Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನಹೂಮ 1:9 - ಪರಿಶುದ್ದ ಬೈಬಲ್‌

9 ಯೆಹೋವನಿಗೆ ವಿರುದ್ಧವಾಗಿ ಏಕೆ ಯೋಜನೆ ಹಾಕುತ್ತೀರಿ? ನೀವು ಯಾವ ಕುಯುಕ್ತಿಯನ್ನೂ ಮಾಡದ ಹಾಗೆ ಆತನು ನಿಮ್ಮನ್ನು ಸಂಪೂರ್ಣವಾಗಿ ನಾಶಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನೀವು ಯೆಹೋವನಿಗೆ ವಿರುದ್ಧವಾಗಿ ಯಾವರೀತಿಯ ಕುಯುಕ್ತಿಯನ್ನು ಕಲ್ಪಿಸುತ್ತೀರಿ? ಆತನು ಸಂಪೂರ್ಣವಾಗಿ ಹಾಳುಮಾಡುವನು; ಎರಡನೆಯ ಸಾರಿ ಅಪಾಯವು ತಲೆ ಎತ್ತದಂತೆ ಪೂರ್ಣವಾಗಿ ನಿಮ್ಮನ್ನು ನಾಶಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಸರ್ವೇಶ್ವರನ ವಿರುದ್ಧ ಮಾಡಬಲ್ಲಿರಾ ನೀವು ಕುಯುಕ್ತಿ? ಮರಳಿ ತಲೆಯೆತ್ತದಂತೆ ನಾಶಮಾಡುವನು ನಿಮ್ಮನು ಪೂರ್ತಿಯಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೀವು ಯೆಹೋವನಿಗೆ ವಿರುದ್ಧವಾಗಿ ಯಾವ ಕುಯುಕ್ತಿಯನ್ನು ಕಲ್ಪಿಸುತ್ತೀರಿ? ಆತನು ಪೂರಾ ಹಾಳುಮಾಡುವನು; ಅಪಾಯವು ಎರಡನೆಯ ಸಲ ಉಂಟಾಗಬೇಕಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯೆಹೋವ ದೇವರಿಗೆ ವಿರೋಧವಾಗಿ ಅವರು ಏನೇನು ಯೋಚಿಸಿರುವರೋ, ಅದನ್ನು ಅವರು ಅಂತ್ಯಗೊಳಿಸುವರು. ತೊಂದರೆಯು ಎರಡು ಸಾರಿ ಏಳದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನಹೂಮ 1:9
17 ತಿಳಿವುಗಳ ಹೋಲಿಕೆ  

ಯೆಹೋವನು ಜನಾಂಗಗಳ ಉದ್ದೇಶಗಳನ್ನು ವ್ಯರ್ಥಗೊಳಿಸಬಲ್ಲನು; ಅವರ ಆಲೋಚನೆಗಳನ್ನು ನಿಷ್ಪಲ ಮಾಡಬಲ್ಲನು.


ಯಾಕೆಂದರೆ, ಅವರು ನಿನಗೆ ವಿರೋಧವಾಗಿ ದುರಾಲೋಚನೆಗಳನ್ನು ಮಾಡಿದರು. ಅವರು ಕುತಂತ್ರಗಳನ್ನು ಮಾಡಿದರೂ ಯಶಸ್ವಿಯಾಗಲಿಲ್ಲ.


ಯೆಹೋವನೇ ವಿರೋಧವಾಗಿದ್ದರೆ, ಜಯಪ್ರಧವಾಗಬಲ್ಲ ಯೋಜನೆಯನ್ನು ಮಾಡುವಂಥ ಜ್ಞಾನ ಯಾರಿಗೂ ಇಲ್ಲ.


ದೇವರ ಜ್ಞಾನಕ್ಕೆ ವಿರೋಧವಾಗಿ ಎದ್ದೇಳುವ ಪ್ರತಿಯೊಂದು ಗರ್ವದ ಸಂಗತಿಯನ್ನು ನಾಶಮಾಡುತ್ತೇವೆ; ಪ್ರತಿಯೊಂದು ಯೋಚನೆಯನ್ನು ಸ್ವಾಧೀನಪಡಿಸಿಕೊಂಡು ಅವುಗಳನ್ನು ಪರಿವರ್ತಿಸಿ ಕ್ರಿಸ್ತನಿಗೆ ವಿಧೇಯರಾಗುವಂತೆ ಮಾಡುತ್ತೇವೆ.


ಅಶ್ಶೂರವೇ, ನಿನ್ನಿಂದ ಒಬ್ಬ ಮನುಷ್ಯನು ಬಂದು, ಯೆಹೋವನಿಗೆ ವಿರುದ್ಧವಾದ ಯೋಜನೆಗಳನ್ನು ಹಾಕಿದನು. ದುರಾಲೋಚನೆಯನ್ನು ಕೊಟ್ಟನು.


ಅಬೀಷೈಯು, “ಯೆಹೋವನು ಈ ದಿನ ನಿನ್ನ ಶತ್ರುವನ್ನು ಸೋಲಿಸಲು ನಿನಗೆ ಒಪ್ಪಿಸಿದ್ದಾನೆ. ಸೌಲನನ್ನು ಅವನ ಭರ್ಜಿಯಿಂದಲೇ ಅವನನ್ನು ನೆಲಕ್ಕೆ ಹತ್ತಿಕೊಳ್ಳುವಂತೆ ತಿವಿಯಲು ನನಗೆ ಅವಕಾಶಕೊಡು. ನಾನು ಒಂದೇ ಸಲಕ್ಕೆ ಆ ಕಾರ್ಯವನ್ನು ಮುಗಿಸಿಬಿಡುತ್ತೇನೆ!” ಎಂದು ದಾವೀದನನ್ನು ಕೇಳಿದನು.


ನಾನು ಇದನ್ನು ಏಲಿ ಮತ್ತು ಅವನ ಕುಟುಂಬದ ವಿರುದ್ಧ ಸಂಪೂರ್ಣವಾಗಿ ಮಾಡುತ್ತೇನೆ.


ಅವನ ಕೈಯಲ್ಲಿದ್ದ ಖಡ್ಗವನ್ನು ಅಮಾಸನು ಗಮನಿಸಲಿಲ್ಲ. ಅಮಾಸನ ಹೊಟ್ಟೆಯಲ್ಲಿದ್ದದ್ದೆಲ್ಲ ಹೊರಚೆಲ್ಲಿ ನೆಲದ ಮೇಲೆ ಬೀಳುವಂತೆ ಯೋವಾಬನು ಅವನ ಹೊಟ್ಟೆಗೆ ಖಡ್ಗದಿಂದ ತಿವಿದನು. ಅಮಾಸನು ಆಗಲೇ ಸತ್ತದ್ದರಿಂದ ಯೋವಾಬನು ಮತ್ತೆ ತಿವಿಯಲಿಲ್ಲ. ನಂತರ ಯೋವಾಬನು ತನ್ನ ಸೋದರನಾದ ಅಬೀಷೈಯನೊಂದಿಗೆ ಬಿಕ್ರೀಯ ಮಗನಾದ ಶೆಬನನ್ನು ಅಟ್ಟಿಸಿಕೊಂಡು ಹೋದನು.


ಈಗ ನೀವು ಆ ವಿಷಯಗಳೊಂದಿಗೆ ಯುದ್ಧ ಮಾಡಬಾರದು. ನೀವು ಹಾಗೆ ಮಾಡಿದ್ದಲ್ಲಿ ನಿಮ್ಮ ಸುತ್ತಲಿರುವ ಹಗ್ಗವು ಇನ್ನೂ ಬಿಗಿಯಾಗುವದು. ನಾನು ಕೇಳಿರುವ ಮಾತುಗಳು ಬದಲಾಗವು. ಯಾಕೆಂದರೆ ಅವು ಸರ್ವಶಕ್ತನಾದ ಯೆಹೋವನ ಮಾತುಗಳು. ಆತನು ಪ್ರಪಂಚವನ್ನು ಆಳುವಾತನು. ಆ ಸಂಗತಿಗಳೆಲ್ಲವೂ ಸಂಭವಿಸುವವು.


ಆಮೇಲೆ ‘ಇದೇ ರೀತಿಯಲ್ಲಿ ಬಾಬಿಲೋನ್ ಕೂಡ ಮುಳುಗಿಹೋಗುವುದು. ಬಾಬಿಲೋನ್ ಎಂದಿಗೂ ಮೇಲಕ್ಕೆ ಏಳುವದಿಲ್ಲ. ಅಲ್ಲಿ ನಾನು ಬರಮಾಡುವ ಅನೇಕ ವಿಪತ್ತುಗಳಿಂದಾಗಿ ಬಾಬಿಲೋನ್ ಮುಳುಗಿಹೋಗುವುದು’” ಎಂದು ಹೇಳು. ಯೆರೆಮೀಯನ ಸಂದೇಶ ಇಲ್ಲಿಗೆ ಮುಗಿಯುತ್ತದೆ.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಒಂದರ ಮೇಲೊಂದು ದುರ್ಘಟನೆಗಳು ನಡೆಯುವವು.


ಆಗ, ಯೆಹೋವನಾದ ನಾನೇ ನನ್ನ ಖಡ್ಗವನ್ನು ಒರೆಯಿಂದ ತೆಗೆದಿದ್ದೇನೆಂದು ಎಲ್ಲಾ ಜನರಿಗೆ ಗೊತ್ತಾಗುವುದು. ನನ್ನ ಖಡ್ಗವು ತನ್ನ ಕಾರ್ಯಮಾಡದೆ ತಿರುಗಿ ಒರೆಯೊಳಗೆ ಹೋಗುವದಿಲ್ಲ.’”


ನಾನು ಅವರಿಗೆ ತರಬೇತಿಕೊಟ್ಟು ಅವರ ತೋಳುಗಳನ್ನು ಬಲಪಡಿಸಿದೆನು. ಆದರೆ ನನಗೆ ವಿರುದ್ಧವಾಗಿ ಅವರು ದುರಾಲೋಚನೆಯನ್ನು ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು