ನಹೂಮ 2:13 - ಪರಿಶುದ್ದ ಬೈಬಲ್13 ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನಿನೆವೆಯೇ, ನಾನು ನಿನಗೆ ವಿರೋಧವಾಗಿದ್ದೇನೆ. ನಿನ್ನ ರಥಗಳನ್ನು ಸುಟ್ಟುಹಾಕುತ್ತೇನೆ. ನಿನ್ನ ಎಳೆ ಸಿಂಹಗಳನ್ನು ರಣರಂಗದಲ್ಲಿ ಸಾಯಿಸುತ್ತೇನೆ. ಈ ಭೂಮಿಯ ಮೇಲೆ ಇನ್ನು ಯಾರನ್ನೂ ಭೇಟಿ ಮಾಡದಿರುವೆ. ನಿನ್ನ ಸಂದೇಶವಾಹಕರಿಂದ ಕೆಟ್ಟ ಸಮಾಚಾರವನ್ನು ಜನರು ಇನ್ನು ಎಂದಿಗೂ ಕೇಳರು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ! ನಾನು ನಿನಗೆ ವಿರುದ್ಧನಾಗಿದ್ದೇನೆ, ನಿನ್ನ ರಥಗಳನ್ನು ಸುಟ್ಟು ಹೊಗೆಹಾಯಿಸುವೆನು, ಕತ್ತಿಯು ನಿನ್ನ ಪ್ರಾಯದ ಸಿಂಹಗಳನ್ನು ಸೀಳಿ ನುಂಗಿ ಬಿಡುವವು; ನಿನಗೆ ಸಿಕ್ಕಿದ ಬೇಟೆಯನ್ನು ಲೋಕದೊಳಗಿಂದ ನಿರ್ಮೂಲಮಾಡುವೆನು; ನಿನ್ನ ರಾಯಭಾರಿಗಳ ಧ್ವನಿಯು ಇನ್ನು ಕೇಳಿಸುವುದಿಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಇಂತೆನ್ನುತ್ತಾರೆ ಸರ್ವಶಕ್ತ ಸರ್ವೇಶ್ವರ: “ನಿನಗೆ ವಿರುದ್ಧವಾಗಿದ್ದೇನೆ ನಾನು; ಸುಟ್ಟು ಭಸ್ಮಮಾಡುವೆ ನಿನ್ನ ರಥಗಳನು; ಸಂಹರಿಸಿಬಿಡುವೆನು ನಿನ್ನ ಯುವಸಿಂಹಗಳನು; ನಿನಗೆ ಜಗದಲ್ಲೆಲ್ಲ ಬೇಟೆ ಸಿಗದಂತೆ ಮಾಡುವೆನು; ಯಾರೂ ಕೇಳರು ನಿನ್ನ ರಾಯಭಾರಿಗಳ ಮಾತನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ನಿನಗೆ ವಿರುದ್ಧನಾಗಿದ್ದೇನೆ, ನಿನ್ನ ರಥಗಳನ್ನು ಸುಟ್ಟು ಹೊಗೆಹಾಯಿಸುವೆನು, ಕತ್ತಿಯು ನಿನ್ನ ಪ್ರಾಯದ ಸಿಂಹಗಳನ್ನು ನುಂಗಿಬಿಡುವದು; ನಿನಗೆ ಸಿಕ್ಕಿದ ಬೇಟೆಯನ್ನು ಲೋಕದೊಳಗಿಂದ ನಿರ್ಮೂಲಮಾಡುವೆನು, ನಿನ್ನ ರಾಯಭಾರಿಗಳ ಧ್ವನಿಯು ಇನ್ನು ಕೇಳಿಸದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ. ನಿನ್ನ ರಥಗಳನ್ನು ಹೊಗೆಯಾಗಲು ಸುಡುತ್ತೇನೆ. ಖಡ್ಗವು ನಿನ್ನ ಎಳೆಯ ಸಿಂಹಗಳನ್ನು ನುಂಗಿಬಿಡುವುದು. ನಿನಗೆ ಸಿಕ್ಕಿದ ಬೇಟೆಯನ್ನು ಭೂಮಿಯ ಮೇಲಿನಿಂದ ತೆಗೆದುಬಿಡುತ್ತೇನೆ. ನಿನ್ನ ರಾಯಭಾರಿಗಳ ಧ್ವನಿಯು ಇನ್ನು ಕೇಳಿಸದು.” ಅಧ್ಯಾಯವನ್ನು ನೋಡಿ |