Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನಹೂಮ 2:2 - ಪರಿಶುದ್ದ ಬೈಬಲ್‌

2 ಹೌದು, ಯೆಹೋವನು ಯಾಕೋಬನ ವೈಭವವನ್ನು ಇಸ್ರೇಲಿನ ವೈಭವವಾಗಿ ಸ್ಥಾಪಿಸುವನು. ವೈರಿಯು ಅವರನ್ನು ನಾಶಮಾಡಿ ಅವರ ದ್ರಾಕ್ಷಿಬಳ್ಳಿಯನ್ನು ಹಾಳುಮಾಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಹಾ, ಯೆಹೋವನು ಯಾಕೋಬಿನ ಅತಿಶಯವನ್ನು, ಇಸ್ರಾಯೇಲಿನ ಅತಿಶಯದಂತೆ ಪುನರುಜ್ಜೀವನಗೋಳಿಸುವನು; ಕೊಳ್ಳೆಹೊಡೆಯುವವರು ಆ ಅತಿಶಯವನ್ನು ಸೂರೆಗೈದು ಅವುಗಳ ದ್ರಾಕ್ಷಾಲತೆಗಳನ್ನು ಹಾಳುಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 (ಸರ್ವೇಶ್ವರ, ಕೊಳ್ಳೆಗಾರರು ಸುಲಿಗೆಮಾಡಿದ್ದನ್ನೂ ಮುರಿದುಹಾಕಿದ ದ್ರಾಕ್ಷಿಯ ತೋಟಗಳನ್ನೂ ಸರಿಪಡಿಸಲಿದ್ದಾರೆ. ಯಕೋಬಿನ ಮಹತ್ವವನ್ನು ಹಾಗೂ ಇಸ್ರಯೇಲಿನ ಮಹಿಮೆಯನ್ನು ಈಗ ಮತ್ತೆ ಸ್ಥಾಪಿಸಲಿದ್ದಾರೆ).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 (ಆಹಾ, ಯೆಹೋವನು ಯಾಕೋಬಿನ ಅತಿಶಯವನ್ನು, ಇಸ್ರಾಯೇಲಿನ ಅತಿಶಯವನ್ನು ಸಹ ಪುನರುಜ್ಜೀವನ ಮಾಡುವನು; ಸೂರೆಗಾರರು ಅವುಗಳನ್ನು ಸೂರೆಗೈದು ಅವುಗಳ ಶಾಖೆಗಳನ್ನು ಹಾಳುಮಾಡಿದ್ದರಷ್ಟೆ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೆಹೋವ ದೇವರು ಯಾಕೋಬಿನ ಹೆಚ್ಚಳವನ್ನು ಇಸ್ರಾಯೇಲಿನ ಹೆಚ್ಚಳದ ಹಾಗೆಯೇ ಪುನಃ ಸ್ಥಾಪಿಸುತ್ತಾರೆ. ನಾಶಕರು ಅವುಗಳನ್ನು ನಾಶಮಾಡಿದರೂ ಅವರ ದ್ರಾಕ್ಷಿಬಳ್ಳಿಗಳನ್ನು ಕೆಡಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನಹೂಮ 2:2
14 ತಿಳಿವುಗಳ ಹೋಲಿಕೆ  

“ಆಗ ಜೆರುಸಲೇಮೇ, ನಿನ್ನ ಜನರು ನನಗೆ ವಿರುದ್ಧವಾಗಿ ಮಾಡಿದ ದುಷ್ಕೃತ್ಯಗಳಿಗಾಗಿ ನೀನು ನಾಚಿಕೆಪಡುವುದಿಲ್ಲ. ಯಾಕೆಂದರೆ ನಾನು ಆ ದುಷ್ಟ ಜನರನ್ನೆಲ್ಲಾ ನಿರ್ಮೂಲ ಮಾಡುವೆನು. ಅಹಂಕಾರ ತುಂಬಿದ ಜನರನ್ನು ನಾನು ತೆಗೆದುಬಿಡುವೆನು. ನನ್ನ ಪವಿತ್ರ ಪರ್ವತದಲ್ಲಿ ಗರ್ವವುಳ್ಳವರು ಯಾರೂ ಇರುವದಿಲ್ಲ.


ಅವರು ಇನ್ನು ಮೇಲೆ ವಿಗ್ರಹಗಳಿಂದ ತಮ್ಮನ್ನು ಹೊಲೆ ಮಾಡಿಕೊಳ್ಳುವದಿಲ್ಲ. ಅವರು ಪಾಪಮಾಡಿ ಸಿಕ್ಕಿಬಿದ್ದ ದೇವದ್ರೋಹದಿಂದೆಲ್ಲಾ ನಾನು ಅವರನ್ನು ಉದ್ಧರಿಸುವೆನು. ನಾನು ಅವರನ್ನು ತೊಳೆದು ಶುದ್ಧಮಾಡುವೆನು. ಅವರು ನನ್ನ ಜನರಾಗಿರುವರು. ನಾನು ಅವರ ದೇವರಾಗಿರುವೆನು.


“ನೀನು ಮತ್ತೆಂದಿಗೂ ಒಬ್ಬಂಟಿಗಳಾಗಿರುವದಿಲ್ಲ. ನೀನು ಮತ್ತೆಂದಿಗೂ ದ್ವೇಷಿಸಲ್ಪಡುವದಿಲ್ಲ. ನೀನು ತಿರುಗಿ ಬರಿದಾಗುವುದಿಲ್ಲ. ನಿನ್ನನ್ನು ಶಾಶ್ವತವಾದ ಮಹೋನ್ನತಳನ್ನಾಗಿ ಮಾಡುವೆನು. ನೀನು ನಿತ್ಯಕಾಲಕ್ಕೂ ಸಂತೋಷದಲ್ಲಿರುವೆ.


ಇಸ್ರೇಲ್ ಅಧಿಕ ಹಣ್ಣುಗಳನ್ನು ಕೊಡುವ ದ್ರಾಕ್ಷಿಬಳ್ಳಿಯಂತಿದೆ. ಆದರೆ ಇಸ್ರೇಲ್ ಅಭಿವೃದ್ಧಿ ಹೊಂದಿದ ಹಾಗೆ ಅವರು ಸುಳ್ಳುದೇವರುಗಳನ್ನು ಪೂಜಿಸಲು ಹೆಚ್ಚುಹೆಚ್ಚು ವೇದಿಕೆಗಳನ್ನು ಕಟ್ಟಿದರು. ಅವರ ದೇಶವು ಉತ್ತಮವಾಗುತ್ತಾ ಬರುತ್ತಿರುವಾಗ ಅವರು ತಮ್ಮ ಸುಳ್ಳುದೇವರುಗಳಿಗೆ ಉತ್ತಮ ಕಲ್ಲುಗಳಿಂದ ವೇದಿಕೆಗಳನ್ನು ಕಟ್ಟಲು ಪ್ರಾರಂಭಿಸಿದರು.


“ಕೆಲಸಗಾರರು ನಿಮ್ಮ ದ್ರಾಕ್ಷಿತೋಟಕ್ಕೆ ಬಂದು ದ್ರಾಕ್ಷಿಯನ್ನು ಕೀಳುವರು; ಆದರೆ ಬಳ್ಳಿಯಲ್ಲಿ ಕೆಲವು ದ್ರಾಕ್ಷಿಗಳನ್ನು ಬಿಡುವರು; ರಾತ್ರಿಯಲ್ಲಿ ಕಳ್ಳರು ಬಂದರೆ ಅವರು ತಮಗೆ ಬೇಕಾದಷ್ಟನ್ನು ಮಾತ್ರ ತೆಗೆದುಕೊಳ್ಳುತ್ತಾರೆ.


ಈಗಾಗಲೆ ನನ್ನ ಹೆಸರುಗೊಂಡಿರುವ ಜೆರುಸಲೇಮ್ ನಗರಕ್ಕೆ ಕೇಡಾಗುವಂತೆ ಮಾಡುತ್ತಿದ್ದೇನೆ. ನಿಮ್ಮನ್ನು ದಂಡನೆಗೆ ಗುರಿ ಮಾಡಲಾಗುವುದಿಲ್ಲವೆಂದು ನೀವು ಯೋಚಿಸುತ್ತಿರಬಹುದು. ಆದರೆ ನಿಮ್ಮ ಯೋಚನೆ ತಪ್ಪು. ನಿಮ್ಮನ್ನು ದಂಡಿಸಲಾಗುವುದು. ಈ ಭೂಮಿಯ ಮೇಲಿನ ಜನರೆಲ್ಲರ ಮೇಲೆ ಆಕ್ರಮಣಮಾಡಲು ನಾನು ಒಂದು ಖಡ್ಗವನ್ನು ಕರೆಯುತ್ತಿದ್ದೇನೆ.’” ಇದು ಯೆಹೋವನ ಸಂದೇಶ.


ದೇವರು ಈ ದೇಶವನ್ನು ನಮಗೋಸ್ಕರವಾಗಿ ಆರಿಸಿಕೊಂಡನು; ತನಗೆ ಪ್ರಿಯರಾದ ಯಾಕೋಬನ ವಂಶಸ್ಥರಿಗಾಗಿ ಆತನು ಮನೋಹರವಾದ ಈ ದೇಶವನ್ನು ಆರಿಸಿಕೊಂಡನು.


“ಮೋವಾಬಿಗೆ ಕಷ್ಟವೆಂಬುದೇ ಗೊತ್ತಿಲ್ಲ. ಮೋವಾಬ್ ಮಡ್ಡಿ ತಂಗಿಸಲು ಬಿಟ್ಟ ದ್ರಾಕ್ಷಾರಸದಂತಿದೆ. ಅದನ್ನು ಒಂದು ಪಾತ್ರೆಯಿಂದ ಮತ್ತೊಂದು ಪಾತ್ರೆಗೆ ಒಮ್ಮೆಯೂ ಸುರಿದಿಲ್ಲ. ಅದನ್ನು ಒಮ್ಮೆಯೂ ಸೆರೆಹಿಡಿದಿಲ್ಲ. ಆದ್ದರಿಂದ ಅದರ ರುಚಿ ಮೊದಲಿದ್ದ ಹಾಗೆ ಇದೆ. ಅದರ ವಾಸನೆಯಲ್ಲಿ ಬದಲಾವಣೆಯಾಗಿಲ್ಲ.”


ಯೆಹೋವನು ಹೀಗೆ ಹೇಳುತ್ತಾನೆ ಎಂದು ಆ ಜನರಿಗೆ ಹೇಳು: ‘ನಾನು ಇಸ್ರೇಲ್ ಜನರನ್ನು ಅವರು ಚದರಿದ ದೇಶಗಳಿಂದಲೂ ಸುತ್ತಲಿರುವ ದೇಶಗಳಿಂದಲೂ ಅವರನ್ನು ಒಟ್ಟುಗೂಡಿಸಿ ಅವರ ಸ್ವದೇಶಕ್ಕೆ ತರುವೆನು.


ಈಗ ನಿನೆವೆಯು ಖಾಲಿಯಾಯಿತು. ಎಲ್ಲಾ ದೋಚಲ್ಪಟ್ಟಿತು. ನಗರವು ನಾಶವಾಯಿತು. ಜನರು ತಮ್ಮ ಧೈರ್ಯ ಕಳೆದುಕೊಂಡಿದ್ದಾರೆ. ಭಯದಿಂದ ಅವರ ಹೃದಯವು ಕರಗುತ್ತಿದೆ. ಮೊಣಕಾಲುಗಳು ನಡುಗುತ್ತಿದೆ. ಅವರ ದೇಹವು ಅಲ್ಲಾಡುತ್ತಿದೆ. ಭಯದಿಂದ ಅವರ ಮುಖವು ರಕ್ತಹೀನವಾಗಿದೆ.


ನೀರನ್ನು ತಂದು ಪಟ್ಟಣದೊಳಗೆ ಶೇಖರಿಸಿಡು. ಯಾಕೆಂದರೆ ವೈರಿ ಸೈನ್ಯವು ನಿನ್ನ ನಗರವನ್ನು ಮುತ್ತುವವು. ನಗರದೊಳಗೆ ಅನ್ನ ನೀರನ್ನು ಯಾರಿಗೂ ತರಲು ಬಿಡುವುದಿಲ್ಲ. ನಿನ್ನ ಬುರುಜುಗಳನ್ನು ಬಲಪಡಿಸಿಕೊ. ಹೆಚ್ಚು ಇಟ್ಟಿಗೆಗಳನ್ನು ಮಾಡುವಂತೆ ಆವೆಮಣ್ಣನ್ನು ಶೇಖರಿಸು. ಗಾರೆಯನ್ನು ಕಲಸಿಕೊ. ಇಟ್ಟಿಗೆಗಳನ್ನು ಮಾಡುವ ಅಚ್ಚನ್ನು ತೆಗೆದುಕೊ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು