Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನಹೂಮ 1:1 - ಪರಿಶುದ್ದ ಬೈಬಲ್‌

1 ಎಲ್ಕೋಷ್ ಎಂಬ ಊರಿನವನಾದ ನಹೂಮನಿಗೆ ಆದ ದೇವದರ್ಶನದ ಪುಸ್ತಕ. ನಿನೆವೆ ಪಟ್ಟಣದ ವಿಷಯವಾಗಿ ದುಃಖಕರವಾದ ಸಂದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಿನವೆ ಪಟ್ಟಣದ ಬಗ್ಗೆ ದೈವೋಕ್ತಿ. ಎಲ್ಕೋಷ್ ಊರಿನ ನಹೂಮ ಎಂಬ ಪ್ರವಾದಿಗೆ ಆದ ದೈವದರ್ಶನದ ಗ್ರಂಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನಿನೆವೆಯನ್ನು ಕುರಿತ ದೈವೋಕ್ತಿ. ಎಲ್ಕೋಷ್ ಊರಿನ ನಹೂಮ ಪ್ರವಾದಿಗೆ ಆದ ದೈವದರ್ಶನವಿದು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನಿನೆವೆಯ ವಿಷಯವಾದ ದೈವೋಕ್ತಿ. ಎಲ್ಕೋಷ್ ಊರಿನ ನಹೂಮನಿಗೆ ಆದ ದೈವದರ್ಶನದ ಗ್ರಂಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನಿನೆವೆಯ ವಿಷಯವಾದ ಪ್ರವಾದನೆ: ಎಲ್ಕೋಷಿನವನಾದ ನಹೂಮನ ದರ್ಶನದ ಪುಸ್ತಕವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನಹೂಮ 1:1
19 ತಿಳಿವುಗಳ ಹೋಲಿಕೆ  

ದೇವರು ಆಮೇಲೆ ಉತ್ತರಕ್ಕೆ ಮುಖಮಾಡಿ ಅಶ್ಶೂರವನ್ನು ಶಿಕ್ಷಿಸುವನು. ಆತನು ನಿನೆವೆ ಪಟ್ಟಣವನ್ನು ಶಿಕ್ಷಿಸಿದಾಗ ಅದು ನಿರ್ಜನವಾದ ಮರುಭೂಮಿಯಾಗುವದು.


ಯೆಹೋವನಿಂದ ಬಂದ ಸಂದೇಶ: ಹದ್ರಾಕ್ ದೇಶದ ಮತ್ತು ಅದರ ರಾಜಧಾನಿಯಾದ ದಮಸ್ಕ ನಗರದ ವಿರುದ್ಧವಾಗಿ ಯೆಹೋವನ ಸಂದೇಶ: “ಇಸ್ರೇಲ್ ಕುಲದವರು ಮಾತ್ರವೇ ದೇವರನ್ನು ತಿಳಿದವರಲ್ಲ. ಪ್ರತಿಯೊಬ್ಬರೂ ಸಹಾಯಕ್ಕಾಗಿ ಆತನಿಗೆ ಮೊರೆಯಿಡುವರು.


“ನಿನೆವೆಯು ಮಹಾದೊಡ್ಡ ನಗರ. ಅಲ್ಲಿಯ ಜನರ ಅನೇಕ ತರದ ದುಷ್ಕೃತ್ಯಗಳನ್ನು ನೋಡಿದ್ದೇನೆ. ಆದ್ದರಿಂದ ನೀನು ಆ ನಗರಕ್ಕೆ ಹೋಗಿ ಅಲ್ಲಿಯ ಜನರಿಗೆ ದುಷ್ಟತನವನ್ನು ನಿಲ್ಲಿಸಿರಿ ಎಂದು ಹೇಳು.”


ನಿನೆವೆಯು ನೀರು ಬತ್ತುತ್ತಿರುವ ಕೊಳದಂತಿದೆ. “ನಿಲ್ಲಿ, ನಿಲ್ಲಿ, ಓಡಿಹೋಗಬೇಡಿ” ಎಂದು ಜನರು ಬೊಬ್ಬಿಡುತ್ತಾರೆ. ಆದರೆ ಅದರಿಂದ ಪ್ರಯೋಜನವಿಲ್ಲ.


ಆಮೋಚನ ಮಗನಾದ ಯೆಶಾಯನಿಗೆ ಬಾಬಿಲೋನಿನ ಬಗ್ಗೆ ದೊರೆತ ದೈವಸಂದೇಶ:


ನಿಮ್ರೋದನು ಅಶ್ಶೂರಕ್ಕೂ ಹೋದನು. ಅಶ್ಶೂರದಲ್ಲಿ ನಿನೆವೆ, ರೆಹೋಬೋತೀರ್, ಕೆಲಹ ಮತ್ತು ರೆಸೆನ್ ಎಂಬ ಪಟ್ಟಣಗಳನ್ನು ಕಟ್ಟಿದನು. ರೆಸೆನ್ ಪಟ್ಟಣವು ನಿನೆವೆಗೂ ದೊಡ್ಡಪಟ್ಟಣವಾದ ಕೆಲಹಕ್ಕೂ ಮಧ್ಯದಲ್ಲಿದೆ.


ತೂರಿನ ವಿಷಯವಾಗಿ ದುಃಖಕರವಾದ ಸಂದೇಶ: “ತಾರ್ಷೀಷಿನ ಹಡಗುಗಳೇ, ದುಃಖಿಸಿರಿ! ನಿಮ್ಮ ರೇವು ಕೆಡವಲ್ಪಟ್ಟಿದೆ.” ಕಿತ್ತಿಮಿನಿಂದ ಹೊರಟ ಹಡಗುಗಳಿಗೆ ಈ ವಾರ್ತೆಯು ತಲುಪಿತು.


ಸಮುದ್ರದ ಮರುಭೂಮಿಗೆ ದುಃಖದ ಸಂದೇಶ: ನೆಗೆವ್ ಮೂಲಕ ಬೀಸುವ ಬಿರುಗಾಳಿಯಂತೆ ಮರುಭೂಮಿಯಿಂದಲೂ ಭಯಂಕರ ದೇಶದಿಂದಲೂ ಒಬ್ಬನು ದಂಡೆತ್ತಿ ಬರುವನು.


ಇದು ಮೋವಾಬನ್ನು ಕುರಿತ ದುಃಖಕರವಾದ ಸಂದೇಶ: ಒಂದು ರಾತ್ರಿ ಮೋವಾಬಿನ ಆರ್ ಪಟ್ಟಣದಿಂದ ಸಂಪತ್ತನ್ನು ಸೈನ್ಯವು ಸೂರೆ ಮಾಡಿತು. ಆ ರಾತ್ರಿ ನಗರವು ನಾಶಮಾಡಲ್ಪಟ್ಟಿತು. ಒಂದು ರಾತ್ರಿ ಸೈನ್ಯವು ಮೋವಾಬಿನ ಕೀರ್ ಪಟ್ಟಣದಿಂದ ಸಂಪತ್ತನ್ನು ಸೂರೆ ಮಾಡಿತು. ಆ ರಾತ್ರಿ ಪಟ್ಟಣವು ಕೆಡವಲ್ಪಟ್ಟಿತು.


ಅರಸನಾದ ಆಹಾಜನು ಸತ್ತ ವರ್ಷದಲ್ಲಿ ಈ ದುಃಖದ ಸಂದೇಶವು ಕೊಡಲ್ಪಟ್ಟಿತು:


ದಿವ್ಯದರ್ಶನದ ಕಣಿವೆಯ ವಿಷಯವಾಗಿ ದುಃಖದ ಸಂದೇಶ: ಜನಗಳೇ, ನಿಮಗೆ ಏನಾಯಿತು? ನಿಮ್ಮ ಮನೆ ಮಾಳಿಗೆಯ ಮೇಲೆ ಯಾಕೆ ಅಡಗಿರುತ್ತೀರಿ?


ಈಜಿಪ್ಟಿನ ವಿಷಯವಾಗಿ ದುಃಖಕರವಾದ ಸಂದೇಶ: ಯೆಹೋವನು ವೇಗವಾಗಿ ಬರುವ ಮೋಡದೊಂದಿಗೆ ಬರುತ್ತಿದ್ದಾನೆ. ಆತನು ಈಜಿಪ್ಟನ್ನು ಪ್ರವೇಶಿಸುವಾಗ ಈಜಿಪ್ಟಿನ ಸುಳ್ಳುದೇವರುಗಳೆಲ್ಲಾ ಹೆದರಿ ನಡುಗುವವು. ಈಜಿಪ್ಟು ಧೈರ್ಯಶಾಲಿ ದೇಶವಾಗಿದ್ದರೂ, ಅದರ ಧೈರ್ಯ ಮೇಣದಂತೆ ಕರಗಿಹೋಗುವದು.


ಆಗ ಅಶ್ಶೂರದ ರಾಜನಾದ ಸನ್ಹೇರೀಬನು ತಾನು ವಾಸಿಸುತ್ತಿದ್ದ ನಿನವೆಗೆ ಹಿಂದಿರುಗಿಹೋದನು.


ಪ್ರವಾದಿಯಾದ ಹಬಕ್ಕೂಕನಿಗೆ ಕೊಡಲ್ಪಟ್ಟ ಸಂದೇಶ.


ದೇವರಿಂದ ಬಂದ ಸಂದೇಶ. ಯೆಹೋವ ದೇವರು ಮಲಾಕಿಯ ಮೂಲಕ ಇಸ್ರೇಲರಿಗೆ ಕೊಟ್ಟ ಸಂದೇಶ.


ದೇವರು ಹೀಗೆ ಹೇಳುವನು: “ನಾನು ಕೋಪಗೊಂಡಾಗ ಬೆತ್ತವನ್ನು ಹೇಗೆ ಉಪಯೋಗಿಸುವೆನೋ ಹಾಗೆಯೇ ಇಸ್ರೇಲನ್ನು ಶಿಕ್ಷಿಸಲು ಅಶ್ಶೂರವನ್ನು ಉಪಯೋಗಿಸುವೆನು.


ಹನನ್ಯನೇ, ನಾನು ಮತ್ತು ನೀನು ಪ್ರವಾದಿಗಳಾಗುವದಕ್ಕಿಂತ ಬಹಳ ಮುಂಚೆ ಪ್ರವಾದಿಗಳು ಇದ್ದರು. ಯುದ್ಧ, ಹಸಿವು ಮತ್ತು ಭಯಂಕರವಾದ ವ್ಯಾಧಿಗಳು ಅನೇಕ ದೇಶಗಳಿಗೆ ಮತ್ತು ದೊಡ್ಡದೊಡ್ಡ ರಾಜ್ಯಗಳಿಗೆ ಬರುತ್ತವೆ ಎಂದು ಅವರು ಪ್ರವಾದಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು