Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 10:31 - ಪರಿಶುದ್ದ ಬೈಬಲ್‌

31 “ಸಬ್ಬತ್ ದಿನದಲ್ಲಿ ಯಾವ ಕೆಲಸವನ್ನೂ ಮಾಡುವುದಿಲ್ಲವೆಂದು ಪ್ರಮಾಣಮಾಡುತ್ತೇವೆ. ನಮ್ಮ ಸುತ್ತಮುತ್ತಲಿನ ಜನರು ಸಬ್ಬತ್ ದಿನದಲ್ಲಿ ಮಾರಲು ದವಸಧಾನ್ಯವನ್ನಾಗಲಿ ಬೇರೆ ವಸ್ತುಗಳನ್ನಾಗಲಿ ತಂದರೆ ನಾವು ಸಬ್ಬತ್ ದಿನದಲ್ಲಿ ಮತ್ತು ಇತರ ಯಾವುದೇ ಹಬ್ಬದ ದಿನದಲ್ಲಿ ಅವುಗಳನ್ನು ಕೊಂಡುಕೊಳ್ಳುವುದಿಲ್ಲ. ಪ್ರತಿ ಏಳನೆಯ ವರ್ಷ ನಾವು ನೆಡುವುದೂ ಇಲ್ಲ. ಹೊಲದಲ್ಲಿ ಕೆಲಸ ಮಾಡುವುದೂ ಇಲ್ಲ. ನಮಗೆ ಬೇರೆಯವರು ಕೊಡಬೇಕಾಗಿರುವ ಸಾಲವನ್ನು ಏಳನೆಯ ವರ್ಷದಲ್ಲಿ ವಜಾ ಮಾಡುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ದೇಶನಿವಾಸಿಗಳು ಮಾರುವುದಕ್ಕೋಸ್ಕರ ತರುವ ಯಾವ ಸರಕುಗಳನ್ನೂ, ಧಾನ್ಯವನ್ನೂ, ಸಬ್ಬತ್ ಮೊದಲಾದ ಪರಿಶುದ್ಧ ದಿನಗಳಲ್ಲಿ ಅವುಗಳನ್ನು ನಾವು ಕೊಂಡುಕೊಳ್ಳುವುದಿಲ್ಲ. ಪ್ರತಿ ಏಳನೆಯ ವರ್ಷದ ಭೂಮಿಯ ಸಾಗುವಳಿಯನ್ನೂ ಇತರರು ಕೊಡಬೇಕಾದ ಸಾಲವನ್ನೂ ಮನ್ನಾ ಮಾಡಿಬಿಡುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ದೇಶನಿವಾಸಿಗಳು ಮಾರುವುದಕ್ಕೆ ತರುವ ಯಾವ ಸರಕುಗಳನ್ನೂ ಧಾನ್ಯವನ್ನೂ ಸಬ್ಬತ್‍ ಮೊದಲಾದ ಪರಿಶುದ್ಧ ದಿನಗಳಲ್ಲಿ ಕೊಂಡುಕೊಳ್ಳುವುದಿಲ್ಲ; ಪ್ರತಿಯೊಂದು ಏಳನೆಯ ವರ್ಷ ಭೂಮಿಯ ಸಾಗುವಳಿಯನ್ನೂ, ಇತರರು ಕೊಡಬೇಕಾದ ಸಾಲವನ್ನೂ ಬಿಟ್ಟುಬಿಡುತ್ತೇವೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ದೇಶನಿವಾಸಿಗಳು ಮಾರುವದಕ್ಕೋಸ್ಕರ ತರುವ ಯಾವ ಸರಕುಗಳನ್ನೂ ಧಾನ್ಯವನ್ನೂ ಸಬ್ಬತ್ ಮೊದಲಾದ ಪರಿಶುದ್ಧ ದಿನಗಳಲ್ಲಿ ಕೊಂಡುಕೊಳ್ಳುವದಿಲ್ಲ; ಪ್ರತಿಯೊಂದು ಏಳನೆಯ ವರುಷ [ಭೂವಿುಯ ಸಾಗುವಳಿಯನ್ನೂ ] ಹೆರರು ಕೊಡಬೇಕಾದ ಸಾಲವನ್ನೂ ಬಿಟ್ಟು ಬಿಡುತ್ತೇವೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಬೇರೆ ದೇಶದ ಜನರು ಸಬ್ಬತ್ ದಿನದಲ್ಲಿ ಸರಕುಗಳನ್ನೂ ಧಾನ್ಯವನ್ನೂ ಮಾರಲು ತೆಗೆದುಕೊಂಡು ಬಂದರೆ, ನಾವು ಅವುಗಳನ್ನು ಸಬ್ಬತ್ ದಿನದಲ್ಲಾದರೂ, ಪರಿಶುದ್ಧ ದಿನದಲ್ಲಾದರೂ ಅವರಿಂದ ಕೊಂಡುಕೊಳ್ಳುವುದಿಲ್ಲ. ಮತ್ತು ನಾವು ಏಳನೆಯ ವರ್ಷದಲ್ಲಿ ಭೂಮಿ ಕೆಲಸ ಮಾಡುವುದನ್ನು ಬಿಡುತ್ತೇವೆ ಮತ್ತು ಎಲ್ಲಾ ಸಾಲಗಳನ್ನು ರದ್ದುಗೊಳಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 10:31
24 ತಿಳಿವುಗಳ ಹೋಲಿಕೆ  

“ಆರು ದಿನಗಳಲ್ಲಿ ನೀವು ಕೆಲಸಮಾಡಿರಿ. ಆದರೆ ಏಳನೆಯ ದಿನವು ವಿಶೇಷವಾದ ವಿಶ್ರಾಂತಿ ದಿನವಾದ ಸಬ್ಬತ್ತಾಗಿದೆ. ಆ ದಿನದಲ್ಲಿ ಪವಿತ್ರಸಭೆ ಕೂಡಬೇಕು. ನೀವು ಯಾವ ಕೆಲಸವನ್ನೂ ಮಾಡಬಾರದು. ನಿಮ್ಮ ಎಲ್ಲಾ ಮನೆಗಳಲ್ಲಿ ಅದು ಯೆಹೋವನಿಗೆ ಮೀಸಲಾದ ಸಬ್ಬತ್ತಾಗಿದೆ.


ಆದರೆ ಏಳನೆ ದಿನವು ನಿಮ್ಮ ದೇವರಾದ ಯೆಹೋವನನ್ನು ಸನ್ಮಾನಿಸಲು ಮೀಸಲಾಗಿರುವ ವಿಶ್ರಾಂತಿ ದಿನವಾಗಿದೆ. ಅಂದು ನೀವು ಯಾವ ಕೆಲಸವನ್ನೂ ಮಾಡಬಾರದು. ನೀವಾಗಲಿ ನಿಮ್ಮ ಗಂಡುಮಕ್ಕಳಾಗಲಿ ಹೆಣ್ಣುಮಕ್ಕಳಾಗಲಿ ಸೇವಕರಾಗಲಿ ಸೇವಕಿಯರಾಗಲಿ ನಿಮ್ಮ ಪಶುಗಳಾಗಲಿ ನಿಮ್ಮಲ್ಲಿರುವ ವಿದೇಶಿಯರಾಗಲಿ ಕೆಲಸ ಮಾಡಬಾರದು.


“ನನಗೆ ಬೇಕಾಗಿರುವ ವಿಶೇಷ ದಿವಸ ಯಾವುದೆಂದು ನಾನು ಹೇಳುತ್ತೇನೆ. ಅದು ಜನರನ್ನು ಸ್ವತಂತ್ರರನ್ನಾಗಿ ಮಾಡುವ ದಿವಸ, ಜನರಿಂದ ಅವರ ಭಾರವನ್ನು ತೆಗೆದುಹಾಕುವ ದಿವಸ; ತೊಂದರೆಗೀಡಾಗಿರುವ ಜನರನ್ನು ವಿಮುಕ್ತರನ್ನಾಗಿ ಮಾಡುವ ದಿವಸ; ಅವರ ಹೆಗಲಿನಿಂದ ಭಾರದ ಹೊರೆಯನ್ನು ಇಳಿಸುವ ದಿವಸ.


ಹೀಗೆ ಯೆಹೋವನು ತನ್ನ ಪ್ರವಾದಿಯಾದ ಯೆರೆಮೀಯನ ಮೂಲಕ ಹೇಳಿಸಿದ ಮಾತುಗಳನ್ನು ನೆರವೇರಿಸಿದನು. “ಈ ಸ್ಥಳವು ಎಪ್ಪತ್ತು ವರ್ಷಗಳ ತನಕ ಪಾಳುಬೀಳುವದು. ಜನರು ಆಚರಿಸದೆಹೋದ ಸಬ್ಬತ್ ಹಬ್ಬಗಳಿಗೆ ಅದು ಪರಿಹಾರವಾಗಿರುವುದು” ಎಂದು ಯೆರೆಮೀಯನು ಹೇಳಿದ್ದನು.


ಅದೇ ದಿನದಲ್ಲಿ ನೀವು ಪವಿತ್ರಸಭೆಯಾಗಿ ಕೂಡಬೇಕು. ನೀವು ಯಾವ ಕೆಲಸವನ್ನು ಮಾಡಬಾರದು. ನಿಮ್ಮ ಎಲ್ಲಾ ಮನೆಗಳಲ್ಲಿ ಈ ನಿಯಮವು ಶಾಶ್ವತವಾಗಿರುವುದು.


“ಇದು ನಿಮಗೆ ಶಾಶ್ವತವಾದ ಕಟ್ಟಳೆ: ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನೀವು ಆಹಾರವನ್ನು ತೆಗೆದುಕೊಳ್ಳದೆ ಉಪವಾಸ ಮಾಡಬೇಕು. ಆ ದಿನದಲ್ಲಿ ಯಾವ ಕೆಲಸವನ್ನೂ ಮಾಡಬಾರದು. ನಿಮ್ಮ ದೇಶದಲ್ಲಿ ವಾಸಿಸುವ ಪ್ರವಾಸಿಗರಾಗಲಿ ಪರದೇಶಸ್ಥರಾಗಲಿ ಯಾವ ಕೆಲಸವನ್ನು ಮಾಡಬಾರದು.


ಈ ಹಬ್ಬದ ಪ್ರಥಮ ಮತ್ತು ಕೊನೆಯ ದಿನಗಳಲ್ಲಿ ಪವಿತ್ರ ಸಭೆಯಾಗಿ ಕೂಡಿಬರಬೇಕು. ಈ ಹಬ್ಬದ ದಿನಗಳಲ್ಲಿ ನೀವು ಯಾವ ಕೆಲಸವನ್ನೂ ಮಾಡಬಾರದು. ಆದರೆ ನಿಮ್ಮ ಭೋಜನಕ್ಕಾಗಿ ಆಹಾರ ಸಿದ್ಧಪಡಿಸಬಹುದು.


ಹೌದು, ಇತರರಿಗೆ ನೀವು ಕರುಣೆ ತೋರಬೇಕು. ಇಲ್ಲವಾದರೆ ದೇವರು ತೀರ್ಪು ನೀಡುವಾಗ ನಿಮಗೂ ಕರುಣೆ ತೋರನು. ಕರುಣೆ ತೋರುವವನು ದೇವರ ನ್ಯಾಯತೀರ್ಪಿನಲ್ಲಿ ಭಯವಿಲ್ಲದೆ ಇರುವನು.


ಹೀಗಿರುವುದರಿಂದ ತಿಂದು ಕುಡಿಯುವುದರ ಬಗ್ಗೆ ಇಲ್ಲವೆ ಯೆಹೂದ್ಯರ ಪದ್ಧತಿಗಳ (ಹಬ್ಬಗಳು, ಅಮಾವಾಸ್ಯೆಯ ಆಚರಣೆಗಳು, ಸಬ್ಬತ್‌ ದಿನಗಳು) ಬಗ್ಗೆ ನಿಮಗೆ ನಿಯಮಗಳನ್ನು ರೂಪಿಸಲು ಯಾರಿಗೂ ಅವಕಾಶ ಕೊಡಬೇಡಿ.


ನಮಗೆ ತಪ್ಪು ಮಾಡಿದವರನ್ನು ನಾವು ಕ್ಷಮಿಸಿದಂತೆಯೇ ನಮ್ಮ ಪಾಪಗಳನ್ನು ಕ್ಷಮಿಸು.


ನೀವು ಅವರ ಪುತ್ರಿಯರಲ್ಲಿ ಕೆಲವರನ್ನು ನಿಮ್ಮ ಪುತ್ರರಿಗೆ ಹೆಂಡತಿಯರಾಗುವುದಕ್ಕೆ ಆರಿಸಿಕೊಳ್ಳುವಿರಿ. ಅವರ ಪುತ್ರಿಯರು ಸುಳ್ಳುದೇವರುಗಳ ಸೇವೆ ಮಾಡುತ್ತಾರೆ. ನಿಮ್ಮ ಪುತ್ರರನ್ನೂ ಅವರು ಅದೇ ಸೇವೆಗೆ ನಡೆಸುತ್ತಾರೆ.


ಆ ದಿನಗಳಲ್ಲಿ ಕೆಲವು ಮಂದಿ ಯೆಹೂದ್ಯರು ಅಷ್ಡೋದ್, ಅಮ್ಮೋನ್, ಮೋವಾಬ್ ಊರುಗಳಿಂದ ಹೆಣ್ಣನ್ನು ತಂದು ಮದುವೆ ಮಾಡಿಕೊಂಡದ್ದು ನನ್ನ ನೆನಪಿಗೆ ಬಂತು.


ಈಗ ನೀವು ಸಹ ಅನ್ಯಸ್ತ್ರೀಯರನ್ನು ಮದುವೆಯಾಗಿ ಭಯಂಕರವಾದ ಪಾಪಗಳನ್ನು ಮಾಡುತ್ತಿದ್ದೀರಿ. ನೀವು ದೇವರಿಗೆ ವಿಧೇಯರಾಗಲಿಲ್ಲ” ಎಂದು ಹೇಳಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು