Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 9:1 - ಪರಿಶುದ್ದ ಬೈಬಲ್‌

1 “ಇಸ್ರೇಲ್ ಜನರೇ, ಕೇಳಿರಿ. ಈ ದಿನ ನೀವು ಜೋರ್ಡನ್ ನದಿಯನ್ನು ದಾಟಿ ಆ ದೇಶವನ್ನು ಪ್ರವೇಶಿಸಿ ನಿಮಗಿಂತ ಬಲಿಷ್ಠವಾದ ಜನಾಂಗಗಳನ್ನು ಹೊಡೆದೋಡಿಸುವಿರಿ. ಅವರ ಪಟ್ಟಣಗಳು ದೊಡ್ಡದಾಗಿವೆ; ಅದರ ಗೋಡೆಗಳು ಆಕಾಶದಷ್ಟು ಎತ್ತರವಾಗಿವೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಸ್ರಾಯೇಲರೇ ಕೇಳಿರಿ, ನಿಮಗಿಂತ ಮಹಾ ಬಲಿಷ್ಠ ಜನಾಂಗಗಳನ್ನೂ ಮತ್ತು ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ ಸ್ವಾಧೀನ ಮಾಡಿಕೊಳ್ಳುವುದಕ್ಕೆ ನೀವು ಈ ಯೊರ್ದನ್ ನದಿಯನ್ನು ಇಂದು ದಾಟಲಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ಇಸ್ರಯೇಲರೇ ಕೇಳಿ : ನಿಮಗಿಂತ ಮಹಾಬಲಿಷ್ಠ ಜನಾಂಗಗಳನ್ನು ಹಾಗು ಗಗನ ಮುಟ್ಟುವ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸ್ವಾಧೀನಮಾಡಿಕೊಳ್ಳಲು, ನೀವು ಈ ಜೋರ್ಡನ್ ನದಿಯನ್ನು ಇಂದು ದಾಟಲಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇಸ್ರಾಯೇಲ್ಯರೇ ಕೇಳಿರಿ. ನಿಮಗಿಂತ ಮಹಾಬಲಿಷ್ಠ ಜನಾಂಗಗಳನ್ನೂ ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ ಸ್ವಾಧೀನಮಾಡಿಕೊಳ್ಳುವದಕ್ಕೆ ನೀವು ಈ ಯೊರ್ದನ್ ಹೊಳೆಯನ್ನು ಇಂದು ದಾಟುವವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇಸ್ರಾಯೇಲರೇ, ಕೇಳಿರಿ, ನೀವು ಹೋಗಿ ನಿಮಗಿಂತ ದೊಡ್ಡ, ಬಲಿಷ್ಠ ಜನಾಂಗಗಳನ್ನೂ, ಆಕಾಶದವರೆಗೆ ಭದ್ರಮಾಡಿದ ದೊಡ್ಡ ಪಟ್ಟಣಗಳನ್ನೂ ಸ್ವಾಧೀನಮಾಡಿಕೊಳ್ಳುವುದಕ್ಕೆ ಈ ಹೊತ್ತು ಯೊರ್ದನ್ ನದಿಯನ್ನು ದಾಟಲಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 9:1
24 ತಿಳಿವುಗಳ ಹೋಲಿಕೆ  

ನೀವು ಜೋರ್ಡನ್ ನದಿಯನ್ನು ದಾಟಿ, ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿಕೊಳ್ಳಿರಿ. ಈ ದೇಶವು ನಿಮ್ಮದೇ.


ನೀವು ಮುಂದುವರಿಯುತ್ತಿದ್ದಾಗ ನಿಮಗಿಂತಲೂ ಮಹತ್ತಾದ ಮತ್ತು ಬಲಿಷ್ಠವಾಗಿದ್ದ ಜನಾಂಗಗಳನ್ನು ಹೊರಡಿಸಿಬಿಟ್ಟನು. ಅವರ ದೇಶದೊಳಗೆ ಯೆಹೋವನು ನಿಮ್ಮನ್ನು ನಡಿಸಿದನು. ಅಲ್ಲಿ ನೀವು ವಾಸಿಸುವುದಕ್ಕಾಗಿ ಆ ದೇಶವನ್ನು ನಿಮಗೆ ಕೊಟ್ಟನು. ಈಗಲೂ ಆತನು ಹಾಗೆಯೇ ಮಾಡುತ್ತಿದ್ದಾನೆ.


ನಾವೀಗ ಎಲ್ಲಿಗೆ ಹೋಗೋಣ? ನಮ್ಮ ಸಹೋದರರು ತಮ್ಮ ವರದಿಯಿಂದ ನಮ್ಮನ್ನು ಹೆದರಿಸಿದ್ದಾರೆ. ಅಲ್ಲಿಯ ಜನರು ದೃಢಕಾಯರೂ ಬಲಶಾಲಿಗಳೂ ಎತ್ತರವಾದ ಪುರುಷರೂ ಆಗಿದ್ದಾರೆ. ಅವರ ಪಟ್ಟಣಗಳು ದೊಡ್ಡವುಗಳಾಗಿದ್ದು ಅವುಗಳ ಗೋಡೆಗಳು ಆಕಾಶಕ್ಕೆ ಮುಟ್ಟುವಷ್ಟು ಎತ್ತರವಾಗಿವೆ. ನಾವು ಅಲ್ಲಿ ಅನಾಕ್ಯರೆಂಬ ಮಹಾಶರೀರಗಳನ್ನು ನೋಡಿದೆವು!’ ಎಂದು ಅವರು ಹೇಳಿದಾಗ ನಾವು ಭಯದಿಂದ ತತ್ತರಿಸಿದೆವು.


“ನೀವು ಪಾಳೆಯದ ಎಲ್ಲಾ ಕಡೆಗೆ ಹೋಗಿ ಜನರಿಗೆ ಸಿದ್ಧವಾಗಿರಲು ತಿಳಿಸಿರಿ; ಸ್ವಲ್ಪ ಆಹಾರವನ್ನು ಸಿದ್ಧಪಡಿಸಿಕೊಳ್ಳಲು ಹೇಳಿರಿ. ಇನ್ನು ಮೂರು ದಿವಸಗಳಲ್ಲಿ ನಾವು ಈ ಜೋರ್ಡನ್ ನದಿಯನ್ನು ದಾಟಿ ಹೋಗುವೆವು. ನಾನು ಹೋಗಿ ಯೆಹೋವನಾದ ನಮ್ಮ ದೇವರು ನಮಗೆ ಕೊಡುವ ದೇಶವನ್ನು ವಶಪಡಿಸಿಕೊಳ್ಳುವೆವು ಎಂದು ಹೇಳಿರಿ” ಎಂದು ಆಜ್ಞಾಪಿಸಿದನು.


ಆಗ ನೀವು ಹೋಗುವ ದೇಶದಲ್ಲಿ ವಾಸಿಸುವ ಜನರನ್ನು ಯೆಹೋವನಾದ ನಾನು ಹೊಡೆದೋಡಿಸುವೆನು. ಆ ಜನಾಂಗ ನಿಮಗಿಂತಲೂ ದೊಡ್ಡದು ಮತ್ತು ಬಲಿಷ್ಠವಾದದ್ದು.


“ನಿಮಗೆ ಸ್ವಾಸ್ತ್ಯವಾಗಿ ಕೊಡುವ ದೇಶಕ್ಕೆ ಯೆಹೋವನು ನಿಮ್ಮನ್ನು ನಡೆಸುವನು. ನಿಮಗಿಂತ ಬಲಿಷ್ಠವಾಗಿದ್ದು ಅಲ್ಲಿ ವಾಸಿಸುತ್ತಿರುವ ಹಿತ್ತಿಯರು, ಗಿರ್ಗಾಷಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ಎಂಬ ಏಳು ಜನಾಂಗಗಳನ್ನು ಆ ದೇಶದಿಂದ ನಿಮಗಾಗಿ ಹೊರಗಟ್ಟುವನು.


“ಆ ಕಾಲದಲ್ಲಿ ನಾನು ನಿಮಗೆ ಆಜ್ಞಾಪಿಸಿದ್ದೇನೆಂದರೆ: ‘ನಿಮ್ಮ ದೇವರಾದ ಯೆಹೋವನು ನಿಮಗೆ ಜೋರ್ಡನ್ ನದಿಯ ಪೂರ್ವದಿಕ್ಕಿನಲ್ಲಿ ಸ್ವಾಸ್ತ್ಯವನ್ನು ಕೊಟ್ಟಿದ್ದಾನೆ. ಆದರೆ ನಿಮ್ಮಲ್ಲಿರುವ ಸೈನಿಕರು ತಮ್ಮ ಆಯುಧಗಳನ್ನು ತೆಗೆದುಕೊಂಡು ಇತರ ಇಸ್ರೇಲರೊಂದಿಗೆ ನದಿಯಾಚೆಗೆ ಬರಬೇಕು. ಅಲ್ಲಿಯ ದೇಶಗಳನ್ನು ಸ್ವಾಧೀನಪಡಿಸಿಕೊಂಡು ಶಾಂತಿ ನೆಲೆಸುವ ತನಕ ಅವರೊಂದಿಗಿರಬೇಕು.


ಅವರು ಜೋರ್ಡನ್ ನದಿಯನ್ನು ಮೊದಲನೆಯ ತಿಂಗಳಿನ ಹತ್ತನೆಯ ದಿನ ದಾಟಿದರು. ಅವರು ಜೆರಿಕೊವಿನ ಪೂರ್ವಕ್ಕಿರುವ ಗಿಲ್ಗಾಲಿನಲ್ಲಿ ಇಳಿದುಕೊಂಡಿದ್ದರು.


“ನದಿಯಲ್ಲಿ ನಿಮ್ಮ ದೇವರಾದ ಯೆಹೋವನ ಪವಿತ್ರ ಪೆಟ್ಟಿಗೆ ಇರುವ ಸ್ಥಳಕ್ಕೆ ಹೋಗಿ. ನಿಮ್ಮಲ್ಲಿ ಪ್ರತಿಯೊಬ್ಬರೂ ಒಂದೊಂದು ಕಲ್ಲನ್ನು ಹೆಗಲ ಮೇಲೆ ಹೊತ್ತುಕೊಂಡು ಬನ್ನಿರಿ.


ಆಗ ನೀರು ಹರಿಯದೆ ನಿಂತುಬಿಟ್ಟಿತು. ಆ ಸ್ಥಳದ ಹಿಂಭಾಗದಲ್ಲಿ ಒಂದು ಸರೋವರದಂತೆ ನೀರು ತುಂಬಿಕೊಂಡಿತು. ನೀರು ಬಹುದೂರದಲ್ಲಿರುವ ಆದಾಮ್ ಊರು ಅಂದರೆ ಜಾರೆತಾನಿನ ಹತ್ತಿರ ಇರುವ ಒಂದು ಊರಿನವರೆಗೂ ರಾಶಿರಾಶಿಯಾಗಿ ನಿಂತುಕೊಂಡಿತು. ಜನರು ಜೆರಿಕೊವಿನ ಹತ್ತಿರ ನದಿಯನ್ನು ದಾಟಿದರು.


ಯಾಜಕರು ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ನಡೆದರು. ಜನರು ತಾವು ಪಾಳೆಯ ಮಾಡಿಕೊಂಡಿದ್ದ ಸ್ಥಳದಿಂದ ಹೊರಟು ಜೋರ್ಡನ್ ನದಿಯ ಕಡೆಗೆ ಹೋದರು.


ಬಳಿಕ ಯೆಹೋಶುವನು ಯಾಜಕರಿಗೆ, “ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ಜನಗಳ ಮುಂದೆ ನದಿಯ ಕಡೆಗೆ ನಡೆಯಿರಿ” ಎಂದನು. ಯಾಜಕರು ಪೆಟ್ಟಿಗೆಯನ್ನು ಹೊತ್ತುಕೊಂಡು ಜನರ ಮುಂದೆ ನಡೆದರು.


ನೀವು ಬೇಗನೆ ಜೋರ್ಡನ್ ನದಿಯನ್ನು ದಾಟಿ ನಿಮ್ಮ ದೇವರಾದ ಯೆಹೋವನು ಕೊಡುವ ದೇಶವನ್ನು ಪ್ರವೇಶಿಸುವಿರಿ. ಆ ದಿವಸ ದೊಡ್ಡ ದೊಡ್ಡ ಕಲ್ಲುಗಳನ್ನು ರಾಶಿ ಹಾಕಿ ಅದನ್ನು ಗಾರೆ ಮಾಡಿರಿ.


ಅವರು ನೆಗೆವ್ ಮೂಲಕ ದೇಶವನ್ನು ಪ್ರವೇಶಿಸಿ ಹೆಬ್ರೋನಿಗೆ ಹೋದರು. ಹೆಬ್ರೋನ್ ಪಟ್ಟಣವು ಈಜಿಪ್ಟ್ ದೇಶದಲ್ಲಿರುವ ಚೋವನ್ ಪಟ್ಟಣಕ್ಕಿಂತ ಏಳು ವರ್ಷಗಳ ಮುಂಚೆ ಕಟ್ಟಲ್ಪಟ್ಟಿತ್ತು. ಅಲ್ಲಿ ಅಹೀಮನ್, ಶೇಫೈ ಮತ್ತು ತಲ್ಮೈ ಎಂಬವರು ವಾಸಿಸುತ್ತಿದ್ದರು. ಇವರು ಅನಾಕನ ಸಂತತಿಯವರು.


ಬಳಿಕ ಅವರು, “ನಾವು ನಮಗಾಗಿ ಒಂದು ಪಟ್ಟಣವನ್ನೂ ಆಕಾಶವನ್ನು ಮುಟ್ಟುವಂಥ ಗೋಪುರವನ್ನೂ ಕಟ್ಟಿದರೆ ನಾವು ಪ್ರಸಿದ್ಧರಾಗುತ್ತೇವೆ. ಆಗ ನಾವು ಭೂಮಿಯಲ್ಲೆಲ್ಲಾ ಚದರಿಹೋಗದೆ ಒಂದೇ ಸ್ಥಳದಲ್ಲಿ ವಾಸಿಸಲು ಸಾಧ್ಯವಾಗುತ್ತದೆ” ಎಂದು ಮಾತಾಡಿಕೊಂಡರು.


“ದೇವರಾದ ಯೆಹೋವನು ನಮಗೆ ಈ ದೇಶವನ್ನು ಕೊಡುವುದಾಗಿ ನಮ್ಮ ಪೂರ್ವಿಕರಾದ ಅಬ್ರಹಾಮನಿಗೆ, ಇಸಾಕನಿಗೆ ಮತ್ತು ಯಾಕೋಬನಿಗೆ ವಾಗ್ದಾನ ಮಾಡಿದ್ದನು. ಈಗ ಆ ದೇಶವನ್ನು ನಿಮಗೆ ಕೊಡುತ್ತಿದ್ದಾನೆ. ಅದರಲ್ಲಿರುವ ದೊಡ್ಡದೊಡ್ಡ ನಗರಗಳನ್ನು ನೀವು ಕೈಯಿಂದ ಕಟ್ಟಲಿಲ್ಲ.


ಆ ಮರವು ಬಹಳ ದೊಡ್ಡದಾಗಿ ಮತ್ತು ಬಲಯುತವಾಗಿ ಬೆಳೆಯಿತು. ಆ ಮರದ ತುದಿಯು ಆಕಾಶಕ್ಕೆ ಮುಟ್ಟಿತ್ತು. ಅದನ್ನು ಭೂಲೋಕದ ಯಾವ ಸ್ಥಳದಿಂದಲಾದರೂ ನೋಡಬಹುದಾಗಿತ್ತು.


ಬಹಳ ಸಮಯ ದಾಟಿಹೋದರೂ ಮೋಶೆ ಬೆಟ್ಟದಿಂದ ಕೆಳಗಿಳಿಯಲಿಲ್ಲವಾದ್ದರಿಂದ ಇಸ್ರೇಲರು ಆರೋನನ ಬಳಿಗೆ ಒಟ್ಟಾಗಿ ಬಂದು, “ನೋಡು, ಮೋಶೆಯು ನಮ್ಮನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದನು. ಆದರೆ ಅವನಿಗೇನಾಯಿತೋ ನಮಗೆ ತಿಳಿಯದು. ಆದ್ದರಿಂದ ನಮ್ಮನ್ನು ಮುನ್ನಡೆಸಲು ಕೆಲವು ದೇವರುಗಳನ್ನು ಮಾಡಿಕೊಡು” ಎಂದು ಹೇಳಿದರು.


“ನೀನು ಇಸ್ರೇಲರಿಗೆ ಹೀಗೆ ಆಜ್ಞಾಪಿಸು: ನೀವು ಜೋರ್ಡನ್ ಹೊಳೆದಾಟಿ ಕಾನಾನ್ ದೇಶವನ್ನು ಸೇರಿದಾಗ


“ಇಸ್ರೇಲರೇ, ಈಗ ನಾನು ಉಪದೇಶಿಸಲಿರುವ ಕಟ್ಟಳೆಗಳಿಗೂ ಆಜ್ಞೆಗಳಿಗೂ ಕಿವಿಗೊಡಿರಿ. ನೀವು ಅವುಗಳಿಗೆ ವಿಧೇಯರಾದರೆ ಜೀವಿಸುವಿರಿ. ಆಗ ನೀವು ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮಗೆ ಕೊಡಲಿರುವ ದೇಶವನ್ನು ಸ್ವಾಧೀನ ಮಾಡಿಕೊಳ್ಳುವಿರಿ.


ಯೆಹೋವನು ನಿಮ್ಮ ವಿಶ್ರಾಂತಿಗಾಗಿ ಒಂದು ಸ್ಥಳವನ್ನು ಕೊಟ್ಟಿದ್ದಾನೆ. ಯೆಹೋವನು ನಿಮ್ಮ ಸಹೋದರರಿಗಾಗಿಯೂ ಒಂದು ಸ್ಥಳವನ್ನು ಕೊಡುತ್ತಾನೆ. ಆದರೆ ನಿಮ್ಮ ದೇವರಾದ ಯೆಹೋವನು ಅವರಿಗೆ ಕೊಡುವ ದೇಶವನ್ನು ಅವರು ಪಡೆದುಕೊಳ್ಳುವವರೆಗೆ ನೀವು ನಿಮ್ಮ ಸಹೋದರರಿಗೆ ಸಹಾಯ ಮಾಡಬೇಕು. ಆಮೇಲೆ ನೀವು ಜೋರ್ಡನ್ ನದಿಯ ಪೂರ್ವದಿಕ್ಕಿನಲ್ಲಿರುವ ನಿಮ್ಮ ದೇಶಕ್ಕೆ ಹೋಗಬಹುದು. ಯೆಹೋವನ ಸೇವಕನಾದ ಮೋಶೆಯು ನಿಮಗೆ ಕೊಟ್ಟ ದೇಶವು ಅದೇ ಆಗಿದೆ” ಎಂದನು.


ಆದ್ದರಿಂದ ಯೆಹೋವನು ನನಗೆ ಬಹಳ ಹಿಂದೆಯೇ ವಾಗ್ದಾನ ಮಾಡಿದ್ದ ಬೆಟ್ಟಪ್ರದೇಶವನ್ನು ಈಗ ನನಗೆ ಕೊಡು. ಬಲಿಷ್ಠರಾದ ಅನಾಕವಂಶಸ್ಥರು ವಾಸವಾಗಿರುವ ಆ ಪಟ್ಟಣಗಳು ಬಹಳ ದೊಡ್ಡದಾಗಿವೆಯೆಂದೂ ಸುಭದ್ರವಾದವುಗಳೆಂದೂ ನೀನು ಕೇಳಿರುವೆ. ಆದರೆ ಯೆಹೋವನು ನನ್ನೊಂದಿಗಿರುವುದರಿಂದ ಆತನು ಹೇಳಿದಂತೆಯೇ ಆ ಪ್ರದೇಶವನ್ನು ನಾನು ತೆಗೆದುಕೊಳ್ಳುತ್ತೇನೆ” ಅಂದನು.


“ಆದರೆ ಅವರ ಎದುರಿನಲ್ಲಿ ಅಮೋರಿಯರನ್ನು ನಾಶಮಾಡಿದವನು ನಾನೇ, ಅಮೋರಿಯರು ದೇವದಾರು ಮರಗಳಂತೆ ಎತ್ತರವೂ, ಅಲ್ಲೊನ್ ಮರಗಳಂತೆ ಬಲಶಾಲಿಗಳೂ ಆಗಿದ್ದರು. ಆದರೆ ನಾನು ಕೆಳಗಿನಿಂದ ಅವರ ಬೇರನ್ನೂ ಮೇಲಿನಿಂದ ಅವರ ಫಲಗಳನ್ನೂ ನಾಶಮಾಡಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು