Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನಹೂಮ 3:18 - ಪರಿಶುದ್ದ ಬೈಬಲ್‌

18 ಅಶ್ಶೂರದ ಅರಸನೇ, ನಿನ್ನ ಕುರುಬರು ನಿದ್ರಿಸುತ್ತಿದ್ದಾರೆ. ಆ ಬಲಾಢ್ಯ ಕುರುಬರು ನಿದ್ರೆ ಮಾಡುತ್ತಿದ್ದಾರೆ. ನಿನ್ನ ಕುರಿಗಳು ಬೆಟ್ಟಗಳ ಮೇಲೆ ಚದರಿಹೋಗಿವೆ. ಅವುಗಳನ್ನು ಹಿಂತಿರುಗಿಸಿ ಒಟ್ಟುಗೂಡಿಸಲು ಯಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅಶ್ಶೂರದ ಅರಸನೇ, ನಿನ್ನ ದೇಶಪಾಲಕರು ದೀರ್ಘ ನಿದ್ರೆ ಮಾಡುತ್ತಿದ್ದಾರೆ; ನಿನ್ನ ಮಹನೀಯರು ದೀರ್ಘನಿದ್ದೆಯಲ್ಲಿದ್ದಾರೆ; ನಿನ್ನ ಪ್ರಜೆಗಳು ಬೆಟ್ಟಗಳಲ್ಲಿ ಚದರಿದ್ದಾರೆ, ಅವರನ್ನು ಕೂಡಿಸುವವರು ಯಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 “ಅಸ್ಸೀರಿಯಾದ ಅರಸನೇ, ನಿನ್ನ ರಾಜ್ಯಪಾಲರು ದೀರ್ಘನಿದ್ರೆಯಲ್ಲಿದ್ದಾರೆ. ನಿನ್ನ ಪ್ರಮುಖರು ಜಡವಾಗಿ ಬಿದ್ದಿದ್ದಾರೆ. ನಿನ್ನ ಪ್ರಜೆಗಳು ಬೆಟ್ಟಗುಡ್ಡಗಳಲ್ಲಿ ಚದರಿಹೋಗಿದ್ದಾರೆ. ಅವರನ್ನು ಒಟ್ಟುಗೂಡಿಸತಕ್ಕವರು ಯಾರೂ ಇಲ್ಲದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅಶ್ಶೂರದ ಅರಸನೇ, ನಿನ್ನ ದೇಶಪಾಲಕರು ದೀರ್ಘನಿದ್ರೆಮಾಡುತ್ತಿದ್ದಾರೆ; ನಿನ್ನ ಮಹನೀಯರು ಒರಗಿಹೋಗಿದ್ದಾರೆ; ನಿನ್ನ ಪ್ರಜೆಗಳು ಬೆಟ್ಟಗಳಲ್ಲಿ ಚದರಿದ್ದಾರೆ, ಅವರನ್ನು ಕೂಡಿಸತಕ್ಕವರು ಯಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅಸ್ಸೀರಿಯದ ಅರಸನೇ, ನಿನ್ನ ಕುರುಬರು ತೂಕಡಿಸುತ್ತಾರೆ. ನಿನ್ನ ಪ್ರಧಾನರು ವಿಶ್ರಾಂತಿಗೈಯುತ್ತಿದ್ದಾರೆ. ಕೂಡಿಸುವವರು ಯಾರೂ ಇಲ್ಲದಂತೆ ನಿನ್ನ ಜನರೆಲ್ಲರೂ ಬೆಟ್ಟಗಳಲ್ಲಿ ಚದರಿಹೋಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನಹೂಮ 3:18
13 ತಿಳಿವುಗಳ ಹೋಲಿಕೆ  

ಮೀಕಾಯೆಹು, “ಮುಂದೆ ಸಂಭವಿಸುವುದು ನನಗೆ ಕಾಣುತ್ತಿದೆ. ಇಸ್ರೇಲಿನ ಸೈನ್ಯವು ಬೆಟ್ಟಗಳ ಮೇಲೆ ಚೆಲ್ಲಾಪಿಲ್ಲಿಯಾಗಿ ಕುರುಬನಿಲ್ಲದ ಕುರಿಗಳಂತಾಗಿದೆ. ಯೆಹೋವನು ಹೇಳುವುದು ಇದನ್ನೇ, ‘ಈ ಜನರಿಗೆ ನಾಯಕನಿಲ್ಲ. ಅವರು ಯುದ್ಧಮಾಡದೆ, ಮನೆಗೆ ಹೋಗಬೇಕು’” ಎಂದು ಹೇಳಿದನು.


ಬಾಬಿಲೋನಿನ ಮುಖ್ಯ ಅಧಿಕಾರಿಗಳಿಗೂ ಪಂಡಿತರಿಗೂ ದ್ರಾಕ್ಷಾರಸ ಕುಡಿಯುವಂತೆ ಮಾಡುತ್ತೇನೆ. ಅಲ್ಲಿಯ ಅಧಿಪತಿಗಳಿಗೂ ಅಧಿಕಾರಿಗಳಿಗೂ ಸೈನಿಕರಿಗೂ ದ್ರಾಕ್ಷಾರಸ ಕುಡಿಸುತ್ತೇನೆ. ಆಮೇಲೆ ಅವರು ಶಾಶ್ವತವಾಗಿ ಮಲಗಿಬಿಡುತ್ತಾರೆ. ಅವರು ಎಚ್ಚರಗೊಳ್ಳುವುದೇ ಇಲ್ಲ.” ಸರ್ವಶಕ್ತನಾದ ಯೆಹೋವನೆಂಬ ನಾಮಧೇಯದ ರಾಜಾಧಿರಾಜನ ನುಡಿಯಿದು.


ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆಂದನು: ‘ನಾನು ಬಾಬಿಲೋನಿನ ರಾಜನನ್ನು ಮತ್ತು ಅವನ ದೇಶವನ್ನು ಬಹುಬೇಗ ದಂಡಿಸುವೆನು. ಅಶ್ಶೂರದ ರಾಜನನ್ನು ದಂಡಿಸಿದಂತೆ ನಾನು ಅವನನ್ನು ದಂಡಿಸುವೆನು.


ಆಗ ಗಾಯಗೊಂಡ ಜಿಂಕೆಯಂತೆ ಬಾಬಿಲೋನು ಓಡಿಹೋಗುವದು. ಅವರು ಕುರುಬನಿಲ್ಲದ ಕುರಿಗಳಂತೆ ಚದರಿ ಹೋಗುವರು. ಪ್ರತಿಯೊಬ್ಬನು ಹಿಂದಿರುಗಿ ತನ್ನ ದೇಶಕ್ಕೂ ತನ್ನ ಜನರ ಬಳಿಗೂ ಓಡುವನು.


ಆಗ ಲೋಕದ ರಾಜರುಗಳೂ ಅಧಿಪತಿಗಳೂ ಸೇನಾಧಿಪತಿಗಳೂ ಶ್ರೀಮಂತರೂ ಬಲಿಷ್ಠರೂ ಪ್ರತಿಯೊಬ್ಬ ಗುಲಾಮನೂ ಸ್ವತಂತ್ರ ಪ್ರಜೆಯೂ ಗವಿಗಳಲ್ಲಿ ಮತ್ತು ಬೆಟ್ಟಗಳ ಮೇಲಿನ ಬಂಡೆಗಳ ಮರೆಯಲ್ಲಿ ಅಡಗಿಕೊಂಡರು.


ಆ ಜನರು ಬಲಶಾಲಿಗಳಾದ ಸಿಂಹಗಳಂತೆ ವರ್ತಿಸುತ್ತಿದ್ದಾರೆ. ನಾನು ಅವರಿಗೊಂದು ಔತಣವನ್ನೇರ್ಪಡಿಸುವೆನು. ಅವರಿಗೆ ಮತ್ತೇರುವಂತೆ ಕುಡಿಸುವೆನು. ಅವರು ನಗುನಗುತ್ತಾ ಸಂತೋಷದಿಂದ ಕಾಲ ಕಳೆಯುವರು. ಆಮೇಲೆ ಅವರು ಶಾಶ್ವತವಾಗಿ ಮಲಗುವರು. ಅವರು ಮತ್ತೆ ಏಳಲಾರರು.” ಇದು ಯೆಹೋವನ ನುಡಿ.


“ಕನ್ನಿಕೆಯೇ, ಬಾಬಿಲೋನಿನ ಕುಮಾರಿಯೇ ಕೆಳಕ್ಕಿಳಿದು ಧೂಳಿನ ಮೇಲೆ ಕುಳಿತಿಕೊ. ಕಸ್ದೀಯರ ಕುಮಾರಿಯೇ, ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಳಿತುಕೊ! ಈಗ ನೀನು ಯಜಮಾನಿಯಲ್ಲ. ನೀನು ಕೋಮಲವಾದ ತರುಣಿ ಎಂದು ಜನರು ನಿನ್ನ ಬಗ್ಗೆ ಹೇಳುವದಿಲ್ಲ.


ನಿನ್ನ ಭುಜಬಲವನ್ನು ಅವರು ಕಂಡು ಭಯಭೀತರಾಗುವರು. ಯೆಹೋವನ ಜನರು ದಾಟಿ ಹೋಗುವವರೆಗೆ, ನೀನು ರೂಪಿಸಿದ ಜನರು ದಾಟಿ ಹೋಗುವವರೆಗೆ, ಅವರು ಬಂಡೆಯಂತೆ ಮೌನವಾಗಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು