Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 1:3 - ಪರಿಶುದ್ದ ಬೈಬಲ್‌

3 ಆಗ ಹನಾನೀ ಮತ್ತು ಅವನ ಜೊತೆಗಾರರು, “ನೆಹೆಮೀಯನೇ, ಸೆರೆಯಿಂದ ತಪ್ಪಿಸಿಕೊಂಡು ಯೆಹೂದ ಪ್ರಾಂತ್ಯಕ್ಕೆ ಹೋಗಿರುವವರು ತುಂಬಾ ಶೋಚನೀಯ ಸ್ಥಿತಿಯಲ್ಲಿದ್ದಾರೆ. ಅವರು ಅನೇಕ ಸಮಸ್ಯೆಗಳಲ್ಲಿ ಸಿಕ್ಕಿಕೊಂಡು ಅವಮಾನಕ್ಕೀಡಾಗಿದ್ದಾರೆ. ಯಾಕೆಂದರೆ ಜೆರುಸಲೇಮಿನ ಪೌಳಿಗೋಡೆಗಳು ಕೆಡವಲ್ಪಟ್ಟಿವೆ; ಅದರ ಬಾಗಿಲುಗಳೆಲ್ಲಾ ಸುಟ್ಟುಹೋಗಿವೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರು ನನಗೆ, “ಸೆರೆಯವರೊಳಗಿಂದ ತಪ್ಪಿಸಿಕೊಂಡು ಬಂದು ಆ ಸಂಸ್ಥಾನದಲ್ಲಿ ವಾಸಿಸುತ್ತಿರುವವರು ಮಹಾ ಕಷ್ಟನಿಂದೆಗಳಿಗೆ ಒಳಗಾಗಿದ್ದಾರೆ; ಯೆರೂಸಲೇಮಿನ ಪೌಳಿಗೋಡೆಯು ಕೆಡವಲ್ಪಟ್ಟಿದೆ; ಅದರ ಬಾಗಿಲುಗಳು ಬೆಂಕಿಯಿಂದ ಸುಡಲ್ಪಟ್ಟಿವೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅವರು ನನಗೆ, “ಸೆರೆಯಿಂದ ತಪ್ಪಿಸಿಕೊಂಡು ಈಗ ಆ ನಾಡಿನಲ್ಲಿ ವಾಸಿಸುತ್ತಿರುವವರು ಮಹಾಕಷ್ಟನಿಂದೆಗಳಿಗೆ ಒಳಗಾಗಿದ್ದಾರೆ. ಜೆರುಸಲೇಮಿನ ಪೌಳಿಗೋಡೆಯನ್ನು ಕೆಡವಲಾಗಿದೆ. ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವರು ನನಗೆ - ಸೆರೆಯವರೊಳಗೆ ತಪ್ಪಿಸಿಕೊಂಡು ಆ ಸಂಸ್ಥಾನದಲ್ಲಿ ವಾಸಿಸುತ್ತಿರುವವರು ಮಹಾ ಕಷ್ಟನಿಂದೆಗಳಿಗೆ ಒಳಗಾಗಿದ್ದಾರೆ; ಯೆರೂಸಲೇವಿುನ ಪೌಳಿಗೋಡೆಯು ಕೆಡವಲ್ಪಟ್ಟಿರುತ್ತದೆ; ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟಿರುತ್ತವೆ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವರು ನನಗೆ, “ಸೆರೆಯಿಂದ ತಪ್ಪಿಸಿಕೊಂಡು ಈಗ ಆ ನಾಡಿನಲ್ಲಿ ವಾಸಿಸುತ್ತಿರುವವರು ಮಹಾ ಕಷ್ಟ ನಿಂದೆಗಳಿಗೆ ಒಳಗಾಗಿದ್ದಾರೆ. ಯೆರೂಸಲೇಮಿನ ಪೌಳಿಗೋಡೆಯನ್ನು ಕೆಡವಲಾಗಿದೆ. ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 1:3
33 ತಿಳಿವುಗಳ ಹೋಲಿಕೆ  

ಆಮೇಲೆ ನಾನು ಎಲ್ಲಾ ಜನರಿಗೆ, “ನಮ್ಮ ದುರವಸ್ಥೆಯನ್ನು ನೀವು ನೋಡುತ್ತಿದ್ದೀರಿ. ಜೆರುಸಲೇಮ್ ಒಂದು ಹಾಳು ದಿಬ್ಬವಾಗಿದೆ; ಅದರ ಬಾಗಿಲುಗಳು ಸುಟ್ಟು ಬೂದಿಯಾಗಿವೆ. ಬನ್ನಿರಿ, ನಾವು ಜೆರುಸಲೇಮಿನ ಪೌಳಿಗೋಡೆಗಳನ್ನು ತಿರುಗಿ ಕಟ್ಟೋಣ. ಆಗ ನಾವು ಇನ್ನೆಂದಿಗೂ ನಾಚಿಕೆಗೆ ಗುರಿಯಾಗುವುದಿಲ್ಲ” ಎಂದು ಹೇಳಿದೆನು.


ನಂತರ ನೆಬೂಜರದಾನನೊಂದಿಗಿದ್ದ ಬಾಬಿಲೋನ್ ಸೈನ್ಯವು ಜೆರುಸಲೇಮಿನ ಸುತ್ತಲೂ ಇದ್ದ ಗೋಡೆಯನ್ನು ಕೆಡವಿಹಾಕಿತು.


ಬಹಳ ಕಾಲದ ಹಿಂದೆ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಇವರನ್ನು ಸೆರೆಯಾಳುಗಳನ್ನಾಗಿ ಬಾಬಿಲೋನಿಗೆ ಒಯ್ದಿದ್ದನು. ಇವರು ಹಿಂದೆ ಜೆರುಸಲೇಮಿಗೂ ಯೆಹೂದ ಪ್ರಾಂತ್ಯಕ್ಕೂ ಹಿಂತಿರುಗಿ ತಮ್ಮತಮ್ಮ ಊರುಗಳಿಗೆ ಹೋಗಿ ನೆಲೆಸಿದರು.


ಕತ್ತಲೆಯಲ್ಲಿಯೇ ಕಣಿವೆಯ ಬಾಗಿಲಿನ ಮೂಲಕ ಹೊರಟು ಕೆಡವಲ್ಪಟ್ಟಿದ್ದ ಜೆರುಸಲೇಮಿನ ಗೋಡೆಗಳನ್ನು, ಸುಟ್ಟುಹೋಗಿರುವ ಅದರ ಬಾಗಿಲುಗಳನ್ನು ನೋಡುತ್ತಾ ಹೆಬ್ಬಾವು ಬಾವಿಯ ಬಳಿಗೂ ತಿಪ್ಪೆಬಾಗಿಲಿನ ಬಳಿಗೂ ಸವಾರಿಮಾಡಿಕೊಂಡು ಬಂದೆನು.


ನಾನು ಭಯದಿಂದಲೇ, “ಅರಸನೇ ಚಿರಂಜೀವಿಯಾಗಿರು. ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವು ಹಾಳುದಿಬ್ಬವಾಗಿರುವುದರಿಂದ ನಾನು ದುಃಖಿತನಾಗಿದ್ದೇನೆ; ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ” ಅಂದೆನು.


ರಾಜನೇ, ನಾವು ಯೆಹೂದ ಪ್ರಾಂತ್ಯವನ್ನು ಸಂದರ್ಶಿಸಿದ್ದೇವೆಂದು ನಿಮಗೆ ತಿಳಿಸುತ್ತೇವೆ. ಅಲ್ಲಿ ಮಹೋನ್ನತ ದೇವರ ಆಲಯವನ್ನು ನೋಡಿದೆವು. ಯೆಹೂದ ಪ್ರಾಂತ್ಯದ ಜನರು ದೊಡ್ಡ ಕಲ್ಲುಗಳಿಂದ ದೇವಾಲಯವನ್ನು ಕಟ್ಟುತ್ತಿದ್ದಾರೆ. ದೊಡ್ಡದೊಡ್ಡ ಮರದ ತೊಲೆಗಳನ್ನು ಗೋಡೆಯ ಮೇಲೆ ಕುಳ್ಳಿರಿಸಿದ್ದಾರೆ. ಯೆಹೂದ ಪ್ರಾಂತ್ಯದ ಜನರು ಜಾಗರೂಕತೆಯಿಂದಲೂ ತುಂಬ ಪ್ರಯಾಸದಿಂದಲೂ ಕಾರ್ಯವನ್ನು ನಡಿಸುತ್ತಿದ್ದಾರೆ. ಬಹಳ ವೇಗವಾಗಿ ಕೆಲಸ ಮುಂದುವರಿಯುತ್ತಿರುವದರಿಂದ ದೇವಾಲಯವು ಬೇಗನೆ ಸಂಪೂರ್ಣವಾಗಬಹುದು.


ಯೆಹೋವನೇ, ನಮಗೆ ಸಂಭವಿಸಿದ್ದನ್ನು ಜ್ಞಾಪಿಸಿಕೊ. ನಮಗಾಗಿರುವ ಅವಮಾನವನ್ನು ನೋಡು.


ಯೆಹೋವನೇ, ಅವರು ನನಗಾಡುವ ಗೇಲಿ ಮಾತನ್ನು ಕೇಳು. ಅವರು ನನ್ನ ವಿರುದ್ಧ ಮಾಡಿದ ಎಲ್ಲಾ ಯೋಜನೆಗಳನ್ನು ಕೇಳು.


ಜೆರುಸಲೇಮ್ ಹಿಂದಿನ ದಿನಗಳ ಬಗ್ಗೆ ಯೋಚಿಸುತ್ತಾಳೆ; ತಾನು ಮನೆಯನ್ನು ಕಳೆದುಕೊಂಡ ಮತ್ತು ಹಿಂಸೆಗೊಳಗಾದ ಕಾಲವನ್ನು ಜ್ಞಾಪಿಸಿಕೊಳ್ಳುತ್ತಾಳೆ. ಹಿಂದೆ ಅವಳಿಗಿದ್ದ ಎಲ್ಲ ಭೋಗ್ಯ ವಸ್ತುಗಳನ್ನು ಅವಳು ಜ್ಞಾಪಿಸಿಕೊಳ್ಳುತ್ತಾಳೆ. ಹಳೆಯ ಕಾಲದಲ್ಲಿ ಲಭ್ಯವಿದ್ದ ಎಲ್ಲ ಉತ್ತಮ ವಸ್ತುಗಳನ್ನು ಅವಳು ಸ್ಮರಿಸಿಕೊಳ್ಳುತ್ತಾಳೆ. ತನ್ನ ಜನರನ್ನು ವೈರಿಗಳು ವಶಪಡಿಸಿಕೊಂಡ ಸಂಗತಿಯನ್ನು ಅವಳು ಸ್ಮರಿಸುತ್ತಾಳೆ. ಆಗ ತನಗೆ ಸಹಾಯ ಮಾಡಲು ಯಾರೂ ಇರಲಿಲ್ಲವೆಂಬುದನ್ನು ಅವಳು ಜ್ಞಾಪಿಸಿಕೊಳ್ಳುತ್ತಾಳೆ. ಅವಳ ಶತ್ರುಗಳು ಅವಳನ್ನು ನೋಡಿ ನಕ್ಕರು. ಅವಳು ಹಾಳಾದುದನ್ನು ನೋಡಿ ಅವರು ನಕ್ಕರು.


ಬಾಬಿಲೋನಿನ ಇಡೀ ಸೈನ್ಯವು ಜೆರುಸಲೇಮಿನ ಪೌಳಿಗೋಡೆಯನ್ನು ಒಡೆದುಹಾಕಿತು. ಆ ಸೈನ್ಯವು ರಾಜನ ವಿಶೇಷ ರಕ್ಷಕದಳದ ಅಧಿಪತಿಯ ಅಧಿನದಲ್ಲಿತ್ತು.


“ಸರ್ವಶಕ್ತನೂ ಇಸ್ರೇಲರ ದೇವರೂ ಆಗಿರುವ ಯೆಹೋವನು ಹೀಗೆಂದನು: ‘ನಾನು ಜೆರುಸಲೇಮಿನ ಮೇಲೆ ನನ್ನ ಕೋಪವನ್ನು ತೋರಿಸಿದೆ. ಜೆರುಸಲೇಮಿನಲ್ಲಿ ವಾಸಿಸುವ ಜನರನ್ನು ನಾನು ದಂಡಿಸಿದೆ. ಅದೇ ರೀತಿ, ಈಜಿಪ್ಟಿಗೆ ಹೋಗುವವರೆಲ್ಲರ ಮೇಲೂ ನಾನು ನನ್ನ ಕೋಪವನ್ನು ತೋರಿಸುವೆನು. ಬೇರೆಯವರಿಗೆ ಕೆಟ್ಟದಾಗಲಿ ಎಂದು ಹೇಳಬೇಕಾದಾಗ ಜನರು ನಿಮ್ಮಂತೆ ಆಗಲಿ ಎಂದು ನಿಮ್ಮ ಉದಾಹರಣೆಯನ್ನು ಕೊಡುವರು. ನೀವು ಒಂದು ಶಾಪದ ಶಬ್ದವಾಗುವಿರಿ. ಜನರು ನಿಮ್ಮಿಂದ ನಾಚಿಕೆಪಟ್ಟುಕೊಳ್ಳುವರು. ಜನರು ನಿಮ್ಮನ್ನು ಅಪಮಾನ ಮಾಡುವರು. ಯೆಹೂದವನ್ನು ಪುನಃ ನೀವು ಎಂದೂ ನೋಡುವದಿಲ್ಲ.’


ಬಾಬಿಲೋನಿನ ಸೈನಿಕರು ಅರಮನೆಗೂ ಮತ್ತು ಜೆರುಸಲೇಮಿನ ಉಳಿದ ನಿವಾಸಿಗಳ ಮನೆಗಳಿಗೂ ಬೆಂಕಿಯಿಟ್ಟರು. ಜೆರುಸಲೇಮಿನ ಗೋಡೆಗಳನ್ನು ಕೆಡವಿದರು.


ಇನ್ನೂ ಜೆರುಸಲೇಮಿನಲ್ಲಿರುವ ಜನರಿಗೆ ಖಡ್ಗ, ಹಸಿವು ಮತ್ತು ಭಯಂಕರವಾದ ವ್ಯಾಧಿಗಳಿಂದೊಡಗೂಡಿ ಬೆನ್ನಟ್ಟುವೆನು. ಆ ಜನರ ದುರ್ಗತಿಯನ್ನು ನೋಡಿ ಭೂಲೋಕದ ಸಮಸ್ತ ರಾಜ್ಯಗಳಿಗೆ ಭಯ ಉಂಟಾಗುವಂತೆ ಮಾಡುವೆನು. ಆ ಜನರನ್ನು ನಾಶಮಾಡುವೆನು. ನಡೆದ ವಿಷಯಗಳ ಬಗ್ಗೆ ಕೇಳಿ ಜನರು ಬೆರಗಾಗಿ ಸಿಳ್ಳುಹಾಕುವರು. ಯಾರಿಗಾದರೂ, ಕೇಡಾಗಲಿ ಎಂದು ಹೇಳಬೇಕಾದರೆ ಜನರು ಅವರ ಉದಾಹರಣೆಯನ್ನು ಕೊಡುವರು. ನಾನು ಅವರನ್ನು ಅಟ್ಟಿದ ಎಲ್ಲೆಡೆಯಲ್ಲಿಯೂ ಜನರು ಅವರನ್ನು ಅವಮಾನಗೊಳಿಸುವರು.


ನಾನು ಆ ಜನರನ್ನು ದಂಡಿಸುವೆನು. ಆ ಶಿಕ್ಷೆಯು ಭೂಲೋಕದ ಎಲ್ಲಾ ಜನರಲ್ಲಿ ಭೀತಿಯನ್ನು ಉಂಟು ಮಾಡುವುದು. ಜನರು ಯೆಹೂದದ ಜನರನ್ನು ಗೇಲಿಮಾಡುವರು. ನಾನು ಅವರನ್ನು ತಳ್ಳಿದ ಎಲ್ಲಾ ದೇಶಗಳಲ್ಲಿ ಜನರು ಅವರ ಬಗ್ಗೆ ಪರಿಹಾಸ್ಯದ ಮಾತುಗಳನ್ನು ಆಡುವರು; ಅವರನ್ನು ಶಪಿಸುವರು.


“ಯೆಹೂದದ ದ್ರಾಕ್ಷಿಯ ಸಾಲುಬಳ್ಳಿಗಳ ಬಳಿಗೆ ಹೋಗಿರಿ, ಆ ಬಳ್ಳಿಗಳನ್ನು ಕತ್ತರಿಸಿರಿ. ಆದರೆ ಅವುಗಳನ್ನು ಸಂಪೂರ್ಣವಾಗಿ ನಾಶಮಾಡಬೇಡಿರಿ. ಅವುಗಳ ಎಲ್ಲಾ ಕೊಂಬೆಗಳನ್ನು ಕತ್ತರಿಸಿಬಿಡಿ. ಏಕೆಂದರೆ, ಈ ಕೊಂಬೆಗಳು ಯೆಹೋವನಿಗೆ ಸಂಬಂಧಿಸಿಲ್ಲ.


ಪರಿಶುದ್ಧವಾಗಿ ಆಳುವ ನಿನ್ನವರನ್ನು ನಾನು ಅಪರಿಶುದ್ಧ ಮಾಡುವೆನು. ಯಾಕೋಬನನ್ನು ಸಂಪೂರ್ಣವಾಗಿ ನಾಶಮಾಡುವೆನು. ಇಸ್ರೇಲಿಗೆ ಕೆಟ್ಟ ವಿಷಯಗಳು ಸಂಭವಿಸುವವು.”


“ನಾನೀಗ ನನ್ನ ದ್ರಾಕ್ಷಿತೋಟಕ್ಕೆ ಏನು ಮಾಡುವೆನೆಂದು ತಿಳಿಸುವೆನು: ಅದರ ಸುತ್ತಲೂ ರಕ್ಷಣೆಗಾಗಿ ಹಾಕಿದ್ದ ಮುಳ್ಳಿನ ಬೇಲಿಯನ್ನು ಕಿತ್ತು ಸುಟ್ಟುಬಿಡುವೆನು. ಅದರ ಕಲ್ಲಿನ ಗೋಡೆಯನ್ನು ಕೆಡವಿ ತುಳಿದಾಟಕ್ಕೆ ಈಡುಮಾಡುವೆನು.


ನಮ್ಮ ನೆರೆಹೊರೆಯ ದೇಶಗಳವರು ನಮಗೆ ಅವಮಾನ ಮಾಡಿದರು. ನಮ್ಮ ಸುತ್ತಮುತ್ತಲಿನ ಜನರೆಲ್ಲರೂ ನಮ್ಮನ್ನು ನೋಡಿ ನಗುತ್ತಾ ಗೇಲಿ ಮಾಡಿದರು.


ಅಹಷ್ವೇರೋಷನು ರಾಜನಾಗಿದ್ದಾಗ ನಡೆದ ಘಟನೆ. ಹಿಂದೂಸ್ಥಾನದಿಂದ ಇಥಿಯೋಪ್ಯದ ತನಕ ನೂರಿಪ್ಪತ್ತೇಳು ಸಂಸ್ಥಾನಗಳನ್ನು ಅವನು ಆಳುತ್ತಿದ್ದನು.


ಜೆರುಸಲೇಮಿನಲ್ಲಿ ವಾಸಿಸಿದ ಪ್ರಾಂತ್ಯಾಧಿಕಾರಿಗಳ ಪಟ್ಟಿ, (ಕೆಲವು ಇಸ್ರೇಲ್ ಜನರು, ಯಾಜಕರು, ಲೇವಿಯರು, ಆಲಯದ ಸೇವಕರು ಮತ್ತು ಸೊಲೊಮೋನನ ಸೇವಕರ ಸಂತಾನದವರು ಯೆಹೂದ ಪ್ರಾಂತ್ಯದ ಊರುಗಳಲ್ಲಿ ವಾಸಿಸಿದರು. ಇವರೆಲ್ಲರು ತಮ್ಮ ಊರುಗಳಲ್ಲಿದ್ದ ತಮ್ಮ ಸ್ವಂತ ಸ್ಥಳಗಳಲ್ಲಿ ಜೀವಿಸಿದರು.


ಸೆರೆಯಿಂದ ಮರಳಿಬಂದ ಸಂಸ್ಥಾನದವರ ವಿವರ, ಬಹಳ ವರ್ಷಗಳ ಹಿಂದೆ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಇವರನ್ನು ಸೆರೆಹಿಡಿದು ಬಾಬಿಲೋನಿಗೆ ಒಯ್ದಿದ್ದನು. ಇವರು ಜೆರುಸಲೇಮಿಗೆ ಹಿಂತಿರುಗಿ ಬಂದು ಎಲ್ಲರೂ ತಮ್ಮತಮ್ಮ ಸ್ವಂತ ಊರುಗಳಿಗೆ ಹೊರಟು ಹೋದರು.


ತನ್ನನ್ನು ಹತೋಟಿಯಲ್ಲಿ ಇಟ್ಟುಕೊಳ್ಳಲಾರದವನು ಕೋಟೆ ಬಿದ್ದುಹೋದ ಪಟ್ಟಣದಂತಿರುವನು.


ಜೆರುಸಲೇಮಿನ ಹೆಬ್ಬಾಗಿಲುಗಳು ನೆಲದಲ್ಲಿ ಹೂತುಹೋಗಿವೆ. ಆತನು ಹೆಬ್ಬಾಗಿಲುಗಳ ಸರಳುಗಳನ್ನು ಮುರಿದು ಚೂರುಚೂರು ಮಾಡಿದ್ದಾನೆ. ಅವಳ ರಾಜನು ಮತ್ತು ರಾಜಕುಮಾರರು ಅನ್ಯಜನಾಂಗಗಳ ಮಧ್ಯದಲ್ಲಿದ್ದಾರೆ. ಆ ಜನರಿಗೆ ಉಪದೇಶ ಮಾಡಲು ಯಾರೂ ಇಲ್ಲ. ಪ್ರವಾದಿಗಳಿಗೆ ಯೆಹೋವನಿಂದ ಯಾವ ದರ್ಶನಗಳೂ ಇಲ್ಲ.


ನಾನು ನಿಮ್ಮ ಪಟ್ಟಣಗಳನ್ನು ನಾಶಮಾಡುವೆ. ನಿಮ್ಮ ಪವಿತ್ರಸ್ಥಳಗಳನ್ನು ಬರಿದುಮಾಡುವೆ. ನಿಮ್ಮ ಯಜ್ಞಗಳ ಸುವಾಸನೆಯನ್ನು ನಾನು ಮೂಸಿ ನೋಡುವುದಿಲ್ಲ.


ನಾನು ನಿಮ್ಮನ್ನು ಜನಾಂಗಗಳ ಮಧ್ಯದಲ್ಲಿ ಚದರಿಸಿಬಿಡುವೆನು. ಕತ್ತಿಯನ್ನು ಇರಿದು ನಿಮ್ಮನ್ನು ನಾಶಮಾಡುವೆ. ನಿಮ್ಮ ಭೂಮಿ ಬರಿದಾಗುವುದು ಮತ್ತು ನಿಮ್ಮ ಪಟ್ಟಣಗಳು ನಾಶವಾಗುವವು.


ನೆಬೂಕದ್ನೆಚ್ಚರನು ಮತ್ತು ಅವನ ಸೈನಿಕರು ದೇವಾಲಯವನ್ನು ಸುಟ್ಟುಹಾಕಿದರು; ಜೆರುಸಲೇಮ್ ಪಟ್ಟಣದ ಪೌಳಿಗೋಡೆಯನ್ನು ಕೆಡವಿಹಾಕಿದರು; ಅರಸನ ಮತ್ತು ಅವನ ಪರಿವಾರದವರ ಮನೆಗಳನ್ನೆಲ್ಲಾ ಸುಟ್ಟುಹಾಕಿದರು. ಜೆರುಸಲೇಮಿನಲ್ಲಿದ್ದ ಬೆಲೆಬಾಳುವ ವಸ್ತುಗಳನ್ನೆಲ್ಲಾ ದೋಚಿದರು ಮತ್ತು ಸುಟ್ಟುಹಾಕಿದರು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು