Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 8:15 - ಪರಿಶುದ್ದ ಬೈಬಲ್‌

15 ಆತನು ನಿಮ್ಮನ್ನು ಭಯಂಕರವಾದ ಆ ಅಡವಿಯಲ್ಲಿ ಮೊದಲು ನಡೆಸಿದನು. ಅಲ್ಲಿ ವಿಷದ ಹಾವುಗಳು, ಚೇಳುಗಳು ಇದ್ದವು. ನೆಲವು ಕಾದಿದ್ದು ಎಲ್ಲಿಯೂ ನೀರು ಸಿಗುತ್ತಿರಲಿಲ್ಲ. ಆದರೆ ನಿಮ್ಮ ದೇವರಾದ ಯೆಹೋವನು ಬಂಡೆಯೊಳಗಿಂದ ನೀರನ್ನು ನಿಮಗೆ ಒದಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆತನು ಐಗುಪ್ತ ದೇಶದಲ್ಲಿ ದಾಸರಾಗಿದ್ದ ನಿಮ್ಮನ್ನು ಬಿಡುಗಡೆಮಾಡಿ, ವಿಷಸರ್ಪಗಳೂ ಮತ್ತು ಚೇಳುಗಳೂ ಇದ್ದ ಆ ಘೋರವಾದ ಮಹಾ ಅರಣ್ಯವನ್ನೂ, ನೀರು ಬತ್ತಿಹೋದ ಭೂಮಿಗಳನ್ನೂ ದಾಟಿಸಿದ್ದನ್ನು ಮತ್ತು ಗಟ್ಟಿಯಾದ ಬಂಡೆಯೊಳಗಿಂದ ನೀರು ಹೊರಡಿಸಿದ್ದನ್ನು ಮರೆಯಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15-16 ಅವರು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ಪರೀಕ್ಷಿಸಿದ ನಂತರ ನಿಮಗೆ ಒಳಿತನ್ನು ಉಂಟುಮಾಡಬೇಕೆಂಬ ಉದ್ದೇಶದಿಂದ ಈಜಪ್ಟ್ ದೇಶದಲ್ಲಿ ಗುಲಾಮರಾಗಿದ್ದ ನಿಮ್ಮನ್ನು ಬಿಡುಗಡೆ ಮಾಡಿದರು. ವಿಷಸರ್ಪಗಳೂ ಚೇಳುಗಳೂ ಇದ್ದ ಆ ಘೋರವಾದ ಮಹಾಮರುಭೂಮಿಯನ್ನೂ ನೀರು ಬತ್ತಿಹೋಗಿದ್ದ ಭೂಮಿಗಳನ್ನೂ ದಾಟಿಸಿದರು; ಗಟ್ಟಿಯಾದ ಬಂಡೆಯೊಳಗಿಂದ ನೀರನ್ನು ಹೊರಡಿಸಿಕೊಟ್ಟರು. ನಿಮ್ಮ ಪೂರ್ವಿಕರಿಗೆ ತಿಳಿಯದೆ ಇದ್ದ ಮನ್ನವನ್ನು ಕೊಟ್ಟು ಪೋಷಿಸಿದರು. ಅಂಥವರನ್ನು ಮರೆತು ಮನಸ್ಸಿನಲ್ಲೇ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15-16 ಆತನು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ಪರೀಕ್ಷಿಸಿದನಂತರ ನಿಮಗೆ ಮೇಲನ್ನುಂಟುಮಾಡಬೇಕೆಂಬ ಉದ್ದೇಶದಿಂದ ಐಗುಪ್ತದೇಶದಲ್ಲಿ ದಾಸರಾಗಿದ್ದ ನಿಮ್ಮನ್ನು ಬಿಡುಗಡೆಮಾಡಿ ವಿಷಸರ್ಪಗಳೂ ಚೇಳುಗಳೂ ಇದ್ದ ಆ ಘೋರವಾದ ಮಹಾರಣ್ಯವನ್ನೂ ನೀರು ಬತ್ತಿಹೋದ ಭೂವಿುಗಳನ್ನೂ ದಾಟಿಸಿ ಗಟ್ಟಿಯಾದ ಬಂಡೆಯೊಳಗಿಂದ ನೀರನ್ನು ಹೊರಡಿಸಿಕೊಟ್ಟು ನಿಮ್ಮ ಪೂರ್ವಿಕರಿಗೆ ತಿಳಿಯದೆ ಇದ್ದ ಮನ್ನವನ್ನು ಕೊಟ್ಟು ಪೋಷಿಸಿದಾತನನ್ನು ನೀವು ಮರೆತು ಮನಸ್ಸಿನೊಳಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ದೇವರು ಅಗ್ನಿಸರ್ಪಗಳೂ, ಚೇಳುಗಳೂ ತುಂಬಿದ ಮತ್ತು ನೀರಿಲ್ಲದ ಆ ಭಯಂಕರವಾದ ವಿಶಾಲ ಮರುಭೂಮಿಯಲ್ಲಿ ನಿಮ್ಮನ್ನು ನಡೆಸಿ, ಗಟ್ಟಿಯಾದ ಬಂಡೆಯೊಳಗಿಂದ ನಿಮಗೆ ನೀರು ಬರಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 8:15
16 ತಿಳಿವುಗಳ ಹೋಲಿಕೆ  

ಆದ್ದರಿಂದ ಯೆಹೋವನು ಅವರ ಮಧ್ಯದಲ್ಲಿ ವಿಷಕರವಾದ ಹಾವುಗಳನ್ನು ಕಳುಹಿಸಿದನು. ಅವುಗಳು ಅವರನ್ನು ಕಚ್ಚಿದ್ದರಿಂದ ಅನೇಕ ಇಸ್ರೇಲರು ಸತ್ತರು.


ತನ್ನ ಕೈಯಲ್ಲಿದ್ದ ಕೋಲನ್ನು ಎತ್ತಿ ಎರಡು ಸಾರಿ ಬಂಡೆಯನ್ನು ಹೊಡೆದನು. ಬಂಡೆಯಿಂದ ನೀರು ಹರಿಯತೊಡಗಿತು. ಜನರಿಗೆ ಮತ್ತು ಪಶುಗಳಿಗೆ ಕುಡಿಯಲು ನೀರು ದೊರೆಯಿತು.


‘ಈಜಿಪ್ಟಿನಿಂದ ನಮ್ಮನ್ನು ಕರೆದುಕೊಂಡು ಬಂದ ಯೆಹೋವನು ಎಲ್ಲಿದ್ದಾನೆ? ಮರಳುಗಾಡಿನಿಂದ ನಮ್ಮನ್ನು ಕರೆದುಕೊಂಡು ಬಂದ ಯೆಹೋವನು ಎಲ್ಲಿದ್ದಾನೆ? ನಿರ್ಜನವಾದ ಬೆಟ್ಟಪ್ರದೇಶದಿಂದ ನಮ್ಮನ್ನು ತಂದ ಯೆಹೋವನು ಎಲ್ಲಿದ್ದಾನೆ? ಎಂದು ನಿಮ್ಮ ಪೂರ್ವಿಕರು ಸ್ಮರಿಸಲಿಲ್ಲ. ಯೆಹೋವನು ನಮ್ಮನ್ನು ಅಂಧಕಾರಮಯವಾದ ಮತ್ತು ಅಪಾಯಕಾರಿಯಾದ ಭೂಮಿಯಿಂದ ಕರೆದುತಂದನು. ಆ ಭೂಮಿಯ ಮಾರ್ಗವಾಗಿ ಯಾರೂ ಪ್ರಯಾಣ ಮಾಡುವುದಿಲ್ಲ. ಯಾರೂ ಆ ಭೂಮಿಯ ಮೇಲೆ ವಾಸ ಮಾಡುವದಿಲ್ಲ. ಈಗ ಆ ಯೆಹೋವನು ಎಲ್ಲಿದ್ದಾನೆ?’” ನಿಮ್ಮ ಪೂರ್ವಿಕರು ಆ ಪ್ರಶ್ನೆಗಳನ್ನು ಕೇಳಲೇ ಇಲ್ಲ.


ಬಂಡೆಯೊಳಗಿಂದ ನೀರು ಹರಿದುಬರುವಂತೆ ಮಾಡಿದವನು ಆತನೇ. ಗಟ್ಟಿಯಾದ ಬಂಡೆಯೊಳಗಿಂದ ನೀರಿನ ಒರತೆಯನ್ನು ಬರಮಾಡಿದವನು ಆತನೇ.


“ಬಳಿಕ ನಾವು ನಮ್ಮ ದೇವರಾದ ಯೆಹೋವನ ಆಜ್ಞಾನುಸಾರವಾಗಿ ಹೋರೇಬ್ ಬೆಟ್ಟಪ್ರದೇಶವನ್ನು ಬಿಟ್ಟು ಅಮೋರಿಯರ ಗುಡ್ಡಗಾಡು ಪ್ರದೇಶದಲ್ಲಿ ಪ್ರಯಾಣಮಾಡುತ್ತಾ ನೀವು ನೋಡಿದ ಅತ್ಯಂತ ಭಯಂಕರವಾದ ಮತ್ತು ವಿಶಾಲವಾದ ಮರುಭೂಮಿಯನ್ನು ದಾಟಿ ಕಾದೇಶ್‌ಬರ್ನೇಯಕ್ಕೆ ಬಂದೆವು.


ಮರುಭೂಮಿಯಲ್ಲಿ ನಿಮ್ಮನ್ನು ತಿಳಿದುಕೊಂಡಿದ್ದೆನು. ಆ ಒಣಭೂಮಿಯಲ್ಲಿ ನಾನು ನಿಮ್ಮನ್ನು ಬಲ್ಲೆನು.


ತಮ್ಮೊಂದಿಗಿದ್ದ ಆತ್ಮಿಕ ಬಂಡೆಯ ನೀರನ್ನು ಕುಡಿದರು. ಆ ಬಂಡೆಯೇ ಕ್ರಿಸ್ತನು.


ಆಗ ಜನರು ಬಿಸುಲ್ಗುದುರೆಯನ್ನು ನೋಡಿ ನೀರು ಎಂದು ಭಾವಿಸುವರು. ಆದರೆ ಆಗ ನೀರಿನ ಕೊಳಗಳೇ ಇರುವವು. ಬೆಂಗಾಡಿನಲ್ಲಿ ಬಾವಿಗಳಿರುವವು. ನೆಲದೊಳಗಿಂದ ನೀರು ಉಕ್ಕುವುದು. ಒಂದು ಕಾಲದಲ್ಲಿ ಕಾಡುಪ್ರಾಣಿಗಳು ವಾಸವಾಗಿದ್ದ ಸ್ಥಳದಲ್ಲಿ ಎತ್ತರವಾದ ನೀರವಂಜಿಗಳು ಬೆಳೆಯುವವು.


ಆತನು ತನ್ನ ಜನರನ್ನು ಅರಣ್ಯದೊಳಗೆ ನಡೆಸಿದನು. ಆತನ ಪ್ರೀತಿ ಶಾಶ್ವತವಾದದ್ದು.


ಆತನು ಬಂಡೆಯನ್ನು ಸೀಳಿದಾಗ ನೀರು ಚಿಮ್ಮುತ್ತಾ ಹೊರಬಂದಿತು; ಅರಣ್ಯದಲ್ಲಿ ನದಿಯು ಹರಿಯತೊಡಗಿತು!


ಬೆಟ್ಟಗುಡ್ಡಗಳ ಪ್ರಾಂತ್ಯವನ್ನು ವಶಪಡಿಸಲು ಇಸ್ರೇಲನ್ನು ನಡೆಸಿದನು. ಹೊಲದ ಬೆಳೆಯನ್ನು ಇಸ್ರೇಲ್ ಕೊಯಿಲು ಮಾಡಿದನು. ಬಂಡೆಯಿಂದ ಜೇನನ್ನು ಯೆಹೋವನು ಇಸ್ರೇಲಿಗೆ ಕೊಟ್ಟನು. ಗಟ್ಟಿಯಾದ ಬಂಡೆಯಿಂದ ಎಣ್ಣೆಯು ಹೊರಡುವಂತೆ ಮಾಡಿದನು.


ನೆಗೆವ್‌ನಲ್ಲಿರುವ ಪ್ರಾಣಿಗಳ ದುಃಖಕರವಾದ ಸಂದೇಶ: ನೆಗೆವ್ ಬಹು ಅಪಾಯಕಾರಿ ಸ್ಥಳ. ಸಿಂಹ, ವಿಷದ ಹಾವುಗಳು, ವೇಗವಾಗಿ ಚಲಿಸುವ ಹಾವುಗಳಿಂದ ಅದು ತುಂಬಿದೆ. ಆದರೆ ಕೆಲವರು ನೆಗೆವ್ ಮೂಲಕ ಪ್ರಯಾಣ ಮಾಡಿ ಈಜಿಪ್ಟಿಗೆ ಹೋಗುತ್ತಾರೆ. ಅವರು ತಮ್ಮ ಸಂಪತ್ತನ್ನೆಲ್ಲಾ ಕತ್ತೆಯ ಮೇಲೆ ಹೊರಿಸಿರುತ್ತಾರೆ. ಅವರು ತಮ್ಮ ಧನವನ್ನು ಒಂಟೆಯ ಮೇಲೆ ಹೊರಿಸಿರುತ್ತಾರೆ. ತಮಗೆ ಸಹಾಯ ಮಾಡಲಾರದ ದೇಶದ ಮೇಲೆ ಜನರು ಭರವಸವಿಟ್ಟಿದ್ದಾರೆ ಎಂಬುದೇ ಇದರರ್ಥ.


ಯಾಕೆಂದರೆ, ನಾನು ಹೊಸ ಕಾರ್ಯಗಳನ್ನು ಮಾಡುವೆನು. ನೀವು ಹೊಸ ಸಸಿಯ ರೀತಿಯಲ್ಲಿ ಬೆಳೆಯುವಿರಿ. ಇದು ಸತ್ಯವೆಂದು ನಿಮಗೆ ಗೊತ್ತಿದೆ. ನಾನು ಮರುಭೂಮಿಯಲ್ಲಿ ಖಂಡಿತವಾಗಿಯೂ ರಸ್ತೆಯನ್ನು ಮಾಡುತ್ತೇನೆ; ಒಣನೆಲದಲ್ಲಿ ನದಿ ಹರಿಯುವಂತೆ ಮಾಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು