Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 9:27 - ಪರಿಶುದ್ದ ಬೈಬಲ್‌

27 ಯೆಹೋವನೇ, ನೀನು ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಮಾಡಿದ ವಾಗ್ದಾನವನ್ನು ನಿನ್ನ ನೆನಪಿಗೆ ತಂದುಕೋ. ಇವರು ಎಷ್ಟು ಹಠಮಾರಿಗಳೆಂಬುದನ್ನು ಮರೆತುಬಿಡು. ಅವರ ಪಾಪಮಾರ್ಗವನ್ನಾಗಲಿ ಪಾಪಗಳನ್ನಾಗಲಿ ನೋಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಇವರ ಮೊಂಡುತನ, ದುಷ್ಟತ್ವ, ಪಾಪ ಇವುಗಳನ್ನು ಮನಸ್ಸಿಗೆ ತೆಗೆದುಕೊಳ್ಳದೆ ನಿನ್ನ ಸೇವಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರನ್ನು ನೆನಪಿಗೆ ತಂದುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಇವರ ಮೊಂಡುತನ, ದುಷ್ಟತನ, ಪಾಪ ಇವುಗಳನ್ನು ಮನಸ್ಸಿಗೆ ತೆಗೆದುಕೊಳ್ಳದೆ ನಿಮ್ಮ ದಾಸರಾದ ಅಬ್ರಹಾಮ್, ಇಸಾಕ್, ಯಕೋಬರನ್ನು ನೆನಪಿಗೆ ತಂದುಕೊಳ್ಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಇವರ ಮೊಂಡತನ, ದುಷ್ಟತ್ವ, ಪಾಪ ಇವುಗಳನ್ನು ಮನಸ್ಸಿಗೆ ತೆಗೆದುಕೊಳ್ಳದೆ ನಿನ್ನ ಸೇವಕರಾದ ಅಬ್ರಾಹಾಮ್ ಇಸಾಕ್ ಯಾಕೋಬರನ್ನು ನೆನಪಿಗೆ ತಂದುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ನಿಮ್ಮ ದಾಸರಾದ ಅಬ್ರಹಾಮ್, ಇಸಾಕ್, ಯಾಕೋಬರನ್ನು ಜ್ಞಾಪಕಮಾಡಿಕೊಳ್ಳಿರಿ. ಈ ಜನರ ಕಾಠಿಣ್ಯದ ಮೇಲೆಯೂ, ಅವರ ದುಷ್ಟತ್ವದ ಮೇಲೆಯೂ, ಅವರ ಪಾಪದ ಮೇಲೆಯೂ ದೃಷ್ಟಿ ಇಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 9:27
19 ತಿಳಿವುಗಳ ಹೋಲಿಕೆ  

ಯೆಹೋವನೇ, ನಿನ್ನ ಹೆಸರಿನ ಒಳ್ಳೆಯತನ ಉಳಿಸಿಕೊಳ್ಳುವದಕ್ಕಾದರೂ ನಮ್ಮನ್ನು ದೂರ ತಳ್ಳಬೇಡ. ನಿನ್ನ ಮಹಿಮೆಯ ಸಿಂಹಾಸನದ ಗೌರವವನ್ನು ಕುಂದಿಸಬೇಡ. ನೀನು ನಮ್ಮೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಸ್ಮರಿಸಿಕೊ. ಆ ಒಡಂಬಡಿಕೆಯನ್ನು ಮುರಿಯಬೇಡ.


ಇದು ಯೆಹೋವನ ನುಡಿ. “ಆ ಸಮಯದಲ್ಲಿ ಜನರು ಇಸ್ರೇಲಿನ ದೋಷವನ್ನು ಕಂಡುಹಿಡಿಯಲು ಪ್ರಯತ್ನಿಸುವರು. ಆದರೆ ಯಾವ ದೋಷಗಳೂ ಇರುವದಿಲ್ಲ. ಜನರು ಯೆಹೂದದ ಪಾಪಗಳನ್ನು ಹುಡುಕುವ ಪ್ರಯತ್ನ ಮಾಡುವರು. ಆದರೆ ಯಾವ ಪಾಪಗಳೂ ಸಿಕ್ಕುವದಿಲ್ಲ. ಏಕೆಂದರೆ ಇಸ್ರೇಲಿನ ಮತ್ತು ಯೆಹೂದದ ಜನರಲ್ಲಿ ಅಳಿದುಳಿದ ಕೆಲವು ಜನರನ್ನು ನಾನು ರಕ್ಷಿಸುತ್ತೇನೆ. ಅವರ ಪಾಪಗಳನ್ನೆಲ್ಲ ಕ್ಷಮಿಸಿದ್ದೇನೆ.”


ದೇವರು ನೀತಿಸ್ವರೂಪನು. ಆತನು ದುಷ್ಟರ ದುಷ್ಕೃತ್ಯಗಳನ್ನು ಬಲ್ಲವನಾಗಿದ್ದು ಅವರನ್ನು ದಂಡಿಸುವನು.


ಜನರು ತಮ್ಮ ಮಕ್ಕಳಿಗೆ ದೇವರ ಆಜ್ಞೆಗಳನ್ನು ಉಪದೇಶಿಸಿದರೆ, ಮಕ್ಕಳು ತಮ್ಮ ಪೂರ್ವಿಕರಂತಾಗುವುದಿಲ್ಲ. ಅವರ ಪೂರ್ವಿಕರು ದೇವರಿಗೆ ವಿಮುಖರಾಗಿ ಆತನಿಗೆ ವಿಧೇಯರಾಗಲಿಲ್ಲ. ಅವರು ಮೊಂಡರಾಗಿದ್ದರು. ಅವರು ದೇವರಿಗೆ ನಂಬಿಗಸ್ತರಾಗಿರಲಿಲ್ಲ.


ನೀನು ಕಳುಹಿಸಿದ ಜನರನ್ನು ನಾನು ನೋಡಲಿಲ್ಲ. ಒಡೆಯನೇ, ಮೂರ್ಖನಾದ ಆ ಮನುಷ್ಯನ ಮೇಲೆ ಯಾವ ಲಕ್ಷ್ಯವನ್ನೂ ಇಡಬೇಡ. ಅವನು ತನ್ನ ಹೆಸರಿಗೆ ತಕ್ಕಂತೆ ಇದ್ದಾನೆ. ಅವನ ಹೆಸರಿನ ಅರ್ಥವೂ ‘ಮೂರ್ಖ’ ಮತ್ತು ಅವನು ನಿಜವಾಗಿಯೂ ಮೂರ್ಖ.


ನಿನ್ನ ಸೇವೆಮಾಡಿದ ಅಬ್ರಹಾಮನನ್ನು, ಇಸಾಕನನ್ನು, ಯಾಕೋಬನನ್ನು ಜ್ಞಾಪಿಸಿಕೊ. ನೀನು ನಿನ್ನ ಹೆಸರನ್ನು ಉಪಯೋಗಿಸಿ ಆ ಜನರಿಗೆ ವಾಗ್ದಾನವನ್ನು ಮಾಡಿದೆ. ‘ನಾನು ನಿನ್ನ ಸಂತತಿಯವರನ್ನು ಆಕಾಶದ ನಕ್ಷತ್ರಗಳಷ್ಟು ಮಾಡುವೆನು. ನಾನು ವಾಗ್ದಾನ ಮಾಡಿದಂತೆ ಈ ದೇಶವನ್ನೆಲ್ಲಾ ನಿನ್ನ ಸಂತತಿಗಳವರಿಗೆ ಕೊಡುವೆನು. ಈ ದೇಶ ಎಂದೆಂದಿಗೂ ಅವರದಾಗಿರುವುದು’ ಎಂದು ನೀನು ನಿನ್ನ ಹೆಸರಿನಲ್ಲಿ ವಾಗ್ದಾನ ಮಾಡಿದೆಯಲ್ಲಾ” ಅಂದನು.


ಆಗ ಯೆಹೋವನು ಒಂದು ವಿಶೇಷ ವಾಗ್ದಾನವನ್ನು ನಿಮ್ಮ ಪೂರ್ವಿಕರಿಗೆ ಮಾಡಿದನು. ಕಾನಾನ್ಯರು, ಹಿತ್ತಿಯರು, ಅಮೋರಿಯರು, ಹಿವ್ವಿಯರು ಮತ್ತು ಯೆಬೂಸಿಯರು ವಾಸಿಸುವ ಸಮೃದ್ಧಿಕರವಾದ ದೇಶವನ್ನು ನಿಮಗೆ ಕೊಡುವುದಾಗಿ ಯೆಹೋವನು ವಾಗ್ದಾನ ಮಾಡಿದನು. ಆತನು ನಿಮಗೆ ಆ ದೇಶವನ್ನು ಕೊಟ್ಟಾಗ ಪ್ರತಿವರ್ಷದ ಮೊದಲನೆಯ ತಿಂಗಳ ಈ ದಿನವನ್ನು ಆರಾಧನೆಯ ವಿಶೇಷ ದಿನವನ್ನಾಗಿ ಇಟ್ಟುಕೊಳ್ಳಬೇಕು.


ಇದಲ್ಲದೆ ಯೆಹೋವನು ಅವನಿಗೆ, “ನೀನು ಹೋಗಿ ಇಸ್ರೇಲರ ನಾಯಕರನ್ನು ಒಟ್ಟುಗೂಡಿಸಿ ಅವರಿಗೆ, ‘ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನನಗೆ ಕಾಣಿಸಿಕೊಂಡನು. ಅಬ್ರಹಾಮನ, ಇಸಾಕನ, ಯಾಕೋಬನ ದೇವರು ಹೇಳುವುದೇನೆಂದರೆ, ಈಜಿಪ್ಟಿನಲ್ಲಿ ನಿಮಗೆ ಸಂಭವಿಸಿದವುಗಳನ್ನು ನಾನು ಲಕ್ಷ್ಯವಿಟ್ಟು ನೋಡಿದ್ದೇನೆ.


ನಾನು ನಿನ್ನ ಪೂರ್ವಿಕರ ದೇವರು, ನಾನು ಅಬ್ರಹಾಮನ ದೇವರು, ನಾನು ಇಸಾಕನ ದೇವರು, ನಾನು ಯಾಕೋಬನ ದೇವರು” ಎಂದು ಹೇಳಿದನು. ದೇವರನ್ನು ನೋಡುವುದಕ್ಕೆ ಭಯಪಟ್ಟು ಮೋಶೆ ತನ್ನ ಮುಖವನ್ನು ಮುಚ್ಚಿಕೊಂಡನು.


ದೇವರು ಆ ಸೀಮೆಯ ನಗರಗಳನ್ನು ನಾಶಮಾಡಿದರೂ ಅಬ್ರಹಾಮನನ್ನು ಜ್ಞಾಪಿಸಿಕೊಂಡು ಲೋಟನ ಪ್ರಾಣವನ್ನು ಉಳಿಸಿದನು; ಆದರೆ ಲೋಟನು ವಾಸಿಸುತ್ತಿದ್ದ ನಗರವನ್ನು ನಾಶಮಾಡಿದನು.


‘ನನ್ನ ಒಡೆಯನೇ, ಯೆಹೋವನೇ, ನಿನ್ನ ಜನರನ್ನು ನೀನು ನಾಶಮಾಡಬೇಡ. ಅವರು ನಿನ್ನ ಜನಾಂಗ. ನಿನ್ನ ಪರಾಕ್ರಮದಿಂದ ನೀನು ಈಜಿಪ್ಟಿನಿಂದ ಅವರನ್ನು ಬಿಡಿಸಿ ಹೊರತಂದಿರುವೆ.


ನೀನು ಇವರಿಗೆ ಶಿಕ್ಷೆಕೊಟ್ಟರೆ ಈಜಿಪ್ಟಿನವರು, “ದೇವರು ತನ್ನ ಜನರನ್ನು ತಾನು ವಾಗ್ದಾನ ಮಾಡಿದ ದೇಶಕ್ಕೆ ನಡೆಸಲು ಅಸಮರ್ಥನಾದನು. ಆತನು ಅವರನ್ನು ದ್ವೇಷಿಸುತ್ತಾನೆ; ಆದ್ದರಿಂದ ಅವರನ್ನು ಮರುಭೂಮಿಯಲ್ಲಿ ಹತಮಾಡಲು ಕೊಂಡೊಯ್ದಿದ್ದಾನೆ” ಎಂದು ಹೇಳುವರು.


ಆಗ ನಾನು ಯಾಕೋಬನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನೂ ಇಸಾಕನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನೂ ಅಬ್ರಹಾಮನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನೂ ದೇಶವನ್ನೂ ಜ್ಞಾಪಕಮಾಡಿಕೊಳ್ಳುವೆನು.


ಅವರಿಗೋಸ್ಕರ ಅವರ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ಅವರಿಗೆ ಹಿತವನ್ನು ಮಾಡುವೆ. ನಾನು ಅವರ ದೇವರಾಗಿರಬೇಕೆಂದು ಅವರ ಪೂರ್ವಿಕರನ್ನು ಈಜಿಪ್ಟ್ ದೇಶದಿಂದ ಹೊರಗೆ ಕರೆದುಕೊಂಡು ಬಂದೆನು. ಬೇರೆ ಜನಾಂಗಗಳವರು ಆ ಸಂಗತಿಗಳನ್ನು ನೋಡಿದರು. ನಾನೇ ಯೆಹೋವನು!”


ಯೆಹೋವನೇ, ನೀನು ಮನುಷ್ಯರನ್ನು ಅವರೆಲ್ಲರ ಪಾಪಗಳಿಗೆ ತಕ್ಕಂತೆ ದಂಡಿಸಿದರೆ ಒಬ್ಬನೂ ಜೀವಂತವಾಗಿ ಉಳಿಯಲಾರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು