ್ನ ಆಜ್ಞೆಗಳಿಗೆ ವಿಧೇಯರಾಗುವದಾದರೆ ಅವರ ವಿಷಯದಲ್ಲಿ ನಿನ್ನ ವಾಗ್ದಾನವನ್ನು ನೆರವೇರಿಸುವೆ.


ಆತನ ಒಡಂಬಡಿಕೆಗೆ ವಿಧೇಯರಾಗುವ ಜನರಿಗೆ ಆತನು ಒಳ್ಳೆಯವನಾಗಿದ್ದಾನೆ. ಆತನ ಆಜ್ಞೆಗಳಿಗೆ ವಿಧೇಯರಾಗುವ ಜನರಿಗೆ ಆತನು ಒಳ್ಳೆಯವನಾಗಿದ್ದಾನೆ.


ಆತನು ತನ್ನ ಒಡಂಬಡಿಕೆಯನ್ನು ಯಾವಾಗಲೂ ಜ್ಞಾಪಿಸಿಕೊಳ್ಳುವನು. ಆತನು ತನ್ನ ಆಜ್ಞೆಗಳನ್ನು ಸಾವಿರ ತಲೆಮಾರುಗಳವರೆಗೂ ಜ್ಞಾಪಿಸಿಕೊಳ್ಳುವನು.


ಯೆಹೋವನೇ, ನೀನು ಸಾವಿರಾರು ಜನರಿಗೆ ನಂಬಿಗಸ್ತನಾಗಿಯೂ ಕರುಣಾಮಯಿಯಾಗಿಯೂ ಇರುವೆ. ಆದರೆ ತಂದೆಗಳು ಮಾಡಿದ ಪಾಪಕ್ಕಾಗಿ ಮಕ್ಕಳಿಗೆ ಶಿಕ್ಷೆಯನ್ನು ವಿಧಿಸುವಾತನೂ ನೀನೇ. ಮಹತ್ವವುಳ್ಳವನೇ, ಪರಾಕ್ರಮಿಯಾದ ದೇವರೇ, ಸರ್ವಶಕ್ತನಾದ ಯೆಹೋವನು ಎಂಬುದೇ ನಿನ್ನ ನಾಮಧೇಯ.


“‘ನಾನೇ ದೇವರು, ನನ್ನ ಹೊರತು ಬೇರೆ ದೇವರಿಲ್ಲ. ಜನರಿಗೆ ಮರಣವನ್ನೂ ಜೀವವನ್ನೂ ಕೊಡುವವನು ನಾನೇ. ಅವರಿಗೆ ಗಾಯ ಮಾಡುವವನೂ ನಾನೇ, ಅದನ್ನು ಗುಣಮಾಡುವವನೂ ನಾನೇ. ನನ್ನ ಶಕ್ತಿಯ ಹಿಡಿತದಿಂದ ಇನ್ನೊಬ್ಬನನ್ನು ರಕ್ಷಿಸಲು ಯಾರಿಗೂ ಸಾಧ್ಯವಿಲ್ಲ.


“ಯೆಹೋವನೇ, ನಿನ್ನ ವೈರಿಗಳೆಲ್ಲಾ ಹೀಗೇ ಸಾಯಲಿ; ಆದರೆ ನಿನ್ನನ್ನು ಪ್ರೀತಿಸುವವರೆಲ್ಲರೂ ಬಲವಾಗಿದ್ದು ಉದಯಿಸುವ ಸೂರ್ಯನಂತೆ ಬೆಳಗಲಿ!” ನಲವತ್ತು ವರ್ಷಗಳವರೆಗೆ ದೇಶದಲ್ಲಿ ಶಾಂತಿ ನೆಲೆಸಿತ್ತು.


ನಮ್ಮ ದೇವರೇ, ನೀನು ಮಹಾ ದೇವರು, ಭಯಂಕರನೂ ಬಲಿಷ್ಠ ಸೈನಿಕನೂ ಆಗಿರುವ ದೇವರು! ನೀನು ದಯಾಪರನೂ ನಂಬಿಗಸ್ತನೂ ಆಗಿರುವಿ. ನಿನ್ನ ಒಡಂಬಡಿಕೆಯನ್ನು ನೆರವೇರಿಸುವ ದೇವರು. ನಾವು ತುಂಬಾ ಸಂಕಟಗಳನ್ನು ಅನುಭವಿಸಿದೆವು. ನಮ್ಮ ಸಂಕಟಗಳು ನಿನಗೆ ವಿಶೇಷವಾದವುಗಳಾಗಿವೆ. ನಮ್ಮ ಜನರಿಗೆಲ್ಲಾ ತೊಂದರೆಗಳುಂಟಾದವು. ನಮ್ಮ ನಾಯಕರಿಗೂ ರಾಜನಿಗೂ ನಮ್ಮ ಯಾಜಕರಿಗೂ ಪ್ರವಾದಿಗಳಿಗೂ ಅಶ್ಶೂರ್ಯದ ರಾಜನ ಸಮಯದಿಂದ ಈ ದಿವಸದ ತನಕ ಭಯಂಕರ ಕಷ್ಟಗಳು ಬಂದೊದಗಿದವು.


ನಿನ್ನ ನೀತಿಯು ಅತ್ಯುನ್ನತವಾದ ಬೆಟ್ಟಕ್ಕಿಂತಲೂ ಎತ್ತರವಾಗಿದೆ. ನಿನ್ನ ನ್ಯಾಯವು ಮಹಾಸಾಗರಕ್ಕಿಂತಲೂ ಆಳವಾಗಿದೆ. ಯೆಹೋವನೇ, ಮನುಷ್ಯರನ್ನೂ ಪ್ರಾಣಿಗಳನ್ನೂ ಕಾಪಾಡುವಾತನು ನೀನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು