Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 10:39 - ಪರಿಶುದ್ದ ಬೈಬಲ್‌

39 ಇಸ್ರೇಲ್ ಜನರು ಮತ್ತು ಲೇವಿಯರು ತಮ್ಮ ಕಾಣಿಕೆಗಳಾದ ದವಸಧಾನ್ಯ, ಹೊಸ ದ್ರಾಕ್ಷಾರಸ, ಎಣ್ಣೆ ಇವುಗಳನ್ನು ತಂದು ದೇವಾಲಯದ ಉಗ್ರಾಣಗಳಲ್ಲಿ ಇಡಬೇಕು. ದೇವಾಲಯಕ್ಕೋಸ್ಕರ ಮೀಸಲಾದ ಎಲ್ಲಾ ವಸ್ತುಗಳನ್ನು ಆ ಉಗ್ರಾಣಗಳಲ್ಲಿ ಇಡಬೇಕು. ಕೆಲಸದಲ್ಲಿ ನಿರತರಾಗಿರುವ ಯಾಜಕರು, ಗಾಯಕರು, ದ್ವಾರಪಾಲಕರು ಅಲ್ಲೇ ಇರಬೇಕು. “ನಮ್ಮ ದೇವರ ಆಲಯವನ್ನು ನಾವು ನೋಡಿಕೊಳ್ಳುವುದಾಗಿ ನಾವೆಲ್ಲರೂ ಪ್ರಮಾಣಮಾಡುತ್ತೇವೆ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಇಸ್ರಾಯೇಲರೂ ಮತ್ತು ಲೇವಿಯರೂ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನು, ದೇವರಿಗಾಗಿ ಪ್ರತ್ಯೇಕಿಸತಕ್ಕ ಕಾಣಿಕೆಗಳನ್ನು ತಂದು ದೇವಾಲಯದಲ್ಲಿ ಸೇವೆ ನಡೆಸುತ್ತಿರುವ ಯಾಜಕರೂ, ದ್ವಾರಪಾಲಕರು, ಗಾಯಕರು ಇರುವ ಕೊಠಡಿಗಳಲ್ಲಿಯೂ ಹಾಗು ಪವಿತ್ರಾಲಯದ ಪಾತ್ರೆಗಳನ್ನು ಇಡುವ ಕೊಠಡಿಗಳಲ್ಲಿಯೂ ಇರಿಸಬೇಕು. ಅಲ್ಲದೆ ನಮ್ಮ ದೇವರ ಆಲಯವನ್ನು ಎಂದೂ ಅಲಕ್ಷ್ಯ ಮಾಡುವುದಿಲ್ಲ ಎಂದು ಬರೆದುಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಇಸ್ರಯೇಲರೂ ಲೇವಿಯರೂ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಲ್ಲಿ ದೇವರಿಗಾಗಿ ಪ್ರತ್ಯೇಕಿಸತಕ್ಕ ಭಾಗಗಳನ್ನು ತಂದು, ಸೇವೆ ನಡೆಸುತ್ತಿರುವ ಯಾಜಕರು, ದ್ವಾರಪಾಲಕರು, ಗಾಯಕರು ಇವರೂ, ಪವಿತ್ರಾಲಯದ ಪಾತ್ರೆಗಳೂ, ಇರುವ ಕೊಠಡಿಗಳಲ್ಲಿ ಇಡಬೇಕು; ನಮ್ಮ ದೇವರ ಆಲಯವನ್ನು ಎಂದೂ ಅಲಕ್ಷ್ಯ ಮಾಡುವುದಿಲ್ಲ,’ ಎಂದು ಬರೆದುಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಇಸ್ರಾಯೇಲ್ಯರೂ ಲೇವಿಯರೂ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಲ್ಲಿ ದೇವರಿಗೋಸ್ಕರ ಪ್ರತ್ಯೇಕಿಸತಕ್ಕ ಭಾಗಗಳನ್ನು ತಂದು ಸೇವೆನಡಿಸುತ್ತಿರುವ ಯಾಜಕರು, ದ್ವಾರಪಾಲಕರು, ಗಾಯಕರು ಇವರೂ ಪವಿತ್ರಾಲಯದ ಪಾತ್ರೆಗಳೂ ಇರುವ ಕೊಠಡಿಗಳಲ್ಲಿ ಇಡಬೇಕು. ನಮ್ಮ ದೇವರ ಆಲಯವನ್ನು ಎಂದೂ ಅಲಕ್ಷ್ಯ ಮಾಡುವದಿಲ್ಲ ಎಂದು ಬರೆದುಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಏಕೆಂದರೆ ಪರಿಶುದ್ಧ ಸ್ಥಾನದ ಸಲಕರಣೆಗಳೂ, ಸೇವೆ ಮಾಡುವ ಯಾಜಕರೂ, ದ್ವಾರಪಾಲಕರೂ, ಹಾಡುಗಾರರೂ ಇರುವ ಕೊಟ್ಟಡಿಗಳಿಗೆ ಇಸ್ರಾಯೇಲರೂ, ಲೇವಿಯರ ಮಕ್ಕಳೂ, ಕಾಣಿಕೆಯಾದ ಧಾನ್ಯವನ್ನೂ, ದ್ರಾಕ್ಷಾರಸವನ್ನೂ, ಎಣ್ಣೆಯನ್ನೂ ತರಬೇಕು. “ನಾವು ನಮ್ಮ ದೇವರ ಆಲಯವನ್ನು ಎಂದೂ ಅಲಕ್ಷ್ಯಮಾಡುವುದಿಲ್ಲ,” ಎಂದು ಬರೆದುಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 10:39
12 ತಿಳಿವುಗಳ ಹೋಲಿಕೆ  

ನಾವು ಸಭೆಯಾಗಿ ಸೇರಿಬರುವುದನ್ನು ಬಿಡಬಾರದು. ಕೆಲವರು ಸಭೆಗೆ ಬರುತ್ತಿಲ್ಲ. ನಾವು ಒಟ್ಟಾಗಿ ಸೇರಿಬಂದು ಒಬ್ಬರನ್ನೊಬ್ಬರು ಬಲಪಡಿಸಬೇಕು. ಯೇಸುವು ಪ್ರತ್ಯಕ್ಷನಾಗುವ ದಿನ ಸಮೀಪವಾಗುತ್ತಿರುವುದರಿಂದ ನೀವು ಇದನ್ನು ಮತ್ತಷ್ಟು ಹೆಚ್ಚಾಗಿ ಮಾಡಬೇಕು.


ಆ ಬಳಿಕ ದೇವರಿಗೆ ಕೊಟ್ಟಿದ್ದ ದಶಮಾಂಶ ಮತ್ತು ಬೇರೆ ಕಾಣಿಕೆಗಳನ್ನು ಆ ಉಗ್ರಾಣದ ಕೋಣೆಗಳಲ್ಲಿ ಕೂಡಿಸಿಟ್ಟರು. ಲೇವಿಯನಾದ ಕೋನನ್ಯನು ಇದರ ಮೇಲ್ವಿಚಾರಕನಾಗಿ ನೇಮಿಸಲ್ಪಟ್ಟನು. ಇವನಿಗೆ ಸಹಾಯಕನಾಗಿ ಕೋನನ್ಯನ ಸೋದರನಾದ ಶಿಮ್ಮಿಯು ನೇಮಿಸಲ್ಪಟ್ಟನು.


ನಮ್ಮ ದೇವರಾದ ಯೆಹೋವನ ಆಲಯಕ್ಕೋಸ್ಕರ ಈ ಪಟ್ಟಣಕ್ಕೆ ಒಳ್ಳೆಯದಾಗಲೆಂದು ಪ್ರಾರ್ಥಿಸುವೆನು.


“ನೀವು ವಾಸಿಸುವ ಆ ಸ್ಥಳದಲ್ಲಿ ಕೆಲವನ್ನು ತಿನ್ನಕೂಡದು. ಅವು ಯಾವುವೆಂದರೆ: ದೇವರಿಗೆ ಮೀಸಲಿಟ್ಟ ಧಾನ್ಯ, ಹೊಸ ದ್ರಾಕ್ಷಾರಸ ಮತ್ತು ಎಣ್ಣೆಯ ಪಾಲು; ದೇವರಿಗೆ ಸಮರ್ಪಿಸಲು ಇಟ್ಟಿರುವ ಚೊಚ್ಚಲ ಪಶುಗಳು ಮತ್ತು ಹಿಂಡಿನ ಮರಿಗಳು, ನೀವು ಹರಕೆ ಹೊತ್ತುಕೊಂಡ ಕಾಣಿಕೆಗಳು ಮತ್ತು ದೇವರಿಗಾಗಿ ಮೀಸಲಿಟ್ಟಿದ್ದ ವಸ್ತುಗಳು.


“ಮೋಶೆಯೇ, ಲೇವಿಯರಿಗೆ ಹೀಗೆ ಹೇಳು: ಆ ಕಾಣಿಕೆಗಳಲ್ಲಿ ಉತ್ತಮವಾದ ಭಾಗವನ್ನು ನೀವು ಯೆಹೋವನಿಗೆ ಕೊಡುವಾಗ, ಲೇವಿಯರಾದ ನಿಮಗೆ ಅದು ಕಣದ ಉತ್ಪಾದನೆಯಂತೆಯೂ ದ್ರಾಕ್ಷಿಆಲೆಯ ಉತ್ಪಾದನೆಯಂತೆಯೂ ಪರಿಗಣಿಸಲ್ಪಡುವುದು.


ಈ ಕುಷ್ಠರೋಗಿಗಳು ನಗರದ ಬಾಗಿಲಿಗೆ ಬಂದು ದ್ವಾರಪಾಲಕರನ್ನು ಕರೆದು, “ನಾವು ಅರಾಮ್ಯರ ಪಾಳೆಯಕ್ಕೆ ಹೋಗಿದ್ದೆವು. ಆದರೆ ನಾವು ಜನರ ಧ್ವನಿಯನ್ನು ಕೇಳಲೇ ಇಲ್ಲ. ಅಲ್ಲಿ ಜನರ ಸುಳಿವಿಲ್ಲ. ಕುದುರೆಗಳು ಮತ್ತು ಹೇಸರಕತ್ತೆಗಳು ಕಟ್ಟಿಹಾಕಿದಂತೆಯೇ ಇವೆ. ಗುಡಾರಗಳಿನ್ನೂ ಯಥಾಸ್ಥಿತಿಯಲ್ಲಿವೆ. ಆದರೆ ಸೈನಿಕರೆಲ್ಲರೂ ಹೊರಟುಹೋಗಿದ್ದಾರೆ” ಎಂದು ಹೇಳಿದರು.


“ನೀನು ಲೇವಿಯರಿಗೆ ಇದನ್ನು ತಿಳಿಸಬೇಕು: ಇಸ್ರೇಲರು ತಮ್ಮ ಆದಾಯದಲ್ಲಿ ಕೊಡುವ ದಶಾಂಶವನ್ನು ನಿಮ್ಮ ಪಾಲೆಂದು ನಾನು ನಿಗದಿಪಡಿಸಿದ್ದೇನೆ. ಇಸ್ರೇಲರು ದಶಾಂಶ ಕೊಟ್ಟಾಗ ನೀವು ಆ ದಶಾಂಶದಲ್ಲಿ ಹತ್ತನೆಯ ಒಂದು ಭಾಗವನ್ನು ಯೆಹೋವನಿಗೆ ಸಲ್ಲಿಸಬೇಕು.


ಆಗ ಹಿಜ್ಕೀಯನು ದೇವಾಲಯದಲ್ಲಿ ಉಗ್ರಾಣದ ಕೋಣೆಗಳನ್ನು ಕಟ್ಟಲು ಯಾಜಕರಿಗೆ ಆಜ್ಞಾಪಿಸಿದನು. ಅಂತೆಯೇ ಅವುಗಳನ್ನು ಕಟ್ಟಲಾಯಿತು.


ಜೆರುಬ್ಬಾಬೆಲ್ ಮತ್ತು ನೆಹೆಮೀಯನ ಕಾಲದಲ್ಲಿ ಇಸ್ರೇಲರೆಲ್ಲರೂ ಗಾಯಕರಿಗೆ ಮತ್ತು ದ್ವಾರಪಾಲಕರಿಗೆ ಅನುದಿನ ಅಗತ್ಯವಾದವುಗಳನ್ನು ಒದಗಿಸಿಕೊಟ್ಟರು. ಇತರ ಲೇವಿಯರಿಗೋಸ್ಕರವಾಗಿಯೂ ಜನರು ಹಣವನ್ನು ಪ್ರತ್ಯೇಕವಾಗಿಟ್ಟರು. ಲೇವಿಯರೂ ಸಹ ಆರೋನನ ವಂಶದ ಯಾಜಕರಿಗಾಗಿ ಹಣವನ್ನು ಪ್ರತ್ಯೇಕವಾಗಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು