Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನಹೂಮ 2:5 - ಪರಿಶುದ್ದ ಬೈಬಲ್‌

5 ವೈರಿಗಳು ತಮ್ಮ ಶೂರ ಯೋಧರನ್ನು ಕರೆಯುತ್ತಿದ್ದಾರೆ. ಅವರು ಮುನ್ನುಗ್ಗುವಾಗ ಎಡವಿಬೀಳುವರು, ಗೋಡೆಗಳ ಕಡೆಗೆ ನುಗ್ಗಿ ತಮ್ಮ ಗುರಾಣಿಗಳನ್ನು ಇಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಪಟ್ಟಣದ ಅರಸನು ತನ್ನ ಸರದಾರರನ್ನು ಕರೆಕಳುಹಿಸಿದ್ದಾನೆ; ಅವರು ಓಡಿ ಹೋಗುತ್ತಾ ಮುಗ್ಗರಿಸುತ್ತಾರೆ; ಪೌಳಿಗೋಡೆ ಕಡೆಗೆ ತ್ವರೆಯಾಗಿ ಓಡುತ್ತಾರೆ; ಮರೆಯು ನಿಲ್ಲಿಸಲ್ಪಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಹಾಜರಾಗಲು ಕರೆಬಂದಿದೆ ಅರಸನಿಂದ ಸೇನಾಪತಿಗಳಿಗೆ; ಎದ್ದುಬಿದ್ದು ಓಡಾಡುತ್ತಿರೆ ಅವರು ಪೌಳಿಗೋಡೆ ಕಡೆಗೆ ಅಡ್ಡ ಗುರಾಣಿಗಳನ್ನೊಡ್ಡುತ್ತಿರೆ ಟಗರು ದಿಮ್ಮಿಗಳಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 [ಪಟ್ಟಣದ] ಅರಸನು ತನ್ನ ಸರದಾರರನ್ನು ಸ್ಮರಿಸುತ್ತಾನೆ; ಹೋಗುತ್ತಾ ಮುಗ್ಗರಿಸುತ್ತಾರೆ; ಪೌಳಿಗೋಡೆಗೆ ಓಡುತ್ತಾರೆ; ಮರೆಯು ನಿಲ್ಲಿಸಲ್ಪಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಿನೆವೆಯು ತನ್ನ ಸೇನಾಪತಿಗಳನ್ನು ಕರೆಕಳುಹಿಸಿದ್ದಾನೆ. ಅವರು ತಮ್ಮ ನಡೆಯಲ್ಲಿ ಎಡವುವರು. ಅವರು ಸುಣ್ಣದ ಗೋಡೆಯ ಬಳಿಗೆ ತ್ವರೆಯಾಗಿ ಬರುವರು. ರಕ್ಷಣಾತ್ಮಕ ಗುರಾಣಿಯನ್ನು ಸಿದ್ಧ ಮಾಡಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನಹೂಮ 2:5
9 ತಿಳಿವುಗಳ ಹೋಲಿಕೆ  

ಬೇರೆ ಜನಾಂಗಗಳು ನೀನು ಗೋಳಾಡುವದನ್ನು ಕೇಳಿಸಿಕೊಳ್ಳುವವು. ನಿನ್ನ ಗೋಳಾಟವು ಇಡೀ ಭೂಮಂಡಲದಲ್ಲೆಲ್ಲ ಕೇಳಿಸುವುದು. ‘ಒಬ್ಬ ಶೂರ ಸೈನಿಕನು’ ಮತ್ತೊಬ್ಬ ‘ಶೂರ ಸೈನಿಕನನ್ನು’ ಎದುರಿಸುವನು. ಆ ಶೂರ ಸೈನಿಕರಿಬ್ಬರೂ ಒಟ್ಟಿಗೆ ನೆಲಕ್ಕೆ ಬೀಳುವರು.”


ಅಶ್ಶೂರದ ಅರಸನೇ, ನಿನ್ನ ಕುರುಬರು ನಿದ್ರಿಸುತ್ತಿದ್ದಾರೆ. ಆ ಬಲಾಢ್ಯ ಕುರುಬರು ನಿದ್ರೆ ಮಾಡುತ್ತಿದ್ದಾರೆ. ನಿನ್ನ ಕುರಿಗಳು ಬೆಟ್ಟಗಳ ಮೇಲೆ ಚದರಿಹೋಗಿವೆ. ಅವುಗಳನ್ನು ಹಿಂತಿರುಗಿಸಿ ಒಟ್ಟುಗೂಡಿಸಲು ಯಾರೂ ಇಲ್ಲ.


ಕುದುರೆಗಳ ಮೇಲಿರುವ ಸೈನಿಕರು ಆಕ್ರಮಣವೆಸಗಿದ್ದಾರೆ. ಅವರ ಖಡ್ಗವು ಮಿಂಚುತ್ತದೆ. ಅವರ ಬರ್ಜಿಯು ಹೊಳೆಯುತ್ತದೆ, ಬಹು ಮಂದಿ ಸತ್ತಿರುತ್ತಾರೆ. ಶವಗಳ ರಾಶಿ ಬಿದ್ದಿವೆ, ಅವು ಲೆಕ್ಕವಿಲ್ಲದಷ್ಟು ಇವೆ. ಅವುಗಳ ಮೇಲೆ ಜನರು ಎಡವಿಬೀಳುತ್ತಾರೆ.


“ಬಾಬಿಲೋನಿನ ಮೇಲೆ ಬಾಣ ಪ್ರಯೋಗ ಮಾಡಲು ಬಿಲ್ಲುಗಾರರಿಗೆ ಹೇಳಿರಿ. ಆ ಜನರಿಗೆ ನಗರವನ್ನು ಮುತ್ತಲು ಹೇಳಿರಿ. ಯಾರೂ ತಪ್ಪಿಸಿಕೊಂಡು ಹೋಗದಂತೆ ನೋಡಿಕೊಳ್ಳಿ. ಅದು ಮಾಡಿದ ದುಷ್ಕೃತ್ಯಗಳಿಗಾಗಿ ಮುಯ್ಯಿತೀರಿಸಿರಿ. ಬೇರೆ ಜನಾಂಗಗಳಿಗೆ ಅದು ಮಾಡಿದಂತೆ ಅದಕ್ಕೆ ಮಾಡಿರಿ. ಬಾಬಿಲೋನ್ ಯೆಹೋವನನ್ನು ಗೌರವಿಸಲಿಲ್ಲ. ಪರಿಶುದ್ಧನಿಗೆ ಅವಮಾನ ಮಾಡಿದೆ. ಆದ್ದರಿಂದ ಬಾಬಿಲೋನನ್ನು ಶಿಕ್ಷಿಸಬೇಕು.


ಜನರಾದರೋ, “ಊಟ ಬಡಿಸಿರಿ! ತಿನ್ನೋಣ, ಕುಡಿಯೋಣ” ಎಂದು ಹೇಳುತ್ತಿದ್ದಾರೆ. ಅದೇ ಸಮಯದಲ್ಲಿ ಸೈನಿಕರು, “ಕಾವಲುಗಾರರನ್ನು ಇರಿಸಿರಿ, ಸೇನಾಪತಿಗಳೇ ಎದ್ದೇಳಿರಿ, ನಿಮ್ಮ ಗುರಾಣಿಗಳನ್ನು ಉಜ್ಜಿ ನಯಗೊಳಿಸಿರಿ” ಎಂದು ಹೇಳುತ್ತಿದ್ದಾರೆ.


ಶತ್ರುಗಳು ಆಯಾಸಗೊಳ್ಳುವುದಿಲ್ಲ, ನೆಲಕ್ಕೆ ಬೀಳುವುದಿಲ್ಲ. ಅವರು ತೂಕಡಿಸುವುದಿಲ್ಲ, ನಿದ್ರೆ ಮಾಡುವುದಿಲ್ಲ. ಅವರ ಸೊಂಟಪಟ್ಟಿಯು ಆಯುಧದೊಂದಿಗೆ ಯಾವಾಗಲೂ ಸಿದ್ಧವಾಗಿರುವುದು. ಅವರ ಪಾದರಕ್ಷೆಗಳ ದಾರವು ಎಂದಿಗೂ ತುಂಡಾಗುವದಿಲ್ಲ.


ಆದರೆ ಹೊಳೆಯ ಕದಗಳು ತೆರೆಯಲ್ಪಟ್ಟಿವೆ. ಅದರ ಮೂಲಕ ವೈರಿಗಳು ಮುನ್ನುಗ್ಗುತ್ತಿದ್ದಾರೆ. ಅರಸನ ಮನೆಯನ್ನು ನಾಶಮಾಡುತ್ತಿದ್ದಾರೆ.


ಅವರ ಕುದುರೆಗಳು ಚಿರತೆಗಳಿಗಿಂತ ವೇಗವಾಗಿವೆ; ಸೂರ್ಯಸ್ತಮಾನ ಕಾಲದಲ್ಲಿ ತೋಳಗಳಿಗಿಂತ ಭಯಂಕರವಾಗಿವೆ. ಅವರ ರಾಹುತರು ಬಹುದೂರ ದೇಶದಿಂದ ಬಂದರು. ಹಸಿದ ಗಿಡುಗ ಹೇಗೆ ಆಕಾಶದಿಂದ ನೆಲದ ಮೇಲಿರುವ ಆಹಾರದ ಮೇಲೆ ಬೀಳುತ್ತದೋ ಅದೇ ರೀತಿಯಲ್ಲಿ ಅವರ ರಾಹುತರು ವೈರಿಗಳ ಮೇಲೆ ಬೀಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು