Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನಹೂಮ 2:3 - ಪರಿಶುದ್ದ ಬೈಬಲ್‌

3 ಆ ಸೈನಿಕರ ಗುರಾಣಿಗಳು ಕೆಂಪಗಿವೆ. ಅವರ ಸಮವಸ್ತ್ರಗಳು ಕೆಂಪುಬಣ್ಣದಿಂದ ಹೊಳೆಯುತ್ತಿವೆ. ಅವರ ರಥಗಳು ಯುದ್ಧಕ್ಕಾಗಿ ಸಾಲುಗಟ್ಟಿ ನಿಂತಿವೆ ಮತ್ತು ಬೆಂಕಿಯ ಜ್ವಾಲೆಯಂತೆ ಹೊಳೆಯುತ್ತಿವೆ. ಅವರ ಭರ್ಜಿಗಳು ಎತ್ತಲ್ಪಟ್ಟಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಶತ್ರುವಿನ ಶೂರರ ಗುರಾಣಿಯು ರಕ್ತವರ್ಣವಾಗಿದೆ, ಪರಾಕ್ರಮಿಗಳ ಉಡುಪುಗಳು ಕಿರಿಮಂಜಿನಂತೆ; ಅವನ ಸಿದ್ಧತೆಯ ದಿನಗಳಲ್ಲಿ ಸೈಪ್ರಸ್ ಮರದದಿಂದ ಮಾಡಿದ ಈಟಿಗಳು ಝಳಪಿಸುತ್ತವೆ ಮತ್ತು ಪಟ್ಟಣದಲ್ಲಿ ಅವರು ನಡೆದು ಹೋಗುವಾಗ ಅವರ ರಥಗಳ ಉಕ್ಕು ಥಳಥಳಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಶತ್ರುವಿನ ಶೂರರ ಗುರಾಣಿ ರಕ್ತಗೆಂಪು, ಪರಾಕ್ರಮಿಗಳ ಉಡುಪು ಕಡುಗೆಂಪು. ರಣರಂಗದೊಳು ಥಳಥಳಿಸುತ್ತವೆ ರಥಗಳು ಝಳಪಿಸುತ್ತವೆ ಈಟಿಗಳು. ಕಾಳಗಕ್ಕೆ ಕಾತರದಿಂದಿವೆ ಕುದುರೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಶತ್ರುವಿನ ಶೂರರ ಗುರಾಣಿಯು ರಕ್ತವರ್ಣವಾಗಿದೆ, ಪರಾಕ್ರವಿುಗಳ ಉಡುಪು ಕಿರಿಮಂಜಿಯದು; ಅವನ ಸನ್ನಾಹದಿನದಲ್ಲಿ ರಥಗಳ ಉಕ್ಕು ಥಳಥಳಿಸುತ್ತದೆ, ಈಟಿಗಳು ಝಳಪಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಸೈನಿಕರ ಗುರಾಣಿಗಳು ಕೆಂಪಾಗಿವೆ; ಯುದ್ಧವೀರರು ರಕ್ತವರ್ಣದ ಬಟ್ಟೆ ಧರಿಸಿದ್ದಾರೆ; ಆತನು ಸಿದ್ಧಮಾಡುವ ದಿವಸದಲ್ಲಿ, ರಥಗಳ ಉಕ್ಕು ಥಳಥಳಿಸುವುದು, ತುರಾಯಿ ಮರದಿಂದ ಮಾಡಿದ ಈಟಿಗಳು ಝಳಪಿಸುವುವು;

ಅಧ್ಯಾಯವನ್ನು ನೋಡಿ ನಕಲು ಮಾಡಿ




ನಹೂಮ 2:3
13 ತಿಳಿವುಗಳ ಹೋಲಿಕೆ  

ಆಗ ಪರಲೋಕದಲ್ಲಿ ಮತ್ತೊಂದು ಅದ್ಭುತವು ಕಾಣಿಸಿತು: ಕೆಂಪಾದ ಮಹಾ ಘಟಸರ್ಪವೊಂದು ಅಲ್ಲಿತ್ತು. ಆ ಘಟಸರ್ಪಕ್ಕೆ ಏಳು ತಲೆಗಳಿದ್ದು, ಪ್ರತಿಯೊಂದು ತಲೆಯ ಮೇಲೂ ಏಳು ಕಿರೀಟಗಳಿದ್ದವು. ಆ ಸರ್ಪಕ್ಕೆ ಹತ್ತು ಕೊಂಬುಗಳಿದ್ದವು.


ಆಗ ಮತ್ತೊಂದು ಕುದುರೆಯು ಹೊರಗೆ ಬಂದಿತು. ಇದು ಕೆಂಪು ಕುದುರೆಯಾಗಿತ್ತು. ಈ ಕುದುರೆಯ ಮೇಲೆ ಕುಳಿತಿದ್ದ ಸವಾರನಿಗೆ ಲೋಕದಲ್ಲಿದ್ದ ಶಾಂತಿಯನ್ನು ತೆಗೆದುಹಾಕಲೂ ಜನರು ಒಬ್ಬರನ್ನೊಬ್ಬರು ಕೊಲ್ಲುವಂತೆ ಮಾಡಲೂ ಅವನಿಗೆ ಅಧಿಕಾರವನ್ನು ನೀಡಲಾಗಿತ್ತು. ಈ ಸವಾರನಿಗೆ ಒಂದು ಮಹಾಖಡ್ಗವನ್ನೂ ಕೊಡಲಾಗಿತ್ತು.


ದೇವದಾರು ಮರಗಳು ಬೀಳುವಾಗ ಓಕ್ ಮರಗಳು ರೋದಿಸುವವು. ಆ ಬಲವಾದ ಮರಗಳನ್ನು ತೆಗೆದುಕೊಂಡು ಹೋಗಲಾಗುವುದು. ಅಡವಿಯು ಕಡಿದುಹಾಕಲ್ಪಟ್ಟಿದ್ದಕ್ಕಾಗಿ ಬಾಷಾನಿನ ಶ್ರೇಷ್ಠ ವೃಕ್ಷಗಳು ದುಃಖಿಸುವವು.


ಮೊದಲನೇ ರಥವನ್ನು ಕೆಂಪು ಕುದುರೆಗಳು ಎಳೆಯುತ್ತಿದ್ದವು. ಎರಡನೇ ರಥವನ್ನು ಕಪ್ಪು ಕುದುರೆಗಳು ಎಳೆಯುತ್ತಿದ್ದವು.


ರಾತ್ರಿವೇಳೆಯಲ್ಲಿ ಒಬ್ಬ ಮನುಷ್ಯನು ಕೆಂಪು ಬಣ್ಣದ ಕುದುರೆಯ ಮೇಲೆ ಸವಾರಿ ಮಾಡುವದನ್ನು ಕಂಡೆನು. ಅವನು ಕಣಿವೆಯ ಸುಗಂಧ ಮರಗಳ ಬಳಿ ನಿಂತಿದ್ದನು. ಅವನ ಹಿಂದೆ ಕೆಂಪು, ಕಂದು ಮತ್ತು ಬಿಳಿ ಕುದುರೆಗಳು ನಿಂತಿದ್ದವು.


ನೀನು ದುಷ್ಟ ಅರಸನಾಗಿದ್ದೆ, ಈಗ ನಿನಗೆ ಅಂತ್ಯವು ಬಂತು. ತುರಾಯಿ ಮರಗಳೂ ಲೆಬನೋನಿನ ದೇವದಾರು ವೃಕ್ಷಗಳೂ ಹರ್ಷಗೊಂಡಿವೆ. ಆ ಮರಗಳು ಹೀಗೆ ಹೇಳುತ್ತಿವೆ: ಅರಸನು ನಮ್ಮನ್ನು ಕಡಿದುರುಳಿಸಿದನು. ಈಗ ಅರಸನೇ ಉರುಳಿಬಿದ್ದಿದ್ದಾನೆ. ಅವನು ಮತ್ತೆಂದಿಗೂ ಏಳುವುದಿಲ್ಲ.


ಕುದುರೆಯ ಪಾರ್ಶ್ವದಲ್ಲಿ ಬತ್ತಳಿಕೆಯು ಅಲುಗಾಡುವುದು. ಕುದುರೆಸವಾರನು ಕೊಂಡೊಯ್ಯುತ್ತಿರುವ ಬರ್ಜಿ ಮತ್ತು ಆಯುಧಗಳು ಸೂರ್ಯನ ಬೆಳಕಿನಲ್ಲಿ ಹೊಳೆಯುತ್ತವೆ.


ಅವರು ನಿನ್ನ ವಿರುದ್ಧವಾಗಿ ರಥಗಳಲ್ಲಿಯೂ ಅರಸರೂಢರಾಗಿಯೂ ಅಂತರಾಷ್ಟ್ರೀಯ ಸೈನ್ಯವಾಗಿ ಬರುವರು. ಅವರ ಕೈಯಲ್ಲಿ ಬರ್ಜಿ, ಗುರಾಣಿ, ಶಿರಸ್ತ್ರಾಣಗಳಿರುವವು. ಅವರು ನಿನ್ನನ್ನು ಸುತ್ತುವರಿಯುವರು. ನೀನು ನನಗೆ ಏನು ಮಾಡಿದ್ದೀ ಎಂದು ನಾನು ಹೇಳಿದಾಗ ಅವರು ತಮ್ಮ ಇಷ್ಟಪ್ರಕಾರ ನಿನ್ನನ್ನು ಶಿಕ್ಷಿಸುವರು.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಉತ್ತರ ದಿಕ್ಕಿನಿಂದ ಒಬ್ಬ ಶತ್ರುವನ್ನು ನಾನು ತೂರಿಗೆ ವಿರುದ್ಧವಾಗಿ ಬರಮಾಡುವೆನು. ಅವನೇ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು. ಅವನು ಲೆಕ್ಕವಿಲ್ಲದಷ್ಟು ಕುದುರೆ ಸವಾರರು, ರಥಗಳು, ಕಾಲ್ಬಲವುಳ್ಳ ದೊಡ್ಡ ಸೈನ್ಯವನ್ನು ತೆಗೆದುಕೊಂಡು ಬರುವನು. ಅವನ ಸೈನಿಕರೆಲ್ಲಾ ಬೇರೆಬೇರೆ ಜನಾಂಗದವರು.


ಚಾವಟಿಯ ಚಟಾರವೆಂಬ ಶಬ್ಧವನ್ನು ನೀನು ಕೇಳಬಹುದು. ಚಕ್ರಗಳ ತಿರುಗುವ ಶಬ್ಧ, ಕುದುರೆಗಳ ನಾಗಾಲೋಟವನ್ನು ಮತ್ತು ರಥಗಳ ಹಾರಾಟವನ್ನು ನೀವು ನೋಡಬಹುದು.


ಕಾಡುಹಂದಿಗಳು ಬಂದು ನಿನ್ನ “ದ್ರಾಕ್ಷಾಲತೆ”ಯ ಮೇಲೆ ನಡೆಯುತ್ತವೆ. ಕಾಡುಪ್ರಾಣಿಗಳು ಬಂದು ಅವುಗಳ ಎಲೆಗಳನ್ನು ತಿನ್ನುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು