Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 10:28 - ಪರಿಶುದ್ದ ಬೈಬಲ್‌

28-29 ಹೀಗೆ ಇವರೆಲ್ಲಾ ಯೆಹೋವನಿಗೆ ಒಂದು ವಿಶೇಷವಾದ ವಾಗ್ದಾನವನ್ನು ಮಾಡಿದರು. ತಾವು ವಾಗ್ದಾನವನ್ನು ನೆರವೇರಿಸದೆ ಹೋದಲ್ಲಿ ಸಂಕಟಬಾಧೆಗಳು ಪ್ರಾಪ್ತವಾಗುವಂತೆ ಯೆಹೋವನನ್ನು ಕೇಳಿಕೊಂಡರು. ಇವರೆಲ್ಲಾ ದೇವರ ನೀತಿನಿಯಮಗಳನ್ನು ಅನುಸರಿಸುತ್ತೇವೆಂದು ಮಾತುಕೊಟ್ಟರು. ಆ ನೀತಿನಿಯಮಗಳನ್ನು ಯೆಹೋವನು ತನ್ನ ಸೇವಕನಾದ ಮೋಶೆಯ ಮೂಲಕ ನಮಗೆ ಕೊಟ್ಟನು. ಮೇಲೆ ಕಾಣಿಸಿದ ಹೆಸರುಗಳಲ್ಲದೆ ಉಳಿದ ಜನರು, ಯಾಜಕರು, ಲೇವಿಯರು, ದ್ವಾರಪಾಲಕರು, ಗಾಯಕರು, ದೇವಾಲಯದ ಸೇವಕರು ಮತ್ತು ಇಸ್ರೇಲಿನ ಜನರು ತಮ್ಮ ಸುತ್ತಲು ವಾಸಿಸುವ ಜನರಿಂದ ಪ್ರತ್ಯೇಕಿಸಲ್ಪಟ್ಟರು. ದೇವರ ವಿಧಿನಿಯಮಗಳನ್ನು ಅನುಸರಿಸುವುದಕ್ಕಾಗಿ ತಮ್ಮ ಹೆಂಡತಿ ಮಕ್ಕಳೊಂದಿಗೆ ಪ್ರತ್ಯೇಕಿಸಿಕೊಂಡರು. ದೇವರಿಗೆ ಮಾಡಿದ ಒಡಂಬಡಿಕೆಯನ್ನು ನಡೆಸಿಕೊಡಲು ಒಪ್ಪಿದರು ಮತ್ತು ಹಾಗೆ ಮಾಡದಿದ್ದಲ್ಲಿ ದೇವರಿಂದ ಸಂಕಟ ವ್ಯಾಧಿಗಳನ್ನು ಸ್ವೀಕರಿಸಲೂ ಒಪ್ಪಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಯಾಜಕರು, ಲೇವಿಯರು, ದ್ವಾರಪಾಲಕರು, ಗಾಯಕರು, ದೇವಾಲಯದ ಸೇವಕರು ಉಳಿದ ಜನರು ಇವರಲ್ಲಿ ದೇವರ ಧರ್ಮೋಪದೇಶದ ನಿಮಿತ್ತವಾಗಿ ಅನ್ಯದೇಶದವರ ಗೊಡವೆಯನ್ನು ತೊರೆದುಬಿಟ್ಟವರು ತಮ್ಮ ತಮ್ಮ ಹೆಂಡತಿಯರು, ಗ್ರಹಿಸಿಕೊಳ್ಳಲು ಶಕ್ತರಾದ ಗಂಡು ಹೆಣ್ಣು ಮಕ್ಕಳು ಇವರೊಡನೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಯಾಜಕರು, ಲೇವಿಯರು, ದ್ವಾರಪಾಲಕರು, ಗಾಯಕರು, ದೇವಸ್ಥಾನ ಪರಿಚಾರಕರು, ಉಳಿದ ಜನರು, ಇವರಲ್ಲಿ ದೇವರ ಧರ್ಮೋಪದೇಶದ ನಿಮಿತ್ತ ಅನ್ಯದೇಶದವರ ಗೊಡವೆಯನ್ನು ತೊರೆದುಬಿಟ್ಟವರು, ತಮ್ಮ ತಮ್ಮ ಹೆಂಡತಿಯರು, ಗ್ರಹಿಸಲು ಶಕ್ತರಾದ ಗಂಡುಹೆಣ್ಣು ಮಕ್ಕಳು ಇವರೊಡನೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಯಾಜಕರು, ಲೇವಿಯರು, ದ್ವಾರಪಾಲಕರು, ಗಾಯಕರು, ದೇವಸ್ಥಾನದಾಸರು, ಉಳಿದ ಜನರು ಇವರಲ್ಲಿ ದೇವರ ಧರ್ಮೋಪದೇಶದ ನಿವಿುತ್ತವಾಗಿ ಅನ್ಯದೇಶದವರ ಗೊಡವೆಯನ್ನು ತೊರೆದುಬಿಟ್ಟವರು ತಮ್ಮ ತಮ್ಮ ಹೆಂಡತಿಯರು, ಗ್ರಹಿಸಶಕ್ತರಾದ ಗಂಡು ಹೆಣ್ಣು ಮಕ್ಕಳು ಇವರೊಡನೆ ಬಂದು ಮುಖಂಡರಾದ ತಮ್ಮ ಸಹೋದರರನ್ನು ಕೂಡಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಜನರಲ್ಲಿ ಉಳಿದವರಾದ ಯಾಜಕರೂ, ಲೇವಿಯರೂ, ದ್ವಾರಪಾಲಕರೂ, ಹಾಡುಗಾರರೂ, ದೇವಾಲಯದ ಸೇವಕರೂ, ದೇವರ ನಿಯಮದ ಪ್ರಕಾರವಾಗಿ ಆ ದೇಶಗಳ ಜನರೊಳಗಿಂದ ತಮ್ಮನ್ನು ಪ್ರತ್ಯೇಕಿಸಿಕೊಂಡವರೆಲ್ಲರೂ, ಅವರ ಹೆಂಡತಿಯರೂ, ಅವರ ಪುತ್ರರೂ, ಅವರ ಪುತ್ರಿಯರೂ, ತಿಳುವಳಿಕೆಯೂ ಗ್ರಹಿಕೆಯೂ ಉಳ್ಳವರೆಲ್ಲರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 10:28
16 ತಿಳಿವುಗಳ ಹೋಲಿಕೆ  

ಅನ್ಯರ ಮಧ್ಯದಿಂದ ಇಸ್ರೇಲರು ತಮ್ಮನ್ನು ಪ್ರತ್ಯೇಕಿಸಿಕೊಂಡರು. ಅವರು ದೇವಾಲಯದೊಳಗೆ ನಿಂತು ತಮ್ಮ ಮತ್ತು ತಮ್ಮ ಪೂರ್ವಿಕರ ಪಾಪಗಳನ್ನು ಅರಿಕೆ ಮಾಡಿದರು.


ಕ್ರಿಸ್ತ ಯೇಸುವಿನ ಸೇವಕನಾದ ಪೌಲನು ಬರೆಯುವ ಪತ್ರ. ದೇವರು ನನ್ನನ್ನು ಅಪೊಸ್ತಲನಾಗುವುದಕ್ಕೆ ಕರೆದನು. ದೇವರ ಸುವಾರ್ತೆಯನ್ನು ಎಲ್ಲಾ ಜನರಿಗೆ ತಿಳಿಸುವುದಕ್ಕಾಗಿ ನಾನು ಆರಿಸಲ್ಪಟ್ಟೆನು.


ನೀನು ಹೀಗೆ ಮಾಡಿದರೆ ನನ್ನ ಹೆಸರಿನ ಮೇಲೆ ಪ್ರಮಾಣ ಮಾಡಲು ಶಕ್ತಳಾಗುವೆ. ‘ಹಾದು, ಯೆಹೋವನಾಣೆ’ ಎಂದು ಹೇಳಶಕ್ತಳಾಗುವೆ. ನೀನು ಆ ಪದಗಳನ್ನು ಸತ್ಯವಾಗಿಯೂ ಪ್ರಾಮಾಣಿಕವಾಗಿಯೂ ಸರಿಯಾಗಿ ಉಪಯೋಗಿಸಲು ಸಾಧ್ಯವಾಗುತ್ತದೆ. ನೀನು ಹೀಗೆ ಮಾಡಿದರೆ, ಎಲ್ಲಾ ಜನಾಂಗಗಳು ಯೆಹೋವನ ಆಶೀರ್ವಾದವನ್ನು ಪಡೆಯುತ್ತವೆ. ಆತನ ಕಾರ್ಯಗಳಿಗಾಗಿ ಆತನಿಗೆ ಸ್ತೋತ್ರ ಮಾಡುತ್ತವೆ.”


ದೇವರಿಗೆ ಹರಕೆ ಮಾಡುವಾಗ ಎಚ್ಚರಿಕೆಯಿಂದಿರಿ. ನೀವು ದೇವರೊಂದಿಗೆ ಮಾತಾಡುವಾಗ ಎಚ್ಚರಿಕೆಯಿಂದಿರಿ. ನಿಮ್ಮ ಮನೋದ್ವೇಗಗಳು ನಿಮ್ಮನ್ನು ಮಾತಿನಲ್ಲಿ ದುಡುಕಿಸದಂತೆ ನೋಡಿಕೊಳ್ಳಿ. ದೇವರು ಪರಲೋಕದಲ್ಲಿರುವುದರಿಂದ ಮತ್ತು ನೀವು ಈ ಲೋಕದಲ್ಲಿರುವುದರಿಂದ ನಿಮ್ಮ ಮಾತುಗಳು ಮಿತವಾಗಿರಲಿ. ಈ ನುಡಿ ಸತ್ಯವಾದದ್ದೇ:


ದೇವರು ಇಡೀಲೋಕಕ್ಕೆ ರಾಜನಾಗಿದ್ದಾನೆ; ಆತನಿಗೆ ಸ್ತುತಿಗೀತೆಗಳನ್ನು ಹಾಡಿರಿ.


ಇಸ್ರೇಲರು ದೇವರ ಕಟ್ಟಳೆಯನ್ನು ಕೇಳಿ ಅದಕ್ಕೆ ವಿಧೇಯರಾದರು. ಅನ್ಯರ ಸಂತತಿಯವರಿಂದ ತಮ್ಮನ್ನು ಪ್ರತ್ಯೇಕಿಸಿಕೊಂಡರು.


ಹೀಗೆ ಆ ವರ್ಷದ ಏಳನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಎಜ್ರನು ಧರ್ಮಶಾಸ್ತ್ರವನ್ನು ಆ ಜನರ ಮುಂದೆ ತಂದನು. ಆ ಜನಸಮೂಹದಲ್ಲಿ ಧರ್ಮಶಾಸ್ತ್ರಕ್ಕೆ ಕಿವಿಗೊಟ್ಟು ಗ್ರಹಿಸಿಕೊಳ್ಳಬಲ್ಲ ಸ್ತ್ರೀಪುರುಷರಿದ್ದರು.


ಅವರಲ್ಲಿದ್ದ ಯಾಜಕರು, ಲೇವಿಯರು ಮತ್ತು ಇನ್ನಿತರರು ಜೆರುಸಲೇಮ್ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೆಲೆಸಿದರು. ಇವರೊಳಗೆ ಗಾಯಕರೂ ದ್ವಾರಪಾಲಕರೂ ದೇವಾಲಯದ ಸೇವಕರೂ ಇದ್ದರು. ಉಳಿದ ಇಸ್ರೇಲ್ ಜನರು ತಮ್ಮತಮ್ಮ ಊರುಗಳಲ್ಲಿ ವಾಸಿಸಿದರು.


ನೀವು ಅವರ ದೇಶವನ್ನು ಪಡೆಯುವಿರಿ ಎಂದು ನಾನು ನಿಮಗೆ ಹೇಳಿದ್ದೇನೆ. ನಾನು ಅವರ ದೇಶವನ್ನು ನಿಮಗೆ ಕೊಡುವೆ. ಅದು ನಿಮ್ಮ ದೇಶವಾಗಿರುವದು. ಅದು ಅನೇಕ ಒಳ್ಳೆ ಸಂಗತಿಗಳಿಂದ ತುಂಬಿದ ದೇಶವಾಗಿದೆ. ನಾನು ನಿಮ್ಮ ದೇವರಾಗಿರುವ ಯೆಹೋವನು! “ನಾನು ನಿಮ್ಮನ್ನು ನನ್ನ ವಿಶೇಷ ಜನರನ್ನಾಗಿ ಮಾಡಿಕೊಂಡಿದ್ದೇನೆ. ನಾನು ನಿಮ್ಮನ್ನು ಇತರ ಜನರಿಂದ ಆರಿಸಿಕೊಂಡಿದ್ದೇನೆ.


ಸೆರೆಯಿಂದ ಹಿಂತಿರುಗಿ ಬಂದಿದ್ದ ಇಸ್ರೇಲರೆಲ್ಲರೂ ಪಸ್ಕದ ಊಟವನ್ನು ಮಾಡಿದರು. ಉಳಿದವರು ಅನ್ಯರ ಜೊತೆಯಲ್ಲಿ ವಾಸಿಸುವುದರಿಂದ ತಮ್ಮನ್ನು ಶುದ್ಧಪಡಿಸಿಕೊಂಡವರೆಲ್ಲರೂ ಪಸ್ಕದ ಊಟದಲ್ಲಿ ಪಾಲು ತೆಗೆದುಕೊಂಡರು. ಇಸ್ರೇಲರ ದೇವರಾದ ಯೆಹೋವನ ಬಳಿಗೆ ಸಹಾಯಕ್ಕಾಗಿ ಹೋಗಲು ಸಾಧ್ಯವಾಗುವಂತೆ ಅವರು ಹೀಗೆ ಮಾಡಿದರು.


ಮಲ್ಲೂಕ್, ಹಾರಿಮ್ ಮತ್ತು ಬಾನ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು