ನಹೂಮ 1:3 - ಪರಿಶುದ್ದ ಬೈಬಲ್3 ಯೆಹೋವನು ತಾಳ್ಮೆಯುಳ್ಳ ದೇವರು ಮತ್ತು ಬಲಿಷ್ಠನಾದ ದೇವರಾಗಿದ್ದಾನೆ! ಪಾಪಿಗಳನ್ನು ಆತನು ಶಿಕ್ಷಿಸುವನು. ಆತನಿಂದ ಅವರು ತಪ್ಪಿಸಿಕೊಳ್ಳಲಾರರು. ದುಷ್ಟಜನರನ್ನು ಶಿಕ್ಷಿಸಲು ಯೆಹೋವನು ಬರುವನು. ಆತನು ತನ್ನ ಸಾಮರ್ಥ್ಯವನ್ನು ಬಿರುಗಾಳಿಯಲ್ಲಿಯೂ ಸುಂಟರಗಾಳಿಯಲ್ಲಿಯೂ ತೋರ್ಪಡಿಸುವನು. ಮನುಷ್ಯನು ನೆಲದ ಧೂಳಿನ ಮೇಲೆ ನಡೆಯುತ್ತಾರೆ, ಯೆಹೋವನಾದರೋ ಮೋಡಗಳ ಮೇಲೆ ನಡೆಯುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಯೆಹೋವನು ದೀರ್ಘಶಾಂತನಾಗಿದ್ದರೂ ಆತನ ಶಕ್ತಿಯು ಅಪಾರ, ಅಪರಾಧಿಗಳನ್ನು ಶಿಕ್ಷಿಸದೆ ಬಿಡನು; ಯೆಹೋವನು ಬಿರುಗಾಳಿಯಲ್ಲಿಯೂ, ತುಫಾನಿನಲ್ಲಿಯೂ ನಡೆಯುತ್ತಾನೆ; ಮೋಡಗಳು ಆತನ ಹೆಜ್ಜೆಯಿಂದೇಳುವ ಧೂಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಸರ್ವೇಶ್ವರ ಶಾಂತಿಸ್ವರೂಪಿ; ಆದರೆ ಆತನ ಶಕ್ತಿ ಅಪಾರ, ಅಪರಾಧಿಗಳನ್ನು ಆತ ಶಿಕ್ಷಿಸದೆ ಬಿಡ; ಗಾಳಿಬಿರುಗಾಳಿಗಳ ನಡುವೆ ಆತನ ಹಾದಿ; ಮೋಡಗಳು ಆತನ ನಡೆಯಿಂದೇಳುವ ಧೂಳಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಯೆಹೋವನು ದೀರ್ಘಶಾಂತನಾಗಿದ್ದರೂ ಆತನ ಶಕ್ತಿಯು ಅಪಾರ, ಅಪರಾಧಿಗಳನ್ನು ಶಿಕ್ಷಿಸದೆ ಬಿಡನು; ಯೆಹೋವನು ಬಿರುಗಾಳಿಯಲ್ಲಿಯೂ ತುಫಾನಿನಲ್ಲಿಯೂ ನಡೆಯುತ್ತಾನೆ; ಮೋಡಗಳು ಆತನ ಹೆಜ್ಜೆಯಿಂದೇಳುವ ದೂಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಯೆಹೋವ ದೇವರು ಕೋಪಗೊಳ್ಳುವುದರಲ್ಲಿ ಶಾಂತಿಸ್ವರೂಪರು. ಆದರೂ ಶಕ್ತಿಯಲ್ಲಿ ಮಹತ್ತಾದವರು. ದುರ್ಮಾರ್ಗದವರನ್ನು ಎಷ್ಟು ಮಾತ್ರಕ್ಕೂ ಶಿಕ್ಷಿಸದೆ ಇರರು. ಯೆಹೋವ ದೇವರ ಮಾರ್ಗವು ಸುಳಿಗಾಳಿಯಲ್ಲಿಯೂ, ಬಿರುಗಾಳಿಯಲ್ಲಿಯೂ ಇದೆ. ಮೇಘಗಳು ಅವರ ಕಾಲುಗಳ ಧೂಳೇ. ಅಧ್ಯಾಯವನ್ನು ನೋಡಿ |
ನಿನ್ನ ಮಾತನ್ನು ಕೇಳಲು ನಿರಾಕರಿಸಿದರು. ಅವರಿಗಾಗಿ ಅದ್ಭುತಕಾರ್ಯಗಳನ್ನು ಮಾಡಿದ್ದನ್ನು ಅವರು ಮರೆತರು. ಅವರು ಹಠಮಾರಿಗಳಾಗಿದ್ದರಿಂದ ತಮ್ಮನ್ನು ಈಜಿಪ್ಟಿನ ಗುಲಾಮಗಿರಿಗೆ ಮತ್ತೆ ಕರೆದೊಯ್ಯಲು ಒಬ್ಬ ನಾಯಕನನ್ನು ನೇಮಿಸಲು ಅವರು ನಿರ್ಧರಿಸಿದರು. “ಆದರೆ ನೀನು ಕ್ಷಮಿಸುವ ದೇವರಾಗಿರುವೆ. ನೀನು ಕನಿಕರ ಉಳ್ಳವನಾಗಿರುವೆ. ನೀನು ತಾಳ್ಮೆಯುಳ್ಳವನೂ ಪ್ರೀತಿಸ್ವರೂಪನೂ ಆಗಿರುವೆ. ಆದ್ದರಿಂದ ನೀನು ಅವರನ್ನು ತೊರೆಯಲಿಲ್ಲ.
ಯೋನನು ಯೆಹೋವನಿಗೆ ದೂರು ಹೇಳುತ್ತಾ, “ಇದು ಹೀಗಾಗುತ್ತದೆಯೆಂದು ನನಗೆ ಗೊತ್ತಿತ್ತು. ನಾನು ನನ್ನ ದೇಶದಲ್ಲಿದ್ದೆ. ಇಲ್ಲಿಗೆ ಬರಲು ನನಗೆ ಹೇಳಿದವನು ನೀನೇ. ಈ ದುಷ್ಟಪಟ್ಟಣದ ಜನರನ್ನು ನೀನು ಕ್ಷಮಿಸುತ್ತೀ ಎಂದು ನನಗೆ ಆಗಲೇ ಗೊತ್ತಿತ್ತು. ಆದ್ದರಿಂದ ನಾನು ತಾರ್ಷೀಷಿಗೆ ಓಡಿಹೋಗಲು ನಿರ್ಧರಿಸಿದೆನು. ನೀನು ದಯಾಪರನಾದ, ಕೃಪಾಪೂರ್ಣನಾದ, ಕೋಪಗೊಳ್ಳುವುದರಲ್ಲಿ ನಿಧಾನವಾದ ಮತ್ತು ಮಹಾಕನಿಕರವುಳ್ಳ ದೇವರೆಂದು ನನಗೆ ಗೊತ್ತಿತ್ತು. ಆ ಜನರು ಪಾಪ ಮಾಡುವದನ್ನು ನಿಲ್ಲಿಸಿದರೆ, ನೀನು ನಿನ್ನ ಯೋಜನೆಯಂತೆ ಅವರನ್ನು ನಾಶಮಾಡುವುದಿಲ್ಲ ಎಂದು ನನಗೆ ಗೊತ್ತಿತ್ತು.