Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 8:8 - ಪರಿಶುದ್ದ ಬೈಬಲ್‌

8 ಆ ದೇಶವು ಗೋಧಿ, ಜವೆಗೋಧಿ, ದ್ರಾಕ್ಷಾಲತೆಗಳು, ಅಂಜೂರ, ದಾಳಿಂಬೆ ಮರಗಳಿಂದ ತುಂಬಿದೆ. ಅಲ್ಲಿ ಎಣ್ಣೆ, ಜೇನುತುಪ್ಪ ಧಾರಾಳವಾಗಿ ಸಿಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆ ದೇಶದಲ್ಲಿ ಗೋದಿ, ಜವೆಗೋದಿ, ದ್ರಾಕ್ಷಿ, ಅಂಜೂರ, ದಾಳಿಂಬ ಇವುಗಳು ಬೆಳೆಯುತ್ತವೆ; ಎಣ್ಣೆ ಮರಗಳೂ ಮತ್ತು ಜೇನೂ ಸಿಕ್ಕುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆ ನಾಡಿನಲ್ಲಿ ಗೋದಿ, ಜವೆಗೋದಿ, ದ್ರಾಕ್ಷಿ, ಅಂಜೂರ, ದಾಳಿಂಬೆ ಇವುಗಳು ಬೆಳೆಯುತ್ತವೆ; ಎಣ್ಣೆಮರಗಳು ಹಾಗು ಜೇನುತುಪ್ಪ ಸಿಕ್ಕುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆ ದೇಶದಲ್ಲಿ ಗೋದಿ, ಜವೆಗೋದಿ, ದ್ರಾಕ್ಷೆ, ಅಂಜೂರ, ದಾಳಿಂಬ ಇವುಗಳು ಬೆಳೆಯುತ್ತವೆ; ಎಣ್ಣೆ ಮರಗಳೂ ಜೇನೂ ಸಿಕ್ಕುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆ ದೇಶದಲ್ಲಿ ಗೋಧಿಯೂ, ಜವೆಗೋಧಿಯೂ, ದ್ರಾಕ್ಷೆಯೂ, ಅಂಜೂರ ಮರಗಳೂ, ದಾಳಿಂಬೆಗಳೂ ಇರುತ್ತವೆ. ಅದು ಓಲಿವ್ ಎಣ್ಣೆಯೂ, ಜೇನೂ ಉಳ್ಳ ದೇಶವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 8:8
23 ತಿಳಿವುಗಳ ಹೋಲಿಕೆ  

ಆದ್ದರಿಂದ ಶಿಷ್ಯರು ಉಳಿದುಹೋಗಿದ್ದ ತುಂಡುಗಳನ್ನು ಒಟ್ಟುಗೂಡಿಸಿದರು. ಜನರು ತಿನ್ನಲು ಆರಂಭಿಸಿದಾಗ ಕೇವಲ ಐದು ಜವೆಗೋದಿಯ ರೊಟ್ಟಿಗಳಿದ್ದವು. ಆದರೆ ಶಿಷ್ಯರು ಉಳಿದುಹೋದ ಆಹಾರದ ತುಂಡುಗಳನ್ನು ಒಟ್ಟುಗೂಡಿಸಿದಾಗ ಹನ್ನೆರಡು ದೊಡ್ಡ ಬುಟ್ಟಿಗಳು ತುಂಬಿಹೋದವು.


ಆತನು ನಿಮ್ಮ ದೇಶದಲ್ಲಿ ಶಾಂತಿಯನ್ನು ನೆಲೆಗೊಳಿಸಿದನು. ನಿಮ್ಮನ್ನು ಶ್ರೇಷ್ಠವಾದ ಗೋಧಿಯಿಂದ ತೃಪ್ತಿಪಡಿಸಿದನು.


ಯೆಹೋವನು ಇಸ್ರೇಲಿಗೆ ಹಿಂಡಿನಿಂದ ಬೆಣ್ಣೆಯನ್ನೂ ಹಾಲನ್ನೂ ಕೊಟ್ಟನು. ಆತನು ಕೊಬ್ಬಿದ ಕುರಿಮರಿಗಳನ್ನೂ ಆಡುಗಳನ್ನೂ ಬಾಷಾನಿನ ಅತ್ಯುತ್ತಮವಾದ ಟಗರುಗಳನ್ನೂ ಕೊಟ್ಟನು. ಜೊತೆಗೆ ಉತ್ತಮವಾದ ಗೋಧಿಯನ್ನೂ ಕೊಟ್ಟನು. ಇಸ್ರೇಲಿನ ಜನರು ಕೆಂಪು ದ್ರಾಕ್ಷಿಯಿಂದ ಮಾಡಿದ ಉತ್ತಮ ದ್ರಾಕ್ಷಾರಸವನ್ನು ಕುಡಿದರು.


ಅಂದ್ರೆಯನು, “ಇಲ್ಲಿರುವ ಒಬ್ಬ ಹುಡುಗನ ಬಳಿ ಜವೆಗೋಧಿಯ ಐದು ರೊಟ್ಟಿಗಳಿವೆ ಮತ್ತು ಎರಡು ಚಿಕ್ಕ ಮೀನುಗಳಿವೆ. ಆದರೆ ಅವು ಈ ಜನಸಮೂಹಕ್ಕೆ ಸಾಕಾಗುವುದಿಲ್ಲ” ಎಂದು ಹೇಳಿದನು.


ಅಂಜೂರದ ಮರಗಳಲ್ಲಿ ಅಂಜೂರದ ಹಣ್ಣು ಬೆಳೆಯದಿದ್ದರೂ ದ್ರಾಕ್ಷಿಬಳ್ಳಿಗಳಲ್ಲಿ ದ್ರಾಕ್ಷಿಹಣ್ಣುಗಳು ಬೆಳೆಯದಿದ್ದರೂ ಎಣ್ಣೆಮರಗಳಲ್ಲಿ ಆಲೀವ್ ಕಾಯಿಗಳು ಬೆಳೆಯದಿದ್ದರೂ ಹೊಲದಲ್ಲಿ ಪೈರು ಬೆಳೆಯದಿದ್ದರೂ ಹಟ್ಟಿಯಲ್ಲಿ ಯಾವ ಕುರಿಗಳು ಇಲ್ಲದಿದ್ದರೂ ಕೊಟ್ಟಿಗೆಯೊಳಗೆ ಯಾವ ಪಶುಗಳು ಇಲ್ಲದಿದ್ದರೂ


ಪ್ರತಿಯೊಬ್ಬನೂ ತನ್ನ ದ್ರಾಕ್ಷಾಲತೆಯ ನೆರಳಿನಲ್ಲಿ ಕುಳಿತುಕೊಳ್ಳುವನು. ಅವರು ಅಂಜೂರದ ಮರದಡಿಯಲ್ಲಿ ವಿಶ್ರಾಂತಿಯಲ್ಲಿರುವರು. ಯಾರೂ ಅವರನ್ನು ಭಯಗೊಳಿಸುವದಿಲ್ಲ. ಯಾಕೆಂದರೆ ಸರ್ವಶಕ್ತನಾದ ಯೆಹೋವನು ಹೀಗೆ ಆಗುವದೆಂದು ಹೇಳಿದ್ದಾನೆ.


ಭೂಮಿಯು ಧಾನ್ಯ, ದ್ರಾಕ್ಷಾರಸ, ಎಣ್ಣೆಯನ್ನು ಕೊಡುವದು. ಇಜ್ರೇಲಿನ ಅವಶ್ಯಕತೆಗಳನ್ನು ಅವು ದೊರಕಿಸುವದು.


“ಆಕೆಗೆ (ಇಸ್ರೇಲಿಗೆ) ನಾನು (ಯೆಹೋವನು) ಧಾನ್ಯ, ಎಣ್ಣೆ, ದ್ರಾಕ್ಷಾರಸವನ್ನು ಕೊಟ್ಟವನೆಂದು ತಿಳಿದಿಲ್ಲ. ಆಕೆಗೆ ಹೆಚ್ಚೆಚ್ಚಾಗಿ ಬೆಳ್ಳಿಬಂಗಾರಗಳನ್ನು ಕೊಡುತ್ತಾ ಬಂದೆನು. ಆದರೆ ಆ ಬೆಳ್ಳಿಬಂಗಾರವನ್ನು ಇಸ್ರೇಲ್ ಬಾಳನ ವಿಗ್ರಹಗಳನ್ನು ತಯಾರಿಸಲು ಉಪಯೋಗಿಸಿದಳು.


“‘ಇಸ್ರೇಲ್ ಮತ್ತು ಯೆಹೂದ ದೇಶದವರು ನಿನ್ನೊಂದಿಗೆ ವ್ಯಾಪಾರ ಮಾಡಿದರು. ಅವರು ನಿನ್ನ ವಸ್ತುಗಳಿಗೆ ಗೋಧಿ, ಆಲೀವ್, ಅಂಜೂರ, ಜೇನು, ಎಣ್ಣೆ ಮತ್ತು ಮುಲಾಮುಗಳನ್ನು ಕೊಟ್ಟರು.


ಆ ಸೈನಿಕರು ನೀವು ಬೆಳೆದ ಬೆಳೆಯನ್ನು ತಿಂದುಬಿಡುವರು. ಅವರು ನಿಮ್ಮೆಲ್ಲ ಆಹಾರವನ್ನು ತಿಂದುಬಿಡುವರು. ಅವರು ನಿಮ್ಮ ಗಂಡುಮಕ್ಕಳನ್ನೂ ಹೆಣ್ಣುಮಕ್ಕಳನ್ನೂ ತಿಂದುಬಿಡುವರು (ನಾಶಮಾಡುವರು). ಅವರು ನಿಮ್ಮ ದನಕರುಗಳ ಹಿಂಡುಗಳನ್ನು, ಕುರಿಗಳ ಮಂದೆಗಳನ್ನು ತಿಂದುಬಿಡುವರು. ಅವರು ನಿಮ್ಮ ದ್ರಾಕ್ಷಿಗಳನ್ನೂ ನಿಮ್ಮ ಅಂಜೂರಗಳನ್ನೂ ತಿಂದುಬಿಡುವರು. ಅವರು ತಮ್ಮ ಖಡ್ಗಗಳಿಂದ ನಿಮ್ಮ ಭದ್ರವಾದ ನಗರಗಳನ್ನು ನಾಶಮಾಡುವರು. ನೀವು ನಂಬಿಕೊಂಡಿದ್ದ ನಿಮ್ಮ ಭದ್ರವಾದ ನಗರಗಳನ್ನು ಅವರು ಹಾಳುಮಾಡುತ್ತಾರೆ.”


ಒಂದುಸಾವಿರ ದ್ರಾಕ್ಷಾಲತೆಗಳಿರುವ ತೋಟಗಳಿರುತ್ತವೆ. ಪ್ರತಿಯೊಂದು ದ್ರಾಕ್ಷಾಲತೆಯು ಒಂದುಸಾವಿರ ಬೆಳ್ಳಿನಾಣ್ಯಗಳಷ್ಟು ಬೆಲೆಬಾಳುವಂಥದ್ದಾಗಿರುತ್ತದೆ. ಆದರೆ ಅಂಥ ತೋಟಗಳು ಹಣಜಿಗಳಿಂದಲೂ ಮುಳ್ಳುಗಿಡಗಳಿಂದಲೂ ತುಂಬಿಕೊಂಡಿರುವವು.


ಬಾಣನು ಮತ್ತು ರೇಕಾಬನು ಗೋಧಿಯನ್ನು ತೆಗೆದುಕೊಳ್ಳುವವರಂತೆ ಮನೆಯ ಮಧ್ಯಭಾಗಕ್ಕೆ ಬಂದರು. ಈಷ್ಬೋಶೆತನು ಮಲಗುವ ಕೋಣೆಯಲ್ಲಿ ಹಾಸಿಗೆಯ ಮೇಲೆ ಮಲಗಿದ್ದನು. ರೇಕಾಬನು ಮತ್ತು ಬಾಣನು ಈಷ್ಬೋಶೆತನನ್ನು ಇರಿದು ಕೊಂದರು. ನಂತರ ಅವರು ಅವನ ತಲೆಯನ್ನು ಕತ್ತರಿಸಿ ಅದನ್ನು ತಮ್ಮೊಂದಿಗೆ ತೆಗೆದುಕೊಂಡು ಹೋದರು. ಅವರು ಜೋರ್ಡನ್ ಕಣಿವೆಯಲ್ಲಿ ರಾತ್ರಿಯೆಲ್ಲಾ ಪ್ರಯಾಣಮಾಡಿ


ದೇವರು ತನ್ನ ಜನರಿಗೆ ಉತ್ತಮವಾದ ಗೋಧಿಯನ್ನು ಒದಗಿಸುವನು. ಬಂಡೆಯಾಗಿರುವ ಆತನು ತನ್ನ ಜನರಿಗೆ ಜೇನುತುಪ್ಪವನ್ನು ಸಂತೃಪ್ತಿಯಾಗುವ ತನಕ ಕೊಡುವನು.”


ಅವನು ತನ್ನ ಕತ್ತೆಯನ್ನು ದ್ರಾಕ್ಷೆಬಳ್ಳಿಗೆ ಕಟ್ಟುವನು; ತನ್ನ ಪ್ರಾಯದ ಕತ್ತೆಯನ್ನು ಉತ್ತಮವಾದ ದ್ರಾಕ್ಷೆಬಳ್ಳಿಗೆ ಕಟ್ಟುವನು. ಅವನು ಉತ್ತಮವಾದ ದ್ರಾಕ್ಷಾರಸದಿಂದ ತನ್ನ ಬಟ್ಟೆಗಳನ್ನು ತೊಳೆಯುವನು.


ನಿಮ್ಮ ದೇವರಾದ ಯೆಹೋವನು ಉತ್ತಮವಾದ ದೇಶವನ್ನು ನಿಮಗೆ ಕೊಡುತ್ತಿದ್ದಾನೆ. ಆ ದೇಶದಲ್ಲಿ ನೀರು ಸಮೃದ್ಧಿಯಾಗಿರುವುದು. ನೀರು ಕಣಿವೆಗಳಲ್ಲಿಯೂ ಬೆಟ್ಟಗಳಲ್ಲಿಯೂ ನೆಲದ ಮೇಲೂ ಹರಿದುಬರುವುದು.


ಅಲ್ಲಿ ನೀವು ಯಥೇಚ್ಛವಾಗಿ ತಿನ್ನುವಿರಿ. ನಿಮಗೆ ಬೇಕಾದದ್ದೆಲ್ಲಾ ನಿಮಗಿರುವುದು. ಅಲ್ಲಿಯ ಕಲ್ಲುಗಳು ಕಬ್ಬಿಣದಂತಿವೆ. ಬೆಟ್ಟಗಳಿಂದ ನೀವು ತಾಮ್ರವನ್ನು ಅಗೆದು ತೆಗೆಯುವಿರಿ.


ಬೆಟ್ಟಗುಡ್ಡಗಳ ಪ್ರಾಂತ್ಯವನ್ನು ವಶಪಡಿಸಲು ಇಸ್ರೇಲನ್ನು ನಡೆಸಿದನು. ಹೊಲದ ಬೆಳೆಯನ್ನು ಇಸ್ರೇಲ್ ಕೊಯಿಲು ಮಾಡಿದನು. ಬಂಡೆಯಿಂದ ಜೇನನ್ನು ಯೆಹೋವನು ಇಸ್ರೇಲಿಗೆ ಕೊಟ್ಟನು. ಗಟ್ಟಿಯಾದ ಬಂಡೆಯಿಂದ ಎಣ್ಣೆಯು ಹೊರಡುವಂತೆ ಮಾಡಿದನು.


ಬಳಿಕ ಅವರು ಎಷ್ಕೋಲ್ ಕಣಿವೆಗೆ ಹೋದರು. ಅಲ್ಲಿ ಅವರು ದ್ರಾಕ್ಷಾಲತೆಯಿಂದ ಒಂದು ಕೊಂಬೆಯನ್ನು ಕಡಿದರು. ಆ ಕೊಂಬೆಯಲ್ಲಿ ದ್ರಾಕ್ಷೆಯ ಗೊಂಚಲಿತ್ತು. ಅವರು ಅದನ್ನು ಒಂದು ಕೋಲಿಗೆ ಕಟ್ಟಿ ಇಬ್ಬರು ಅದನ್ನು ಹೊತ್ತುಕೊಂಡು ಬಂದರು. ಕೆಲವು ದಾಳಿಂಬೆ ಹಣ್ಣುಗಳನ್ನು ಮತ್ತು ಅಂಜೂರದ ಹಣ್ಣುಗಳನ್ನು ಹೊತ್ತುತಂದರು.


ಇಸ್ರೇಲಿನ ಜನರೇ, ಕಿವಿಗೊಟ್ಟು ಕೇಳಿರಿ. ದೇವರ ಆಜ್ಞೆಗಳಿಗೆ ವಿಧೇಯರಾಗಿರಿ. ಆಗ ನಿಮಗೆ ಎಲ್ಲಾದರಲ್ಲಿ ಶುಭವಾಗುವುದು. ನಿಮಗೆ ಹೆಚ್ಚು ಮಕ್ಕಳಾಗುವವು. ನೀವು ನೆಲೆಸುವ ದೇಶವು ನಿಮ್ಮ ಪೂರ್ವಿಕರಿಗೆ ದೇವರು ವಾಗ್ದಾನ ಮಾಡಿದ ಪ್ರಕಾರ ಫಲಭರಿತವಾಗುವುದು.


ನಾನು ಬಂದು, ನಿಮ್ಮನ್ನು ಈ ದೇಶಕ್ಕೆ ಸಮಾನವಾದ ಬೇರೊಂದು ದೇಶಕ್ಕೆ ಕರೆದೊಯ್ಯುವವರೆಗೆ ನೀವು ಹೀಗೆ ಮಾಡಬಹುದು. ಆ ದೇಶವು ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷಿತೋಟ, ಆಲೀವ್ ಮರ ಮತ್ತು ಜೇನುತುಪ್ಪ ಮುಂತಾದವುಗಳಿಂದ ಸಮೃದ್ಧಿಯಾಗಿದೆ. ನೀವು ಅಲ್ಲಿ ಸಾಯದೆ ಜೀವಿಸಬಹುದು. ಆದರೆ ಹಿಜ್ಕೀಯನ ಮಾತುಗಳನ್ನು ಕೇಳಬೇಡಿ! ಅವನು ನಿಮ್ಮ ಮನಸ್ಸನ್ನು ಬದಲಾಯಿಸಲು ಪ್ರಯತ್ನಿಸುತ್ತಿದ್ದಾನೆ. “ಯೆಹೋವನು ನಮ್ಮನ್ನು ರಕ್ಷಿಸುತ್ತಾನೆ” ಎಂದು ಅವನು ಹೇಳುತ್ತಾನೆ.


“ನಾನು ನಿಮ್ಮನ್ನು ಅನೇಕ ಅಮೂಲ್ಯವಸ್ತುಗಳಿಂದ ಕೂಡಿದ ಫಲವತ್ತಾದ ಭೂಮಿಗೆ ಕರೆದುತಂದೆ. ಅಲ್ಲಿ ಬೆಳೆಯುವ ಫಲಗಳನ್ನು ತಿನ್ನಲಿ ಎಂಬ ಉದ್ದೇಶದಿಂದ ನಾನು ಕರೆದುತಂದೆ. ಆದರೆ ನೀವು ಬಂದು ನನ್ನ ಭೂಮಿಯನ್ನು ಹೊಲಸು ಮಾಡಿದಿರಿ. ನಾನು ಆ ಭೂಮಿಯನ್ನು ನಿಮಗೆ ಕೊಟ್ಟೆ, ಆದರೆ ನೀವು ಅದನ್ನು ಕೆಟ್ಟ ಸ್ಥಳವನ್ನಾಗಿ ಮಾಡಿದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು