Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 9:5 - ಪರಿಶುದ್ದ ಬೈಬಲ್‌

5 ನೀವು ಉತ್ತಮ ರೀತಿಯಲ್ಲಿ ಜೀವಿಸುವಿರಿ ಎಂದು ದೇವರು ನಿಮಗೆ ಆ ದೇಶವನ್ನು ಕೊಡುವುದಿಲ್ಲ. ಅವರು ಕೆಟ್ಟದ್ದಾಗಿ ಜೀವಿಸುತ್ತಿರುವುದರಿಂದ ದೇವರು ಅವರನ್ನು ಹೊರಡಿಸಿ ನೀವು ಆ ದೇಶವನ್ನು ಅನುಭವಿಸುವಂತೆ ಮಾಡಿದನು; ಆತನು ನಿಮ್ಮ ಪೂರ್ವಿಕರಾದ ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಕೊಟ್ಟಿರುವ ವಾಗ್ದಾನಗಳನ್ನು ನೆರವೇರಿಸುವುದಕ್ಕಾಗಿ ನಿಮಗೆ ಆ ದೇಶವನ್ನು ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನೀವು ಅವರ ದೇಶಕ್ಕೆ ಬಂದು ಅದನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೆ ನಿಮ್ಮ ಸದಾಚಾರವಾಗಲಿ, ನಿಮ್ಮ ಒಳ್ಳೆಯ ಸ್ವಭಾವವೇ ಆಗಲಿ ಕಾರಣವಲ್ಲ. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೂ ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂದಿದ್ದರಿಂದಲೂ ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿಬಿಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನೀವು ಅವರ ನಾಡಿಗೆ ಬಂದು ಅದನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ನಿಮ್ಮ ಪುಣ್ಯವೇ ಆಗಲಿ, ನಿಮ್ಮ ಸುಸ್ವಭಾವವೇ ಆಗಲಿ, ಕಾರಣವಲ್ಲ. ಆ ಜನಾಂಗಗಳ ದುರ್ನಡತೆಯ ಕಾರಣ ಹಾಗು ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಕೋಬರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂಬ ಕಾರಣ ಅವರನ್ನು ನಿಮ್ಮ ಬಳಿಯಿಂದ ಹೊರಡಿಸಿಬಿಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನೀವು ಅವರ ದೇಶಕ್ಕೆ ಬಂದು ಅದನ್ನು ಸ್ವಾಧೀನಮಾಡಿಕೊಳ್ಳುವದಕ್ಕೆ ನಿಮ್ಮ ಪುಣ್ಯವೇ ಆಗಲಿ ನಿಮ್ಮ ಸುಸ್ವಭಾವವೇ ಆಗಲಿ ಕಾರಣವಲ್ಲ. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೂ ನಿಮ್ಮ ದೇವರಾದ ಯೆಹೋವನು ನಿಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂದಿದ್ದದರಿಂದಲೂ ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿಬಿಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಿಮ್ಮ ನೀತಿಗೋಸ್ಕರವೂ, ನಿಮ್ಮ ಹೃದಯದ ಯಥಾರ್ಥತೆಗೋಸ್ಕರವೂ ನೀವು ಅವರ ದೇಶವನ್ನು ಸ್ವತಂತ್ರಿಸಿಕೊಳ್ಳುವುದಕ್ಕೆ ಬರುವುದಿಲ್ಲ. ಆ ಜನಾಂಗಗಳ ಕೆಟ್ಟತನಕ್ಕೋಸ್ಕರವೂ, ಯೆಹೋವ ದೇವರು ನಿಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಾಕೋಬರಿಗೆ ಕೊಟ್ಟ ಮಾತನ್ನು ಪೂರೈಸುವ ಹಾಗೆಯೂ ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ನಿಮ್ಮ ಮುಂದೆ ಹೊರಡಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 9:5
26 ತಿಳಿವುಗಳ ಹೋಲಿಕೆ  

ಆತನು ನಮ್ಮನ್ನು ರಕ್ಷಿಸಿದ್ದು ತನ್ನ ಕರುಣೆಯಿಂದಲೇ ಹೊರತು ನೀತಿವಂತರಾಗಲು ನಾವು ಮಾಡಿದ ಒಳ್ಳೆಯ ಕಾರ್ಯಗಳಿಂದಲ್ಲ. ಆತನು ನಮ್ಮನ್ನು ಸ್ನಾನದ ಮೂಲಕವಾಗಿಯೂ ಪವಿತ್ರಾತ್ಮನ ಮೂಲಕವಾಗಿಯೂ ಹೊಸಬರನ್ನಾಗಿ ಮಾಡಿ ರಕ್ಷಿಸಿದನು.


ನಾನು ನಿನ್ನ ಸಂತಾನವನ್ನು ಆಕಾಶದಲ್ಲಿನ ನಕ್ಷತ್ರಗಳಷ್ಟು ಹೆಚ್ಚಿಸಿ ಅವರಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ಭೂಮಿಯ ಮೇಲಿರುವ ಎಲ್ಲಾ ಜನಾಂಗಗಳವರು ನಿನ್ನ ಸಂತತಿಯಿಂದ ಆಶೀರ್ವಾದ ಹೊಂದುವರು.


ನೀನು ಪ್ರಯಾಣ ಮಾಡುತ್ತಿರುವ ಈ ಕಾನಾನ್ ದೇಶವನ್ನೆಲ್ಲ ನಿನಗೂ ನಿನ್ನ ಸಂತತಿಯವರಿಗೂ ಶಾಶ್ವತವಾಗಿ ಕೊಡುವೆನು. ನಾನೇ ನಿಮ್ಮ ದೇವರಾಗಿರುವೆನು” ಎಂದು ಹೇಳಿದನು.


ಆತನು ಅಬ್ರಾಮನಿಗೆ, “ಯೆಹೋವನಾದ ನಾನು ನಿನ್ನನ್ನು ಕಲ್ದೀಯರ ಊರ್ ಪಟ್ಟಣದಿಂದ ಬರಮಾಡಿದೆನು. ನಿನಗೆ ಈ ದೇಶವನ್ನು ಕೊಡಬೇಕೆಂತಲೂ ನೀನು ಈ ದೇಶವನ್ನು ಹೊಂದಿಕೊಳ್ಳಬೇಕೆಂತಲೂ ನಾನು ನಿನ್ನನ್ನು ಬರಮಾಡಿದೆನು” ಎಂದು ಹೇಳಿದನು.


ನೀನು ನೋಡುವ ಈ ದೇಶವನ್ನೆಲ್ಲಾ ನಿನಗೂ ನಿನ್ನ ನಂತರ ಜೀವಿಸುವ ನಿನ್ನ ಸಂತತಿಯವರಿಗೂ ಕೊಡುತ್ತೇನೆ. ಇದು ಎಂದೆಂದಿಗೂ ನಿನ್ನದಾಗಿರುವುದು.


ಯೆಹೋವನು ಅಬ್ರಾಮನಿಗೆ ಕಾಣಿಸಿಕೊಂಡು, “ನಿನ್ನ ಸಂತತಿಯವರಿಗೆ ಈ ದೇಶವನ್ನು ಕೊಡುವೆನು” ಎಂದು ಹೇಳಿದನು. ಆ ಸ್ಥಳದಲ್ಲಿ ಯೆಹೋವನು ಅಬ್ರಾಮನಿಗೆ ಕಾಣಿಸಿಕೊಂಡನು. ಆದ್ದರಿಂದ ಅಬ್ರಾಮನು ಯೆಹೋವನನ್ನು ಆರಾಧಿಸುವುದಕ್ಕಾಗಿ ಅಲ್ಲಿ ಒಂದು ಯಜ್ಞವೇದಿಕೆಯನ್ನು ಕಟ್ಟಿದನು.


ಆದರೆ ನಾನು ಅವರನ್ನು ನಾಶಮಾಡಲಿಲ್ಲ. ಬೇರೆ ದೇಶದವರು ನಾನು ಅವರನ್ನು ಈಜಿಪ್ಟಿನಿಂದ ಬಿಡಿಸಿ ತರುವುದನ್ನು ನೋಡಿದರು. ನನ್ನ ಒಳ್ಳೆಯ ಹೆಸರನ್ನು ಅವರೆದುರಿನಲ್ಲಿ ಅವಮಾನಪಡಿಸುವದಕ್ಕೆ ನನಗೆ ಇಷ್ಟವಿರಲಿಲ್ಲ. ಆದ್ದರಿಂದ ಅವರ ಮುಂದೆ ಇಸ್ರೇಲನ್ನು ನಾಶಮಾಡಲಿಲ್ಲ.


ನಿನ್ನ ಸೇವೆಮಾಡಿದ ಅಬ್ರಹಾಮನನ್ನು, ಇಸಾಕನನ್ನು, ಯಾಕೋಬನನ್ನು ಜ್ಞಾಪಿಸಿಕೊ. ನೀನು ನಿನ್ನ ಹೆಸರನ್ನು ಉಪಯೋಗಿಸಿ ಆ ಜನರಿಗೆ ವಾಗ್ದಾನವನ್ನು ಮಾಡಿದೆ. ‘ನಾನು ನಿನ್ನ ಸಂತತಿಯವರನ್ನು ಆಕಾಶದ ನಕ್ಷತ್ರಗಳಷ್ಟು ಮಾಡುವೆನು. ನಾನು ವಾಗ್ದಾನ ಮಾಡಿದಂತೆ ಈ ದೇಶವನ್ನೆಲ್ಲಾ ನಿನ್ನ ಸಂತತಿಗಳವರಿಗೆ ಕೊಡುವೆನು. ಈ ದೇಶ ಎಂದೆಂದಿಗೂ ಅವರದಾಗಿರುವುದು’ ಎಂದು ನೀನು ನಿನ್ನ ಹೆಸರಿನಲ್ಲಿ ವಾಗ್ದಾನ ಮಾಡಿದೆಯಲ್ಲಾ” ಅಂದನು.


ಯೆಹೋವನು ಏಣಿಯ ತುದಿಯಲ್ಲಿ ನಿಂತಿರುವುದನ್ನು ಯಾಕೋಬನು ಕಂಡನು. ಯೆಹೋವನು ಅವನಿಗೆ, “ನಿನ್ನ ತಾತನಾದ ಅಬ್ರಹಾಮನ ದೇವರಾಗಿರುವ ಯೆಹೋವನೇ ನಾನು. ನಾನು ಇಸಾಕನ ದೇವರು. ಈಗ ನೀನು ಮಲಗಿಕೊಂಡಿರುವ ದೇಶವನ್ನು ನಾನು ನಿನಗೆ ಕೊಡುವೆನು. ನಾನು ಈ ದೇಶವನ್ನು ನಿನಗೂ ನಿನ್ನ ಮಕ್ಕಳಿಗೂ ಕೊಡುವೆನು.


ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನಗಳು ಸತ್ಯವಾದುವುಗಳೆಂದು ತೋರಿಸುವುದಕ್ಕಾಗಿಯೂ ದೇವರು ಆ ವಾಗ್ದಾನಗಳನ್ನು ನೆರವೇರಿಸುತ್ತಾನೆ ಎಂಬುದನ್ನು ನಿರೂಪಿಸುವುದಕ್ಕಾಗಿಯೂ


ಯೆಹೂದ್ಯರು ಸುವಾರ್ತೆಯನ್ನು ಸ್ವೀಕರಿಸಿಕೊಳ್ಳಲಿಲ್ಲ. ಆದ್ದರಿಂದ ಅವರು ದೇವರ ಶತ್ರುಗಳಾಗಿದ್ದಾರೆ. ಯೆಹೂದ್ಯರಲ್ಲದ ಜನರಿಗೆ ಸಹಾಯವಾಗಲೆಂದೇ ಇದಾಯಿತು. ಆದರೆ ಯೆಹೂದ್ಯರು ಇನ್ನೂ ದೇವರಿಂದ ಆರಿಸಲ್ಪಟ್ಟ ಜನರಾಗಿದ್ದಾರೆ. ಆದ್ದರಿಂದ ಆತನು ಪಿತೃಗಳೊಂದಿಗೆ ತಾನು ಮಾಡಿಕೊಂಡ ಒಡಂಬಡಿಕೆಯ ನಿಮಿತ್ತ ಅವರನ್ನು ಪ್ರೀತಿಸುತ್ತಾನೆ.


ಆ ಪ್ರವಾದಿಗಳು ಹೇಳಿದ ಸಂಗತಿಗಳನ್ನು ನೀವು ಸ್ವೀಕರಿಸಿಕೊಂಡಿರುವಿರಿ. ದೇವರು ನಿಮ್ಮ ಪಿತೃಗಳೊಂದಿಗೆ ಮಾಡಿಕೊಂಡ ಒಪ್ಪಂದವನ್ನು ನೀವು ಸ್ವೀಕರಿಸಿಕೊಂಡಿರುವಿರಿ. ದೇವರು ನಿಮ್ಮ ಪಿತೃವಾದ ಅಬ್ರಹಾಮನಿಗೆ, ‘ನಿನ್ನ ಸಂತತಿಯಿಂದ ಭೂಮಿಯ ಮೇಲಿರುವ ಜನರೆಲ್ಲರು ಆಶೀರ್ವಾದ ಹೊಂದುವರು’ ಎಂದು ಹೇಳಿದನು.


ನೀನು ಯಾಕೋಬನಿಗೆ ನಂಬಿಗಸ್ತನಾಗುವೆ. ನೀನು ಅಬ್ರಹಾಮನ ಮೇಲೆ ದಯೆತೋರಿಸಿ ನಂಬಿಗಸ್ತನಾಗುವೆ. ಇದನ್ನು ನೀನು ಬಹಳ ಕಾಲದ ಹಿಂದೆಯೇ ನಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿರುವೆ.


ದೇವರು ಆ ಸೀಮೆಯ ನಗರಗಳನ್ನು ನಾಶಮಾಡಿದರೂ ಅಬ್ರಹಾಮನನ್ನು ಜ್ಞಾಪಿಸಿಕೊಂಡು ಲೋಟನ ಪ್ರಾಣವನ್ನು ಉಳಿಸಿದನು; ಆದರೆ ಲೋಟನು ವಾಸಿಸುತ್ತಿದ್ದ ನಗರವನ್ನು ನಾಶಮಾಡಿದನು.


ಆದ್ದರಿಂದ ದೇಶವು ಸಹ ಅಶುದ್ಧವಾಯಿತು. ಆದ್ದರಿಂದ ನಾನು ಅದನ್ನು ಅದರ ಪಾಪಗಳಿಗಾಗಿ ದಂಡಿಸಿದೆನು. ಆ ದೇಶವು ತನ್ನಲ್ಲಿ ವಾಸಿಸಿದ ಜನರನ್ನು ಕಾರಿಬಿಟ್ಟಿತು.


ನಿಮ್ಮ ದೇವರಾದ ಯೆಹೋವನಿಗೆ ನೀವು ಆ ರೀತಿ ಮಾಡಬಾರದು. ಆ ರೀತಿಯಾಗಿ ಆತನನ್ನು ಆರಾಧಿಸಬಾರದು. ಯಾಕೆಂದರೆ ಅವರು ತಮ್ಮ ದೇವರೆದುರಿನಲ್ಲಿ ಅಸಹ್ಯವಾದ ಕಾರ್ಯಗಳನ್ನು ಮಾಡುತ್ತಾರೆ. ಅದನ್ನು ನಮ್ಮ ದೇವರಾದ ಯೆಹೋವನು ದ್ವೇಷಿಸುತ್ತಾನೆ. ಅವರು ತಮ್ಮ ಮಕ್ಕಳನ್ನೇ ದೇವರಿಗೆ ಬಲಿ ಅರ್ಪಿಸುತ್ತಾರೆ.


“ನೀವು ನಿಮ್ಮ ವಾಗ್ದತ್ತ ದೇಶಕ್ಕೆ ಬಂದಾಗ ಸುತ್ತಮುತ್ತಲಿನ ಜನರು ನಡೆಯುವ ರೀತಿಯಲ್ಲಿ ನೀವು ನಡೆಯಬಾರದು. ಅವರ ಅಸಹ್ಯವಾದ ಪದ್ದತಿಗಳನ್ನು ಅನುಸರಿಸಬಾರದು.


ಯಾಕೆಂದರೆ ಆಗ ಅವರು ನಿಮ್ಮ ದೇವರಾದ ಯೆಹೋವನಿಗೆ ವಿರೋಧವಾಗಿ ಪಾಪಮಾಡುವಂತೆ ನಿಮಗೆ ಉಪದೇಶಿಸಲು ಸಾಧ್ಯವಾಗುವುದಿಲ್ಲ; ಅವರು ತಮ್ಮ ದೇವರುಗಳನ್ನು ಪೂಜಿಸುವಾಗ ಮಾಡುವ ಭಯಂಕರ ಕೃತ್ಯಗಳನ್ನು ಮಾಡುವಂತೆ ನಿಮಗೆ ಉಪದೇಶಿಸಲು ಸಾಧ್ಯವಾಗುವುದಿಲ್ಲ.


ಆದ್ದರಿಂದ ಇಸ್ರೇಲರಿಗೆ ಹೀಗೆ ಹೇಳು: ‘ಇಸ್ರೇಲರೇ, ನೀವು ಹೋದ ಕಡೆಗಳಲ್ಲೆಲ್ಲಾ ನನ್ನ ಹೆಸರಿಗೆ ಅವಮಾನ ಮಾಡಿದ್ದೀರಿ. ನಾನು ಇದನ್ನು ನಿಲ್ಲಿಸುವುದಕ್ಕೆ ಎನುಬೇಕಾದರೂ ಮಾಡುತ್ತೇನೆ. ಇಸ್ರೇಲೇ, ನಾನು ಈ ಕಾರ್ಯವನ್ನು ನಿನ್ನ ಹೆಸರಿಗೋಸ್ಕರ ಮಾಡದೆ ನನ್ನ ಪರಿಶುದ್ಧ ಹೆಸರಿನ ನಿಮಿತ್ತ ನಾನು ಮಾಡುತ್ತೇನೆ.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನೀವು ಇದನ್ನು ಜ್ಞಾಪಕದಲ್ಲಿಟ್ಟುಕೊಳ್ಳಿರಿ. ನಾನು ಈ ಕಾರ್ಯಗಳನ್ನು ನಿಮಗಾಗಿ ಮಾಡದೆ ನನ್ನ ನಾಮದ ಘನತೆಗಾಗಿ ಮಾಡುತ್ತಿದ್ದೇನೆ. ಇಸ್ರೇಲ್ ಜನರೇ, ನಿಮ್ಮ ಜೀವಿತದ ಕುರಿತಾಗಿ ನೀವು ನಾಚಿಕೆಯಿಂದ ವ್ಯಸನಪಡುವವರಾಗಿರಬೇಕು.”


ನಾಲ್ಕು ತಲೆಮಾರುಗಳ ನಂತರ ನಿನ್ನ ಜನರು ಈ ನಾಡಿಗೆ ಹಿಂತಿರುಗುವರು. ಆ ಕಾಲದಲ್ಲಿ ನಿನ್ನ ಜನರು ಅಮೋರಿಯರನ್ನು ಸೋಲಿಸುವರು. ಇಲ್ಲಿ ವಾಸಿಸುತ್ತಿರುವ ಅಮೋರಿಯರನ್ನು ನಿನ್ನ ಜನರ ಮೂಲಕ ನಾನೇ ಶಿಕ್ಷಿಸುವೆನು. ಇದು ಮುಂದೆ ನಡೆಯುವ ಸಂಗತಿ. ಯಾಕೆಂದರೆ ಆ ಸಮಯದಲ್ಲಿ ಅಮೋರಿಯರು ಅಂಥ ಶಿಕ್ಷೆ ಅನುಭವಿಸುವಷ್ಟು ಕೆಟ್ಟವರಾಗಿರಲಿಲ್ಲ” ಎಂದು ಹೇಳಿದನು.


“ಆ ದುರಾಚಾರಗಳಲ್ಲಿ ಯಾವುದರಿಂದಲೂ ನಿಮ್ಮನ್ನು ಅಶುದ್ಧರನ್ನಾಗಿ ಮಾಡಿಕೊಳ್ಳಬೇಡಿರಿ. ನಾನು ಜನಾಂಗಗಳನ್ನು ಅವರ ದೇಶಗಳಿಂದ ಹೊರಡಿಸಿ ಅವರ ದೇಶವನ್ನು ನಿಮಗೆ ಕೊಡುತ್ತಿದ್ದೇನೆ. ಯಾಕೆಂದರೆ ಅವರು ಅಂಥ ಭಯಂಕರ ಪಾಪಗಳನ್ನು ಮಾಡಿದರು.


ನಾನು ನಿಮಗೆ ಆ ಪ್ರಾಂತ್ಯವನ್ನೆಲ್ಲಾ ಕೊಡುವೆನು. ಅಲ್ಲಿಗೆ ಹೋಗಿ ಅದನ್ನು ತೆಗೆದುಕೊಳ್ಳಿರಿ. ನಿಮ್ಮ ಪೂರ್ವಿಕರಾದ ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಮತ್ತು ಅವರ ಸಂತತಿಯವರಿಗೆ ಆ ಪ್ರದೇಶವನ್ನು ಕೊಡುವೆನು ಎಂದು ನಾನು ವಾಗ್ದಾನ ಮಾಡಿದ್ದೇನೆ.’”


ಇಂಥ ಕಾರ್ಯಗಳನ್ನು ಮಾಡುವ ಜನರನ್ನು ದೇವರು ದ್ವೇಷಿಸುತ್ತಾನೆ. ಆದ್ದರಿಂದಲೇ ಆ ಜನಾಂಗಗಳವರನ್ನು ನಿಮಗೋಸ್ಕರವಾಗಿ ಈ ದೇಶದಿಂದ ಹೊರಡಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು